AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

IPL 2022 retention: ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ.

TV9 Web
| Edited By: |

Updated on: Dec 01, 2021 | 5:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

1 / 6
ಹೌದು,  ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

ಹೌದು, ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

2 / 6
ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

3 / 6
ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

4 / 6
ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

5 / 6
 ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು  57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

6 / 6
Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ