AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್ ಮೆಗಾ ಹರಾಜಿನಲ್ಲಿ ಶ್ರೀಶಾಂತ್: ಮೂಲ ಬೆಲೆ ಎಷ್ಟು ಗೊತ್ತಾ?

IPL 2022 Mega Auction: 7 ವರ್ಷಗಳ ಬಳಿಕ ದೇಶೀಯ ಟೂರ್ನಿಗೆ ಕಂಬ್ಯಾಕ್ ಮಾಡಿದ್ದ ಶ್ರೀಶಾಂತ್, 2020-21 ರ ವಿಜಯ್ ಹಜಾರೆ ಟ್ರೋಫಿಯಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Jan 26, 2022 | 5:43 PM

 ಐಪಿಎಲ್ ಸೀಸನ್ 15 ಮೆಗಾ ಹರಾಜಿಗಾಗಿ ಒಟ್ಟು  1214 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 318 ವಿದೇಶಿ ಆಟಗಾರರಿದ್ದರೆ, 896 ಭಾರತೀಯ ಆಟಗಾರಿದ್ದಾರೆ. ಇದರಲ್ಲಿ ಕೇರಳ ವೇಗಿ ಎಸ್​ ಶ್ರೀಶಾಂತ್ ಕೂಡ ಇರುವುದು ವಿಶೇಷ.

ಐಪಿಎಲ್ ಸೀಸನ್ 15 ಮೆಗಾ ಹರಾಜಿಗಾಗಿ ಒಟ್ಟು 1214 ಆಟಗಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 318 ವಿದೇಶಿ ಆಟಗಾರರಿದ್ದರೆ, 896 ಭಾರತೀಯ ಆಟಗಾರಿದ್ದಾರೆ. ಇದರಲ್ಲಿ ಕೇರಳ ವೇಗಿ ಎಸ್​ ಶ್ರೀಶಾಂತ್ ಕೂಡ ಇರುವುದು ವಿಶೇಷ.

1 / 5
 ಈ ಹಿಂದೆ ಐಪಿಎಲ್​ ತಂಡದ ಭಾಗವಾಗಿದ್ದ ಶ್ರೀಶಾಂತ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಅವರ ಮೇಲೆ ನಿಷೇಧ ಹೇರಲಾಗಿತ್ತು. 2019 ರಲ್ಲಿ ಶ್ರೀಶಾಂತ್‌ಗೆ ವಿಧಿಸಲಾದ ಜೀವಾವಧಿ ನಿಷೇಧ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಮರುಪರಿಶೀಲಿಸಲಾಗಿತ್ತು. ಅದರಂತೆ ಬಿಸಿಸಿಐ ಅವರ ನಿಷೇಧವನ್ನು 7 ವರ್ಷಕ್ಕೆ ಇಳಿಸಿತು. ಹೀಗಾಗಿ 2020 ರ ಸೆಪ್ಟೆಂಬರ್​ನಲ್ಲಿ ಶ್ರೀಶಾಂತ್ ದೇಶೀಯ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದರು.

ಈ ಹಿಂದೆ ಐಪಿಎಲ್​ ತಂಡದ ಭಾಗವಾಗಿದ್ದ ಶ್ರೀಶಾಂತ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಅವರ ಮೇಲೆ ನಿಷೇಧ ಹೇರಲಾಗಿತ್ತು. 2019 ರಲ್ಲಿ ಶ್ರೀಶಾಂತ್‌ಗೆ ವಿಧಿಸಲಾದ ಜೀವಾವಧಿ ನಿಷೇಧ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಮರುಪರಿಶೀಲಿಸಲಾಗಿತ್ತು. ಅದರಂತೆ ಬಿಸಿಸಿಐ ಅವರ ನಿಷೇಧವನ್ನು 7 ವರ್ಷಕ್ಕೆ ಇಳಿಸಿತು. ಹೀಗಾಗಿ 2020 ರ ಸೆಪ್ಟೆಂಬರ್​ನಲ್ಲಿ ಶ್ರೀಶಾಂತ್ ದೇಶೀಯ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಿದ್ದರು.

2 / 5
2013 ರಲ್ಲಿ ಕೊನೆಯ ಬಾರಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಶ್ರೀಶಾಂತ್, ಇದುವರೆಗೆ ಐಪಿಎಲ್​ನಲ್ಲಿ 3 ತಂಡಗಳ ಪರ ಕಣಕ್ಕಿಳಿದಿದ್ದರು. ಅದರಂತೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್​ ಹಾಗೂ ಕೊಚ್ಚಿ ಟಸ್ಕರ್ಸ್ ಪರ ಆಡಿದ್ದರು. ಈ ವೇಳೆ ಒಟ್ಟು 44 ಪಂದ್ಯಗಳನ್ನಾಡಿರುವ ಶ್ರೀ 44 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

2013 ರಲ್ಲಿ ಕೊನೆಯ ಬಾರಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಶ್ರೀಶಾಂತ್, ಇದುವರೆಗೆ ಐಪಿಎಲ್​ನಲ್ಲಿ 3 ತಂಡಗಳ ಪರ ಕಣಕ್ಕಿಳಿದಿದ್ದರು. ಅದರಂತೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್​ ಹಾಗೂ ಕೊಚ್ಚಿ ಟಸ್ಕರ್ಸ್ ಪರ ಆಡಿದ್ದರು. ಈ ವೇಳೆ ಒಟ್ಟು 44 ಪಂದ್ಯಗಳನ್ನಾಡಿರುವ ಶ್ರೀ 44 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
ಅಷ್ಟೇ ಅಲ್ಲದೆ 7 ವರ್ಷಗಳ ಬಳಿಕ ದೇಶೀಯ ಟೂರ್ನಿಗೆ ಕಂಬ್ಯಾಕ್ ಮಾಡಿದ್ದ ಶ್ರೀಶಾಂತ್, 2020-21 ರ ವಿಜಯ್ ಹಜಾರೆ ಟ್ರೋಫಿಯಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು. ಕಳೆದ ಬಾರಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶ್ರೀಶಾಂತ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

ಅಷ್ಟೇ ಅಲ್ಲದೆ 7 ವರ್ಷಗಳ ಬಳಿಕ ದೇಶೀಯ ಟೂರ್ನಿಗೆ ಕಂಬ್ಯಾಕ್ ಮಾಡಿದ್ದ ಶ್ರೀಶಾಂತ್, 2020-21 ರ ವಿಜಯ್ ಹಜಾರೆ ಟ್ರೋಫಿಯಲ್ಲಿ 6 ಪಂದ್ಯಗಳಲ್ಲಿ 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದರು. ಕಳೆದ ಬಾರಿ 75 ಲಕ್ಷ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶ್ರೀಶಾಂತ್ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

4 / 5
ಇದೀಗ ಈ ಬಾರಿ ಮೆಗಾ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಶ್ರೀಶಾಂತ್ ಹೆಸರು ನೀಡಿದ್ದಾರೆ. ಈ ಬಾರಿ ಒಟ್ಟು 10 ತಂಡಗಳಿದ್ದು, ಹೀಗಾಗಿ ಯಾವುದಾದರೂ ಒಂದು ಫ್ರಾಂಚೈಸಿ ಖರೀದಿಸುವ ವಿಶ್ವಾಸದಲ್ಲಿದ್ದಾರೆ 38 ವರ್ಷದ ಶಾಂತಕುಮಾರನ್ ಶ್ರೀಶಾಂತ್.

ಇದೀಗ ಈ ಬಾರಿ ಮೆಗಾ ಹರಾಜಿನಲ್ಲಿ 50 ಲಕ್ಷ ರೂ. ಮೂಲ ಬೆಲೆಯೊಂದಿಗೆ ಶ್ರೀಶಾಂತ್ ಹೆಸರು ನೀಡಿದ್ದಾರೆ. ಈ ಬಾರಿ ಒಟ್ಟು 10 ತಂಡಗಳಿದ್ದು, ಹೀಗಾಗಿ ಯಾವುದಾದರೂ ಒಂದು ಫ್ರಾಂಚೈಸಿ ಖರೀದಿಸುವ ವಿಶ್ವಾಸದಲ್ಲಿದ್ದಾರೆ 38 ವರ್ಷದ ಶಾಂತಕುಮಾರನ್ ಶ್ರೀಶಾಂತ್.

5 / 5
Follow us
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ