AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Auction: ಮಿನಿ ಹರಾಜಿನಲ್ಲಿ ಈ ಆಟಗಾರರಿಗೆ ಹೆಚ್ಚು ಹಣ ಸಿಗುವುದು ಅನುಮಾನ

TV9 Web
| Edited By: |

Updated on: Dec 12, 2022 | 1:57 PM

Share
16ನೇ ಆವೃತ್ತಿಯ ಐಪಿಎಲ್​ನ ಮಿನಿ ಹರಾಜು 23 ರಂದು ಕೊಚ್ಚಿಯಲ್ಲಿ ನಡೆಯಲಿದ್ದು ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ಯಾವ ಆಟಗಾರನ ಮೇಲೆ ಎಷ್ಟು ಹಣವನ್ನು ಹೂಡಿಕೆ ಮಾಡಬೇಕೆಂದು ಫ್ರಾಂಚೈಸಿಗಳು ತಮ್ಮ ಸಿದ್ಧತೆಗಳನ್ನು ಮಾಡಿಕೊಂಡಿವೆ. ಆದರೆ ಮಿನಿ ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವ ಹಲವು ಆಟಗಾರರು ಹರಾಜಾಗದೆ ಉಳಿಯಬಹುದು. ಇನ್ನು ಕೆಲವು ಆಟಗಾರರು ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾದರೂ ಇವರಿಗೆ ಪಂದ್ಯದ ಮೇಲೆ ಪರಿಣಾಮ ಬೀರಬಹುವ ಸಾಮರ್ಥ್ಯ ಹೊಂದಿದ್ದಾರೆ.

16ನೇ ಆವೃತ್ತಿಯ ಐಪಿಎಲ್​ನ ಮಿನಿ ಹರಾಜು 23 ರಂದು ಕೊಚ್ಚಿಯಲ್ಲಿ ನಡೆಯಲಿದ್ದು ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ. ಯಾವ ಆಟಗಾರನ ಮೇಲೆ ಎಷ್ಟು ಹಣವನ್ನು ಹೂಡಿಕೆ ಮಾಡಬೇಕೆಂದು ಫ್ರಾಂಚೈಸಿಗಳು ತಮ್ಮ ಸಿದ್ಧತೆಗಳನ್ನು ಮಾಡಿಕೊಂಡಿವೆ. ಆದರೆ ಮಿನಿ ಹರಾಜಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವ ಹಲವು ಆಟಗಾರರು ಹರಾಜಾಗದೆ ಉಳಿಯಬಹುದು. ಇನ್ನು ಕೆಲವು ಆಟಗಾರರು ಅತ್ಯಂತ ಕಡಿಮೆ ಬೆಲೆಗೆ ಮಾರಾಟವಾದರೂ ಇವರಿಗೆ ಪಂದ್ಯದ ಮೇಲೆ ಪರಿಣಾಮ ಬೀರಬಹುವ ಸಾಮರ್ಥ್ಯ ಹೊಂದಿದ್ದಾರೆ.

1 / 6
ತಮ್ಮ ಮೂಲ ಬೆಲೆಯನ್ನು 50 ಲಕ್ಷ ರೂ.ಗೆ ಇಟ್ಟುಕೊಂಡಿರುವ ಆಟಗಾರರಲ್ಲಿ ಅಜಿಂಕ್ಯ ರಹಾನೆ ಕೂಡ ಇದ್ದಾರೆ. ರಹಾನೆ ಕಳೆದ ಸೀಸನ್​ನಲ್ಲಿ ಕೋಲ್ಕತಾ ಪರ ಆಡಿದ್ದರು. ಕಳೆದ ವರ್ಷ ಕೋಲ್ಕತಾ ಅವರಿಗೆ ಒಂದು ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ ಈ ಬಾರಿ ಹರಾಜಿಗೂ ಮುನ್ನ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಹೆಚ್ಚು ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗದ ರಹಾನೆಗೆ ಈ ಬಾರಿ ಹೆಚ್ಚು ಹಣ ಸಿಗದೇ ಇರಬಹುದು. ಆದರೆ ರಹಾನೆಗೆ ಏಕಾಂಗಿಯಾಗಿ ಪಂದ್ಯವನ್ನು ಬದಲಿಸುವ ಸಾಮರ್ಥ್ಯವಿದೆ.

ತಮ್ಮ ಮೂಲ ಬೆಲೆಯನ್ನು 50 ಲಕ್ಷ ರೂ.ಗೆ ಇಟ್ಟುಕೊಂಡಿರುವ ಆಟಗಾರರಲ್ಲಿ ಅಜಿಂಕ್ಯ ರಹಾನೆ ಕೂಡ ಇದ್ದಾರೆ. ರಹಾನೆ ಕಳೆದ ಸೀಸನ್​ನಲ್ಲಿ ಕೋಲ್ಕತಾ ಪರ ಆಡಿದ್ದರು. ಕಳೆದ ವರ್ಷ ಕೋಲ್ಕತಾ ಅವರಿಗೆ ಒಂದು ಕೋಟಿ ರೂ. ನೀಡಿ ಖರೀದಿಸಿತ್ತು. ಆದರೆ ಈ ಬಾರಿ ಹರಾಜಿಗೂ ಮುನ್ನ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿದೆ. ಹೆಚ್ಚು ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗದ ರಹಾನೆಗೆ ಈ ಬಾರಿ ಹೆಚ್ಚು ಹಣ ಸಿಗದೇ ಇರಬಹುದು. ಆದರೆ ರಹಾನೆಗೆ ಏಕಾಂಗಿಯಾಗಿ ಪಂದ್ಯವನ್ನು ಬದಲಿಸುವ ಸಾಮರ್ಥ್ಯವಿದೆ.

2 / 6
ತನ್ನ ಮೂಲ ಬೆಲೆಯನ್ನು 50 ಲಕ್ಷಕ್ಕೆ ನಿಗದಿಪಡಿಸಿರುವ ಮಾಯಾಂಕ್ ಮಾರ್ಕಂಡೆಗೂ ಹೆಚ್ಚು ಬೇಡಿಕೆ ಇಲ್ಲ. 2018 ರಲ್ಲಿ ಮುಂಬೈ ಪರ ತನ್ನ ಸಾಮರ್ಥ್ಯ ತೋರಿದ್ದ ಮಾಯಾಂಕ್ 14 ಪಂದ್ಯಗಳಲ್ಲಿ 15 ವಿಕೆಟ್ ಪಡೆದು ಮಿಂಚಿದ್ದರು. ಆ ನಂತರ ಅವರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಆದರೆ ತನ್ನ ಮ್ಯಾಜಿಕ್ ಸ್ಪಿನ್ ಮೂಲಕ ತಂಡಕ್ಕೆ ಗೆಲುವು ತಂದುಕೊಡುವ ಚಾಣಕ್ಷತೆ ಮಾಯಾಂಕ್​ಗೆ ಇದೆ.

ತನ್ನ ಮೂಲ ಬೆಲೆಯನ್ನು 50 ಲಕ್ಷಕ್ಕೆ ನಿಗದಿಪಡಿಸಿರುವ ಮಾಯಾಂಕ್ ಮಾರ್ಕಂಡೆಗೂ ಹೆಚ್ಚು ಬೇಡಿಕೆ ಇಲ್ಲ. 2018 ರಲ್ಲಿ ಮುಂಬೈ ಪರ ತನ್ನ ಸಾಮರ್ಥ್ಯ ತೋರಿದ್ದ ಮಾಯಾಂಕ್ 14 ಪಂದ್ಯಗಳಲ್ಲಿ 15 ವಿಕೆಟ್ ಪಡೆದು ಮಿಂಚಿದ್ದರು. ಆ ನಂತರ ಅವರು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಆದರೆ ತನ್ನ ಮ್ಯಾಜಿಕ್ ಸ್ಪಿನ್ ಮೂಲಕ ತಂಡಕ್ಕೆ ಗೆಲುವು ತಂದುಕೊಡುವ ಚಾಣಕ್ಷತೆ ಮಾಯಾಂಕ್​ಗೆ ಇದೆ.

3 / 6
ಕೋಲ್ಕತಾ ನೈಟ್ ರೈಡರ್ಸ್ ಪರ ಆಡುತ್ತಿದ್ದ ಸಂದೀಪ್ ವಾರಿಯರ್ ಈ ಬಾರಿ ತನ್ನ ಮೂಲ ಬೆಲೆಯನ್ನು 50 ಲಕ್ಷಕ್ಕೆ ನಿಗದಿಪಡಿಸಿದ್ದಾರೆ. ಇದುವರೆಗೆ ಬೌಲಿಂಗ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ವಾರಿಯರ್​ಗೆ ಅವಶ್ಯಕ ಸಂದರ್ಭಗಳಿಗೆ ರನ್​ಗಳಿಗೆ ಕಡಿವಾಣ ಹಾಕುವ ಸಾಮರ್ಥ್ಯವಿದೆ.

ಕೋಲ್ಕತಾ ನೈಟ್ ರೈಡರ್ಸ್ ಪರ ಆಡುತ್ತಿದ್ದ ಸಂದೀಪ್ ವಾರಿಯರ್ ಈ ಬಾರಿ ತನ್ನ ಮೂಲ ಬೆಲೆಯನ್ನು 50 ಲಕ್ಷಕ್ಕೆ ನಿಗದಿಪಡಿಸಿದ್ದಾರೆ. ಇದುವರೆಗೆ ಬೌಲಿಂಗ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ವಾರಿಯರ್​ಗೆ ಅವಶ್ಯಕ ಸಂದರ್ಭಗಳಿಗೆ ರನ್​ಗಳಿಗೆ ಕಡಿವಾಣ ಹಾಕುವ ಸಾಮರ್ಥ್ಯವಿದೆ.

4 / 6
ಕಳೆದ ಬಾರಿಯೂ ಹರಾಜಿಗೆ ತಮ್ಮ ಹೆಸರನ್ನು ನೊಂದಾಯಿಸಿದ್ದ ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್​ರನ್ನು ಖರೀದಿಸಲು ಯಾರು ಮುಂದೆ ಬರಲಿಲ್ಲ. ಈ ಬಾರಿ ತಮ್ಮ ಮೂಲ ಬೆಲೆಯನ್ನು ಒಂದು ಕೋಟಿಗೆ ನಿಗದಿಪಡಿಸಿರುವ ರೆಹಮಾನ್​ರನ್ನು ಖರೀದಿ ಮಾಡಲು ಫ್ರಾಂಚೈಸಿಗಳು ಮುಂದಾಗಬಹುದು. ಏಕೆಂದರೆ ಅಫ್ಘಾನ್ ಪರ ರೆಹಮಾನ್ ತನ್ನ ಸ್ಪಿನ್ ಮ್ಯಾಜಿಕ್​ನಿಂದ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.

ಕಳೆದ ಬಾರಿಯೂ ಹರಾಜಿಗೆ ತಮ್ಮ ಹೆಸರನ್ನು ನೊಂದಾಯಿಸಿದ್ದ ಅಫ್ಘಾನಿಸ್ತಾನದ ಮುಜೀಬ್ ಉರ್ ರೆಹಮಾನ್​ರನ್ನು ಖರೀದಿಸಲು ಯಾರು ಮುಂದೆ ಬರಲಿಲ್ಲ. ಈ ಬಾರಿ ತಮ್ಮ ಮೂಲ ಬೆಲೆಯನ್ನು ಒಂದು ಕೋಟಿಗೆ ನಿಗದಿಪಡಿಸಿರುವ ರೆಹಮಾನ್​ರನ್ನು ಖರೀದಿ ಮಾಡಲು ಫ್ರಾಂಚೈಸಿಗಳು ಮುಂದಾಗಬಹುದು. ಏಕೆಂದರೆ ಅಫ್ಘಾನ್ ಪರ ರೆಹಮಾನ್ ತನ್ನ ಸ್ಪಿನ್ ಮ್ಯಾಜಿಕ್​ನಿಂದ ಹಲವು ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.

5 / 6
ರಾಜಸ್ಥಾನ ರಾಯಲ್ಸ್ ತಂಡದಿಂದ ಗೇಟ್​ಪಾಸ್ ಪಡೆದುಕೊಂಡಿರುವ ರಾಸಿ ವ್ಯಾನ್ ಡೆರ್ ಡಸ್ಸೆನ್ ತನ್ನ ಮೂಲ ಬೆಲೆಯನ್ನು 2 ಕೋಟಿಗೆ ಇರಿಸಿಕೊಂಡಿದ್ದಾರೆ. ವಾಸ್ತವವಾಗಿ ಈ ಆಫ್ರಿಕನ್ ಆಟಗಾರ ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿದ್ದು, ಕ್ರೀಸ್​ನಲ್ಲಿ ಕಚ್ಚಿ ನಿಂತರೆ ರನ್ ಮಳೆ ಹರಿಸುವ ಕಲೆ ಈ ಆಟಗಾರನಿಗೆ ತಿಳಿದಿದೆ.

ರಾಜಸ್ಥಾನ ರಾಯಲ್ಸ್ ತಂಡದಿಂದ ಗೇಟ್​ಪಾಸ್ ಪಡೆದುಕೊಂಡಿರುವ ರಾಸಿ ವ್ಯಾನ್ ಡೆರ್ ಡಸ್ಸೆನ್ ತನ್ನ ಮೂಲ ಬೆಲೆಯನ್ನು 2 ಕೋಟಿಗೆ ಇರಿಸಿಕೊಂಡಿದ್ದಾರೆ. ವಾಸ್ತವವಾಗಿ ಈ ಆಫ್ರಿಕನ್ ಆಟಗಾರ ಹೊಡಿಬಡಿ ಆಟಕ್ಕೆ ಹೆಸರುವಾಸಿಯಾಗಿದ್ದು, ಕ್ರೀಸ್​ನಲ್ಲಿ ಕಚ್ಚಿ ನಿಂತರೆ ರನ್ ಮಳೆ ಹರಿಸುವ ಕಲೆ ಈ ಆಟಗಾರನಿಗೆ ತಿಳಿದಿದೆ.

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ