AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳು: ಈ ಬಾರಿ ಕೋಟಿಗೆ ಹರಾಜು

IPL 2023: ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳಾಗಿ ಕಾಣಿಸಿಕೊಂಡಿದ್ದ ಕೆಲ ಆಟಗಾರರು ಈ ಬಾರಿ ಕೋಟಿ ಬೆಲೆಗೆ ಹರಾಜಾಗಿರುವುದು ವಿಶೇಷ.

TV9 Web
| Edited By: |

Updated on: Dec 26, 2022 | 10:03 PM

Share
ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬರೋಬ್ಬರಿ 405 ಆಟಗಾರರು ಕಾಣಿಸಿಕೊಂಡಿದ್ದರು. ಆದರೆ ಈ ಆಟಗಾರರಲ್ಲಿ ಅವಕಾಶ ಸಿಕ್ಕಿದ್ದು ಕೇವಲ 80 ಆಟಗಾರರಿಗೆ ಮಾತ್ರ. ಅಂದರೆ ಈ ಬಾರಿ ಬರೋಬ್ಬರಿ 325 ಆಟಗಾರರು ಅವಕಾಶ ವಂಚಿತರಾಗಿದ್ದಾರೆ. ಇದಾಗ್ಯೂ ಕೆಲ ಯುವ ಆಟಗಾರರಿಗೆ ಅದೃಷ್ಟ ಖುಲಾಯಿಸಿದೆ.

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಬರೋಬ್ಬರಿ 405 ಆಟಗಾರರು ಕಾಣಿಸಿಕೊಂಡಿದ್ದರು. ಆದರೆ ಈ ಆಟಗಾರರಲ್ಲಿ ಅವಕಾಶ ಸಿಕ್ಕಿದ್ದು ಕೇವಲ 80 ಆಟಗಾರರಿಗೆ ಮಾತ್ರ. ಅಂದರೆ ಈ ಬಾರಿ ಬರೋಬ್ಬರಿ 325 ಆಟಗಾರರು ಅವಕಾಶ ವಂಚಿತರಾಗಿದ್ದಾರೆ. ಇದಾಗ್ಯೂ ಕೆಲ ಯುವ ಆಟಗಾರರಿಗೆ ಅದೃಷ್ಟ ಖುಲಾಯಿಸಿದೆ.

1 / 7
ಅದರಲ್ಲೂ ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳಾಗಿ ಕಾಣಿಸಿಕೊಂಡಿದ್ದ ಕೆಲ ಆಟಗಾರರು ಈ ಬಾರಿ ಕೋಟಿ ಬೆಲೆಗೆ ಹರಾಜಾಗಿರುವುದು ವಿಶೇಷ. ಹಾಗಿದ್ರೆ ಐಪಿಎಲ್ 2022 ರಲ್ಲಿ ನೆಟ್​ ಬೌಲರ್​ ಈ ಬಾರಿ ಅದೃಷ್ಟ ಖುಲಾಯಿಸಿಕೊಂಡ ಆಟಗಾರರು ಯಾರೆಲ್ಲಾ ಎಂದು ನೋಡೋಣ...

ಅದರಲ್ಲೂ ಕಳೆದ ಸೀಸನ್​ನಲ್ಲಿ ನೆಟ್​ ಬೌಲರ್​ಗಳಾಗಿ ಕಾಣಿಸಿಕೊಂಡಿದ್ದ ಕೆಲ ಆಟಗಾರರು ಈ ಬಾರಿ ಕೋಟಿ ಬೆಲೆಗೆ ಹರಾಜಾಗಿರುವುದು ವಿಶೇಷ. ಹಾಗಿದ್ರೆ ಐಪಿಎಲ್ 2022 ರಲ್ಲಿ ನೆಟ್​ ಬೌಲರ್​ ಈ ಬಾರಿ ಅದೃಷ್ಟ ಖುಲಾಯಿಸಿಕೊಂಡ ಆಟಗಾರರು ಯಾರೆಲ್ಲಾ ಎಂದು ನೋಡೋಣ...

2 / 7
1- ಜೋಶ್ವ ಲಿಟಲ್: ಐರ್ಲೆಂಡ್​ ತಂಡದ ಯುವ ಎಡಗೈ ವೇಗಿ ಜೋಶ್ವ ಲಿಟಲ್ ಐಪಿಎಲ್ ಸೀಸನ್ 15 ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನೆಟ್ ಬೌಲರ್​ ಆಗಿದ್ದರು. ಈ ಬಾರಿ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಯುವ ವೇಗಿಯನ್ನು ಗುಜರಾತ್ ಟೈಟಾನ್ಸ್ ತಂಡವು ಬರೋಬ್ಬರಿ 4.40 ಕೋಟಿಗೆ ಖರೀದಿಸಿರುವುದು ವಿಶೇಷ.

1- ಜೋಶ್ವ ಲಿಟಲ್: ಐರ್ಲೆಂಡ್​ ತಂಡದ ಯುವ ಎಡಗೈ ವೇಗಿ ಜೋಶ್ವ ಲಿಟಲ್ ಐಪಿಎಲ್ ಸೀಸನ್ 15 ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ತಂಡದ ನೆಟ್ ಬೌಲರ್​ ಆಗಿದ್ದರು. ಈ ಬಾರಿ ಮಿನಿ ಹರಾಜಿನಲ್ಲಿ ಕಾಣಿಸಿಕೊಂಡ ಯುವ ವೇಗಿಯನ್ನು ಗುಜರಾತ್ ಟೈಟಾನ್ಸ್ ತಂಡವು ಬರೋಬ್ಬರಿ 4.40 ಕೋಟಿಗೆ ಖರೀದಿಸಿರುವುದು ವಿಶೇಷ.

3 / 7
2- ಕುಲ್ವಂತ್ ಖೆಜ್ರೋಲಿಯಾ: ಈ ಹಿಂದೆ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಬಳಗದಲ್ಲಿ ಕಾಣಿಸಿಕೊಂಡಿದ್ದ ಕುಲ್ವಂತ್ ಖೆಜ್ರೋಲಿಯಾ ಅವರನ್ನು ಈ ಬಾರಿ ಕೆಕೆಆರ್ ಫ್ರಾಂಚೈಸಿಯು 20 ಲಕ್ಷ ರೂ.ಗೆ ಖರೀದಿಸಿದೆ.

2- ಕುಲ್ವಂತ್ ಖೆಜ್ರೋಲಿಯಾ: ಈ ಹಿಂದೆ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಬಳಗದಲ್ಲಿ ಕಾಣಿಸಿಕೊಂಡಿದ್ದ ಕುಲ್ವಂತ್ ಖೆಜ್ರೋಲಿಯಾ ಅವರನ್ನು ಈ ಬಾರಿ ಕೆಕೆಆರ್ ಫ್ರಾಂಚೈಸಿಯು 20 ಲಕ್ಷ ರೂ.ಗೆ ಖರೀದಿಸಿದೆ.

4 / 7
3- ಮೋಹಿತ್ ಶರ್ಮಾ: ಟೀಮ್ ಇಂಡಿಯಾ ವೇಗಿ ಮೋಹಿತ್ ಶರ್ಮಾ ಅವರನ್ನು ಕಳೆದ ಸೀಸನ್​ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಅವರು ಐಪಿಎಲ್​ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಈ ಬಾರಿ ಮೋಹಿತ್ ಶರ್ಮಾ ಅವರನ್ನು ಗುಜರಾತ್ ಟೈಟಾನ್ಸ್ ತಂಡವೇ 50 ಲಕ್ಷ ರೂ. ನೀಡಿ ಖರೀದಿಸಿದೆ.

3- ಮೋಹಿತ್ ಶರ್ಮಾ: ಟೀಮ್ ಇಂಡಿಯಾ ವೇಗಿ ಮೋಹಿತ್ ಶರ್ಮಾ ಅವರನ್ನು ಕಳೆದ ಸೀಸನ್​ನಲ್ಲಿ ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಅವರು ಐಪಿಎಲ್​ 2022 ರಲ್ಲಿ ಗುಜರಾತ್ ಟೈಟಾನ್ಸ್ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಈ ಬಾರಿ ಮೋಹಿತ್ ಶರ್ಮಾ ಅವರನ್ನು ಗುಜರಾತ್ ಟೈಟಾನ್ಸ್ ತಂಡವೇ 50 ಲಕ್ಷ ರೂ. ನೀಡಿ ಖರೀದಿಸಿದೆ.

5 / 7
4- ಮುಖೇಶ್ ಕುಮಾರ್: ಐಪಿಎಲ್​ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್​ ಬೌಲರ್​ ಆಗಿದ್ದ ಮುಖೇಶ್ ಕುಮಾರ್ ಅವರಿಗೆ ಈ ಬಾರಿ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 5.75 ಕೋಟಿ ರೂ. ನೀಡಿ ಮುಖೇಶ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಯೇ ಖರೀದಿಸಿರುವುದು ವಿಶೇಷ. (ಚಿತ್ರದಲ್ಲಿ ಬಲದಲ್ಲಿರುವುದು ಮುಖೇಶ್ ಕುಮಾರ್)

4- ಮುಖೇಶ್ ಕುಮಾರ್: ಐಪಿಎಲ್​ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೆಟ್​ ಬೌಲರ್​ ಆಗಿದ್ದ ಮುಖೇಶ್ ಕುಮಾರ್ ಅವರಿಗೆ ಈ ಬಾರಿ ಅದೃಷ್ಟ ಖುಲಾಯಿಸಿದೆ. ಬರೋಬ್ಬರಿ 5.75 ಕೋಟಿ ರೂ. ನೀಡಿ ಮುಖೇಶ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​ ಫ್ರಾಂಚೈಸಿಯೇ ಖರೀದಿಸಿರುವುದು ವಿಶೇಷ. (ಚಿತ್ರದಲ್ಲಿ ಬಲದಲ್ಲಿರುವುದು ಮುಖೇಶ್ ಕುಮಾರ್)

6 / 7
5- ನಿಶಾಂತ್ ಸಿಂಧು: ಕಳೆದ ಸೀಸನ್​ ಐಪಿಎಲ್​ನಲ್ಲಿ ಸಿಎಸ್​ಕೆ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ನಿಶಾಂತ್ ಸಿಂಧು ಅವರಿಗೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯೇ ಮಣೆಹಾಕಿದೆ. 60 ಲಕ್ಷ ರೂ. ನೀಡುವ ಮೂಲಕ ಯುವ ಆಟಗಾರನ್ನು ಸಿಎಸ್​ಕೆ ತಂಡ ಖರೀದಿಸಿದೆ.

5- ನಿಶಾಂತ್ ಸಿಂಧು: ಕಳೆದ ಸೀಸನ್​ ಐಪಿಎಲ್​ನಲ್ಲಿ ಸಿಎಸ್​ಕೆ ತಂಡದ ನೆಟ್ ಬೌಲರ್ ಆಗಿ ಕಾಣಿಸಿಕೊಂಡಿದ್ದ ನಿಶಾಂತ್ ಸಿಂಧು ಅವರಿಗೆ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್​ ಫ್ರಾಂಚೈಸಿಯೇ ಮಣೆಹಾಕಿದೆ. 60 ಲಕ್ಷ ರೂ. ನೀಡುವ ಮೂಲಕ ಯುವ ಆಟಗಾರನ್ನು ಸಿಎಸ್​ಕೆ ತಂಡ ಖರೀದಿಸಿದೆ.

7 / 7
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ