AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸಚಿನ್​ಗೆ ಸಾಧ್ಯವಾಗದಿರುವುದನ್ನು ಸಾಧಿಸಿ ತೋರಿಸಿದ ಮಗ ಅರ್ಜುನ್ ತೆಂಡೂಲ್ಕರ್

IPL 2023 Kannada: ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on: Apr 19, 2023 | 3:57 PM

Share
IPL 2023: ಐಪಿಎಲ್​ನ 25ನೇ ಪಂದ್ಯವು ನಾನಾ ಕಾರಣಗಳಿಂದ ಗಮನ ಸೆಳೆದಿದೆ. ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಮರೋನ್ ಗ್ರೀನ್ ಚೊಚ್ಚಲ ಅರ್ಧಶತಕ ಬಾರಿಸಿದರೆ, ಅರ್ಜುನ್ ತೆಂಡೂಲ್ಕರ್ ಮೊದಲ ವಿಕೆಟ್ ಪಡೆದು ಸಂಭ್ರಮಿಸಿದರು. ಅದು ಕೂಡ ಕೊನೆಯ ಓವರ್​ನಲ್ಲಿ ಈ ಸಾಧನೆ ಮಾಡಿದ್ದು ವಿಶೇಷ.

IPL 2023: ಐಪಿಎಲ್​ನ 25ನೇ ಪಂದ್ಯವು ನಾನಾ ಕಾರಣಗಳಿಂದ ಗಮನ ಸೆಳೆದಿದೆ. ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಮರೋನ್ ಗ್ರೀನ್ ಚೊಚ್ಚಲ ಅರ್ಧಶತಕ ಬಾರಿಸಿದರೆ, ಅರ್ಜುನ್ ತೆಂಡೂಲ್ಕರ್ ಮೊದಲ ವಿಕೆಟ್ ಪಡೆದು ಸಂಭ್ರಮಿಸಿದರು. ಅದು ಕೂಡ ಕೊನೆಯ ಓವರ್​ನಲ್ಲಿ ಈ ಸಾಧನೆ ಮಾಡಿದ್ದು ವಿಶೇಷ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೊನೆಯ ಓವರ್​ನಲ್ಲಿ 20 ರನ್​ಗಳ ಅವಶ್ಯಕತೆಯಿತ್ತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೊನೆಯ ಓವರ್​ನಲ್ಲಿ 20 ರನ್​ಗಳ ಅವಶ್ಯಕತೆಯಿತ್ತು.

2 / 7
ಈ ವೇಳೆ ನಾಯಕ ರೋಹಿತ್ ಶರ್ಮಾ ಚೆಂಡನ್ನು ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಕೈಗೆ ನೀಡಿದರು. ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಅರ್ಜುನ್ 2ನೇ ಎಸೆತದಲ್ಲಿ 1 ರನ್ ಮಾತ್ರ ನೀಡಿದ್ದರು. ಇನ್ನು ಮೂರನೇ ಎಸೆತವನ್ನು ವೈಡ್ ಎಸೆದರೂ, ಮರು ಎಸೆತದಲ್ಲಿ ಕೇವಲ 2 ರನ್ ನೀಡಿದರು.

ಈ ವೇಳೆ ನಾಯಕ ರೋಹಿತ್ ಶರ್ಮಾ ಚೆಂಡನ್ನು ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಕೈಗೆ ನೀಡಿದರು. ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಅರ್ಜುನ್ 2ನೇ ಎಸೆತದಲ್ಲಿ 1 ರನ್ ಮಾತ್ರ ನೀಡಿದ್ದರು. ಇನ್ನು ಮೂರನೇ ಎಸೆತವನ್ನು ವೈಡ್ ಎಸೆದರೂ, ಮರು ಎಸೆತದಲ್ಲಿ ಕೇವಲ 2 ರನ್ ನೀಡಿದರು.

3 / 7
ಇನ್ನು 4ನೇ ಎಸೆತದಲ್ಲಿ 1 ರನ್. 5ನೇ ಎಸೆತದಲ್ಲಿ ಭುವನೇಶ್ವರ್ ಕುಮಾರ್ ವಿಕೆಟ್ ಪಡೆಯುವ ಮೂಲಕ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಐಪಿಎಲ್ ವಿಕೆಟ್ ಪಡೆದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ 14 ರನ್​ಗಳಿಂದ ಜಯ ಸಾಧಿಸಿತು.

ಇನ್ನು 4ನೇ ಎಸೆತದಲ್ಲಿ 1 ರನ್. 5ನೇ ಎಸೆತದಲ್ಲಿ ಭುವನೇಶ್ವರ್ ಕುಮಾರ್ ವಿಕೆಟ್ ಪಡೆಯುವ ಮೂಲಕ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಐಪಿಎಲ್ ವಿಕೆಟ್ ಪಡೆದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ 14 ರನ್​ಗಳಿಂದ ಜಯ ಸಾಧಿಸಿತು.

4 / 7
ಈ ಪಂದ್ಯದಲ್ಲಿ 2.5 ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ 18 ರನ್​ ನೀಡಿ 1 ವಿಕೆಟ್ ಕಬಳಿಸಿದರು. ಈ ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ಸಚಿನ್ ತೆಂಡೂಲ್ಕರ್​ಗೆ ಸಾಧ್ಯವಾಗದಿರುವುದನ್ನು ಅರ್ಜುನ್ ಸಾಧಿಸಿದರು.

ಈ ಪಂದ್ಯದಲ್ಲಿ 2.5 ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ 18 ರನ್​ ನೀಡಿ 1 ವಿಕೆಟ್ ಕಬಳಿಸಿದರು. ಈ ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ಸಚಿನ್ ತೆಂಡೂಲ್ಕರ್​ಗೆ ಸಾಧ್ಯವಾಗದಿರುವುದನ್ನು ಅರ್ಜುನ್ ಸಾಧಿಸಿದರು.

5 / 7
ಹೌದು, ಐಪಿಎಲ್​ನಲ್ಲಿ 78 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 36 ಎಸೆತಗಳನ್ನು ಎಸೆದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇದೀಗ ಅರ್ಜುನ್ ತೆಂಡೂಲ್ಕರ್ ತಮ್ಮ 2ನೇ ಪಂದ್ಯದಲ್ಲಿ ಮೊದಲ ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ವಿಕೆಟ್ ಖಾತೆ ತೆರೆದಿದ್ದಾರೆ.

ಹೌದು, ಐಪಿಎಲ್​ನಲ್ಲಿ 78 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 36 ಎಸೆತಗಳನ್ನು ಎಸೆದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇದೀಗ ಅರ್ಜುನ್ ತೆಂಡೂಲ್ಕರ್ ತಮ್ಮ 2ನೇ ಪಂದ್ಯದಲ್ಲಿ ಮೊದಲ ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ವಿಕೆಟ್ ಖಾತೆ ತೆರೆದಿದ್ದಾರೆ.

6 / 7
ಇತ್ತ ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇತ್ತ ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

7 / 7
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ