IPL 2022: ಬಲವಂತವಾಗಿ ನಾಯಕತ್ವದಿಂದ ವಜಾ! ಕೋಪದಿಂದ ತಂಡ ತೊರೆದ ಜಡೇಜಾ; ಸಿಎಸ್​ಕೆಗೆ ಆಡುವುದು ಅನುಮಾನ

Ravindra Jadeja: ವರದಿಯ ಪ್ರಕಾರ, ರವೀಂದ್ರ ಜಡೇಜಾ ಐಪಿಎಲ್ 2022 ಅನ್ನು ಮಾತ್ರ ತೊರೆದಿಲ್ಲ. ಬದಲಿಗೆ, ಅವರು ಮುಂದಿನ ಸೀಸನ್​ನಲ್ಲಿ ಈ ತಂಡಕ್ಕಾಗಿ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದು ಕೂಡ ಸ್ಪಷ್ಟವಾಗಿಲ್ಲ.

| Updated By: ಪೃಥ್ವಿಶಂಕರ

Updated on:May 12, 2022 | 4:14 PM

ರವೀಂದ್ರ ಜಡೇಜಾ 15ನೇ ಸೀಸನ್​ನಿಂದ ಹೊರಬಿದ್ದಿದ್ದಾರೆ. ಪಕ್ಕೆಲುಬಿನ ಗಾಯದಿಂದಾಗಿ ಅವರು ಉಳಿದ ಪಂದ್ಯಗಳಿಗೆ ಗೈರಾಗಲಿದ್ದು, ಇತ್ತೀಚಿನ ವರದಿಗಳ ಪ್ರಕಾರ ಜಡೇಜಾ ಇಂಜುರಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಈಗ ಸಿಟ್ಟಿಗೆದ್ದ ಜಡೇಜಾ ಐಪಿಎಲ್ 2022 ರಿಂದ ಹೊರಬರಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ರವೀಂದ್ರ ಜಡೇಜಾ 15ನೇ ಸೀಸನ್​ನಿಂದ ಹೊರಬಿದ್ದಿದ್ದಾರೆ. ಪಕ್ಕೆಲುಬಿನ ಗಾಯದಿಂದಾಗಿ ಅವರು ಉಳಿದ ಪಂದ್ಯಗಳಿಗೆ ಗೈರಾಗಲಿದ್ದು, ಇತ್ತೀಚಿನ ವರದಿಗಳ ಪ್ರಕಾರ ಜಡೇಜಾ ಇಂಜುರಿಯಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಈಗ ಸಿಟ್ಟಿಗೆದ್ದ ಜಡೇಜಾ ಐಪಿಎಲ್ 2022 ರಿಂದ ಹೊರಬರಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

1 / 5
ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಪ್ರಕಾರ, ರವೀಂದ್ರ ಜಡೇಜಾ ನಾಯಕತ್ವವನ್ನು ಕಿತ್ತುಕೊಂಡಿದ್ದರಿಂದ ಕೋಪಗೊಂಡಿದ್ದಾರೆ ಎಂದು ತಿಳಿದುಬಂದಿದೆ. ವಾಸ್ತವವಾಗಿ ಜಡೇಜಾ ನಾಯಕತ್ವ ಮುಂದುವರೆಸಲು ಬಯಸಿದ್ದರು ಆದರೆ ಫ್ರಾಂಚೈಸಿಯ ಆಡಳಿತ ಮಂಡಳಿ ಅವರನ್ನು ನಾಯಕತ್ವದಿಂದ ತೆಗೆದುಹಾಕಿತು. ರವೀಂದ್ರ ಜಡೇಜಾ ಅವರು 8 ಪಂದ್ಯಗಳಿಗೆ ತಂಡದ ನಾಯಕರಾಗಿದ್ದರು. ಆದರೆ ತಂಡದ ಕಳಪೆ ಪ್ರದರ್ಶನದ ನಂತರ ಧೋನಿಗೆ ಮತ್ತೊಮ್ಮೆ ನಾಯಕತ್ವವಹಿಸಲಾಯಿತು.

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಪ್ರಕಾರ, ರವೀಂದ್ರ ಜಡೇಜಾ ನಾಯಕತ್ವವನ್ನು ಕಿತ್ತುಕೊಂಡಿದ್ದರಿಂದ ಕೋಪಗೊಂಡಿದ್ದಾರೆ ಎಂದು ತಿಳಿದುಬಂದಿದೆ. ವಾಸ್ತವವಾಗಿ ಜಡೇಜಾ ನಾಯಕತ್ವ ಮುಂದುವರೆಸಲು ಬಯಸಿದ್ದರು ಆದರೆ ಫ್ರಾಂಚೈಸಿಯ ಆಡಳಿತ ಮಂಡಳಿ ಅವರನ್ನು ನಾಯಕತ್ವದಿಂದ ತೆಗೆದುಹಾಕಿತು. ರವೀಂದ್ರ ಜಡೇಜಾ ಅವರು 8 ಪಂದ್ಯಗಳಿಗೆ ತಂಡದ ನಾಯಕರಾಗಿದ್ದರು. ಆದರೆ ತಂಡದ ಕಳಪೆ ಪ್ರದರ್ಶನದ ನಂತರ ಧೋನಿಗೆ ಮತ್ತೊಮ್ಮೆ ನಾಯಕತ್ವವಹಿಸಲಾಯಿತು.

2 / 5
ನಾಯಕತ್ವದ ಒತ್ತಡವನ್ನು ನಿಭಾಯಿಸಲು ಜಡೇಜಾಗೆ ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ. ಇದು ಜಡೇಜಾ ಅವರ ವೈಯಕ್ತಿಕ ಪ್ರದರ್ಶನದ ಮೇಲೂ ಪರಿಣಾಮ ಬೀರಿದೆ ಎಂದು ಹೇಳಲಾಗುತ್ತಿತ್ತು. ಆದರೆ ಇತ್ತೀಚಿನ ವರದಿಯ ಪ್ರಕಾರ ಜಡೇಜಾ ಅವರನ್ನು ನಾಯಕತ್ವದಿಂದ ಕೆಳಗಿಳಿಸಿದ ರೀತಿ ಜಡೇಜಾಗೆ ತೀವ್ರ ನೋವುಂಟು ಮಾಡಿದೆ ಎಂದು ವರದಿಯಾಗಿದೆ.

Ravindra Jadeja and Rashid Khan in the post match presentation After GT vs CSK IPL Match

3 / 5
ವರದಿಯ ಪ್ರಕಾರ, ರವೀಂದ್ರ ಜಡೇಜಾ ಐಪಿಎಲ್ 2022 ಅನ್ನು ಮಾತ್ರ ತೊರೆದಿಲ್ಲ. ಬದಲಿಗೆ, ಅವರು ಮುಂದಿನ ಸೀಸನ್​ನಲ್ಲಿ ಈ ತಂಡಕ್ಕಾಗಿ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬುದು ಕೂಡ ಸ್ಪಷ್ಟವಾಗಿಲ್ಲ. ಜಡೇಜಾ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ 16 ಕೋಟಿ ರೂ.ಗೆ ಉಳಿಸಿಕೊಂಡಿತ್ತು.

4 / 5
ರವೀಂದ್ರ ಜಡೇಜಾ ಮತ್ತು ಸಿಎಸ್‌ಕೆ ನಡುವಿನ ಜಗಳದ ಚರ್ಚೆ ಸಾಮಾಜಿಕ ಜಾಲತಾಣದಲ್ಲೂ ಸಖತ್ ಸುದ್ದಿಯಾಗಿದೆ. ವಾಸ್ತವವಾಗಿ ಚೆನ್ನೈ ಸೂಪರ್ ಕಿಂಗ್ಸ್ ಜಡೇಜಾ ಅವರನ್ನು Instagram ನಲ್ಲಿ ಅನ್ ಫಾಲೋ ಮಾಡಿದೆ. ಹಾಗಾದರೆ ಜಡೇಜಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಂಬಂಧ ನಿಜವಾಗಿಯೂ ಹದಗೆಟ್ಟಿದೆಯೇ? ಎಂಬುದು ಈಗ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಾಗಿದೆ.

ರವೀಂದ್ರ ಜಡೇಜಾ ಮತ್ತು ಸಿಎಸ್‌ಕೆ ನಡುವಿನ ಜಗಳದ ಚರ್ಚೆ ಸಾಮಾಜಿಕ ಜಾಲತಾಣದಲ್ಲೂ ಸಖತ್ ಸುದ್ದಿಯಾಗಿದೆ. ವಾಸ್ತವವಾಗಿ ಚೆನ್ನೈ ಸೂಪರ್ ಕಿಂಗ್ಸ್ ಜಡೇಜಾ ಅವರನ್ನು Instagram ನಲ್ಲಿ ಅನ್ ಫಾಲೋ ಮಾಡಿದೆ. ಹಾಗಾದರೆ ಜಡೇಜಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಸಂಬಂಧ ನಿಜವಾಗಿಯೂ ಹದಗೆಟ್ಟಿದೆಯೇ? ಎಂಬುದು ಈಗ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಾಗಿದೆ.

5 / 5

Published On - 4:14 pm, Thu, 12 May 22

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ