AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ವಿರಾಟ್ ಕೊಹ್ಲಿ ಬ್ರೇಕ್ ಪಡೆದು ಕಾಮೆಂಟ್ರಿ ಮಾಡಲಿ ಎಂದ ಮಾಜಿ ಕ್ರಿಕೆಟಿಗ

IPL 2022: ಈ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಕೇವಲ 23.80 ಸರಾಸರಿಯಲ್ಲಿ 119 ರನ್ ಗಳಿಸಿದ್ದಾರೆ. 6 ಪಂದ್ಯಗಳಲ್ಲಿ ಒಂದು ಅರ್ಧಶತಕ ಕೂಡ ಗಳಿಸಲು ಸಾಧ್ಯವಾಗಲಿಲ್ಲ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 17, 2022 | 3:01 PM

Share
ಐಪಿಎಲ್ ಸೀಸನ್​ 15 ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಕಳಪೆಯಾಗಿದೆ. ತಮ್ಮ ಭರ್ಜರಿ ಫಾರ್ಮ್​ ಅನ್ನು ಪ್ರದರ್ಶಿಸುವ ಕೊಹ್ಲಿ ಈ ಬಾರಿ ಕೂಡ ವಿಫಲರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 12 ರನ್‌ಗಳಿಗೆ ರನೌಟ್ ಆಗಿದ್ದರು. ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ನೀಡಿದ ಹೇಳಿಕೆಯೊಂದು ಇದೀಗ ಎಲ್ಲರ ಗಮನ ಸೆಳೆದಿದೆ.

ಐಪಿಎಲ್ ಸೀಸನ್​ 15 ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಕಳಪೆಯಾಗಿದೆ. ತಮ್ಮ ಭರ್ಜರಿ ಫಾರ್ಮ್​ ಅನ್ನು ಪ್ರದರ್ಶಿಸುವ ಕೊಹ್ಲಿ ಈ ಬಾರಿ ಕೂಡ ವಿಫಲರಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 12 ರನ್‌ಗಳಿಗೆ ರನೌಟ್ ಆಗಿದ್ದರು. ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ನೀಡಿದ ಹೇಳಿಕೆಯೊಂದು ಇದೀಗ ಎಲ್ಲರ ಗಮನ ಸೆಳೆದಿದೆ.

1 / 5
 ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್ ಬಗ್ಗೆ ಮಾತನಾಡಿದ ವಾಸಿಂ ಜಾಫರ್, ನನ್ನ ಪ್ರಕಾರ ಕೊಹ್ಲಿ ಸ್ವಲ್ಪ ಸಮಯ ವಿರಾಮ ತೆಗೆದುಕೊಂಡು ಕಾಮೆಂಟರಿ ಮಾಡಬೇಕು. ಇದಾದ ನಂತರ ನೋಡಿ, ವಿರಾಟ್ ಕೊಹ್ಲಿ ಕೂಡ ರನ್ ಮಳೆ ಹರಿಸಲಿದ್ದಾರೆ ಎಂದು ಜಾಫರ್​ ತಮಾಷೆಯಾಗಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಅವರ ಕಳಪೆ ಫಾರ್ಮ್ ಬಗ್ಗೆ ಮಾತನಾಡಿದ ವಾಸಿಂ ಜಾಫರ್, ನನ್ನ ಪ್ರಕಾರ ಕೊಹ್ಲಿ ಸ್ವಲ್ಪ ಸಮಯ ವಿರಾಮ ತೆಗೆದುಕೊಂಡು ಕಾಮೆಂಟರಿ ಮಾಡಬೇಕು. ಇದಾದ ನಂತರ ನೋಡಿ, ವಿರಾಟ್ ಕೊಹ್ಲಿ ಕೂಡ ರನ್ ಮಳೆ ಹರಿಸಲಿದ್ದಾರೆ ಎಂದು ಜಾಫರ್​ ತಮಾಷೆಯಾಗಿ ಹೇಳಿದ್ದಾರೆ.

2 / 5
 ವಾಸಿಂ ಜಾಫರ್, ದಿನೇಶ್ ಕಾರ್ತಿಕ್ ಅವರನ್ನು ಉಲ್ಲೇಖಿಸಿ  ವಿರಾಟ್ ಕೊಹ್ಲಿಗೆ ಈ ಸಲಹೆಯನ್ನು ನೀಡಿದ್ದರು. ಏಕೆಂದರೆ ಕಳೆದ ಎರಡು ಐಪಿಎಲ್ ಸೀಸನ್‌ಗಳಲ್ಲಿ ದಿನೇಶ್ ಕಾರ್ತಿಕ್ ವಿಫಲರಾಗಿದ್ದರು. ಅಲ್ಲದೆ ಈ ಬಾರಿಯ ಐಪಿಎಲ್​ಗೂ ಮುನ್ನ ಡಿಕೆ ಇಂಗ್ಲೆಂಡ್ ಪ್ರವಾಸದಲ್ಲಿ ಕಾಮೆಂಟರಿ ಮಾಡುತ್ತಿದ್ದರು. ಇದಾದ ಬಳಿಕ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ಹರಾಜಿನಲ್ಲಿ ಖರೀದಿಸಿದ್ದು, ಇದೀಗ ಡಿಕೆ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಹೀಗಾಗಿ ದಿನೇಶ್ ಕಾರ್ತಿಕ್​ರಂತೆ ಕೊಹ್ಲಿ ಕಾಮೆಂಟರಿ ಮಾಡಿದ್ರೆ ಮತ್ತೆ ಫಾರ್ಮ್​ಗೆ ಮರಳಬಹುದು ಎಂದು ವಾಸಿಂ ಜಾಫರ್ ತಮಾಷೆಯಾಗಿ ಹೇಳಿದ್ದಾರೆ.

ವಾಸಿಂ ಜಾಫರ್, ದಿನೇಶ್ ಕಾರ್ತಿಕ್ ಅವರನ್ನು ಉಲ್ಲೇಖಿಸಿ ವಿರಾಟ್ ಕೊಹ್ಲಿಗೆ ಈ ಸಲಹೆಯನ್ನು ನೀಡಿದ್ದರು. ಏಕೆಂದರೆ ಕಳೆದ ಎರಡು ಐಪಿಎಲ್ ಸೀಸನ್‌ಗಳಲ್ಲಿ ದಿನೇಶ್ ಕಾರ್ತಿಕ್ ವಿಫಲರಾಗಿದ್ದರು. ಅಲ್ಲದೆ ಈ ಬಾರಿಯ ಐಪಿಎಲ್​ಗೂ ಮುನ್ನ ಡಿಕೆ ಇಂಗ್ಲೆಂಡ್ ಪ್ರವಾಸದಲ್ಲಿ ಕಾಮೆಂಟರಿ ಮಾಡುತ್ತಿದ್ದರು. ಇದಾದ ಬಳಿಕ ದಿನೇಶ್ ಕಾರ್ತಿಕ್ ಅವರನ್ನು ಆರ್‌ಸಿಬಿ ಹರಾಜಿನಲ್ಲಿ ಖರೀದಿಸಿದ್ದು, ಇದೀಗ ಡಿಕೆ ಬೌಲರ್‌ಗಳ ನಿದ್ದೆಗೆಡಿಸಿದ್ದಾರೆ. ಹೀಗಾಗಿ ದಿನೇಶ್ ಕಾರ್ತಿಕ್​ರಂತೆ ಕೊಹ್ಲಿ ಕಾಮೆಂಟರಿ ಮಾಡಿದ್ರೆ ಮತ್ತೆ ಫಾರ್ಮ್​ಗೆ ಮರಳಬಹುದು ಎಂದು ವಾಸಿಂ ಜಾಫರ್ ತಮಾಷೆಯಾಗಿ ಹೇಳಿದ್ದಾರೆ.

3 / 5
 ಈ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಕೇವಲ 23.80 ಸರಾಸರಿಯಲ್ಲಿ 119 ರನ್ ಗಳಿಸಿದ್ದಾರೆ. 6 ಪಂದ್ಯಗಳಲ್ಲಿ ಒಂದು ಅರ್ಧಶತಕ ಕೂಡ ಗಳಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಎರಡು ಬಾರಿ ರನೌಟ್ ಆಗಿದ್ದರು ಎಂಬುದೇ ಅಚ್ಚರಿ.

ಈ ಸೀಸನ್​ನಲ್ಲಿ ವಿರಾಟ್ ಕೊಹ್ಲಿ ಕೇವಲ 23.80 ಸರಾಸರಿಯಲ್ಲಿ 119 ರನ್ ಗಳಿಸಿದ್ದಾರೆ. 6 ಪಂದ್ಯಗಳಲ್ಲಿ ಒಂದು ಅರ್ಧಶತಕ ಕೂಡ ಗಳಿಸಲು ಸಾಧ್ಯವಾಗಲಿಲ್ಲ. ಅಲ್ಲದೆ ಎರಡು ಬಾರಿ ರನೌಟ್ ಆಗಿದ್ದರು ಎಂಬುದೇ ಅಚ್ಚರಿ.

4 / 5
ಇದಾಗ್ಯೂ ವಿರಾಟ್ ಕೊಹ್ಲಿಯ ವೈಫಲ್ಯವನ್ನು ಮರೆಮಾಚುವಂತೆ ದಿನೇಶ್ ಕಾರ್ತಿಕ್ ಬ್ಯಾಟ್ ಬೀಸಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಡುತ್ತಿದ್ದಾರೆ. ಅದರಂತೆ ಇದೀಗ 6 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 3ನೇ ಸ್ಥಾನ ಅಲಂಕರಿಸಿದೆ.

ಇದಾಗ್ಯೂ ವಿರಾಟ್ ಕೊಹ್ಲಿಯ ವೈಫಲ್ಯವನ್ನು ಮರೆಮಾಚುವಂತೆ ದಿನೇಶ್ ಕಾರ್ತಿಕ್ ಬ್ಯಾಟ್ ಬೀಸಿ ಆರ್​ಸಿಬಿ ತಂಡಕ್ಕೆ ಗೆಲುವು ತಂದುಕೊಡುತ್ತಿದ್ದಾರೆ. ಅದರಂತೆ ಇದೀಗ 6 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿ ಆರ್​ಸಿಬಿ ಪಾಯಿಂಟ್ ಟೇಬಲ್​ನಲ್ಲಿ 3ನೇ ಸ್ಥಾನ ಅಲಂಕರಿಸಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!