AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅತ್ಯಂತ ದುಬಾರಿ ಓವರ್: ಅರ್ಜುನ್ ತೆಂಡೂಲ್ಕರ್ ಹೆಸರಿಗೆ ಕೆಟ್ಟ ದಾಖಲೆ ಸೇರ್ಪಡೆ

IPL 2023 Kannada: ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ದಾಖಲೆ ಪ್ರಶಾಂತ್ ಪರಮೇಶ್ವರ್ ಹಾಗೂ ಹರ್ಷಲ್ ಪಟೇಲ್ ಹೆಸರಿನಲ್ಲಿದೆ.

TV9 Web
| Edited By: |

Updated on: Apr 23, 2023 | 9:52 PM

Share
IPL 2023: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಐಪಿಎಲ್​ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ್ದ ಅರ್ಜುನ್ ಇದೀಗ ದುಬಾರಿ ಓವರ್ ಮೂಲಕ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

IPL 2023: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಈ ಬಾರಿಯ ಐಪಿಎಲ್​ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಎಸ್​ಆರ್​ಹೆಚ್ ವಿರುದ್ಧದ ಪಂದ್ಯದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ್ದ ಅರ್ಜುನ್ ಇದೀಗ ದುಬಾರಿ ಓವರ್ ಮೂಲಕ ಹೀನಾಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 7
ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಓವರ್ ಎಸೆದ ಅರ್ಜುನ್ ತೆಂಡೂಲ್ಕರ್ ಕೇವಲ 5 ರನ್​ ನೀಡಿ ಶುಭಾರಂಭ ಮಾಡಿದ್ದರು.

ಪಂಜಾಬ್ ಕಿಂಗ್ಸ್ ವಿರುದ್ಧ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲ ಓವರ್ ಎಸೆದ ಅರ್ಜುನ್ ತೆಂಡೂಲ್ಕರ್ ಕೇವಲ 5 ರನ್​ ನೀಡಿ ಶುಭಾರಂಭ ಮಾಡಿದ್ದರು.

2 / 7
ಇದಾದ ಬಳಿಕ 7ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಅರ್ಜುನ್ ತೆಂಡೂಲ್ಕರ್ 12 ರನ್ ನೀಡಿ ದುಬಾರಿಯಾದರು. ಇದಾಗ್ಯೂ ಪ್ರಭ್​ಸಿಮ್ರಾನ್ ಸಿಂಗ್ ವಿಕೆಟ್ ಪಡೆಯುವ ಮೂಲಕ ಈ ಓವರ್​ನಲ್ಲಿ ಯಶಸ್ಸು ತಂದುಕೊಟ್ಟಿದ್ದರು.

ಇದಾದ ಬಳಿಕ 7ನೇ ಓವರ್​ನಲ್ಲಿ ಮತ್ತೆ ದಾಳಿಗಿಳಿದ ಅರ್ಜುನ್ ತೆಂಡೂಲ್ಕರ್ 12 ರನ್ ನೀಡಿ ದುಬಾರಿಯಾದರು. ಇದಾಗ್ಯೂ ಪ್ರಭ್​ಸಿಮ್ರಾನ್ ಸಿಂಗ್ ವಿಕೆಟ್ ಪಡೆಯುವ ಮೂಲಕ ಈ ಓವರ್​ನಲ್ಲಿ ಯಶಸ್ಸು ತಂದುಕೊಟ್ಟಿದ್ದರು.

3 / 7
ಆ ನಂತರ 16ನೇ ಓವರ್​ ವೇಳೆ ನಾಯಕ ರೋಹಿತ್ ಶರ್ಮಾ  ಅರ್ಜುನ್ ಕೈಗೆ ಚೆಂಡು ನೀಡಿದರು. ಆತ್ಮ ವಿಶ್ವಾಸದಿಂದಲೇ ಮೂರನೇ ಓವರ್​ ಆರಂಭಿಸಿದ ಅರ್ಜುನ್ ಅವರ ಮೊದಲ ಎಸೆತವನ್ನು ಸ್ಯಾಮ್ ಕರನ್ ಸಿಕ್ಸರ್​ಗೆ ಅಟ್ಟಿದರು. 2ನೇ ಎಸೆತ ವೈಡ್. ಮರು ಎಸೆತದಲ್ಲಿ ಫೋರ್. 3ನೇ ಎಸೆತದಲ್ಲಿ ಸ್ಯಾಮ್ ಕರನ್ 1 ರನ್ ಓಡಿದರು.

ಆ ನಂತರ 16ನೇ ಓವರ್​ ವೇಳೆ ನಾಯಕ ರೋಹಿತ್ ಶರ್ಮಾ ಅರ್ಜುನ್ ಕೈಗೆ ಚೆಂಡು ನೀಡಿದರು. ಆತ್ಮ ವಿಶ್ವಾಸದಿಂದಲೇ ಮೂರನೇ ಓವರ್​ ಆರಂಭಿಸಿದ ಅರ್ಜುನ್ ಅವರ ಮೊದಲ ಎಸೆತವನ್ನು ಸ್ಯಾಮ್ ಕರನ್ ಸಿಕ್ಸರ್​ಗೆ ಅಟ್ಟಿದರು. 2ನೇ ಎಸೆತ ವೈಡ್. ಮರು ಎಸೆತದಲ್ಲಿ ಫೋರ್. 3ನೇ ಎಸೆತದಲ್ಲಿ ಸ್ಯಾಮ್ ಕರನ್ 1 ರನ್ ಓಡಿದರು.

4 / 7
4ನೇ ಎಸೆತದಲ್ಲಿ ಹರ್ಪ್ರೀತ್ ಸಿಂಗ್ ಬ್ಯಾಟ್​ನಿಂದ ಫೋರ್​ ಮೂಡಿಬಂತು. ಇನ್ನು 5ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. 6ನೇ ಎಸೆತ ನೋಬಾಲ್-ಫೋರ್. ಮರು ಎಸೆತದಲ್ಲಿ ಹರ್ಪ್ರೀತ್ ಸಿಂಗ್ ಮತ್ತೊಂದು ಫೋರ್ ಬಾರಿಸಿದರು. ಇದರೊಂದಿಗೆ ಅರ್ಜುನ್ ತೆಂಡೂಲ್ಕರ್ ಓವರ್​ನಲ್ಲಿ ಬರೋಬ್ಬರಿ 31 ರನ್ ಮೂಡಿಬಂತು.

4ನೇ ಎಸೆತದಲ್ಲಿ ಹರ್ಪ್ರೀತ್ ಸಿಂಗ್ ಬ್ಯಾಟ್​ನಿಂದ ಫೋರ್​ ಮೂಡಿಬಂತು. ಇನ್ನು 5ನೇ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದರು. 6ನೇ ಎಸೆತ ನೋಬಾಲ್-ಫೋರ್. ಮರು ಎಸೆತದಲ್ಲಿ ಹರ್ಪ್ರೀತ್ ಸಿಂಗ್ ಮತ್ತೊಂದು ಫೋರ್ ಬಾರಿಸಿದರು. ಇದರೊಂದಿಗೆ ಅರ್ಜುನ್ ತೆಂಡೂಲ್ಕರ್ ಓವರ್​ನಲ್ಲಿ ಬರೋಬ್ಬರಿ 31 ರನ್ ಮೂಡಿಬಂತು.

5 / 7
ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಅರ್ಜುನ್ ತೆಂಡೂಲ್ಕರ್ (31 ರನ್​) ಯಶ್ ದಯಾಳ್ ಜೊತೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಐಪಿಎಲ್​ ಇತಿಹಾಸದಲ್ಲೇ 6ನೇ ದುಬಾರಿ ಓವರ್ ಮಾಡಿದ ಕೆಟ್ಟ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ಬೌಲರ್​ಗಳ ಪಟ್ಟಿಯಲ್ಲಿ ಇದೀಗ ಅರ್ಜುನ್ ತೆಂಡೂಲ್ಕರ್ (31 ರನ್​) ಯಶ್ ದಯಾಳ್ ಜೊತೆ ಜಂಟಿಯಾಗಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಅಲ್ಲದೆ ಐಪಿಎಲ್​ ಇತಿಹಾಸದಲ್ಲೇ 6ನೇ ದುಬಾರಿ ಓವರ್ ಮಾಡಿದ ಕೆಟ್ಟ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ.

6 / 7
ಇನ್ನು ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ದಾಖಲೆ ಪ್ರಶಾಂತ್ ಪರಮೇಶ್ವರ್ ಹಾಗೂ ಹರ್ಷಲ್ ಪಟೇಲ್ ಹೆಸರಿನಲ್ಲಿದೆ. 2011 ರಲ್ಲಿ ಆರ್​ಸಿಬಿ ವಿರುದ್ಧ ಪ್ರಶಾಂತ್ 37 ರನ್ ನೀಡಿದರೆ, ಹರ್ಷಲ್ ಪಟೇಲ್ 2021 ರಲ್ಲಿ ಸಿಎಸ್​ಕೆ ವಿರುದ್ದ 37 ರನ್​ ಚಚ್ಚಿಸಿಕೊಂಡಿದ್ದರು.

ಇನ್ನು ಐಪಿಎಲ್​ನಲ್ಲಿ ಅತ್ಯಂತ ದುಬಾರಿ ಓವರ್ ಎಸೆದ ದಾಖಲೆ ಪ್ರಶಾಂತ್ ಪರಮೇಶ್ವರ್ ಹಾಗೂ ಹರ್ಷಲ್ ಪಟೇಲ್ ಹೆಸರಿನಲ್ಲಿದೆ. 2011 ರಲ್ಲಿ ಆರ್​ಸಿಬಿ ವಿರುದ್ಧ ಪ್ರಶಾಂತ್ 37 ರನ್ ನೀಡಿದರೆ, ಹರ್ಷಲ್ ಪಟೇಲ್ 2021 ರಲ್ಲಿ ಸಿಎಸ್​ಕೆ ವಿರುದ್ದ 37 ರನ್​ ಚಚ್ಚಿಸಿಕೊಂಡಿದ್ದರು.

7 / 7
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ