AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಡೆತ್ ಓವರ್‌ಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಅಪಾಯಕಾರಿ ಬ್ಯಾಟರ್​ಗಳು ಇವರೇ..!

IPL 2022: ದಿನೇಶ್ ಕಾರ್ತಿಕ್‌ಗೆ ಈ ಸೀಸನ್ ಅದ್ಭುತವಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಡೆತ್ ಓವರ್‌ಗಳಲ್ಲಿ ಅವರ 18 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ದಿನೇಶ್ ಕಾರ್ತಿಕ್ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ 21 ಸಿಕ್ಸರ್ ಬಾರಿಸಿದ್ದಾರೆ.

ಪೃಥ್ವಿಶಂಕರ
|

Updated on:May 14, 2022 | 4:01 PM

Share
ಡೆತ್ ಓವರ್ ಎಂದರೆ 16 ರಿಂದ 20 ಓವರ್​ಗಳು ಟಿ20 ಕ್ರಿಕೆಟ್​ನಲ್ಲಿ ಬಹಳ ಮುಖ್ಯ. ಈ ಓವರ್‌ಗಳಲ್ಲಿ ಆಟಗಾರರಿಗೆ ಆಟದ ದಿಕ್ಕನ್ನೆ ಬದಲಿಸುವ ಸಾಧ್ಯತೆಗಳಿರುತ್ತವೆ. ಕೆಲವೊಮ್ಮೆ ಬ್ಯಾಟ್ ಅಬ್ಬರಿಸಿದರೆ, ಕೆಲವೊಮ್ಮೆ ಚೆಂಡು ಮೇಲುಗೈ ಸಾಧಿಸುತ್ತದೆ. ಆದರೆ, ನಾವು ಇಲ್ಲಿ ಐಪಿಎಲ್ 2022 ಬ್ಯಾಟ್ಸ್‌ಮನ್‌ಗಳ ಬಗ್ಗೆ ಮಾತನಾಡುವುದಾದರೆ, ಡೆತ್ ಓವರ್‌ಗಳಲ್ಲಿ ಬೌಲರ್​ಗಳು ಪ್ರಾಬಲ್ಯ ಸಾಧಿಸಲು ಅವರು ಬಿಡುವುದಿಲ್ಲ. ಐಪಿಎಲ್ 15ನೇ ಸೀಸನ್‌ನ ಡೆತ್ ಓವರ್‌ಗಳಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದವರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.

1 / 5
ಶಿಮ್ರಾನ್ ಹೆಟ್ಮೆಯರ್ - ಐಪಿಎಲ್ 2022 ರಲ್ಲಿ ಇದುವರೆಗೆ 11 ಪಂದ್ಯಗಳಲ್ಲಿ 21 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಅವರು ಡೆತ್ ಓವರ್‌ಗಳಲ್ಲಿ 19 ಸಿಕ್ಸರ್‌ಗಳನ್ನು ಹೊಡೆದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬರುವುದೇ ಇದಕ್ಕೆ ಪ್ರಮುಖ ಕಾರಣ.

2 / 5
ದಿನೇಶ್ ಕಾರ್ತಿಕ್- IPL 2022 ದಿನೇಶ್ ಕಾರ್ತಿಕ್‌ಗೆ ಅದ್ಭುತವಾಗಿದೆ. ಇದಕ್ಕೆ ಉದಾಹರಣೆ ಎಂಬಂತೆ ಡೆತ್ ಓವರ್‌ಗಳಲ್ಲಿ ಅವರ 18 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ದಿನೇಶ್ ಕಾರ್ತಿಕ್ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ 21 ಸಿಕ್ಸರ್ ಬಾರಿಸಿದ್ದಾರೆ. ಅದರಲ್ಲಿ ಅವರು ಡೆತ್ ಓವರ್‌ಗಳಲ್ಲಿ 18 ಸಿಕ್ಸರ್‌ಗಳನ್ನು ಬಾರಿಸಿರುವುದು ತಂಡಕ್ಕೆ ಬಹುಮುಖ್ಯ ಕೊಡುಗೆಯಾಗಿದೆ.

3 / 5
ರಾಹುಲ್ ತೆವಾಟಿಯಾ - ಗುಜರಾತ್ ಟೈಟಾನ್ಸ್‌ನ ರಾಹುಲ್ ತೆವಾಟಿಯಾ ಅವರು ಐಪಿಎಲ್ 2022 ರಲ್ಲಿ ತಮ್ಮ ತಂಡದ ಮ್ಯಾಚ್ ವಿನ್ನರ್ ಆಗಿ ಹೊರಹೊಮ್ಮಿದ್ದಾರೆ. ಜೊತೆಗೆ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ರಾಹುಲ್ ತೆವಾಟಿಯಾ ಈ ಋತುವಿನಲ್ಲಿ ಇದುವರೆಗೆ 12 ಪಂದ್ಯಗಳಲ್ಲಿ ಒಟ್ಟು 9 ಸಿಕ್ಸರ್ ಬಾರಿಸಿದ್ದಾರೆ. ಅದರಲ್ಲಿ ಅವರು ಡೆತ್ ಓವರ್‌ಗಳಲ್ಲಿ 8 ಸಿಕ್ಸರ್‌ ಬಾರಿಸಿರುವುದು ವಿಶೇಷ.

4 / 5
ಎಂಎಸ್ ಧೋನಿ - ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂಎಸ್ ಧೋನಿ 12 ಪಂದ್ಯಗಳಲ್ಲಿ 9 ಸಿಕ್ಸರ್ ಬಾರಿಸಿದ್ದಾರೆ. ಆದಾಗ್ಯೂ, ಅವರು ಈ 9 ಸಿಕ್ಸರ್‌ಗಳಲ್ಲಿ ಡೆತ್ ಓವರ್‌ಗಳಲ್ಲಿ 7 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಈ ಋತುವಿನಲ್ಲಿ ಚೆನ್ನೈ ಪ್ರಶಸ್ತಿ ರೇಸ್‌ನಿಂದ ನಿರ್ಗಮಿಸಿದರೂ, ಧೋನಿ ಬ್ಯಾಟಿಂಗ್ ಸುದ್ದಿಯಲ್ಲಿದೆ.

5 / 5

Published On - 3:42 pm, Sat, 14 May 22

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ