AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Auction: ಐಪಿಎಲ್​ ಹರಾಜಿಗೆ ಹೆಸರು ನೋಂದಾಯಿಸಲು ಡೆಡ್​ಲೈನ್ ಫಿಕ್ಸ್..!

IPL 2023 Auction: ಈ ಬಾರಿ ಸುಮಾರು 250 ಆಟಗಾರರು ಹೆಸರು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆಯಿದೆ. ಅವರಲ್ಲಿ ಕೆಲವೇ ಕೆಲವು ಆಟಗಾರರಿಗೆ ಮಾತ್ರ ಅವಕಾಶ ಸಿಗಲಿದೆ.

TV9 Web
| Edited By: |

Updated on: Nov 23, 2022 | 6:04 PM

Share
IPL 2023 Auction: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಬಿಸಿಸಿಐ ಭರ್ಜರಿ ಸಿದ್ಧತೆಯಲ್ಲಿದೆ. ಈಗಾಗಲೇ ಐಪಿಎಲ್ ಮಿನಿ ಹರಾಜಿಗಾಗಿ ದಿನಾಂಕ ಫಿಕ್ಸ್ ಮಾಡಲಾಗಿದ್ದು, ಅದರಂತೆ ಡಿಸೆಂಬರ್ 23 ರಂದು ಕೊಚ್ಚಿನ್​ನಲ್ಲಿ ಆಟಗಾರರ ಬಿಡ್ಡಿಂಗ್ ನಡೆಯಲಿದೆ.

IPL 2023 Auction: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಗಾಗಿ ಬಿಸಿಸಿಐ ಭರ್ಜರಿ ಸಿದ್ಧತೆಯಲ್ಲಿದೆ. ಈಗಾಗಲೇ ಐಪಿಎಲ್ ಮಿನಿ ಹರಾಜಿಗಾಗಿ ದಿನಾಂಕ ಫಿಕ್ಸ್ ಮಾಡಲಾಗಿದ್ದು, ಅದರಂತೆ ಡಿಸೆಂಬರ್ 23 ರಂದು ಕೊಚ್ಚಿನ್​ನಲ್ಲಿ ಆಟಗಾರರ ಬಿಡ್ಡಿಂಗ್ ನಡೆಯಲಿದೆ.

1 / 7
ಅದಕ್ಕೂ ಮುನ್ನ ಈ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲು ಬಿಸಿಸಿಐ ಆಟಗಾರರಿಗೆ ಗಡುವು ವಿಧಿಸಿದೆ. ಅದರಂತೆ ಡಿಸೆಂಬರ್ 15, ಸಂಜೆ 5 ಗಂಟೆಯೊಳಗೆ ಆಸಕ್ತ ಆಟಗಾರರು ಹೆಸರು ರಿಜಿಸ್ಟರ್ ಮಾಡಿಕೊಳ್ಳಲು ಬಿಸಿಸಿಐ ಸೂಚಿಸಿದೆ.

ಅದಕ್ಕೂ ಮುನ್ನ ಈ ಹರಾಜಿಗಾಗಿ ಹೆಸರು ನೋಂದಣಿ ಮಾಡಿಕೊಳ್ಳಲು ಬಿಸಿಸಿಐ ಆಟಗಾರರಿಗೆ ಗಡುವು ವಿಧಿಸಿದೆ. ಅದರಂತೆ ಡಿಸೆಂಬರ್ 15, ಸಂಜೆ 5 ಗಂಟೆಯೊಳಗೆ ಆಸಕ್ತ ಆಟಗಾರರು ಹೆಸರು ರಿಜಿಸ್ಟರ್ ಮಾಡಿಕೊಳ್ಳಲು ಬಿಸಿಸಿಐ ಸೂಚಿಸಿದೆ.

2 / 7
ಡಿಸೆಂಬರ್ 15 ಕೊನೆಯ ದಿನಾಂಕವಾಗಿದ್ದು, ಆ ಬಳಿಕ ಹೆಸರು ನೀಡುವ ಆಟಗಾರರನ್ನು ಹರಾಜಿಗಾಗಿ ಪರಿಗಣಿಸಲಾಗುವುದಿಲ್ಲ. ಹೀಗಾಗಿ ಮುಂದಿನ ತಿಂಗಳ 15 ರೊಳಗೆ ಎಲ್ಲಾ ಆಟಗಾರರು ಮಿನಿ ಹರಾಜಿಗಾಗಿ ಹೆಸರು ನೀಡುವ ನಿರೀಕ್ಷೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್ 15 ಕೊನೆಯ ದಿನಾಂಕವಾಗಿದ್ದು, ಆ ಬಳಿಕ ಹೆಸರು ನೀಡುವ ಆಟಗಾರರನ್ನು ಹರಾಜಿಗಾಗಿ ಪರಿಗಣಿಸಲಾಗುವುದಿಲ್ಲ. ಹೀಗಾಗಿ ಮುಂದಿನ ತಿಂಗಳ 15 ರೊಳಗೆ ಎಲ್ಲಾ ಆಟಗಾರರು ಮಿನಿ ಹರಾಜಿಗಾಗಿ ಹೆಸರು ನೀಡುವ ನಿರೀಕ್ಷೆಯಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

3 / 7
ಇನ್ನು ಮಿನಿ ಹರಾಜಿಗಾಗಿ ಹೆಸರು ನೋಂದಣಿ ದಿನಾಂಕ ಫಿಕ್ಸ್ ಆಗುತ್ತಿದ್ದಂತೆ, ಅತ್ತ ಇಂಗ್ಲೆಂಡ್​ ತಂಡದ ಆಲ್​ರೌಂಡರ್ ಬೆನ್​ ಸ್ಟೋನ್ಸ್ ಹಾಗೂ ಜೋ ರೂಟ್ ತಮ್ಮ ಹೆಸರುಗಳನ್ನು ರಿಜಿಸ್ಟರ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮಿನಿ ಹರಾಜಿಗಾಗಿ ಹೆಸರು ನೋಂದಣಿ ದಿನಾಂಕ ಫಿಕ್ಸ್ ಆಗುತ್ತಿದ್ದಂತೆ, ಅತ್ತ ಇಂಗ್ಲೆಂಡ್​ ತಂಡದ ಆಲ್​ರೌಂಡರ್ ಬೆನ್​ ಸ್ಟೋನ್ಸ್ ಹಾಗೂ ಜೋ ರೂಟ್ ತಮ್ಮ ಹೆಸರುಗಳನ್ನು ರಿಜಿಸ್ಟರ್ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

4 / 7
ಈ ಬಾರಿ ಸುಮಾರು 250 ಆಟಗಾರರು ಹೆಸರು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆಯಿದೆ. ಅವರಲ್ಲಿ ಕೆಲವೇ ಕೆಲವು ಆಟಗಾರರಿಗೆ ಮಾತ್ರ ಅವಕಾಶ ಸಿಗಲಿದೆ. ಏಕೆಂದರೆ ಈ ಬಾರಿ ಮಿನಿ ಹರಾಜು ನಡೆಯಲಿದ್ದು, ಹೀಗಾಗಿ ಆಯಾ ತಂಡಗಳಲ್ಲಿ ಖಾಲಿ ಇರುವ ಸ್ಥಾನಗಳಿಗಾಗಿ ಬಿಡ್ಡಿಂಗ್ ಜರುಗಲಿದೆ.

ಈ ಬಾರಿ ಸುಮಾರು 250 ಆಟಗಾರರು ಹೆಸರು ನೋಂದಣಿ ಮಾಡಿಕೊಳ್ಳುವ ನಿರೀಕ್ಷೆಯಿದೆ. ಅವರಲ್ಲಿ ಕೆಲವೇ ಕೆಲವು ಆಟಗಾರರಿಗೆ ಮಾತ್ರ ಅವಕಾಶ ಸಿಗಲಿದೆ. ಏಕೆಂದರೆ ಈ ಬಾರಿ ಮಿನಿ ಹರಾಜು ನಡೆಯಲಿದ್ದು, ಹೀಗಾಗಿ ಆಯಾ ತಂಡಗಳಲ್ಲಿ ಖಾಲಿ ಇರುವ ಸ್ಥಾನಗಳಿಗಾಗಿ ಬಿಡ್ಡಿಂಗ್ ಜರುಗಲಿದೆ.

5 / 7
ಇನ್ನು ಈ ಬಾರಿಯ ಮಿನಿ ಹರಾಜಿನಲ್ಲಿ ಸ್ಟಾರ್ ಆಟಗಾರರಾಗಿ ಇಂಗ್ಲೆಂಡ್​ನ ಬೆನ್​ ಸ್ಟೋಕ್ಸ್, ಸ್ಯಾಮ್ ಕರನ್, ಜೋ ರೂಟ್ ಹಾಗೂ ಆಸ್ಟ್ರೇಲಿಯಾದ ಯುವ ಆಲ್​ರೌಂಡರ್ ಕ್ಯಾಮರೂನ್ ಗ್ರೀನ್ ಹೆಸರುಗಳು ಕಾಣಿಸಿಕೊಳ್ಳಲಿವೆ.

ಇನ್ನು ಈ ಬಾರಿಯ ಮಿನಿ ಹರಾಜಿನಲ್ಲಿ ಸ್ಟಾರ್ ಆಟಗಾರರಾಗಿ ಇಂಗ್ಲೆಂಡ್​ನ ಬೆನ್​ ಸ್ಟೋಕ್ಸ್, ಸ್ಯಾಮ್ ಕರನ್, ಜೋ ರೂಟ್ ಹಾಗೂ ಆಸ್ಟ್ರೇಲಿಯಾದ ಯುವ ಆಲ್​ರೌಂಡರ್ ಕ್ಯಾಮರೂನ್ ಗ್ರೀನ್ ಹೆಸರುಗಳು ಕಾಣಿಸಿಕೊಳ್ಳಲಿವೆ.

6 / 7
 ಡಿಸೆಂಬರ್ 23 ರಂದು ಒಟ್ಟು ಮೊತ್ತ 95 ಕೋಟಿ ರೂ. ನಲ್ಲಿ ಆಯಾ ಫ್ರಾಂಚೈಸಿ ಬಳಿ ಉಳಿದಿರುವ ಮೊತ್ತದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಅದರಂತೆ ಯಾವ ತಂಡಕ್ಕೆ ಯಾರು ಸೇರ್ಪಡೆಯಾಗಲಿದ್ದಾರೆ ಕಾದು ನೋಡಬೇಕಿದೆ.

ಡಿಸೆಂಬರ್ 23 ರಂದು ಒಟ್ಟು ಮೊತ್ತ 95 ಕೋಟಿ ರೂ. ನಲ್ಲಿ ಆಯಾ ಫ್ರಾಂಚೈಸಿ ಬಳಿ ಉಳಿದಿರುವ ಮೊತ್ತದಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ. ಅದರಂತೆ ಯಾವ ತಂಡಕ್ಕೆ ಯಾರು ಸೇರ್ಪಡೆಯಾಗಲಿದ್ದಾರೆ ಕಾದು ನೋಡಬೇಕಿದೆ.

7 / 7
Web contact
Web contact

TV9 Kannada

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ