AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಪಂಜಾಬ್ ಕಿಂಗ್ಸ್​ ತಂಡಕ್ಕೆ ಮತ್ತೆ ಮರಳಲಿದ್ದಾರಾ ಕೆಎಲ್ ರಾಹುಲ್..?

Ipl 2022 Mega Auction: ಈ ಬಾರಿ ಮೆಗಾ ಹರಾಜಿನಲ್ಲಿ ಬಹುತೇಕ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅದರಲ್ಲೂ ಪಂಜಾಬ್ ಕಿಂಗ್ಸ್​ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿ ಹರಾಜಿನಲ್ಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Dec 13, 2021 | 3:24 PM

Share
ಇಂಡಿಯನ್ ಪ್ರೀಮಿಯರ್ ಲೀಸ್ ಸೀಸನ್ 15 ಗಾಗಿ ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಕೇವಲ 27 ಆಟಗಾರರನ್ನು ಉಳಿಸಿಕೊಂಡರು, ಉಳಿದ ಆಟಗಾರರನ್ನು ಬಿಡುಗಡೆ ಮಾಡಿದೆ. ಇನ್ನು ಹೊಸ ಎರಡು ಫ್ರಾಂಚೈಸಿಗಳು ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡಬೇಕಿದೆ. ಇದಾದ ಬಳಿಕ ಮೆಗಾ ಹರಾಜು ನಡೆಯಲಿದೆ.

ಇಂಡಿಯನ್ ಪ್ರೀಮಿಯರ್ ಲೀಸ್ ಸೀಸನ್ 15 ಗಾಗಿ ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು ಕೇವಲ 27 ಆಟಗಾರರನ್ನು ಉಳಿಸಿಕೊಂಡರು, ಉಳಿದ ಆಟಗಾರರನ್ನು ಬಿಡುಗಡೆ ಮಾಡಿದೆ. ಇನ್ನು ಹೊಸ ಎರಡು ಫ್ರಾಂಚೈಸಿಗಳು ತಲಾ ಮೂವರು ಆಟಗಾರರನ್ನು ಆಯ್ಕೆ ಮಾಡಬೇಕಿದೆ. ಇದಾದ ಬಳಿಕ ಮೆಗಾ ಹರಾಜು ನಡೆಯಲಿದೆ.

1 / 7
ಈ ಬಾರಿ ಮೆಗಾ ಹರಾಜಿನಲ್ಲಿ ಬಹುತೇಕ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅದರಲ್ಲೂ ಪಂಜಾಬ್ ಕಿಂಗ್ಸ್​ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿ ಹರಾಜಿನಲ್ಲಿದ್ದಾರೆ. ಅತ್ತ ಪಂಜಾಬ್ ಫ್ರಾಂಚೈಸಿ ಉಳಿಸಿಕೊಳ್ಳಲು ಬಯಸಿದರೂ ರಾಹುಲ್ ಹರಾಜಿನಲ್ಲಿ ಕಾಣಿಸಿಕೊಳ್ಳಲು ಇಚ್ಛಿಸಿದ್ದಾರೆ.

ಈ ಬಾರಿ ಮೆಗಾ ಹರಾಜಿನಲ್ಲಿ ಬಹುತೇಕ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅದರಲ್ಲೂ ಪಂಜಾಬ್ ಕಿಂಗ್ಸ್​ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್ ಕೂಡ ಈ ಬಾರಿ ಹರಾಜಿನಲ್ಲಿದ್ದಾರೆ. ಅತ್ತ ಪಂಜಾಬ್ ಫ್ರಾಂಚೈಸಿ ಉಳಿಸಿಕೊಳ್ಳಲು ಬಯಸಿದರೂ ರಾಹುಲ್ ಹರಾಜಿನಲ್ಲಿ ಕಾಣಿಸಿಕೊಳ್ಳಲು ಇಚ್ಛಿಸಿದ್ದಾರೆ.

2 / 7
ಕಳೆದ ಮೂರು ಸೀಸನ್​ನಲ್ಲಿ ಪಂಜಾಬ್ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿರುವುದು ಸ್ಪಷ್ಟ. ಆದರೆ ತಂಡದಿಂದ ಹೊರನಡೆದಿರುವ ಕೆಎಲ್ ರಾಹುಲ್ ಅವರನ್ನು ಮರಳಿ ತಂಡಕ್ಕೆ ಕರೆತರುವ ಇರಾದೆಯಲ್ಲಿದೆ ಪಂಜಾಬ್ ಕಿಂಗ್ಸ್​.

ಕಳೆದ ಮೂರು ಸೀಸನ್​ನಲ್ಲಿ ಪಂಜಾಬ್ ಪರ ಅತ್ಯುತ್ತಮ ಪ್ರದರ್ಶನ ನೀಡಿರುವ ಕೆಎಲ್ ರಾಹುಲ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿರುವುದು ಸ್ಪಷ್ಟ. ಆದರೆ ತಂಡದಿಂದ ಹೊರನಡೆದಿರುವ ಕೆಎಲ್ ರಾಹುಲ್ ಅವರನ್ನು ಮರಳಿ ತಂಡಕ್ಕೆ ಕರೆತರುವ ಇರಾದೆಯಲ್ಲಿದೆ ಪಂಜಾಬ್ ಕಿಂಗ್ಸ್​.

3 / 7
ಹೌದು, ಕೆಎಲ್ ರಾಹುಲ್ ಅವರನ್ನು ಮತ್ತೆ ತಂಡಕ್ಕೆ ಕರೆತರಲು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಚರ್ಚೆಗಳು ಆರಂಭಿಸಿದೆ. ಪಂಜಾಬ್ ಕಿಂಗ್ಸ್​ ಟೀಮ್ ಮ್ಯಾನೇಜ್ಮೆಂಟ್  ಹೊಸ ಒಪ್ಪಂದದ ಕುರಿತು ರಾಹುಲ್ ಜೊತೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ. ಪಂಜಾಬ್ ತಂಡವು ರಾಹುಲ್​ ಅವರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಲು ಉತ್ಸುಕವಾಗಿದ್ದು, ಹೀಗಾಗಿ ರಾಹುಲ್ ಹರಾಜಿನಲ್ಲಿ ಕಾಣಿಸಿಕೊಂಡರೆ ದೊಡ್ಡ ಮೊತ್ತ ನೀಡಿ ಮತ್ತೆ ಖರೀದಿಸುವ ಪ್ಲ್ಯಾನ್ ರೂಪಿಸಿದೆ.

ಹೌದು, ಕೆಎಲ್ ರಾಹುಲ್ ಅವರನ್ನು ಮತ್ತೆ ತಂಡಕ್ಕೆ ಕರೆತರಲು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಚರ್ಚೆಗಳು ಆರಂಭಿಸಿದೆ. ಪಂಜಾಬ್ ಕಿಂಗ್ಸ್​ ಟೀಮ್ ಮ್ಯಾನೇಜ್ಮೆಂಟ್ ಹೊಸ ಒಪ್ಪಂದದ ಕುರಿತು ರಾಹುಲ್ ಜೊತೆ ಮಾತುಕತೆ ನಡೆಸಿದೆ ಎಂದು ವರದಿಯಾಗಿದೆ. ಪಂಜಾಬ್ ತಂಡವು ರಾಹುಲ್​ ಅವರನ್ನು ಮತ್ತೆ ತಂಡಕ್ಕೆ ಆಯ್ಕೆ ಮಾಡಲು ಉತ್ಸುಕವಾಗಿದ್ದು, ಹೀಗಾಗಿ ರಾಹುಲ್ ಹರಾಜಿನಲ್ಲಿ ಕಾಣಿಸಿಕೊಂಡರೆ ದೊಡ್ಡ ಮೊತ್ತ ನೀಡಿ ಮತ್ತೆ ಖರೀದಿಸುವ ಪ್ಲ್ಯಾನ್ ರೂಪಿಸಿದೆ.

4 / 7
ಆದರೆ ಅತ್ತ ಎರಡು ಹೊಸ ಫ್ರಾಂಚೈಸಿಗಳಿಗೆ ಮೆಗಾ ಹರಾಜಿಗೂ ಮುನ್ನವೇ ತಲಾ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಬಹುದು. ಅದರಂತೆ ಲಕ್ನೋ ಹಾಗೂ ಅಹಮದಾಬಾದ್ ತಂಡಗಳು ಕೂಡ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಹೊಸ ತಂಡಗಳ ಜೊತೆ ಒಪ್ಪಂದ ಮಾಡಿಕೊಳ್ಳದಂತೆ, ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಕೆಎಲ್ ರಾಹುಲ್ ಅವರ ಮನವೊಲಿಸಲು ಮುಂದಾಗಿದೆ ಎಂದು ವರದಿಯಾಗಿದೆ.

ಆದರೆ ಅತ್ತ ಎರಡು ಹೊಸ ಫ್ರಾಂಚೈಸಿಗಳಿಗೆ ಮೆಗಾ ಹರಾಜಿಗೂ ಮುನ್ನವೇ ತಲಾ ಮೂವರು ಆಟಗಾರರನ್ನು ನೇರವಾಗಿ ಆಯ್ಕೆ ಮಾಡಬಹುದು. ಅದರಂತೆ ಲಕ್ನೋ ಹಾಗೂ ಅಹಮದಾಬಾದ್ ತಂಡಗಳು ಕೂಡ ಕೆಎಲ್ ರಾಹುಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಹೊಸ ತಂಡಗಳ ಜೊತೆ ಒಪ್ಪಂದ ಮಾಡಿಕೊಳ್ಳದಂತೆ, ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲು ಪಂಜಾಬ್ ಕಿಂಗ್ಸ್​ ಫ್ರಾಂಚೈಸಿ ಕೆಎಲ್ ರಾಹುಲ್ ಅವರ ಮನವೊಲಿಸಲು ಮುಂದಾಗಿದೆ ಎಂದು ವರದಿಯಾಗಿದೆ.

5 / 7
ಒಟ್ಟಿನಲ್ಲಿ ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್​ ತಂಡವನ್ನು ಬಿಟ್ಟರೂ, ಪಂಜಾಬ್ ತಂಡವು ಕೆಎಲ್ ರಾಹುಲ್ ಅವರನ್ನು ಬಿಡಲು ಸಿದ್ಧರಿಲ್ಲ ಎಂಬುದು ಸ್ಪಷ್ಟ. ಹೀಗಾಗಿ ಕೆಎಲ್​ಆರ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ 10 ತಂಡಗಳ ನಡುವೆ ಖರೀದಿಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

ಒಟ್ಟಿನಲ್ಲಿ ಕೆಎಲ್ ರಾಹುಲ್ ಪಂಜಾಬ್ ಕಿಂಗ್ಸ್​ ತಂಡವನ್ನು ಬಿಟ್ಟರೂ, ಪಂಜಾಬ್ ತಂಡವು ಕೆಎಲ್ ರಾಹುಲ್ ಅವರನ್ನು ಬಿಡಲು ಸಿದ್ಧರಿಲ್ಲ ಎಂಬುದು ಸ್ಪಷ್ಟ. ಹೀಗಾಗಿ ಕೆಎಲ್​ಆರ್​ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡರೆ 10 ತಂಡಗಳ ನಡುವೆ ಖರೀದಿಗಾಗಿ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.

6 / 7
ಕೆಎಲ್ ರಾಹುಲ್

ಕೆಎಲ್ ರಾಹುಲ್

7 / 7
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ