Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022 Mega Auction: ಐಪಿಎಲ್ ಮೆಗಾ ಹರಾಜು ಡೇಟ್ ಫಿಕ್ಸ್..!

IPL 2022 Mega Auction Date: ಈ ಬಾರಿ ಸಾವಿರಕ್ಕೂ ಅಧಿಕ ಆಟಗಾರರು ಮೆಗಾ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಎಲ್ಲಾ ಕ್ರಿಕೆಟ್ ಮಂಡಳಿಗೆ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಐಪಿಎಲ್​ಗಾಗಿ ಹೆಸರು ನೀಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ಬಿಸಿಸಿಐ ತಿಳಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Jan 11, 2022 | 7:35 PM

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15  ಗಾಗಿ 10 ಫ್ರಾಂಚೈಸಿ ಸಕಲ ಸಿದ್ದತೆಯಲ್ಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಇನ್ನು ಹೊಸ ಎರಡು ಫ್ರಾಂಚೈಸಿಗಳಾದ ಲಕ್ನೋ ಹಾಗೂ ಅಹಮದಾಬಾದ್ ತಂಡಗಳು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡಬೇಕಿದೆ. ಇದಾದ ಬಳಿಕ ಮೆಗಾ ಹರಾಜು ನಡೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ 10 ಫ್ರಾಂಚೈಸಿ ಸಕಲ ಸಿದ್ದತೆಯಲ್ಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಒಟ್ಟು 27 ಆಟಗಾರರನ್ನು ತಂಡದಲ್ಲೇ ಉಳಿಸಿಕೊಂಡಿದೆ. ಇನ್ನು ಹೊಸ ಎರಡು ಫ್ರಾಂಚೈಸಿಗಳಾದ ಲಕ್ನೋ ಹಾಗೂ ಅಹಮದಾಬಾದ್ ತಂಡಗಳು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡಬೇಕಿದೆ. ಇದಾದ ಬಳಿಕ ಮೆಗಾ ಹರಾಜು ನಡೆಯಲಿದೆ.

1 / 5
ಇದೀಗ ಮೆಗಾ ಹರಾಜು ದಿನಾಂಕವನ್ನು ಐಪಿಎಲ್ ಆಡಳಿತ ಮಂಡಳಿ ಖಚಿತಪಡಿಸಿದೆ. ಈ ಮೊದಲು ವರದಿ ಮಾಡಿದಂತೆ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ  ಎಂಬುದನ್ನು ಐಪಿಎಲ್ ಆಡಳಿತ ಮಂಡಳಿಯು ದೃಢಪಡಿಸಿದೆ. ಅದರಂತೆ ಮುಂದಿನ ತಿಂಗಳ 2ನೇ ವಾರದ ಶನಿವಾರ ಮತ್ತು ಭಾನುವಾರ ಐಪಿಎಲ್​ ಮೆಗಾ ಹರಾಜು ನಡೆಯಲಿದೆ.

ಇದೀಗ ಮೆಗಾ ಹರಾಜು ದಿನಾಂಕವನ್ನು ಐಪಿಎಲ್ ಆಡಳಿತ ಮಂಡಳಿ ಖಚಿತಪಡಿಸಿದೆ. ಈ ಮೊದಲು ವರದಿ ಮಾಡಿದಂತೆ ಮೆಗಾ ಹರಾಜು ಫೆಬ್ರವರಿ 12 ಮತ್ತು 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂಬುದನ್ನು ಐಪಿಎಲ್ ಆಡಳಿತ ಮಂಡಳಿಯು ದೃಢಪಡಿಸಿದೆ. ಅದರಂತೆ ಮುಂದಿನ ತಿಂಗಳ 2ನೇ ವಾರದ ಶನಿವಾರ ಮತ್ತು ಭಾನುವಾರ ಐಪಿಎಲ್​ ಮೆಗಾ ಹರಾಜು ನಡೆಯಲಿದೆ.

2 / 5
ಇನ್ನು ಸಂಜೀವ್ ಗೋಯೆಂಕಾ ಅವರ ಆರ್‌ಪಿಎಸ್‌ಜಿ ಗ್ರೂಪ್ ಒಡೆತನದ ಲಕ್ನೋ  ತಂಡಕ್ಕೆ ಮತ್ತು ಸಿವಿಸಿ ಕ್ಯಾಪಿಟಲ್‌ನ ಅಹಮದಾಬಾದ್ ತಂಡಕ್ಕೆ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ) ಔಪಚಾರಿಕ ಅನುಮತಿಯನ್ನು ನೀಡಲಾಗಿದೆ. ಹೀಗಾಗಿ ಈ ಎರಡು ತಂಡಗಳು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ಆಟಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು. ಅದರಂತೆ 2  ವಾರದೊಳಗೆ (14 ದಿವಸ) ಉಭಯ ತಂಡಗಳು ಆಯ್ಕೆ ಮಾಡಲಾದ ಆಟಗಾರರ ಅಂತಿಮ ಪಟ್ಟಿಯನ್ನು ಸಲ್ಲಿಸಬೇಕಾಗಿದೆ.

ಇನ್ನು ಸಂಜೀವ್ ಗೋಯೆಂಕಾ ಅವರ ಆರ್‌ಪಿಎಸ್‌ಜಿ ಗ್ರೂಪ್ ಒಡೆತನದ ಲಕ್ನೋ ತಂಡಕ್ಕೆ ಮತ್ತು ಸಿವಿಸಿ ಕ್ಯಾಪಿಟಲ್‌ನ ಅಹಮದಾಬಾದ್ ತಂಡಕ್ಕೆ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ) ಔಪಚಾರಿಕ ಅನುಮತಿಯನ್ನು ನೀಡಲಾಗಿದೆ. ಹೀಗಾಗಿ ಈ ಎರಡು ತಂಡಗಳು ಸ್ಪೆಷಲ್ ಪಿಕ್ ಆಯ್ಕೆಯ ಮೂಲಕ ಆಟಗಾರರೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು. ಅದರಂತೆ 2 ವಾರದೊಳಗೆ (14 ದಿವಸ) ಉಭಯ ತಂಡಗಳು ಆಯ್ಕೆ ಮಾಡಲಾದ ಆಟಗಾರರ ಅಂತಿಮ ಪಟ್ಟಿಯನ್ನು ಸಲ್ಲಿಸಬೇಕಾಗಿದೆ.

3 / 5
ಅಷ್ಟೇ ಅಲ್ಲದೆ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಶೀರ್ಷಿಕೆ ಪ್ರಾಯೋಜಕತ್ವ ಕೂಡ ಬದಲಾಗಲಿದೆ. ಕಳೆದ ಬಾರಿ ಇದ್ದ ವಿವೋ ಐಪಿಎಲ್ ಬದಲಿಗೆ ಟಾಟಾ ಗ್ರೂಪ್ ಶೀರ್ಷಿಕೆ ಪ್ರಾಯೋಜಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮುಂದಿನ ಎರಡು ಸೀಸನ್​  TATA IPL 2022-23 ಹೆಸರಿನಲ್ಲಿ ಮೂಡಿ ಬರಲಿದೆ.

ಅಷ್ಟೇ ಅಲ್ಲದೆ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಶೀರ್ಷಿಕೆ ಪ್ರಾಯೋಜಕತ್ವ ಕೂಡ ಬದಲಾಗಲಿದೆ. ಕಳೆದ ಬಾರಿ ಇದ್ದ ವಿವೋ ಐಪಿಎಲ್ ಬದಲಿಗೆ ಟಾಟಾ ಗ್ರೂಪ್ ಶೀರ್ಷಿಕೆ ಪ್ರಾಯೋಜಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಮುಂದಿನ ಎರಡು ಸೀಸನ್​ TATA IPL 2022-23 ಹೆಸರಿನಲ್ಲಿ ಮೂಡಿ ಬರಲಿದೆ.

4 / 5
ಇನ್ನು ಈ ಬಾರಿ ಸಾವಿರಕ್ಕೂ ಅಧಿಕ ಆಟಗಾರರು ಮೆಗಾ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಎಲ್ಲಾ ಕ್ರಿಕೆಟ್ ಮಂಡಳಿಗೆ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಐಪಿಎಲ್​ಗಾಗಿ ಹೆಸರು ನೀಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ಬಿಸಿಸಿಐ ತಿಳಿಸಿದೆ. ಅದರಂತೆ ಸಾವಿರಕ್ಕೂ ಅಧಿಕ ಆಟಗಾರರು ಹೆಸರು ನೀಡುವ ನಿರೀಕ್ಷೆಯಿದ್ದು, ಇವರಲ್ಲಿ 223 ಆಟಗಾರರಿಗೆ ಮಾತ್ರ ಬಿಡ್ಡಿಂಗ್ ನಡೆಯಲಿದೆ.

ಇನ್ನು ಈ ಬಾರಿ ಸಾವಿರಕ್ಕೂ ಅಧಿಕ ಆಟಗಾರರು ಮೆಗಾ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಎಲ್ಲಾ ಕ್ರಿಕೆಟ್ ಮಂಡಳಿಗೆ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಐಪಿಎಲ್​ಗಾಗಿ ಹೆಸರು ನೀಡಿರುವ ಆಟಗಾರರ ಪಟ್ಟಿಯನ್ನು ಸಲ್ಲಿಸುವಂತೆ ಬಿಸಿಸಿಐ ತಿಳಿಸಿದೆ. ಅದರಂತೆ ಸಾವಿರಕ್ಕೂ ಅಧಿಕ ಆಟಗಾರರು ಹೆಸರು ನೀಡುವ ನಿರೀಕ್ಷೆಯಿದ್ದು, ಇವರಲ್ಲಿ 223 ಆಟಗಾರರಿಗೆ ಮಾತ್ರ ಬಿಡ್ಡಿಂಗ್ ನಡೆಯಲಿದೆ.

5 / 5

Published On - 3:36 pm, Tue, 11 January 22

Follow us
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ