AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ipl 2022: ಐಪಿಎಲ್ ಮೆಗಾ ಹರಾಜು ಪಟ್ಟಿಯಲ್ಲಿ ಪಶ್ಚಿಮ ಬಂಗಾಳದ ಕ್ರೀಡಾ ಸಚಿವರ ಹೆಸರು..!

Ipl 2022 mega auction: ಈ ಹಿಂದೆ ಕೆಕೆಆರ್​, ರೈಸಿಂಗ್ ಪುಣೆ ಜೈಂಟ್ಸ್​ ತಂಡದ ಪರ ಆಡಿದ್ದ ಮನೋಜ್ ತಿವಾರಿ 2018 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ತಂಡದಲ್ಲಿ ಕಾಣಿಸಿಕೊಂಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Feb 01, 2022 | 10:09 PM

ಈ ಬಾರಿಯ ಐಪಿಎಲ್ ಹರಾಜಿನಲ್ಲಿ 590 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಅದರಂತೆ ಈ ಆಟಗಾರರಿಂದ ತಮಗೆ ಬೇಕಾದ ಪ್ಲೇಯರ್ಸ್​ಗಾಗಿ 10 ತಂಡಗಳು ಬಿಡ್ಡಿಂಗ್​ ನಡೆಸಲಿದೆ. ಈ ಪಟ್ಟಿಯಲ್ಲಿ  ಶಿಖರ್ ಧವನ್, ಆರ್ ಅಶ್ವಿನ್, ಡೇವಿಡ್ ವಾರ್ನರ್, ಟ್ರೆಂಟ್ ಬೌಲ್ಟ್, ಮೊಹಮ್ಮದ್ ಶಮಿಯಂತಹ ಸ್ಟಾರ್ ಆಟಗಾರರ ದಂಡೇ ಇದೆ.

ಈ ಬಾರಿಯ ಐಪಿಎಲ್ ಹರಾಜಿನಲ್ಲಿ 590 ಆಟಗಾರರ ಹೆಸರು ಕಾಣಿಸಿಕೊಳ್ಳಲಿದೆ. ಅದರಂತೆ ಈ ಆಟಗಾರರಿಂದ ತಮಗೆ ಬೇಕಾದ ಪ್ಲೇಯರ್ಸ್​ಗಾಗಿ 10 ತಂಡಗಳು ಬಿಡ್ಡಿಂಗ್​ ನಡೆಸಲಿದೆ. ಈ ಪಟ್ಟಿಯಲ್ಲಿ ಶಿಖರ್ ಧವನ್, ಆರ್ ಅಶ್ವಿನ್, ಡೇವಿಡ್ ವಾರ್ನರ್, ಟ್ರೆಂಟ್ ಬೌಲ್ಟ್, ಮೊಹಮ್ಮದ್ ಶಮಿಯಂತಹ ಸ್ಟಾರ್ ಆಟಗಾರರ ದಂಡೇ ಇದೆ.

1 / 6
 ಇವೆಲ್ಲದರ ನಡುವೆ ಇದೀಗ ಎಲ್ಲರ ಗಮನ ಸೆಳೆದಿರುವುದು ಈ ಪಟ್ಟಿಯಲ್ಲಿರುವ ಪಶ್ಚಿಮ ಬಂಗಾಳದ ಕ್ರೀಡಾ ಸಚಿವರ ಹೆಸರು. ಹೌದು,  ಭಾರತ ಪರ ಆಡಿರುವ ಮನೋಜ್ ತಿವಾರಿ ಕೂಡ ಮೆಗಾ ಹರಾಜಿಗೆ ತಮ್ಮ ಹೆಸರನ್ನು ನೀಡಿದ್ದಾರೆ. ತಮ್ಮ ಮೂಲ ಬೆಲೆಯನ್ನು ಮನೋಜ್ ತಿವಾರಿ 50 ಲಕ್ಷ ರೂ. ಎಂದು ಘೋಷಿಸಿದ್ದಾರೆ.

ಇವೆಲ್ಲದರ ನಡುವೆ ಇದೀಗ ಎಲ್ಲರ ಗಮನ ಸೆಳೆದಿರುವುದು ಈ ಪಟ್ಟಿಯಲ್ಲಿರುವ ಪಶ್ಚಿಮ ಬಂಗಾಳದ ಕ್ರೀಡಾ ಸಚಿವರ ಹೆಸರು. ಹೌದು, ಭಾರತ ಪರ ಆಡಿರುವ ಮನೋಜ್ ತಿವಾರಿ ಕೂಡ ಮೆಗಾ ಹರಾಜಿಗೆ ತಮ್ಮ ಹೆಸರನ್ನು ನೀಡಿದ್ದಾರೆ. ತಮ್ಮ ಮೂಲ ಬೆಲೆಯನ್ನು ಮನೋಜ್ ತಿವಾರಿ 50 ಲಕ್ಷ ರೂ. ಎಂದು ಘೋಷಿಸಿದ್ದಾರೆ.

2 / 6
ಈ ಹಿಂದೆ ಕೆಕೆಆರ್​, ರೈಸಿಂಗ್ ಪುಣೆ ಜೈಂಟ್ಸ್​ ತಂಡದ ಪರ ಆಡಿದ್ದ ಮನೋಜ್ ತಿವಾರಿ 2018 ರಲ್ಲಿ ಕಿಂಗ್ಸ್  ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಮನೋಜ್ ತಿವಾರಿಯನ್ನು ಯಾವುದೇ ತಂಡ ಖರೀದಿಸಿರಲಿಲ್ಲ. ಕಳೆದ ಸೀಸನ್​ನಲ್ಲೂ 50 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡ ತಿವಾರಿ ಅನ್​ಸೋಲ್ಡ್​ ಆಗಿದ್ದರು.

ಈ ಹಿಂದೆ ಕೆಕೆಆರ್​, ರೈಸಿಂಗ್ ಪುಣೆ ಜೈಂಟ್ಸ್​ ತಂಡದ ಪರ ಆಡಿದ್ದ ಮನೋಜ್ ತಿವಾರಿ 2018 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗ ಪಂಜಾಬ್ ಕಿಂಗ್ಸ್) ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದಾದ ಬಳಿಕ ಮನೋಜ್ ತಿವಾರಿಯನ್ನು ಯಾವುದೇ ತಂಡ ಖರೀದಿಸಿರಲಿಲ್ಲ. ಕಳೆದ ಸೀಸನ್​ನಲ್ಲೂ 50 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡ ತಿವಾರಿ ಅನ್​ಸೋಲ್ಡ್​ ಆಗಿದ್ದರು.

3 / 6
ಈ ವರ್ಷದ ರಣಜಿ ಟ್ರೋಫಿ ಬೆಂಗಾಲ್ ಪ್ರಕಟಿಸಿದ ತಂಡದಲ್ಲಿ ಮನೋಜ್ ತಿವಾರಿ ಕೂಡ ಇದ್ದರು. ಮನೋಜ್ ತಿವಾರಿ 2020 ರಲ್ಲಿ ರಣಜಿ ಟ್ರೋಫಿಯಲ್ಲಿ ಸೌರಾಷ್ಟ್ರ ವಿರುದ್ಧ ಬಂಗಾಳದ ಪರವಾಗಿ ತಮ್ಮ ಕೊನೆಯ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದರು. ಈ ಬಾರಿಯೂ ಅವರು ಆಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೊರೋನಾ ಕಾರಣದಿಂದ ಇದೀಗ ಟೂರ್ನಿಯನ್ನು ಮುಂದೂಡಲಾಗಿದೆ.

ಈ ವರ್ಷದ ರಣಜಿ ಟ್ರೋಫಿ ಬೆಂಗಾಲ್ ಪ್ರಕಟಿಸಿದ ತಂಡದಲ್ಲಿ ಮನೋಜ್ ತಿವಾರಿ ಕೂಡ ಇದ್ದರು. ಮನೋಜ್ ತಿವಾರಿ 2020 ರಲ್ಲಿ ರಣಜಿ ಟ್ರೋಫಿಯಲ್ಲಿ ಸೌರಾಷ್ಟ್ರ ವಿರುದ್ಧ ಬಂಗಾಳದ ಪರವಾಗಿ ತಮ್ಮ ಕೊನೆಯ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದರು. ಈ ಬಾರಿಯೂ ಅವರು ಆಡುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೊರೋನಾ ಕಾರಣದಿಂದ ಇದೀಗ ಟೂರ್ನಿಯನ್ನು ಮುಂದೂಡಲಾಗಿದೆ.

4 / 6
 ಮನೋಜ್ ತಿವಾರಿ ಪ್ರಸ್ತುತ ಪಶ್ಚಿಮ ಬಂಗಾಳದ ಕ್ರೀಡಾ ಸಚಿವರಾಗಿದ್ದು, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿಬ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದಾದ ನಂತರ ಅವರನ್ನು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವರನ್ನಾಗಿ ಮಾಡಲಾಯಿತು. ಅದರಂತೆ ಇದೀಗ ಮನೋಜ್ ತಿವಾರಿ ಕ್ರೀಡಾ ಸಚಿವರಾಗಿ ಜೊತೆಗೆ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಮನೋಜ್ ತಿವಾರಿ ಪ್ರಸ್ತುತ ಪಶ್ಚಿಮ ಬಂಗಾಳದ ಕ್ರೀಡಾ ಸಚಿವರಾಗಿದ್ದು, ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿಬ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇದಾದ ನಂತರ ಅವರನ್ನು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವರನ್ನಾಗಿ ಮಾಡಲಾಯಿತು. ಅದರಂತೆ ಇದೀಗ ಮನೋಜ್ ತಿವಾರಿ ಕ್ರೀಡಾ ಸಚಿವರಾಗಿ ಜೊತೆಗೆ ಆಟಗಾರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

5 / 6
 ಇದೀಗ ಐಪಿಎಲ್ ಮೆಗಾ ಹರಾಜಿನಲ್ಲೂ ಮನೋಜ್ ತಿವಾರಿ ಹೆಸರು ನೀಡಿದ್ದು, ಈ ಬಾರಿ ಬಿಕರಿಯಾಗಲಿದ್ದಾರಾ ಕಾದು ನೋಡಬೇಕಿದೆ.

ಇದೀಗ ಐಪಿಎಲ್ ಮೆಗಾ ಹರಾಜಿನಲ್ಲೂ ಮನೋಜ್ ತಿವಾರಿ ಹೆಸರು ನೀಡಿದ್ದು, ಈ ಬಾರಿ ಬಿಕರಿಯಾಗಲಿದ್ದಾರಾ ಕಾದು ನೋಡಬೇಕಿದೆ.

6 / 6
Follow us
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಜಪಾನ್​ನಲ್ಲಿ ಭಾರತದ ಮೊದಲ ಬುಲೆಟ್ ರೈಲಿನ ಪ್ರಾಯೋಗಿಕ ಸಂಚಾರ ಆರಂಭ
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಹಂಚಿಕೆದಾರರಿಗೆ ನಷ್ಟವಾದರೆ ಕಮಲ್ ಹಾಸನ್​ನಿಂದ ವಸೂಲಿ ಮಾಡಲಿ: ನಾರಾಯಣಗೌಡ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ