AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಯಾವ ತಂಡದ ಪರ ಆಡುತ್ತೀರಿ? ಸುಳಿವು ನೀಡಿದ ಅಶ್ವಿನ್

IPL 2022 Mega Auctions: ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 2:56 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಎಲ್ಲಾ ತಂಡಗಳು ಮೆಗಾ ಹರಾಜಿನ ಸಿದ್ದತೆಯಲ್ಲಿದೆ. ಈಗಾಗಲೇ 8 ಫ್ರಾಂಚೈಸಿ 27 ಆಟಗಾರರನ್ನು ಉಳಿಸಿಕೊಂಡಿದ್ದು, ಉಳಿದ ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ಸೀಸನ್​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಗಾಗಿ ಎಲ್ಲಾ ತಂಡಗಳು ಮೆಗಾ ಹರಾಜಿನ ಸಿದ್ದತೆಯಲ್ಲಿದೆ. ಈಗಾಗಲೇ 8 ಫ್ರಾಂಚೈಸಿ 27 ಆಟಗಾರರನ್ನು ಉಳಿಸಿಕೊಂಡಿದ್ದು, ಉಳಿದ ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ಸೀಸನ್​​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ ಪರ ಆಡಿದ್ದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕೂಡ ಇರುವುದು ವಿಶೇಷ.

1 / 5
 ಹೀಗಾಗಿಯೇ ಅಶ್ವಿನ್ ಅವರು ಮುಂದಿನ ಸೀಸನ್​ನಲ್ಲಿ ಯಾರ ಪರ ಆಡಲಿದ್ದಾರೆ ಎಂಬ ಪ್ರಶ್ನೆಯೊಂದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. ಇದೀಗ ಮತ್ತೆ ಯಾವ ತಂಡದ ಪರ ಆಡುತ್ತೀರಿ ಎಂಬ ಪ್ರಶ್ನೆಯೊಂದನ್ನು ಅಶ್ವಿನ್ ಅವರ ಮುಂದಿಡಲಾಗಿದೆ.

ಹೀಗಾಗಿಯೇ ಅಶ್ವಿನ್ ಅವರು ಮುಂದಿನ ಸೀಸನ್​ನಲ್ಲಿ ಯಾರ ಪರ ಆಡಲಿದ್ದಾರೆ ಎಂಬ ಪ್ರಶ್ನೆಯೊಂದು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್​, ಕಿಂಗ್ಸ್​​ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್​) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪರ ಅಶ್ವಿನ್ ಆಡಿದ್ದರು. ಇದೀಗ ಮತ್ತೆ ಯಾವ ತಂಡದ ಪರ ಆಡುತ್ತೀರಿ ಎಂಬ ಪ್ರಶ್ನೆಯೊಂದನ್ನು ಅಶ್ವಿನ್ ಅವರ ಮುಂದಿಡಲಾಗಿದೆ.

2 / 5
ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿರುವ ಅಶ್ವಿನ್,  ಚೆನ್ನೈ ಸೂಪರ್ ಕಿಂಗ್ಸ್ ತಂಡವು ನನ್ನ ಹೃದಯಕ್ಕೆ ತುಂಬಾ ಹತ್ತಿರದ ತಂಡ. ಆ ತಂಡ ನನಗೆ ಶಾಲೆಯಿದ್ದಂತೆ. ಇಲ್ಲಿ ನಾನು ಪ್ರಿ ಕೆಜಿ, ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಯ ಶಿಕ್ಷಣವನ್ನು ತೆಗೆದುಕೊಂಡಿದ್ದೆ. ಆ ಬಳಿಕ ನಾನು ಬೇರೆ ಶಾಲೆಗೆ ಹೋದೆ. ಇದೀಗ ನನಗೂ ಮತ್ತೆ ಮನೆಗೆ ಬರಲು ಇಚ್ಛಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅಂದರೆ ಮತ್ತೊಮ್ಮೆ ಸಿಎಸ್​ಕೆ ತಂಡದ ಪರ ಇಂಗಿತವನ್ನು ಅಶ್ವಿನ್ ವ್ಯಕ್ತಪಡಿಸಿದ್ದಾರೆ.

ಈ ಕುತೂಹಲಕಾರಿ ಪ್ರಶ್ನೆಗೆ ಉತ್ತರಿಸಿರುವ ಅಶ್ವಿನ್, ಚೆನ್ನೈ ಸೂಪರ್ ಕಿಂಗ್ಸ್ ತಂಡವು ನನ್ನ ಹೃದಯಕ್ಕೆ ತುಂಬಾ ಹತ್ತಿರದ ತಂಡ. ಆ ತಂಡ ನನಗೆ ಶಾಲೆಯಿದ್ದಂತೆ. ಇಲ್ಲಿ ನಾನು ಪ್ರಿ ಕೆಜಿ, ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಶಾಲೆಯ ಶಿಕ್ಷಣವನ್ನು ತೆಗೆದುಕೊಂಡಿದ್ದೆ. ಆ ಬಳಿಕ ನಾನು ಬೇರೆ ಶಾಲೆಗೆ ಹೋದೆ. ಇದೀಗ ನನಗೂ ಮತ್ತೆ ಮನೆಗೆ ಬರಲು ಇಚ್ಛಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಅಂದರೆ ಮತ್ತೊಮ್ಮೆ ಸಿಎಸ್​ಕೆ ತಂಡದ ಪರ ಇಂಗಿತವನ್ನು ಅಶ್ವಿನ್ ವ್ಯಕ್ತಪಡಿಸಿದ್ದಾರೆ.

3 / 5
ಇತ್ತ ಟೀಮ್ ಇಂಡಿಯಾ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿರುವ ಅಶ್ವಿನ್ ಮುಂದಿನ ಸೀಸನ್​ನ ಮೆಗಾ ಹರಾಜಿನ ಮೂಲಕ ಸಿಎಸ್​ಕೆ ಪರ ಮತ್ತೆ ಕಾಣಿಸಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹೀಗಾಗಿ ಚೆನ್ನೈ ಫ್ರಾಂಚೈಸಿ ಅಶ್ವಿನ್ ಅವರ ಖರೀದಿಗಾಗಿ ಪೈಪೋಟಿ ನಡೆಸುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ. ಏಕೆಂದರೆ...

ಇತ್ತ ಟೀಮ್ ಇಂಡಿಯಾ ಟಿ20 ತಂಡಕ್ಕೆ ಕಂಬ್ಯಾಕ್ ಮಾಡಿರುವ ಅಶ್ವಿನ್ ಮುಂದಿನ ಸೀಸನ್​ನ ಮೆಗಾ ಹರಾಜಿನ ಮೂಲಕ ಸಿಎಸ್​ಕೆ ಪರ ಮತ್ತೆ ಕಾಣಿಸಿಕೊಳ್ಳುವ ಬಯಕೆಯನ್ನು ವ್ಯಕ್ತಪಡಿಸಿದ್ದು, ಹೀಗಾಗಿ ಚೆನ್ನೈ ಫ್ರಾಂಚೈಸಿ ಅಶ್ವಿನ್ ಅವರ ಖರೀದಿಗಾಗಿ ಪೈಪೋಟಿ ನಡೆಸುವ ಸಾಧ್ಯತೆಯನ್ನು ಕೂಡ ತಳ್ಳಿಹಾಕುವಂತಿಲ್ಲ. ಏಕೆಂದರೆ...

4 / 5
2010 ರಿಂದ 2015ರವರೆಗೆ ಸಿಎಸ್​ಕೆ ಪರ ಆಡಿದ್ದ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಸಿಎಸ್​ಕೆ ಪರ 94 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದ ಅಶ್ವಿನ್ ಒಟ್ಟು  90 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ 2016-2017 ರಲ್ಲಿ ಸಿಎಸ್​ಕೆ ತಂಡವು ಅಮಾನತುಗೊಂಡಾಗ ಅಶ್ವಿನ್ ಬೇರೆ ತಂಡಗಳ ಪಾಲಾದರು. ಇದೀಗ ಮತ್ತೊಮ್ಮೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ತವರಿಗೆ ಮರಳುವ ವಿಶ್ವಾಸದಲ್ಲಿದ್ದಾರೆ ಸಿಎಸ್​ಕೆ ತಂಡದ ಮಾಜಿ ಸ್ಪಿನ್ನರ್ ಆರ್​. ಅಶ್ವಿನ್

2010 ರಿಂದ 2015ರವರೆಗೆ ಸಿಎಸ್​ಕೆ ಪರ ಆಡಿದ್ದ ಅಶ್ವಿನ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಸಿಎಸ್​ಕೆ ಪರ 94 ಇನ್ನಿಂಗ್ಸ್‌ಗಳಲ್ಲಿ ಬೌಲಿಂಗ್ ಮಾಡಿದ್ದ ಅಶ್ವಿನ್ ಒಟ್ಟು 90 ವಿಕೆಟ್‌ಗಳನ್ನು ಕಬಳಿಸಿದ್ದರು. ಆದರೆ 2016-2017 ರಲ್ಲಿ ಸಿಎಸ್​ಕೆ ತಂಡವು ಅಮಾನತುಗೊಂಡಾಗ ಅಶ್ವಿನ್ ಬೇರೆ ತಂಡಗಳ ಪಾಲಾದರು. ಇದೀಗ ಮತ್ತೊಮ್ಮೆ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹೀಗಾಗಿ ತವರಿಗೆ ಮರಳುವ ವಿಶ್ವಾಸದಲ್ಲಿದ್ದಾರೆ ಸಿಎಸ್​ಕೆ ತಂಡದ ಮಾಜಿ ಸ್ಪಿನ್ನರ್ ಆರ್​. ಅಶ್ವಿನ್

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ