AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ಇಬ್ಬರನ್ನು ಮಾತ್ರ ಉಳಿಸಿಕೊಳ್ಳುವ ಸಾಧ್ಯತೆ..!

IPL 2022 RCB: ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ.

TV9 Web
| Edited By: |

Updated on: Nov 27, 2021 | 7:06 PM

Share
ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಐಪಿಎಲ್ ಸೀಸನ್ 15 ಗಾಗಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಇಬ್ಬರನ್ನು ಮಾತ್ರ ಉಳಿಸಿಕೊಳ್ಳಲಿದೆ ಎಂದು ವರದಿಯಾಗಿದೆ. ಆರ್​ಸಿಬಿ ಫ್ರಾಂಚೈಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದ್ದು, ಹೀಗಾಗಿ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ, ಉಳಿದ ಆಟಗಾರರನ್ನು ರಿಲೀಸ್ ಮಾಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

1 / 6
ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

ಅದರಂತೆ ಆರ್​ಸಿಬಿ ತಂಡವು ವಿರಾಟ್ ಕೊಹ್ಲಿಯನ್ನು ಮೊದಲ ಆಯ್ಕೆಯಾಗಿ ಉಳಿಸಿಕೊಳ್ಳಲಿದೆ. ತಂಡದ ಬ್ರಾಂಡ್ ವಾಲ್ಯೂ ಹೆಚ್ಚಿಸುವ ಆಟಗಾರನಾಗಿರುವ ಕೊಹ್ಲಿಯನ್ನು ಆರ್​ಸಿಬಿ ಬ್ಯಾಟ್ಸ್​ಮನ್ ಆಗಿ ತಂಡದಲ್ಲೇ ಇರಿಸಿಕೊಳ್ಳಲಿದ್ದಾರೆ. ಇನ್ನು ಆಲ್​ರೌಂಡರ್​ ಆಗಿ ವಿದೇಶಿ ಆಟಗಾರನನ್ನು ಉಳಿಸಿಕೊಳ್ಳಲು ನಿರ್ಧರಿಸಲಾಗಿದೆ. ಅದರಂತೆ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ರಿಟೈನ್ ಮಾಡಿಕೊಳ್ಳಲಿದೆ.

2 / 6
ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

ಮ್ಯಾಕ್ಸ್​ವೆಲ್ ಅವರನ್ನು ಕಳೆದ ಸೀಸನ್​ನಲ್ಲಿ ಆರ್​ಸಿಬಿ 14 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿತ್ತು. ಒಂದು ವೇಳೆ ಈ ಬಾರಿ ಬಿಡುಗಡೆ ಮಾಡಿದರೆ ಮತ್ತೆ ಖರೀದಿಸಲು ಹೆಚ್ಚಿನ ಮೊತ್ತ ನೀಡಬೇಕಾಗುತ್ತದೆ. ಹೀಗಾಗಿ ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ಆರ್​ಸಿಬಿ ಫ್ರಾಂಚೈಸಿ ಮನವೊಲಿಸಿದ್ದು, ಅದರಂತೆ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳಲು ಆರ್​ಸಿಬಿ ನಿರ್ಧರಿಸಿದೆ ಎಂದು ವರದಿಯಾಗಿದೆ.

3 / 6
ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇನ್ನು ಆರ್​ಸಿಬಿ ಉಳಿಸಿಕೊಳ್ಳಲಿರುವ 3ನೇ ಮತ್ತು 4ನೇ ಆಟಗಾರ ಯಾರೆಂಬುದರ ಯಾವುದೇ ಮಾಹಿತಿಯಿಲ್ಲ. ಹೀಗಾಗಿ ಆರ್​ಸಿಬಿ ಈ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿ ಹೊಸ ತಂಡ ಕಟ್ಟುವ ಇರಾದೆಯಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

4 / 6
ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಅಷ್ಟೇ ಅಲ್ಲದೆ ಮುಂದಿನ ಸೀಸನ್​ನಲ್ಲಿ ಯಾರನ್ನು ನಾಯಕನಾಗಿ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಕೂಡ ಆರ್​ಸಿಬಿ ಇನ್ನೂ ಕೂಡ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಸದ್ಯ ಇಬ್ಬರನ್ನು ಉಳಿಸಿ ಬಹುತೇಕ ಹೊಸ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳಲು ಆರ್​ಸಿಬಿ ಬಯಸಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

5 / 6
ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗಳಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗುತ್ತದೆ. ಹೀಗೆ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ನವೆಂಬರ್ 30ರೊಳಗೆ ಸಲ್ಲಿಸಬೇಕಾಗುತ್ತದೆ.

6 / 6
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್