AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸಚಿನ್​ಗೆ ಸಾಧ್ಯವಾಗದಿರುವುದನ್ನು ಸಾಧಿಸಿ ತೋರಿಸಿದ ಮಗ ಅರ್ಜುನ್ ತೆಂಡೂಲ್ಕರ್

IPL 2023 Kannada: ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

TV9 Web
| Edited By: |

Updated on: Apr 19, 2023 | 3:57 PM

Share
IPL 2023: ಐಪಿಎಲ್​ನ 25ನೇ ಪಂದ್ಯವು ನಾನಾ ಕಾರಣಗಳಿಂದ ಗಮನ ಸೆಳೆದಿದೆ. ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಮರೋನ್ ಗ್ರೀನ್ ಚೊಚ್ಚಲ ಅರ್ಧಶತಕ ಬಾರಿಸಿದರೆ, ಅರ್ಜುನ್ ತೆಂಡೂಲ್ಕರ್ ಮೊದಲ ವಿಕೆಟ್ ಪಡೆದು ಸಂಭ್ರಮಿಸಿದರು. ಅದು ಕೂಡ ಕೊನೆಯ ಓವರ್​ನಲ್ಲಿ ಈ ಸಾಧನೆ ಮಾಡಿದ್ದು ವಿಶೇಷ.

IPL 2023: ಐಪಿಎಲ್​ನ 25ನೇ ಪಂದ್ಯವು ನಾನಾ ಕಾರಣಗಳಿಂದ ಗಮನ ಸೆಳೆದಿದೆ. ಈ ಪಂದ್ಯದ ಮೂಲಕ ಮುಂಬೈ ಇಂಡಿಯನ್ಸ್​ ತಂಡದ ಕ್ಯಾಮರೋನ್ ಗ್ರೀನ್ ಚೊಚ್ಚಲ ಅರ್ಧಶತಕ ಬಾರಿಸಿದರೆ, ಅರ್ಜುನ್ ತೆಂಡೂಲ್ಕರ್ ಮೊದಲ ವಿಕೆಟ್ ಪಡೆದು ಸಂಭ್ರಮಿಸಿದರು. ಅದು ಕೂಡ ಕೊನೆಯ ಓವರ್​ನಲ್ಲಿ ಈ ಸಾಧನೆ ಮಾಡಿದ್ದು ವಿಶೇಷ.

1 / 7
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೊನೆಯ ಓವರ್​ನಲ್ಲಿ 20 ರನ್​ಗಳ ಅವಶ್ಯಕತೆಯಿತ್ತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿತ್ತು. ಈ ಕಠಿಣ ಗುರಿ ಬೆನ್ನತ್ತಿದ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಕೊನೆಯ ಓವರ್​ನಲ್ಲಿ 20 ರನ್​ಗಳ ಅವಶ್ಯಕತೆಯಿತ್ತು.

2 / 7
ಈ ವೇಳೆ ನಾಯಕ ರೋಹಿತ್ ಶರ್ಮಾ ಚೆಂಡನ್ನು ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಕೈಗೆ ನೀಡಿದರು. ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಅರ್ಜುನ್ 2ನೇ ಎಸೆತದಲ್ಲಿ 1 ರನ್ ಮಾತ್ರ ನೀಡಿದ್ದರು. ಇನ್ನು ಮೂರನೇ ಎಸೆತವನ್ನು ವೈಡ್ ಎಸೆದರೂ, ಮರು ಎಸೆತದಲ್ಲಿ ಕೇವಲ 2 ರನ್ ನೀಡಿದರು.

ಈ ವೇಳೆ ನಾಯಕ ರೋಹಿತ್ ಶರ್ಮಾ ಚೆಂಡನ್ನು ಯುವ ವೇಗಿ ಅರ್ಜುನ್ ತೆಂಡೂಲ್ಕರ್ ಕೈಗೆ ನೀಡಿದರು. ಮೊದಲ ಎಸೆತದಲ್ಲಿ ಯಾವುದೇ ರನ್ ನೀಡದ ಅರ್ಜುನ್ 2ನೇ ಎಸೆತದಲ್ಲಿ 1 ರನ್ ಮಾತ್ರ ನೀಡಿದ್ದರು. ಇನ್ನು ಮೂರನೇ ಎಸೆತವನ್ನು ವೈಡ್ ಎಸೆದರೂ, ಮರು ಎಸೆತದಲ್ಲಿ ಕೇವಲ 2 ರನ್ ನೀಡಿದರು.

3 / 7
ಇನ್ನು 4ನೇ ಎಸೆತದಲ್ಲಿ 1 ರನ್. 5ನೇ ಎಸೆತದಲ್ಲಿ ಭುವನೇಶ್ವರ್ ಕುಮಾರ್ ವಿಕೆಟ್ ಪಡೆಯುವ ಮೂಲಕ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಐಪಿಎಲ್ ವಿಕೆಟ್ ಪಡೆದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ 14 ರನ್​ಗಳಿಂದ ಜಯ ಸಾಧಿಸಿತು.

ಇನ್ನು 4ನೇ ಎಸೆತದಲ್ಲಿ 1 ರನ್. 5ನೇ ಎಸೆತದಲ್ಲಿ ಭುವನೇಶ್ವರ್ ಕುಮಾರ್ ವಿಕೆಟ್ ಪಡೆಯುವ ಮೂಲಕ ಅರ್ಜುನ್ ತೆಂಡೂಲ್ಕರ್ ಚೊಚ್ಚಲ ಐಪಿಎಲ್ ವಿಕೆಟ್ ಪಡೆದರು. ಇದರೊಂದಿಗೆ ಮುಂಬೈ ಇಂಡಿಯನ್ಸ್ ತಂಡ 14 ರನ್​ಗಳಿಂದ ಜಯ ಸಾಧಿಸಿತು.

4 / 7
ಈ ಪಂದ್ಯದಲ್ಲಿ 2.5 ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ 18 ರನ್​ ನೀಡಿ 1 ವಿಕೆಟ್ ಕಬಳಿಸಿದರು. ಈ ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ಸಚಿನ್ ತೆಂಡೂಲ್ಕರ್​ಗೆ ಸಾಧ್ಯವಾಗದಿರುವುದನ್ನು ಅರ್ಜುನ್ ಸಾಧಿಸಿದರು.

ಈ ಪಂದ್ಯದಲ್ಲಿ 2.5 ಓವರ್ ಬೌಲಿಂಗ್ ಮಾಡಿದ್ದ ಅರ್ಜುನ್ ತೆಂಡೂಲ್ಕರ್ 18 ರನ್​ ನೀಡಿ 1 ವಿಕೆಟ್ ಕಬಳಿಸಿದರು. ಈ ವಿಕೆಟ್​ನೊಂದಿಗೆ ಐಪಿಎಲ್​ನಲ್ಲಿ ಸಚಿನ್ ತೆಂಡೂಲ್ಕರ್​ಗೆ ಸಾಧ್ಯವಾಗದಿರುವುದನ್ನು ಅರ್ಜುನ್ ಸಾಧಿಸಿದರು.

5 / 7
ಹೌದು, ಐಪಿಎಲ್​ನಲ್ಲಿ 78 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 36 ಎಸೆತಗಳನ್ನು ಎಸೆದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇದೀಗ ಅರ್ಜುನ್ ತೆಂಡೂಲ್ಕರ್ ತಮ್ಮ 2ನೇ ಪಂದ್ಯದಲ್ಲಿ ಮೊದಲ ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ವಿಕೆಟ್ ಖಾತೆ ತೆರೆದಿದ್ದಾರೆ.

ಹೌದು, ಐಪಿಎಲ್​ನಲ್ಲಿ 78 ಪಂದ್ಯಗಳನ್ನಾಡಿರುವ ಸಚಿನ್ ತೆಂಡೂಲ್ಕರ್ 4 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಈ ವೇಳೆ 36 ಎಸೆತಗಳನ್ನು ಎಸೆದರೂ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇದೀಗ ಅರ್ಜುನ್ ತೆಂಡೂಲ್ಕರ್ ತಮ್ಮ 2ನೇ ಪಂದ್ಯದಲ್ಲಿ ಮೊದಲ ವಿಕೆಟ್ ಕಬಳಿಸುವ ಮೂಲಕ ಐಪಿಎಲ್​ ವಿಕೆಟ್ ಖಾತೆ ತೆರೆದಿದ್ದಾರೆ.

6 / 7
ಇತ್ತ ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇತ್ತ ಮಗನಿಗೆ ವಿಕೆಟ್ ಸಿಕ್ಕ ಖುಷಿಯಲ್ಲಿ ಸಚಿನ್ ತೆಂಡೂಲ್ಕರ್ ಕೂಡ, ಕೊನೆಗೂ ತೆಂಡೂಲ್ಕರ್ ಐಪಿಎಲ್​ ವಿಕೆಟ್ ಪಡೆದರು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

7 / 7
Follow Us
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ