AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ವಿರಾಟ್ ಕೊಹ್ಲಿ ಬ್ರೇಕ್ ಪಡೆದು ಕಾಮೆಂಟ್ರಿ ಮಾಡಲಿ ಎಂದ ಮಾಜಿ ಕ್ರಿಕೆಟಿಗ

IPL 2022: ಈ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಕೇವಲ 23.80 ಸರಾಸರಿಯಲ್ಲಿ 119 ರನ್ ಗಳಿಸಿದ್ದಾರೆ. 6 ಪಂದ್ಯಗಳಲ್ಲಿ ಒಂದು ಅರ್ಧಶತಕ ಕೂಡ ಗಳಿಸಲು ಸಾಧ್ಯವಾಗಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್

Updated on: Apr 17, 2022 | 3:01 PM

ಐಪಿಎಲ್ ಸೀಸನ್​ 15 ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಕಳಪೆಯಾಗಿದೆ. ತಮ್ಮ ಭರ್ಜರಿ ಫಾರ್ಮ್​ ಅನ್ನು ಪ್ರದರ್ಶಿಸುವ ಕೊಹ್ಲಿ ಈ ಬಾರಿ ಕೂಡ ವಿಫಲರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 12 ರನ್‌ಗಳಿಗೆ ರನೌಟ್ ಆಗಿದ್ದರು. ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ನೀಡಿದ ಹೇಳಿಕೆಯೊಂದು ಇದೀಗ ಎಲ್ಲರ ಗಮನ ಸೆಳೆದಿದೆ.

ಐಪಿಎಲ್ ಸೀಸನ್​ 15 ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಕಳಪೆಯಾಗಿದೆ. ತಮ್ಮ ಭರ್ಜರಿ ಫಾರ್ಮ್​ ಅನ್ನು ಪ್ರದರ್ಶಿಸುವ ಕೊಹ್ಲಿ ಈ ಬಾರಿ ಕೂಡ ವಿಫಲರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 12 ರನ್‌ಗಳಿಗೆ ರನೌಟ್ ಆಗಿದ್ದರು. ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ನೀಡಿದ ಹೇಳಿಕೆಯೊಂದು ಇದೀಗ ಎಲ್ಲರ ಗಮನ ಸೆಳೆದಿದೆ.

1 / 5
 ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್ ಬಗ್ಗೆ ಮಾತನಾಡಿದ ವಾಸಿಂ ಜಾಫರ್, ನನ್ನ ಪ್ರಕಾರ ಕೊಹ್ಲಿ ಸ್ವಲ್ಪ ಸಮಯ ವಿರಾಮ ತೆಗೆದುಕೊಂಡು ಕಾಮೆಂಟರಿ ಮಾಡಬೇಕು. ಇದಾದ ನಂತರ ನೋಡಿ, ವಿರಾಟ್ ಕೊಹ್ಲಿ ಕೂಡ ರನ್ ಮಳೆ ಹರಿಸಲಿದ್ದಾರೆ ಎಂದು ಜಾಫರ್​ ತಮಾಷೆಯಾಗಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್ ಬಗ್ಗೆ ಮಾತನಾಡಿದ ವಾಸಿಂ ಜಾಫರ್, ನನ್ನ ಪ್ರಕಾರ ಕೊಹ್ಲಿ ಸ್ವಲ್ಪ ಸಮಯ ವಿರಾಮ ತೆಗೆದುಕೊಂಡು ಕಾಮೆಂಟರಿ ಮಾಡಬೇಕು. ಇದಾದ ನಂತರ ನೋಡಿ, ವಿರಾಟ್ ಕೊಹ್ಲಿ ಕೂಡ ರನ್ ಮಳೆ ಹರಿಸಲಿದ್ದಾರೆ ಎಂದು ಜಾಫರ್​ ತಮಾಷೆಯಾಗಿ ಹೇಳಿದ್ದಾರೆ.

2 / 5
 ವಾಸಿಂ ಜಾಫರ್, ದಿನೇಶ್ ಕಾರ್ತಿಕ್ ಅವರನ್ನು ಉಲ್ಲೇಖಿಸಿ  ವಿರಾಟ್ ಕೊಹ್ಲಿಗೆ ಈ ಸಲಹೆಯನ್ನು ನೀಡಿದ್ದರು. ಏಕೆಂದರೆ ಕಳೆದ ಎರಡು ಐಪಿಎಲ್ ಸೀಸನ್‌ಗಳಲ್ಲಿ ದಿನೇಶ್ ಕಾರ್ತಿಕ್ ವಿಫಲರಾಗಿದ್ದರು. ಅಲ್ಲದೆ ಈ ಬಾರಿಯ ಐಪಿಎಲ್​ಗೂ ಮುನ್ನ ಡಿಕೆ ಇಂಗ್ಲೆಂಡ್ ಪ್ರವಾಸದಲ್ಲಿ ಕಾಮೆಂಟರಿ ಮಾಡುತ್ತಿದ್ದರು. ಇದಾದ ಬಳಿಕ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ಹರಾಜಿನಲ್ಲಿ ಖರೀದಿಸಿದ್ದು, ಇದೀಗ ಡಿಕೆ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಹೀಗಾಗಿ ದಿನೇಶ್ ಕಾರ್ತಿಕ್​ರಂತೆ ಕೊಹ್ಲಿ ಕಾಮೆಂಟರಿ ಮಾಡಿದ್ರೆ ಮತ್ತೆ ಫಾರ್ಮ್​ಗೆ ಮರಳಬಹುದು ಎಂದು ವಾಸಿಂ ಜಾಫರ್ ತಮಾಷೆಯಾಗಿ ಹೇಳಿದ್ದಾರೆ.

ವಾಸಿಂ ಜಾಫರ್, ದಿನೇಶ್ ಕಾರ್ತಿಕ್ ಅವರನ್ನು ಉಲ್ಲೇಖಿಸಿ ವಿರಾಟ್ ಕೊಹ್ಲಿಗೆ ಈ ಸಲಹೆಯನ್ನು ನೀಡಿದ್ದರು. ಏಕೆಂದರೆ ಕಳೆದ ಎರಡು ಐಪಿಎಲ್ ಸೀಸನ್‌ಗಳಲ್ಲಿ ದಿನೇಶ್ ಕಾರ್ತಿಕ್ ವಿಫಲರಾಗಿದ್ದರು. ಅಲ್ಲದೆ ಈ ಬಾರಿಯ ಐಪಿಎಲ್​ಗೂ ಮುನ್ನ ಡಿಕೆ ಇಂಗ್ಲೆಂಡ್ ಪ್ರವಾಸದಲ್ಲಿ ಕಾಮೆಂಟರಿ ಮಾಡುತ್ತಿದ್ದರು. ಇದಾದ ಬಳಿಕ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ಹರಾಜಿನಲ್ಲಿ ಖರೀದಿಸಿದ್ದು, ಇದೀಗ ಡಿಕೆ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಹೀಗಾಗಿ ದಿನೇಶ್ ಕಾರ್ತಿಕ್​ರಂತೆ ಕೊಹ್ಲಿ ಕಾಮೆಂಟರಿ ಮಾಡಿದ್ರೆ ಮತ್ತೆ ಫಾರ್ಮ್​ಗೆ ಮರಳಬಹುದು ಎಂದು ವಾಸಿಂ ಜಾಫರ್ ತಮಾಷೆಯಾಗಿ ಹೇಳಿದ್ದಾರೆ.

3 / 5
 ಈ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಕೇವಲ 23.80 ಸರಾಸರಿಯಲ್ಲಿ 119 ರನ್ ಗಳಿಸಿದ್ದಾರೆ. 6 ಪಂದ್ಯಗಳಲ್ಲಿ ಒಂದು ಅರ್ಧಶತಕ ಕೂಡ ಗಳಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಎರಡು ಬಾರಿ ರನೌಟ್ ಆಗಿದ್ದರು ಎಂಬುದೇ ಅಚ್ಚರಿ.

ಈ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಕೇವಲ 23.80 ಸರಾಸರಿಯಲ್ಲಿ 119 ರನ್ ಗಳಿಸಿದ್ದಾರೆ. 6 ಪಂದ್ಯಗಳಲ್ಲಿ ಒಂದು ಅರ್ಧಶತಕ ಕೂಡ ಗಳಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಎರಡು ಬಾರಿ ರನೌಟ್ ಆಗಿದ್ದರು ಎಂಬುದೇ ಅಚ್ಚರಿ.

4 / 5
ಇದಾಗ್ಯೂ ವಿರಾಟ್ ಕೊಹ್ಲಿಯ ವೈಫಲ್ಯವನ್ನು ಮರೆಮಾಚುವಂತೆ ದಿನೇಶ್ ಕಾರ್ತಿಕ್ ಬ್ಯಾಟ್ ಬೀಸಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಡುತ್ತಿದ್ದಾರೆ. ಅದರಂತೆ ಇದೀಗ 6 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 3ನೇ ಸ್ಥಾನ ಅಲಂಕರಿಸಿದೆ.

ಇದಾಗ್ಯೂ ವಿರಾಟ್ ಕೊಹ್ಲಿಯ ವೈಫಲ್ಯವನ್ನು ಮರೆಮಾಚುವಂತೆ ದಿನೇಶ್ ಕಾರ್ತಿಕ್ ಬ್ಯಾಟ್ ಬೀಸಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಡುತ್ತಿದ್ದಾರೆ. ಅದರಂತೆ ಇದೀಗ 6 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 3ನೇ ಸ್ಥಾನ ಅಲಂಕರಿಸಿದೆ.

5 / 5
Follow us
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?