AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಉಮೇಶ್ ಯಾದವ್ ಬೆಂಕಿ ಬೌಲಿಂಗ್: ಐಪಿಎಲ್​​ನ ಸರ್ವಶ್ರೇಷ್ಠ ದಾಖಲೆ ಉಡೀಸ್

IPL 2022: ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 02, 2022 | 2:54 PM

Share
ಉಮೇಶ್ ಯಾದವ್....ಕಳೆದ ಸೀಸನ್ ಐಪಿಎಲ್​ನಲ್ಲಿ ಈ ಹೆಸರು ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡೇ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಉಮೇಶ್ ಯಾದವ್​ಗೆ ಕೇವಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಮಾತ್ರ ಸಿಕ್ಕಿತ್ತು. ಅಂದರೆ ಬಹುತೇಕ ಮ್ಯಾಚ್​ಗಳಲ್ಲಿ ಬೆಂಚ್ ಕಾದಿದ್ದೇ ಬಂತು.

ಉಮೇಶ್ ಯಾದವ್....ಕಳೆದ ಸೀಸನ್ ಐಪಿಎಲ್​ನಲ್ಲಿ ಈ ಹೆಸರು ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡೇ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಉಮೇಶ್ ಯಾದವ್​ಗೆ ಕೇವಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಮಾತ್ರ ಸಿಕ್ಕಿತ್ತು. ಅಂದರೆ ಬಹುತೇಕ ಮ್ಯಾಚ್​ಗಳಲ್ಲಿ ಬೆಂಚ್ ಕಾದಿದ್ದೇ ಬಂತು.

1 / 5
ಹೀಗಾಗಿಯೇ ಉಮೇಶ್ ಯಾದವ್ ಐಪಿಎಲ್ ಕೆರಿಯರ್ ಖತಂ ಎಂದವರೇ ಹೆಚ್ಚು. ಆದರೆ ಈ ಬಾರಿ ಕೊಲ್ಕತ್ತಾ ನೈಟ್​ ರೈಡರ್ಸ್ ಫ್ರಾಂಚೈಸಿಯು ಅಂತಿಮ ಹಂತದಲ್ಲಿ ಉಮೇಶ್ ಯಾದವ್ ಅವರನ್ನು 2 ಕೋಟಿ ರೂ.ಗೆ ಖರೀದಿಸಿತು. ಕೆಕೆಆರ್ ತಂಡದ ಆ ಅಂತಿಮ ನಿರ್ಧಾರ ಇದೀಗ ಫಲ ನೀಡಿದೆ. ಕೆಕೆಆರ್​ ಪರ ಅದ್ಭುತವಾಗಿ ಬೌಲಿಂಗ್ ಮಾಡುತ್ತಿರುವ ಉಮೇಶ್ ಯಾದವ್ ಭರ್ಜರಿ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಲ್ಲೂ ಆಡಿರುವ ಮೂರು ಪಂದ್ಯಗಳಲ್ಲೂ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸಿ ಕೆಕೆಆರ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ.

ಹೀಗಾಗಿಯೇ ಉಮೇಶ್ ಯಾದವ್ ಐಪಿಎಲ್ ಕೆರಿಯರ್ ಖತಂ ಎಂದವರೇ ಹೆಚ್ಚು. ಆದರೆ ಈ ಬಾರಿ ಕೊಲ್ಕತ್ತಾ ನೈಟ್​ ರೈಡರ್ಸ್ ಫ್ರಾಂಚೈಸಿಯು ಅಂತಿಮ ಹಂತದಲ್ಲಿ ಉಮೇಶ್ ಯಾದವ್ ಅವರನ್ನು 2 ಕೋಟಿ ರೂ.ಗೆ ಖರೀದಿಸಿತು. ಕೆಕೆಆರ್ ತಂಡದ ಆ ಅಂತಿಮ ನಿರ್ಧಾರ ಇದೀಗ ಫಲ ನೀಡಿದೆ. ಕೆಕೆಆರ್​ ಪರ ಅದ್ಭುತವಾಗಿ ಬೌಲಿಂಗ್ ಮಾಡುತ್ತಿರುವ ಉಮೇಶ್ ಯಾದವ್ ಭರ್ಜರಿ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಲ್ಲೂ ಆಡಿರುವ ಮೂರು ಪಂದ್ಯಗಳಲ್ಲೂ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸಿ ಕೆಕೆಆರ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ.

2 / 5
ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲೂ ಉಮೇಶ್ ಯಾದವ್ ಮೊದಲ ಓವರ್​ನಲ್ಲೇ ಮಯಾಂಕ್ ಅಗರ್ವಾಲ್​ ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಅಷ್ಟೇ ಅಲ್ಲದೆ ನಾಲ್ಕು ಓವರ್​ ಬೌಲಿಂಗ್ ಮಾಡಿ ಕೇವಲ 23 ರನ್​ನೊಂದಿಗೆ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ನಾಲ್ಕು ವಿಕೆಟ್​ನೊಂದಿಗೆ ಉಮೇಶ್ ಯಾದವ್ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.

ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲೂ ಉಮೇಶ್ ಯಾದವ್ ಮೊದಲ ಓವರ್​ನಲ್ಲೇ ಮಯಾಂಕ್ ಅಗರ್ವಾಲ್​ ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಅಷ್ಟೇ ಅಲ್ಲದೆ ನಾಲ್ಕು ಓವರ್​ ಬೌಲಿಂಗ್ ಮಾಡಿ ಕೇವಲ 23 ರನ್​ನೊಂದಿಗೆ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ನಾಲ್ಕು ವಿಕೆಟ್​ನೊಂದಿಗೆ ಉಮೇಶ್ ಯಾದವ್ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.

3 / 5
ಐಪಿಎಲ್​ನಲ್ಲೇ ಒಂದೇ ತಂಡದ ವಿರುದ್ದ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಉಮೇಶ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಮಾಲಿಂಗ ಸಿಎಸ್​ಕೆ ವಿರುದ್ದ 31 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಉಮೇಶ್ ಯಾದವ್ ಪಂಜಾಬ್ ಕಿಂಗ್ಸ್ ವಿರುದ್ದ ಒಟ್ಟು 33 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಲಸಿತ್ ಮಾಲಿಂಗ ದಾಖಲೆಯನ್ನು ಮುರಿದು ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹೊಸ ಇತಿಹಾಸ ಬರೆದಿದ್ದಾರೆ.

ಐಪಿಎಲ್​ನಲ್ಲೇ ಒಂದೇ ತಂಡದ ವಿರುದ್ದ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಉಮೇಶ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಮಾಲಿಂಗ ಸಿಎಸ್​ಕೆ ವಿರುದ್ದ 31 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಉಮೇಶ್ ಯಾದವ್ ಪಂಜಾಬ್ ಕಿಂಗ್ಸ್ ವಿರುದ್ದ ಒಟ್ಟು 33 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಲಸಿತ್ ಮಾಲಿಂಗ ದಾಖಲೆಯನ್ನು ಮುರಿದು ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹೊಸ ಇತಿಹಾಸ ಬರೆದಿದ್ದಾರೆ.

4 / 5
ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಇದುವರೆಗೆ 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಗೆಲುವಿನ ರೂವಾರಿ ಎನಿಸಿಕೊಂಡು ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಐಪಿಎಲ್ ಸೀಸನ್ 15 ಮೂಲಕ ಉಮೇಶ್ ಯಾದವ್ ಸಂಚಲನ ಸೃಷ್ಟಿಸಿದ್ದು, ಸದ್ಯ 8 ವಿಕೆಟ್​ ಪಡೆದಿರುವ ವೇಗಿ ಈ ಬಾರಿ ಪರ್ಪಲ್​ ಕ್ಯಾಪ್ ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಇದುವರೆಗೆ 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಗೆಲುವಿನ ರೂವಾರಿ ಎನಿಸಿಕೊಂಡು ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಐಪಿಎಲ್ ಸೀಸನ್ 15 ಮೂಲಕ ಉಮೇಶ್ ಯಾದವ್ ಸಂಚಲನ ಸೃಷ್ಟಿಸಿದ್ದು, ಸದ್ಯ 8 ವಿಕೆಟ್​ ಪಡೆದಿರುವ ವೇಗಿ ಈ ಬಾರಿ ಪರ್ಪಲ್​ ಕ್ಯಾಪ್ ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ