Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

Ipl 2022: ಸದ್ಯ ಉಮ್ರಾನ್ ಮಲಿಕ್ ಅವರ ಬೌಲಿಂಗ್​ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಯುವ ವೇಗಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಅನೇಕ ಮಾಜಿ ಆಟಗಾರರು ಸಲಹೆ ನೀಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:May 18, 2022 | 5:43 PM

ಐಪಿಎಲ್​ ಸೀಸನ್​ 15 ನಲ್ಲಿ ಯುವ ವೇಗಿ ಉಮ್ರಾನ್ ಮಲಿಕ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ತಂಡದ ವೇಗದ ಅಸ್ತ್ರವಾಗಿ ಗುರುತಿಸಿಕೊಂಡಿರುವ ಉಮ್ರಾನ್ ಈಗಾಗಲೇ 157 ಕಿ.ಮೀ ವೇಗದಲ್ಲಿ ಚೆಂಡೆಸೆದು ದಾಖಲೆ ನಿರ್ಮಿಸಿದ್ದಾರೆ. ಇದೀಗ ಮತ್ತೊಂದು ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದ್ದಾರೆ.

ಐಪಿಎಲ್​ ಸೀಸನ್​ 15 ನಲ್ಲಿ ಯುವ ವೇಗಿ ಉಮ್ರಾನ್ ಮಲಿಕ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಸನ್​ರೈಸರ್ಸ್ ಹೈದರಾಬಾದ್ ತಂಡದ ವೇಗದ ಅಸ್ತ್ರವಾಗಿ ಗುರುತಿಸಿಕೊಂಡಿರುವ ಉಮ್ರಾನ್ ಈಗಾಗಲೇ 157 ಕಿ.ಮೀ ವೇಗದಲ್ಲಿ ಚೆಂಡೆಸೆದು ದಾಖಲೆ ನಿರ್ಮಿಸಿದ್ದಾರೆ. ಇದೀಗ ಮತ್ತೊಂದು ದಾಖಲೆಯನ್ನು ಕೂಡ ತನ್ನದಾಗಿಸಿಕೊಂಡಿದ್ದಾರೆ.

1 / 6
ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ 3 ವಿಕೆಟ್ ಉರುಳಿಸುವ ಮೂಲಕ ಉಮ್ರಾನ್ ಎಸ್​ಆರ್​​ಹೆಚ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ 3 ವಿಕೆಟ್​ಗಳೊಂದಿಗೆ ಇದೀಗ ಐಪಿಎಲ್​ನಲ್ಲಿ ಉಮ್ರಾನ್ ಒಟ್ಟು ವಿಕೆಟ್​ಗಳ ಸಂಖ್ಯೆ 21 ಕ್ಕೇರಿದೆ. ಅಷ್ಟೇ ಅಲ್ಲದೆ ಪರ್ಪಲ್​ ಕ್ಯಾಪ್​ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

ಮುಂಬೈ ಇಂಡಿಯನ್ಸ್ ವಿರುದ್ದ ಪಂದ್ಯದಲ್ಲಿ 3 ವಿಕೆಟ್ ಉರುಳಿಸುವ ಮೂಲಕ ಉಮ್ರಾನ್ ಎಸ್​ಆರ್​​ಹೆಚ್​ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ 3 ವಿಕೆಟ್​ಗಳೊಂದಿಗೆ ಇದೀಗ ಐಪಿಎಲ್​ನಲ್ಲಿ ಉಮ್ರಾನ್ ಒಟ್ಟು ವಿಕೆಟ್​ಗಳ ಸಂಖ್ಯೆ 21 ಕ್ಕೇರಿದೆ. ಅಷ್ಟೇ ಅಲ್ಲದೆ ಪರ್ಪಲ್​ ಕ್ಯಾಪ್​ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.

2 / 6
ವಿಶೇಷ ಎಂದರೆ ಐಪಿಎಲ್‌ನ ಒಂದು ಸೀಸನ್‌ನಲ್ಲಿ 20 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಭಾರತದ ಅತ್ಯಂತ ಕಿರಿಯ ಬೌಲರ್ ಎಂಬ ದಾಖಲೆ ಇದೀಗ ಉಮ್ರಾನ್ ಮಲಿಕ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

ವಿಶೇಷ ಎಂದರೆ ಐಪಿಎಲ್‌ನ ಒಂದು ಸೀಸನ್‌ನಲ್ಲಿ 20 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಭಾರತದ ಅತ್ಯಂತ ಕಿರಿಯ ಬೌಲರ್ ಎಂಬ ದಾಖಲೆ ಇದೀಗ ಉಮ್ರಾನ್ ಮಲಿಕ್ ಪಾಲಾಗಿದೆ. ಈ ಹಿಂದೆ ಈ ದಾಖಲೆ ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿತ್ತು.

3 / 6
ಬುಮ್ರಾ 2017 ರ ಐಪಿಎಲ್​ನಲ್ಲಿ 20 ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು. ಈ ವೇಳೆ ಜಸ್ಪ್ರೀತ್ ಬುಮ್ರಾ ಅವರ ವಯಸ್ಸು 23 ವರ್ಷ 165 ದಿನಗಳು. ಈ ಮೂಲಕ ಬುಮ್ರಾ ಐಪಿಎಲ್​ನಲ್ಲಿ 20 ವಿಕೆಟ್ ಪಡೆದ ಭಾರತದ ಅತ್ಯಂತ ಕಿರಿಯ ವೇಗಿ ಎನಿಸಿಕೊಂಡಿದ್ದರು.

ಬುಮ್ರಾ 2017 ರ ಐಪಿಎಲ್​ನಲ್ಲಿ 20 ವಿಕೆಟ್ ಉರುಳಿಸಿ ದಾಖಲೆ ಬರೆದಿದ್ದರು. ಈ ವೇಳೆ ಜಸ್ಪ್ರೀತ್ ಬುಮ್ರಾ ಅವರ ವಯಸ್ಸು 23 ವರ್ಷ 165 ದಿನಗಳು. ಈ ಮೂಲಕ ಬುಮ್ರಾ ಐಪಿಎಲ್​ನಲ್ಲಿ 20 ವಿಕೆಟ್ ಪಡೆದ ಭಾರತದ ಅತ್ಯಂತ ಕಿರಿಯ ವೇಗಿ ಎನಿಸಿಕೊಂಡಿದ್ದರು.

4 / 6
ಆದರೀಗ 22 ವರ್ಷ 176 ದಿನಗಳಲ್ಲಿ ಉಮ್ರಾನ್ ಮಲಿಕ್ 23 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಐಪಿಎಲ್​ ಸೀಸನ್​ವೊಂದರಲ್ಲಿ 20 ಕ್ಕಿಂತ ಅಧಿಕ ವಿಕೆಟ್ ಪಡೆದ ಅತ್ಯಂತ ಕಿರಿಯ ವೇಗಿ ಎಂಬ ಹೊಸ ದಾಖಲೆ ನಿರ್ಮಿಸಿದ್ದಾರೆ.

ಆದರೀಗ 22 ವರ್ಷ 176 ದಿನಗಳಲ್ಲಿ ಉಮ್ರಾನ್ ಮಲಿಕ್ 23 ವಿಕೆಟ್ ಕಬಳಿಸುವ ಮೂಲಕ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಅಲ್ಲದೆ ಐಪಿಎಲ್​ ಸೀಸನ್​ವೊಂದರಲ್ಲಿ 20 ಕ್ಕಿಂತ ಅಧಿಕ ವಿಕೆಟ್ ಪಡೆದ ಅತ್ಯಂತ ಕಿರಿಯ ವೇಗಿ ಎಂಬ ಹೊಸ ದಾಖಲೆ ನಿರ್ಮಿಸಿದ್ದಾರೆ.

5 / 6
ಸದ್ಯ ಉಮ್ರಾನ್ ಮಲಿಕ್ ಅವರ ಬೌಲಿಂಗ್​ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಯುವ ವೇಗಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಅನೇಕ ಮಾಜಿ ಆಟಗಾರರು ಸಲಹೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಉಮ್ರಾನ್ ಮಲಿಕ್ ಅವರ ವೇಗಭರಿತ ಬೌಲಿಂಗ್​ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಮ್ಮು-ಕಾಶ್ಮೀರದ ಯುವ ವೇಗಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡರೆ ಅಚ್ಚರಿಯಿಲ್ಲ ಎಂದಿದ್ದಾರೆ.

ಸದ್ಯ ಉಮ್ರಾನ್ ಮಲಿಕ್ ಅವರ ಬೌಲಿಂಗ್​ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದ್ದು, ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಯುವ ವೇಗಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ನೀಡುವಂತೆ ಅನೇಕ ಮಾಜಿ ಆಟಗಾರರು ಸಲಹೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಉಮ್ರಾನ್ ಮಲಿಕ್ ಅವರ ವೇಗಭರಿತ ಬೌಲಿಂಗ್​ ಬಗ್ಗೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದು, ಜಮ್ಮು-ಕಾಶ್ಮೀರದ ಯುವ ವೇಗಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡರೆ ಅಚ್ಚರಿಯಿಲ್ಲ ಎಂದಿದ್ದಾರೆ.

6 / 6

Published On - 5:36 pm, Wed, 18 May 22

Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್