AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಪಾಲಿಗೆ ಕಂಟಕವಾಗುತ್ತಿರುವ ಇಂಪ್ಯಾಕ್ಟ್ ಪ್ಲೇಯರ್ಸ್..!

IPL 2023 RCB Kannada:

TV9 Web
| Edited By: |

Updated on: Apr 16, 2023 | 10:07 PM

Share
IPL 2023: ಇಂಪ್ಯಾಕ್ಟ್ ಪ್ಲೇಯರ್ಸ್...ಸರಳವಾಗಿ ಹೇಳಬೇಕೆಂದರೆ ಇಡೀ ಪಂದ್ಯದ ಚಿತ್ರಣ ಬದಲಿಸಬಲ್ಲ ಆಟಗಾರರು. ಆದರೆ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ಇಂಪ್ಯಾಕ್ಟ್ ಪ್ಲೇಯರ್​ಗಳು ಮಾತ್ರ ಇದಕ್ಕೆ ತದ್ವಿರುದ್ಧ. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ಕಣಕ್ಕಿಳಿಸಿದ ಮೂರು ಇಂಪ್ಯಾಕ್ಟ್ ಸಬ್​ಗಳ ಪ್ರದರ್ಶನ.

IPL 2023: ಇಂಪ್ಯಾಕ್ಟ್ ಪ್ಲೇಯರ್ಸ್...ಸರಳವಾಗಿ ಹೇಳಬೇಕೆಂದರೆ ಇಡೀ ಪಂದ್ಯದ ಚಿತ್ರಣ ಬದಲಿಸಬಲ್ಲ ಆಟಗಾರರು. ಆದರೆ ಆರ್​ಸಿಬಿ ಪರ ಕಣಕ್ಕಿಳಿಯುತ್ತಿರುವ ಇಂಪ್ಯಾಕ್ಟ್ ಪ್ಲೇಯರ್​ಗಳು ಮಾತ್ರ ಇದಕ್ಕೆ ತದ್ವಿರುದ್ಧ. ಇದಕ್ಕೆ ಸಾಕ್ಷಿಯೇ ಆರ್​ಸಿಬಿ ಕಣಕ್ಕಿಳಿಸಿದ ಮೂರು ಇಂಪ್ಯಾಕ್ಟ್ ಸಬ್​ಗಳ ಪ್ರದರ್ಶನ.

1 / 7
ಆರ್​ಸಿಬಿ ಪರ ಮೊದಲ ಬಾರಿಗೆ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿದ ಆಟಗಾರ ಅನೂಜ್ ರಾವತ್. ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಅವಕಾಶ ಪಡೆದ ಅನೂಜ್ ಕಲೆಹಾಕಿದ್ದು 5 ಎಸೆತಗಳಲ್ಲಿ ಕೇವಲ 1 ರನ್​.

ಆರ್​ಸಿಬಿ ಪರ ಮೊದಲ ಬಾರಿಗೆ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿದ ಆಟಗಾರ ಅನೂಜ್ ರಾವತ್. ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಅವಕಾಶ ಪಡೆದ ಅನೂಜ್ ಕಲೆಹಾಕಿದ್ದು 5 ಎಸೆತಗಳಲ್ಲಿ ಕೇವಲ 1 ರನ್​.

2 / 7
ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಸ್ಪಿನ್ನರ್ ಕರ್ಣ್ ಶರ್ಮಾರನ್ನು ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿಸಿತ್ತು. ಇಂಪ್ಯಾಕ್ಟ್ ಮಾಡಲೆಂದು ಬಂದ ಕರ್ಣ್ ಶರ್ಮಾ 3 ಓವರ್​ಗಳಲ್ಲಿ 38 ರನ್ ನೀಡಿ ಲಕ್ನೋ ತಂಡದ ಗೆಲುವಿಗೆ ಕೊಡುಗೆ ನೀಡಿದರು ಎನ್ನಬಹುದು.

ಇದಾದ ಬಳಿಕ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಸ್ಪಿನ್ನರ್ ಕರ್ಣ್ ಶರ್ಮಾರನ್ನು ಇಂಪ್ಯಾಕ್ಟ್ ಪ್ಲೇಯರ್​ ಆಗಿ ಕಣಕ್ಕಿಳಿಸಿತ್ತು. ಇಂಪ್ಯಾಕ್ಟ್ ಮಾಡಲೆಂದು ಬಂದ ಕರ್ಣ್ ಶರ್ಮಾ 3 ಓವರ್​ಗಳಲ್ಲಿ 38 ರನ್ ನೀಡಿ ಲಕ್ನೋ ತಂಡದ ಗೆಲುವಿಗೆ ಕೊಡುಗೆ ನೀಡಿದರು ಎನ್ನಬಹುದು.

3 / 7
ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಮತ್ತೆ ಅನೂಜ್ ರಾವತ್​ಗೆ ಅವಕಾಶ ನೀಡಿತ್ತು. 15ನೇ ಓವರ್​ ವೇಳೆ ಕಣಕ್ಕಿಳಿದಿದ್ದ ರಾವತ್ ಬರೋಬ್ಬರಿ 22 ಎಸೆತಗಳನ್ನು ಎದುರಿಸಿದ್ದರು. ಅಲ್ಲದೆ ಕಲೆಹಾಕಿದ್ದು ಕೇವಲ 15 ರನ್​ ಮಾತ್ರ. ಅಂದರೆ ಇಂಪ್ಯಾಕ್ಟ್ ಮಾಡಲೆಂದು ಬಂದ ಅನೂಜ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ರನ್​ಗಳಿಕೆ ಕುಂಠಿತವಾಗಲು ಪ್ರಮುಖ ಕಾರಣರಾಗಿದ್ದರು.

ಇದಾದ ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಇಂಪ್ಯಾಕ್ಟ್ ಪ್ಲೇಯರ್​ ಆಗಿ ಮತ್ತೆ ಅನೂಜ್ ರಾವತ್​ಗೆ ಅವಕಾಶ ನೀಡಿತ್ತು. 15ನೇ ಓವರ್​ ವೇಳೆ ಕಣಕ್ಕಿಳಿದಿದ್ದ ರಾವತ್ ಬರೋಬ್ಬರಿ 22 ಎಸೆತಗಳನ್ನು ಎದುರಿಸಿದ್ದರು. ಅಲ್ಲದೆ ಕಲೆಹಾಕಿದ್ದು ಕೇವಲ 15 ರನ್​ ಮಾತ್ರ. ಅಂದರೆ ಇಂಪ್ಯಾಕ್ಟ್ ಮಾಡಲೆಂದು ಬಂದ ಅನೂಜ್ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶಿಸಿ ತಂಡದ ರನ್​ಗಳಿಕೆ ಕುಂಠಿತವಾಗಲು ಪ್ರಮುಖ ಕಾರಣರಾಗಿದ್ದರು.

4 / 7
ಅಂದರೆ ಆರ್​ಸಿಬಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸುತ್ತಿರುವ ಆಟಗಾರರೇ ಆರ್​ಸಿಬಿ ಪಾಲಿಗೆ ಮುಳುವಾಗುತ್ತಿದ್ದಾರೆ. ಅದರಲ್ಲೂ ಅನೂಜ್ ರಾವತ್ ವಿಫಲರಾಗುತ್ತಿದ್ದರೂ ಅವರಿಗೆ ಸತತ ಅವಕಾಶ ನೀಡುತ್ತಿರುವ ಬಗ್ಗೆ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಅಂದರೆ ಆರ್​ಸಿಬಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸುತ್ತಿರುವ ಆಟಗಾರರೇ ಆರ್​ಸಿಬಿ ಪಾಲಿಗೆ ಮುಳುವಾಗುತ್ತಿದ್ದಾರೆ. ಅದರಲ್ಲೂ ಅನೂಜ್ ರಾವತ್ ವಿಫಲರಾಗುತ್ತಿದ್ದರೂ ಅವರಿಗೆ ಸತತ ಅವಕಾಶ ನೀಡುತ್ತಿರುವ ಬಗ್ಗೆ ಆಕ್ರೋಶಗಳು ವ್ಯಕ್ತವಾಗುತ್ತಿದೆ.

5 / 7
ಒಟ್ಟಿನಲ್ಲಿ ಎಲ್ಲಾ ತಂಡಗಳು ಇಂಪ್ಯಾಕ್ಟ್ ಪ್ಲೇಯರ್​ ಮೂಲಕ ಪಂದ್ಯಗಳನ್ನು ಗೆಲ್ಲುತ್ತಿದ್ದರೆ, ಆರ್​ಸಿಬಿ ಇಂಪ್ಯಾಕ್ಟ್ ಪ್ಲೇಯರ್​ಗಳು ಮಾತ್ರ ಇದಕ್ಕೆ ತದ್ವಿರುದ್ಧವಾಗಿ ಆಡುತ್ತಿರುವುದೇ ಈಗ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಒಟ್ಟಿನಲ್ಲಿ ಎಲ್ಲಾ ತಂಡಗಳು ಇಂಪ್ಯಾಕ್ಟ್ ಪ್ಲೇಯರ್​ ಮೂಲಕ ಪಂದ್ಯಗಳನ್ನು ಗೆಲ್ಲುತ್ತಿದ್ದರೆ, ಆರ್​ಸಿಬಿ ಇಂಪ್ಯಾಕ್ಟ್ ಪ್ಲೇಯರ್​ಗಳು ಮಾತ್ರ ಇದಕ್ಕೆ ತದ್ವಿರುದ್ಧವಾಗಿ ಆಡುತ್ತಿರುವುದೇ ಈಗ ತಂಡದ ಚಿಂತೆಯನ್ನು ಹೆಚ್ಚಿಸಿದೆ.

6 / 7
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

7 / 7
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ