IPL 2023: ಅತ್ಯಂತ ದುಬಾರಿ ಓವರ್: ಅರ್ಜುನ್ ತೆಂಡೂಲ್ಕರ್ ಹೆಸರಿಗೆ ಕೆಟ್ಟ ದಾಖಲೆ ಸೇರ್ಪಡೆ

IPL 2023 Kannada: ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ದಾಖಲೆ ಪ್ರಶಾಂತ್ ಪರಮೇಶ್ವರ್ ಹಾಗೂ ಹರ್ಷಲ್ ಪಟೇಲ್ ಹೆಸರಿನಲ್ಲಿದೆ.

| Updated By: ಝಾಹಿರ್ ಯೂಸುಫ್

Updated on: Apr 23, 2023 | 9:52 PM

IPL 2023: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಐಪಿಎಲ್​ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ್ದ ಅರ್ಜುನ್ ಇದೀಗ ದುಬಾರಿ ಓವರ್ ಮೂಲಕ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

IPL 2023: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಐಪಿಎಲ್​ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ್ದ ಅರ್ಜುನ್ ಇದೀಗ ದುಬಾರಿ ಓವರ್ ಮೂಲಕ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 7
ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಓವರ್ ಎಸೆದ ಅರ್ಜುನ್ ತೆಂಡೂಲ್ಕರ್ ಕೇವಲ 5 ರನ್​ ನೀಡಿ ಶುಭಾರಂಭ ಮಾಡಿದ್ದರು.

ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಓವರ್ ಎಸೆದ ಅರ್ಜುನ್ ತೆಂಡೂಲ್ಕರ್ ಕೇವಲ 5 ರನ್​ ನೀಡಿ ಶುಭಾರಂಭ ಮಾಡಿದ್ದರು.

2 / 7
ಇದಾದ ಬಳಿಕ 7ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಅರ್ಜುನ್ ತೆಂಡೂಲ್ಕರ್ 12 ರನ್ ನೀಡಿ ದುಬಾರಿಯಾದರು. ಇದಾಗ್ಯೂ ಪ್ರಭ್​ಸಿಮ್ರಾನ್ ಸಿಂಗ್ ವಿಕೆಟ್ ಪಡೆಯುವ ಮೂಲಕ ಈ ಓವರ್​ನಲ್ಲಿ ಯಶಸ್ಸು ತಂದುಕೊಟ್ಟಿದ್ದರು.

ಇದಾದ ಬಳಿಕ 7ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಅರ್ಜುನ್ ತೆಂಡೂಲ್ಕರ್ 12 ರನ್ ನೀಡಿ ದುಬಾರಿಯಾದರು. ಇದಾಗ್ಯೂ ಪ್ರಭ್​ಸಿಮ್ರಾನ್ ಸಿಂಗ್ ವಿಕೆಟ್ ಪಡೆಯುವ ಮೂಲಕ ಈ ಓವರ್​ನಲ್ಲಿ ಯಶಸ್ಸು ತಂದುಕೊಟ್ಟಿದ್ದರು.

3 / 7
ಆ ನಂತರ 16ನೇ ಓವರ್​ ವೇಳೆ ನಾಯಕ ರೋಹಿತ್ ಶರ್ಮಾ  ಅರ್ಜುನ್ ಕೈಗೆ ಚೆಂಡು ನೀಡಿದರು. ಆತ್ಮ ವಿಶ್ವಾಸದಿಂದಲೇ ಮೂರನೇ ಓವರ್​ ಆರಂಭಿಸಿದ ಅರ್ಜುನ್ ಅವರ ಮೊದಲ ಎಸೆತವನ್ನು ಸ್ಯಾಮ್ ಕರನ್ ಸಿಕ್ಸರ್​ಗೆ ಅಟ್ಟಿದರು. 2ನೇ ಎಸೆತ ವೈಡ್. ಮರು ಎಸೆತದಲ್ಲಿ ಫೋರ್. 3ನೇ ಎಸೆತದಲ್ಲಿ ಸ್ಯಾಮ್ ಕರನ್ 1 ರನ್ ಓಡಿದರು.

ಆ ನಂತರ 16ನೇ ಓವರ್​ ವೇಳೆ ನಾಯಕ ರೋಹಿತ್ ಶರ್ಮಾ ಅರ್ಜುನ್ ಕೈಗೆ ಚೆಂಡು ನೀಡಿದರು. ಆತ್ಮ ವಿಶ್ವಾಸದಿಂದಲೇ ಮೂರನೇ ಓವರ್​ ಆರಂಭಿಸಿದ ಅರ್ಜುನ್ ಅವರ ಮೊದಲ ಎಸೆತವನ್ನು ಸ್ಯಾಮ್ ಕರನ್ ಸಿಕ್ಸರ್​ಗೆ ಅಟ್ಟಿದರು. 2ನೇ ಎಸೆತ ವೈಡ್. ಮರು ಎಸೆತದಲ್ಲಿ ಫೋರ್. 3ನೇ ಎಸೆತದಲ್ಲಿ ಸ್ಯಾಮ್ ಕರನ್ 1 ರನ್ ಓಡಿದರು.

4 / 7
4ನೇ ಎಸೆತದಲ್ಲಿ ಹರ್ಪ್ರೀತ್ ಸಿಂಗ್ ಬ್ಯಾಟ್​ನಿಂದ ಫೋರ್​ ಮೂಡಿಬಂತು. ಇನ್ನು 5ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. 6ನೇ ಎಸೆತ ನೋಬಾಲ್-ಫೋರ್. ಮರು ಎಸೆತದಲ್ಲಿ ಹರ್ಪ್ರೀತ್ ಸಿಂಗ್ ಮತ್ತೊಂದು ಫೋರ್ ಬಾರಿಸಿದರು. ಇದರೊಂದಿಗೆ ಅರ್ಜುನ್ ತೆಂಡೂಲ್ಕರ್ ಓವರ್​ನಲ್ಲಿ ಬರೋಬ್ಬರಿ 31 ರನ್ ಮೂಡಿಬಂತು.

4ನೇ ಎಸೆತದಲ್ಲಿ ಹರ್ಪ್ರೀತ್ ಸಿಂಗ್ ಬ್ಯಾಟ್​ನಿಂದ ಫೋರ್​ ಮೂಡಿಬಂತು. ಇನ್ನು 5ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. 6ನೇ ಎಸೆತ ನೋಬಾಲ್-ಫೋರ್. ಮರು ಎಸೆತದಲ್ಲಿ ಹರ್ಪ್ರೀತ್ ಸಿಂಗ್ ಮತ್ತೊಂದು ಫೋರ್ ಬಾರಿಸಿದರು. ಇದರೊಂದಿಗೆ ಅರ್ಜುನ್ ತೆಂಡೂಲ್ಕರ್ ಓವರ್​ನಲ್ಲಿ ಬರೋಬ್ಬರಿ 31 ರನ್ ಮೂಡಿಬಂತು.

5 / 7
ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಅರ್ಜುನ್ ತೆಂಡೂಲ್ಕರ್ (31 ರನ್​) ಯಶ್ ದಯಾಳ್ ಜೊತೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಐಪಿಎಲ್​ ಇತಿಹಾಸದಲ್ಲೇ 6ನೇ ದುಬಾರಿ ಓವರ್ ಮಾಡಿದ ಕೆಟ್ಟ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಅರ್ಜುನ್ ತೆಂಡೂಲ್ಕರ್ (31 ರನ್​) ಯಶ್ ದಯಾಳ್ ಜೊತೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಐಪಿಎಲ್​ ಇತಿಹಾಸದಲ್ಲೇ 6ನೇ ದುಬಾರಿ ಓವರ್ ಮಾಡಿದ ಕೆಟ್ಟ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

6 / 7
ಇನ್ನು ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ದಾಖಲೆ ಪ್ರಶಾಂತ್ ಪರಮೇಶ್ವರ್ ಹಾಗೂ ಹರ್ಷಲ್ ಪಟೇಲ್ ಹೆಸರಿನಲ್ಲಿದೆ. 2011 ರಲ್ಲಿ ಆರ್​ಸಿಬಿ ವಿರುದ್ಧ ಪ್ರಶಾಂತ್ 37 ರನ್ ನೀಡಿದರೆ, ಹರ್ಷಲ್ ಪಟೇಲ್ 2021 ರಲ್ಲಿ ಸಿಎಸ್​ಕೆ ವಿರುದ್ದ 37 ರನ್​ ಚಚ್ಚಿಸಿಕೊಂಡಿದ್ದರು.

ಇನ್ನು ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ದಾಖಲೆ ಪ್ರಶಾಂತ್ ಪರಮೇಶ್ವರ್ ಹಾಗೂ ಹರ್ಷಲ್ ಪಟೇಲ್ ಹೆಸರಿನಲ್ಲಿದೆ. 2011 ರಲ್ಲಿ ಆರ್​ಸಿಬಿ ವಿರುದ್ಧ ಪ್ರಶಾಂತ್ 37 ರನ್ ನೀಡಿದರೆ, ಹರ್ಷಲ್ ಪಟೇಲ್ 2021 ರಲ್ಲಿ ಸಿಎಸ್​ಕೆ ವಿರುದ್ದ 37 ರನ್​ ಚಚ್ಚಿಸಿಕೊಂಡಿದ್ದರು.

7 / 7
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ