AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಉಮೇಶ್ ಯಾದವ್ ಬೆಂಕಿ ಬೌಲಿಂಗ್: ಐಪಿಎಲ್​​ನ ಸರ್ವಶ್ರೇಷ್ಠ ದಾಖಲೆ ಉಡೀಸ್

IPL 2022: ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Edited By: |

Updated on: Apr 02, 2022 | 2:54 PM

Share
ಉಮೇಶ್ ಯಾದವ್....ಕಳೆದ ಸೀಸನ್ ಐಪಿಎಲ್​ನಲ್ಲಿ ಈ ಹೆಸರು ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡೇ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಉಮೇಶ್ ಯಾದವ್​ಗೆ ಕೇವಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಮಾತ್ರ ಸಿಕ್ಕಿತ್ತು. ಅಂದರೆ ಬಹುತೇಕ ಮ್ಯಾಚ್​ಗಳಲ್ಲಿ ಬೆಂಚ್ ಕಾದಿದ್ದೇ ಬಂತು.

ಉಮೇಶ್ ಯಾದವ್....ಕಳೆದ ಸೀಸನ್ ಐಪಿಎಲ್​ನಲ್ಲಿ ಈ ಹೆಸರು ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡೇ ಇಲ್ಲ ಎಂದೇ ಹೇಳಬಹುದು. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿ ಉಮೇಶ್ ಯಾದವ್​ಗೆ ಕೇವಲ 3 ಪಂದ್ಯಗಳಲ್ಲಿ ಆಡುವ ಅವಕಾಶ ಮಾತ್ರ ಸಿಕ್ಕಿತ್ತು. ಅಂದರೆ ಬಹುತೇಕ ಮ್ಯಾಚ್​ಗಳಲ್ಲಿ ಬೆಂಚ್ ಕಾದಿದ್ದೇ ಬಂತು.

1 / 5
ಹೀಗಾಗಿಯೇ ಉಮೇಶ್ ಯಾದವ್ ಐಪಿಎಲ್ ಕೆರಿಯರ್ ಖತಂ ಎಂದವರೇ ಹೆಚ್ಚು. ಆದರೆ ಈ ಬಾರಿ ಕೊಲ್ಕತ್ತಾ ನೈಟ್​ ರೈಡರ್ಸ್ ಫ್ರಾಂಚೈಸಿಯು ಅಂತಿಮ ಹಂತದಲ್ಲಿ ಉಮೇಶ್ ಯಾದವ್ ಅವರನ್ನು 2 ಕೋಟಿ ರೂ.ಗೆ ಖರೀದಿಸಿತು. ಕೆಕೆಆರ್ ತಂಡದ ಆ ಅಂತಿಮ ನಿರ್ಧಾರ ಇದೀಗ ಫಲ ನೀಡಿದೆ. ಕೆಕೆಆರ್​ ಪರ ಅದ್ಭುತವಾಗಿ ಬೌಲಿಂಗ್ ಮಾಡುತ್ತಿರುವ ಉಮೇಶ್ ಯಾದವ್ ಭರ್ಜರಿ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಲ್ಲೂ ಆಡಿರುವ ಮೂರು ಪಂದ್ಯಗಳಲ್ಲೂ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸಿ ಕೆಕೆಆರ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ.

ಹೀಗಾಗಿಯೇ ಉಮೇಶ್ ಯಾದವ್ ಐಪಿಎಲ್ ಕೆರಿಯರ್ ಖತಂ ಎಂದವರೇ ಹೆಚ್ಚು. ಆದರೆ ಈ ಬಾರಿ ಕೊಲ್ಕತ್ತಾ ನೈಟ್​ ರೈಡರ್ಸ್ ಫ್ರಾಂಚೈಸಿಯು ಅಂತಿಮ ಹಂತದಲ್ಲಿ ಉಮೇಶ್ ಯಾದವ್ ಅವರನ್ನು 2 ಕೋಟಿ ರೂ.ಗೆ ಖರೀದಿಸಿತು. ಕೆಕೆಆರ್ ತಂಡದ ಆ ಅಂತಿಮ ನಿರ್ಧಾರ ಇದೀಗ ಫಲ ನೀಡಿದೆ. ಕೆಕೆಆರ್​ ಪರ ಅದ್ಭುತವಾಗಿ ಬೌಲಿಂಗ್ ಮಾಡುತ್ತಿರುವ ಉಮೇಶ್ ಯಾದವ್ ಭರ್ಜರಿ ದಾಖಲೆಗಳನ್ನು ನಿರ್ಮಿಸುತ್ತಿದ್ದಾರೆ. ಅದರಲ್ಲೂ ಆಡಿರುವ ಮೂರು ಪಂದ್ಯಗಳಲ್ಲೂ ಮೊದಲ ಓವರ್​ನಲ್ಲೇ ವಿಕೆಟ್ ಉರುಳಿಸಿ ಕೆಕೆಆರ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದಾರೆ.

2 / 5
ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲೂ ಉಮೇಶ್ ಯಾದವ್ ಮೊದಲ ಓವರ್​ನಲ್ಲೇ ಮಯಾಂಕ್ ಅಗರ್ವಾಲ್​ ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಅಷ್ಟೇ ಅಲ್ಲದೆ ನಾಲ್ಕು ಓವರ್​ ಬೌಲಿಂಗ್ ಮಾಡಿ ಕೇವಲ 23 ರನ್​ನೊಂದಿಗೆ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ನಾಲ್ಕು ವಿಕೆಟ್​ನೊಂದಿಗೆ ಉಮೇಶ್ ಯಾದವ್ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.

ಪಂಜಾಬ್ ಕಿಂಗ್ಸ್​ ವಿರುದ್ದದ ಪಂದ್ಯದಲ್ಲೂ ಉಮೇಶ್ ಯಾದವ್ ಮೊದಲ ಓವರ್​ನಲ್ಲೇ ಮಯಾಂಕ್ ಅಗರ್ವಾಲ್​ ಅವರನ್ನು ಎಲ್​ಬಿ ಬಲೆಗೆ ಬೀಳಿಸಿ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಅಷ್ಟೇ ಅಲ್ಲದೆ ನಾಲ್ಕು ಓವರ್​ ಬೌಲಿಂಗ್ ಮಾಡಿ ಕೇವಲ 23 ರನ್​ನೊಂದಿಗೆ 4 ವಿಕೆಟ್ ಕಬಳಿಸಿ ಮಿಂಚಿದ್ದರು. ಈ ನಾಲ್ಕು ವಿಕೆಟ್​ನೊಂದಿಗೆ ಉಮೇಶ್ ಯಾದವ್ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದ್ದಾರೆ.

3 / 5
ಐಪಿಎಲ್​ನಲ್ಲೇ ಒಂದೇ ತಂಡದ ವಿರುದ್ದ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಉಮೇಶ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಮಾಲಿಂಗ ಸಿಎಸ್​ಕೆ ವಿರುದ್ದ 31 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಉಮೇಶ್ ಯಾದವ್ ಪಂಜಾಬ್ ಕಿಂಗ್ಸ್ ವಿರುದ್ದ ಒಟ್ಟು 33 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಲಸಿತ್ ಮಾಲಿಂಗ ದಾಖಲೆಯನ್ನು ಮುರಿದು ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹೊಸ ಇತಿಹಾಸ ಬರೆದಿದ್ದಾರೆ.

ಐಪಿಎಲ್​ನಲ್ಲೇ ಒಂದೇ ತಂಡದ ವಿರುದ್ದ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಇದೀಗ ಉಮೇಶ್ ಯಾದವ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಲಸಿತ್ ಮಾಲಿಂಗ ಹೆಸರಿನಲ್ಲಿತ್ತು. ಮಾಲಿಂಗ ಸಿಎಸ್​ಕೆ ವಿರುದ್ದ 31 ವಿಕೆಟ್ ಪಡೆಯುವ ಮೂಲಕ ದಾಖಲೆ ಬರೆದಿದ್ದರು. ಇದೀಗ ಉಮೇಶ್ ಯಾದವ್ ಪಂಜಾಬ್ ಕಿಂಗ್ಸ್ ವಿರುದ್ದ ಒಟ್ಟು 33 ವಿಕೆಟ್ ಪಡೆದಿದ್ದಾರೆ. ಈ ಮೂಲಕ ಲಸಿತ್ ಮಾಲಿಂಗ ದಾಖಲೆಯನ್ನು ಮುರಿದು ಐಪಿಎಲ್​ನಲ್ಲಿ ಒಂದೇ ತಂಡದ ಪರ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹೊಸ ಇತಿಹಾಸ ಬರೆದಿದ್ದಾರೆ.

4 / 5
ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಇದುವರೆಗೆ 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಗೆಲುವಿನ ರೂವಾರಿ ಎನಿಸಿಕೊಂಡು ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಐಪಿಎಲ್ ಸೀಸನ್ 15 ಮೂಲಕ ಉಮೇಶ್ ಯಾದವ್ ಸಂಚಲನ ಸೃಷ್ಟಿಸಿದ್ದು, ಸದ್ಯ 8 ವಿಕೆಟ್​ ಪಡೆದಿರುವ ವೇಗಿ ಈ ಬಾರಿ ಪರ್ಪಲ್​ ಕ್ಯಾಪ್ ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್​ನಲ್ಲಿ ಇದುವರೆಗೆ 10 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಈ ಮೂಲಕ ಐಪಿಎಲ್​ನಲ್ಲಿ ಗೆಲುವಿನ ರೂವಾರಿ ಎನಿಸಿಕೊಂಡು ಅತ್ಯಧಿಕ ಬಾರಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದ ವೇಗದ ಬೌಲರ್ ಎಂಬ ದಾಖಲೆಯನ್ನು ಸಹ ಉಮೇಶ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಐಪಿಎಲ್ ಸೀಸನ್ 15 ಮೂಲಕ ಉಮೇಶ್ ಯಾದವ್ ಸಂಚಲನ ಸೃಷ್ಟಿಸಿದ್ದು, ಸದ್ಯ 8 ವಿಕೆಟ್​ ಪಡೆದಿರುವ ವೇಗಿ ಈ ಬಾರಿ ಪರ್ಪಲ್​ ಕ್ಯಾಪ್ ತಮ್ಮದಾಗಿಸಿಕೊಳ್ಳುವ ತವಕದಲ್ಲಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ