AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

Delhi Capitals: ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಪರ 145 ಪಂದ್ಯಗಳನ್ನು ಆಡಿರುವ ಶೇನ್ ವಾಟ್ಸನ್ ಒಟ್ಟು 3874 ರನ್​ ಕಲೆಹಾಕಿದ್ದಾರೆ.

TV9 Web
| Edited By: |

Updated on: Feb 23, 2022 | 4:54 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಸಿಬ್ಬಂದಿ ವರ್ಗಗಳ ಬದಲಾವಣೆಗೆ ಮುಂದಾಗಿದೆ. ಅದರಂತೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇಬ್ಬರು ಮಾಜಿ ಆಟಗಾರರನ್ನು ತನ್ನ ಬಳಗಕ್ಕೆ ಸೇರಿಸಿಕೊಂಡಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಆರಂಭಕ್ಕೆ ತಿಂಗಳು ಮಾತ್ರ ಉಳಿದಿರುವಾಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಸಿಬ್ಬಂದಿ ವರ್ಗಗಳ ಬದಲಾವಣೆಗೆ ಮುಂದಾಗಿದೆ. ಅದರಂತೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇಬ್ಬರು ಮಾಜಿ ಆಟಗಾರರನ್ನು ತನ್ನ ಬಳಗಕ್ಕೆ ಸೇರಿಸಿಕೊಂಡಿದೆ.

1 / 6
ತಂಡದ ಕೋಚ್ ಆಗಿ ಈ ಬಾರಿ ಕೂಡ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಮುಂದುವರೆಯಲಿದ್ದು, ಇದರ ಹೊರತಾಗಿ ಸಹಾಯಕ ಕೋಚ್​ಗಳನ್ನು ಡೆಲ್ಲಿ ಕ್ಯಾಪಿಲಟ್ಸ್ ಬದಲಿಸಿದೆ. ಅದರಂತೆ ನೂತನ ಸಹಾಯಕ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ಆಲ್​ರೌಂಡರ್ ಶೇನ್ ವಾಟ್ಸನ್ ಡೆಲ್ಲಿ ಬಳಗವನ್ನು ಸೇರಿಕೊಂಡಿದ್ದಾರೆ.

ತಂಡದ ಕೋಚ್ ಆಗಿ ಈ ಬಾರಿ ಕೂಡ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ಮುಂದುವರೆಯಲಿದ್ದು, ಇದರ ಹೊರತಾಗಿ ಸಹಾಯಕ ಕೋಚ್​ಗಳನ್ನು ಡೆಲ್ಲಿ ಕ್ಯಾಪಿಲಟ್ಸ್ ಬದಲಿಸಿದೆ. ಅದರಂತೆ ನೂತನ ಸಹಾಯಕ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ಆಲ್​ರೌಂಡರ್ ಶೇನ್ ವಾಟ್ಸನ್ ಡೆಲ್ಲಿ ಬಳಗವನ್ನು ಸೇರಿಕೊಂಡಿದ್ದಾರೆ.

2 / 6
ಇನ್ನು ಕಳೆದ ಕೆಲ ಸೀಸನ್​ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಆಗಿದ್ದ ಟೀಮ್ ಇಂಡಿಯಾ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಬದಲಿಗೆ ಅಜಿತ್ ಅಗರ್ಕರ್ ಅವರನ್ನು ನೇಮಿಸಲಾಗಿದೆ. ಇನ್ನು ಬೌಲಿಂಗ್ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ಬೌಲರ್ ಜೇಮ್ಸ್ ಹೋಪ್ಸ್ ಇದ್ದಾರೆ. ಹಾಗೆಯೇ ಭಾರತದ ಮಾಜಿ ಕ್ರಿಕೆಟಿಗರಾದ ಪ್ರವೀಣ್ ಆಮ್ರೆ (ಸಹಾಯಕ ಕೋಚ್) ಹಾಗೂ ಸಬಾ ಕರೀಮ್ (ಸಲಹೆಗಾರ) ಅವರು ಕೂಡ ಡೆಲ್ಲಿ ಬಳಗದಲ್ಲಿದ್ದಾರೆ.

ಇನ್ನು ಕಳೆದ ಕೆಲ ಸೀಸನ್​ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಆಗಿದ್ದ ಟೀಮ್ ಇಂಡಿಯಾ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಬದಲಿಗೆ ಅಜಿತ್ ಅಗರ್ಕರ್ ಅವರನ್ನು ನೇಮಿಸಲಾಗಿದೆ. ಇನ್ನು ಬೌಲಿಂಗ್ ಕೋಚ್ ಆಗಿ ಆಸ್ಟ್ರೇಲಿಯಾದ ಮಾಜಿ ಬೌಲರ್ ಜೇಮ್ಸ್ ಹೋಪ್ಸ್ ಇದ್ದಾರೆ. ಹಾಗೆಯೇ ಭಾರತದ ಮಾಜಿ ಕ್ರಿಕೆಟಿಗರಾದ ಪ್ರವೀಣ್ ಆಮ್ರೆ (ಸಹಾಯಕ ಕೋಚ್) ಹಾಗೂ ಸಬಾ ಕರೀಮ್ (ಸಲಹೆಗಾರ) ಅವರು ಕೂಡ ಡೆಲ್ಲಿ ಬಳಗದಲ್ಲಿದ್ದಾರೆ.

3 / 6
CSK ಪರ IPL 2020 ರಲ್ಲಿ ಆಡಿದ್ದ 40 ವರ್ಷದ ವಾಟ್ಸನ್ ಆ ಬಳಿಕ ಲೀಗ್‌ನಿಂದ ನಿವೃತ್ತರಾದರು. ಚಾಂಪಿಯನ್ ಆಲ್​ರೌಂಡರ್​ ಆಗಿ ಗುರುತಿಸಿಕೊಂಡಿದ್ದ ವಾಟ್ಸನ್​ CSK ಫ್ರಾಂಚೈಸಿ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಇದಾಗ್ಯೂ ರಿಕಿ ಪಾಂಟಿಂಗ್ ಅವರ ಒತ್ತಾಯದ ಮೇರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.

CSK ಪರ IPL 2020 ರಲ್ಲಿ ಆಡಿದ್ದ 40 ವರ್ಷದ ವಾಟ್ಸನ್ ಆ ಬಳಿಕ ಲೀಗ್‌ನಿಂದ ನಿವೃತ್ತರಾದರು. ಚಾಂಪಿಯನ್ ಆಲ್​ರೌಂಡರ್​ ಆಗಿ ಗುರುತಿಸಿಕೊಂಡಿದ್ದ ವಾಟ್ಸನ್​ CSK ಫ್ರಾಂಚೈಸಿ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಇದಾಗ್ಯೂ ರಿಕಿ ಪಾಂಟಿಂಗ್ ಅವರ ಒತ್ತಾಯದ ಮೇರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಕಾರ್ಯ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ.

4 / 6
ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಪರ 145 ಪಂದ್ಯಗಳನ್ನು ಆಡಿರುವ ಶೇನ್ ವಾಟ್ಸನ್ ಒಟ್ಟು 3874 ರನ್​ ಕಲೆಹಾಕಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 4 ಶತಕಗಳು ಹಾಗೂ 21 ಅರ್ಧಶತಕಗಳು ಮೂಡಿಬಂದಿವೆ.

ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್​ ಪರ 145 ಪಂದ್ಯಗಳನ್ನು ಆಡಿರುವ ಶೇನ್ ವಾಟ್ಸನ್ ಒಟ್ಟು 3874 ರನ್​ ಕಲೆಹಾಕಿದ್ದಾರೆ. ಈ ವೇಳೆ ಅವರ ಬ್ಯಾಟ್​ನಿಂದ 4 ಶತಕಗಳು ಹಾಗೂ 21 ಅರ್ಧಶತಕಗಳು ಮೂಡಿಬಂದಿವೆ.

5 / 6
ಹಾಗೆಯೇ ಬೌಲಿಂಗ್​ನಲ್ಲಿ 92 ವಿಕೆಟ್ ಪಡೆದು ಮಿಂಚಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಆಗಿ ನೇಮಕವಾಗಿರು ವಾಟ್ಸನ್ ಐಪಿಎಲ್​ನಲ್ಲಿ 2ನೇ ಇನಿಂಗ್ಸ್ ಆರಂಭಿಸಲಿದ್ದಾರೆ.

ಹಾಗೆಯೇ ಬೌಲಿಂಗ್​ನಲ್ಲಿ 92 ವಿಕೆಟ್ ಪಡೆದು ಮಿಂಚಿದ್ದಾರೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹಾಯಕ ಕೋಚ್ ಆಗಿ ನೇಮಕವಾಗಿರು ವಾಟ್ಸನ್ ಐಪಿಎಲ್​ನಲ್ಲಿ 2ನೇ ಇನಿಂಗ್ಸ್ ಆರಂಭಿಸಲಿದ್ದಾರೆ.

6 / 6
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್