AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ದುಡ್ಡಿಗಿಂತ RCB ತಂಡವೇ ಮುಖ್ಯ: ವಿರಾಟ್ ಕೊಹ್ಲಿಗೆ ಅಭಿಮಾನಿಗಳಿಂದ ಬಹುಪರಾಕ್

IPL 2022 retention: ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ.

TV9 Web
| Edited By: |

Updated on: Dec 01, 2021 | 5:53 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿದೆ. ಅದರಲ್ಲೂ ಇಬ್ಬರು ಸ್ಟಾರ್ ಆಟಗಾರರನ್ನು ಉಳಿಸಿಕೊಳ್ಳುವಲ್ಲಿ ಆರ್​ಸಿಬಿ ಯಶಸ್ವಿಯಾಗಿದೆ. ಅದು ಕೂಡ ಕಡಿಮೆ ಮೊತ್ತ ನೀಡಿ ಸ್ಟಾರ್ ಆಟಗಾರರನ್ನು ಒಪ್ಪಿಸುವ ಮೂಲಕ ಎಂಬುದು ವಿಶೇಷ.

1 / 6
ಹೌದು,  ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

ಹೌದು, ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿಗೆ ನೀಡುತ್ತಿರುವುದು 15 ಕೋಟಿ ರೂ. ಮಾತ್ರ. ಆದರೆ 2018 ರಿಂದ ಕೊಹ್ಲಿಗೆ ಆರ್​ಸಿಬಿ ನೀಡುತ್ತಿರುವುದು ಬರೋಬ್ಬರಿ 17 ಕೋಟಿ ರೂ. ಆದರೆ ಈ ಬಾರಿ 2 ಕೋಟಿ ರೂ. ಅನ್ನು ಕೊಹ್ಲಿ ಕಡಿತಗೊಳಿಸಿದ್ದಾರೆ. ಏಕೆಂದರೆ ಈ ಬಾರಿ 33 ಕೋಟಿಯೊಳಗೆ 3 ಆಟಗಾರರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಿತ್ತು. ಹೀಗಾಗಿ ಕೊಹ್ಲಿ ಕೂಡ ತಮ್ಮ ಮೊತ್ತವನ್ನು 15 ಕೋಟಿಗೆ ಇಳಿಸಿದ್ದಾರೆ.

2 / 6
ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

ವಿರಾಟ್ ಕೊಹ್ಲಿಯು ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರಿಗೆ ದುಡ್ಡಿಗಿಂತ ಆರ್​​ಸಿಬಿ ತಂಡವೇ ಮುಖ್ಯ. ಹೀಗಾಗಿ ಅವರು ಕಡಿಮೆ ಮೊತ್ತಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಆರ್‌ಸಿಬಿ ಮಾಜಿ ಆಟಗಾರ ಪಾರ್ಥಿವ್ ಪಟೇಲ್ ಬಹಿರಂಗಪಡಿಸಿದ್ದಾರೆ.

3 / 6
ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

ಇನ್ನೊಂದೆಡೆ ಕಳೆದ 14 ಕೋಟಿ 25 ಲಕ್ಷ ರೂ. ಪಡೆದಿದ್ದ ಗ್ಲೆನ್ ಮ್ಯಾಕ್ಸ್​ವೆಲ್ ಈ ಬಾರಿ 11 ಕೋಟಿಗೆ ಒಪ್ಪಿಗೆ ಸೂಚಿಸಿದ್ದಾರೆ. ಅಂದರೆ ಕಳೆದ ಬಾರಿಗಿಂತ ಮ್ಯಾಕ್ಸ್​ವೆಲ್ 3 ಕೋಟಿ ಕಡಿಮೆ ಮೊತ್ತಕ್ಕೆ ಓಕೆ ಅಂದಿದ್ದಾರೆ. ಇಲ್ಲಿ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಆರ್​ಸಿಬಿ ಫ್ರಾಂಚೈಸಿ ನೀಡಿದ ಆಫರ್​ ಅನ್ನು ಸ್ವೀಕರಿಸಿ ತಂಡದಲ್ಲೇ ಉಳಿದುಕೊಳ್ಳಲು ಬಯಸಿದ್ದಾರೆ.

4 / 6
ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇದಾಗ್ಯೂ ಕಡಿಮೆ ಮೊತ್ತದ ನೆಪವೊಡ್ಡಿ ಇಬ್ಬರೂ ಆಟಗಾರರು ಆರ್​ಸಿಬಿ ತಂಡವನ್ನು ತೊರೆದಿಲ್ಲ ಎಂಬುದು ವಿಶೇಷ. ಏಕೆಂದರೆ ಈ ಬಾರಿ ಎರಡು ಹೊಸ ಫ್ರಾಂಚೈಸಿಗಳಿದ್ದು, ಇಬ್ಬರು ಆಟಗಾರರು ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದರೆ ದೊಡ್ಡ ಮೊತ್ತ ಸಿಗುತ್ತಿತ್ತು. ಇದಾಗ್ಯೂ ಕೊಹ್ಲಿ-ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದು ಆರ್​ಸಿಬಿಯಲ್ಲೇ ಮುಂದುವರೆಯಲು ಒಪ್ಪಿರುವುದಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

5 / 6
 ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು  57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ ಕಡಿಮೆ ಮೊತ್ತ ಪಡೆದಿರುವ ಕಾರಣ ಇದೀಗ ಆರ್​​ಸಿಬಿ ತಂಡಕ್ಕೂ ಪ್ಲಸ್ ಪಾಯಿಂಟ್ ಆಗಿದೆ. ತಂಡವು ಮೆಗಾ ಹರಾಜಿಗಾಗಿ ಒಟ್ಟು 57 ಕೋಟಿ ಉಳಿದಿದೆ. ಈ ಮೊತ್ತದೊಂದಿಗೆ ಆರ್​ಸಿಬಿ ತಂಡವು ಬಲಿಷ್ಠ ತಂಡವನ್ನು ಕಟ್ಟುವ ಇರಾದೆಯಲ್ಲಿದೆ.

6 / 6
Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್