AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಉಮೇಶ್ ಯಾದವ್ ಬೆಂಕಿ ಬೌಲಿಂಗ್: ಐಪಿಎಲ್​​ನ ಸರ್ವಶ್ರೇಷ್ಠ ದಾಖಲೆ ಉಡೀಸ್

IPL 2022: ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 02, 2022 | 2:54 PM

Share
ಉಮೇಶ್ ಯಾದವ್....ಕಳೆದ ಸೀಸನ್ ಐಪಿಎಲ್​ನಲ್ಲಿ ಈ ಹೆಸರು ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡೇ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಉಮೇಶ್ ಯಾದವ್​ಗೆ ಕೇವಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಮಾತ್ರ ಸಿಕ್ಕಿತ್ತು. ಅಂದರೆ ಬಹುತೇಕ ಮ್ಯಾಚ್​ಗಳಲ್ಲಿ ಬೆಂಚ್ ಕಾದಿದ್ದೇ ಬಂತು.

ಉಮೇಶ್ ಯಾದವ್....ಕಳೆದ ಸೀಸನ್ ಐಪಿಎಲ್​ನಲ್ಲಿ ಈ ಹೆಸರು ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡೇ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಉಮೇಶ್ ಯಾದವ್​ಗೆ ಕೇವಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಮಾತ್ರ ಸಿಕ್ಕಿತ್ತು. ಅಂದರೆ ಬಹುತೇಕ ಮ್ಯಾಚ್​ಗಳಲ್ಲಿ ಬೆಂಚ್ ಕಾದಿದ್ದೇ ಬಂತು.

1 / 5
ಹೀಗಾಗಿಯೇ ಉಮೇಶ್ ಯಾದವ್ ಐಪಿಎಲ್ ಕೆರಿಯರ್ ಖತಂ ಎಂದವರೇ ಹೆಚ್ಚು. ಆದರೆ ಈ ಬಾರಿ ಕೊಲ್ಕತ್ತಾ ನೈಟ್​ ರೈಡರ್ಸ್ ಫ್ರಾಂಚೈಸಿಯು ಅಂತಿಮ ಹಂತದಲ್ಲಿ ಉಮೇಶ್ ಯಾದವ್ ಅವರನ್ನು 2 ಕೋಟಿ ರೂ.ಗೆ ಖರೀದಿಸಿತು. ಕೆಕೆಆರ್ ತಂಡದ ಆ ಅಂತಿಮ ನಿರ್ಧಾರ ಇದೀಗ ಫಲ ನೀಡಿದೆ. ಕೆಕೆಆರ್​ ಪರ ಅದ್ಭುತವಾಗಿ ಬೌಲಿಂಗ್ ಮಾಡುತ್ತಿರುವ ಉಮೇಶ್ ಯಾದವ್ ಭರ್ಜರಿ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಲ್ಲೂ ಆಡಿರುವ ಮೂರು ಪಂದ್ಯಗಳಲ್ಲೂ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸಿ ಕೆಕೆಆರ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ.

ಹೀಗಾಗಿಯೇ ಉಮೇಶ್ ಯಾದವ್ ಐಪಿಎಲ್ ಕೆರಿಯರ್ ಖತಂ ಎಂದವರೇ ಹೆಚ್ಚು. ಆದರೆ ಈ ಬಾರಿ ಕೊಲ್ಕತ್ತಾ ನೈಟ್​ ರೈಡರ್ಸ್ ಫ್ರಾಂಚೈಸಿಯು ಅಂತಿಮ ಹಂತದಲ್ಲಿ ಉಮೇಶ್ ಯಾದವ್ ಅವರನ್ನು 2 ಕೋಟಿ ರೂ.ಗೆ ಖರೀದಿಸಿತು. ಕೆಕೆಆರ್ ತಂಡದ ಆ ಅಂತಿಮ ನಿರ್ಧಾರ ಇದೀಗ ಫಲ ನೀಡಿದೆ. ಕೆಕೆಆರ್​ ಪರ ಅದ್ಭುತವಾಗಿ ಬೌಲಿಂಗ್ ಮಾಡುತ್ತಿರುವ ಉಮೇಶ್ ಯಾದವ್ ಭರ್ಜರಿ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಲ್ಲೂ ಆಡಿರುವ ಮೂರು ಪಂದ್ಯಗಳಲ್ಲೂ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸಿ ಕೆಕೆಆರ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ.

2 / 5
ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲೂ ಉಮೇಶ್ ಯಾದವ್ ಮೊದಲ ಓವರ್​ನಲ್ಲೇ ಮಯಾಂಕ್ ಅಗರ್ವಾಲ್​ ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಅಷ್ಟೇ ಅಲ್ಲದೆ ನಾಲ್ಕು ಓವರ್​ ಬೌಲಿಂಗ್ ಮಾಡಿ ಕೇವಲ 23 ರನ್​ನೊಂದಿಗೆ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ನಾಲ್ಕು ವಿಕೆಟ್​ನೊಂದಿಗೆ ಉಮೇಶ್ ಯಾದವ್ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.

ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲೂ ಉಮೇಶ್ ಯಾದವ್ ಮೊದಲ ಓವರ್​ನಲ್ಲೇ ಮಯಾಂಕ್ ಅಗರ್ವಾಲ್​ ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಅಷ್ಟೇ ಅಲ್ಲದೆ ನಾಲ್ಕು ಓವರ್​ ಬೌಲಿಂಗ್ ಮಾಡಿ ಕೇವಲ 23 ರನ್​ನೊಂದಿಗೆ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ನಾಲ್ಕು ವಿಕೆಟ್​ನೊಂದಿಗೆ ಉಮೇಶ್ ಯಾದವ್ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.

3 / 5
ಐಪಿಎಲ್​ನಲ್ಲೇ ಒಂದೇ ತಂಡದ ವಿರುದ್ದ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಉಮೇಶ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಮಾಲಿಂಗ ಸಿಎಸ್​ಕೆ ವಿರುದ್ದ 31 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಉಮೇಶ್ ಯಾದವ್ ಪಂಜಾಬ್ ಕಿಂಗ್ಸ್ ವಿರುದ್ದ ಒಟ್ಟು 33 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಲಸಿತ್ ಮಾಲಿಂಗ ದಾಖಲೆಯನ್ನು ಮುರಿದು ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹೊಸ ಇತಿಹಾಸ ಬರೆದಿದ್ದಾರೆ.

ಐಪಿಎಲ್​ನಲ್ಲೇ ಒಂದೇ ತಂಡದ ವಿರುದ್ದ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಉಮೇಶ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಮಾಲಿಂಗ ಸಿಎಸ್​ಕೆ ವಿರುದ್ದ 31 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಉಮೇಶ್ ಯಾದವ್ ಪಂಜಾಬ್ ಕಿಂಗ್ಸ್ ವಿರುದ್ದ ಒಟ್ಟು 33 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಲಸಿತ್ ಮಾಲಿಂಗ ದಾಖಲೆಯನ್ನು ಮುರಿದು ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹೊಸ ಇತಿಹಾಸ ಬರೆದಿದ್ದಾರೆ.

4 / 5
ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಇದುವರೆಗೆ 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಗೆಲುವಿನ ರೂವಾರಿ ಎನಿಸಿಕೊಂಡು ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಐಪಿಎಲ್ ಸೀಸನ್ 15 ಮೂಲಕ ಉಮೇಶ್ ಯಾದವ್ ಸಂಚಲನ ಸೃಷ್ಟಿಸಿದ್ದು, ಸದ್ಯ 8 ವಿಕೆಟ್​ ಪಡೆದಿರುವ ವೇಗಿ ಈ ಬಾರಿ ಪರ್ಪಲ್​ ಕ್ಯಾಪ್ ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಇದುವರೆಗೆ 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಗೆಲುವಿನ ರೂವಾರಿ ಎನಿಸಿಕೊಂಡು ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಐಪಿಎಲ್ ಸೀಸನ್ 15 ಮೂಲಕ ಉಮೇಶ್ ಯಾದವ್ ಸಂಚಲನ ಸೃಷ್ಟಿಸಿದ್ದು, ಸದ್ಯ 8 ವಿಕೆಟ್​ ಪಡೆದಿರುವ ವೇಗಿ ಈ ಬಾರಿ ಪರ್ಪಲ್​ ಕ್ಯಾಪ್ ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದಾರೆ.

5 / 5
Follow Us
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
10 ಸಾವಿರ ಜನರಿಗೆ ವಿಷ್ಣುವರ್ಧನ್ ಅಭಿಮಾನಿಗಳಿಂದ ವೆಜ್, ನಾನ್-ವೆಜ್ ಊಟ
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು