AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 6 ರನ್​​ಗಳನ್ನು ನೀಡಿ..ಎಲ್ಲಾ ವಿವಾದ ಕೊನೆಗೊಳ್ಳುತ್ತೆ ಎಂದ ಬೆನ್ ಸ್ಟೋಕ್ಸ್

IPL 2023 Kannada: ರವಿ ಬಿಷ್ಣೋಯ್ ಕ್ರೀಸ್​ ಅನ್ನು ಬೇಗನೆ ಬಿಡುತ್ತಿದ್ದಾರೆ. ಇದಾಗ್ಯೂ ನಾನ್ ಸ್ಟ್ರೈಕ್​ನಲ್ಲಿ ರನೌಟ್ ಮಾಡಬಾರದು ಎಂದು ಹೇಳುವವರು ಇನ್ನೂ ಸಹ ಇದ್ದಾರೆಯೇ?

TV9 Web
| Edited By: |

Updated on: Apr 12, 2023 | 3:30 PM

Share
IPL 2023: ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೊನೆಯ ಎಸೆತದಲ್ಲಿ ಜಯ ಸಾಧಿಸಿತ್ತು. ಆದರೆ ಈ ಪಂದ್ಯವನ್ನು ಟೈ ಮಾಡಿಕೊಳ್ಳುವ ಉತ್ತಮ ಅವಕಾಶ ಆರ್​ಸಿಬಿ ಮುಂದಿತ್ತು. ಆದರೆ ನಾನ್​ ಸ್ಟ್ರೈಕ್​ನಲ್ಲಿ ರವಿ ಬಿಷ್ಣೋಯ್ ಅವರನ್ನು ರನೌಟ್ ಮಾಡುವಲ್ಲಿ ಹರ್ಷಲ್ ಪಟೇಲ್ ವಿಫಲರಾಗಿದ್ದರು.

IPL 2023: ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕೊನೆಯ ಎಸೆತದಲ್ಲಿ ಜಯ ಸಾಧಿಸಿತ್ತು. ಆದರೆ ಈ ಪಂದ್ಯವನ್ನು ಟೈ ಮಾಡಿಕೊಳ್ಳುವ ಉತ್ತಮ ಅವಕಾಶ ಆರ್​ಸಿಬಿ ಮುಂದಿತ್ತು. ಆದರೆ ನಾನ್​ ಸ್ಟ್ರೈಕ್​ನಲ್ಲಿ ರವಿ ಬಿಷ್ಣೋಯ್ ಅವರನ್ನು ರನೌಟ್ ಮಾಡುವಲ್ಲಿ ಹರ್ಷಲ್ ಪಟೇಲ್ ವಿಫಲರಾಗಿದ್ದರು.

1 / 6
ಒಂದು ವೇಳೆ ರವಿ ಬಿಷ್ಣೋಯ್ ಕೊನೆಯ ಎಸೆತದ ವೇಳೆ ರನೌಟ್ ಆಗಿದ್ದರೆ ಪಂದ್ಯವು ಸೂಪರ್​ ಓವರ್​ನತ್ತ ಸಾಗುತ್ತಿತ್ತು. ಆದರೆ ಹೀಗೆ ಸಿಕ್ಕ ಅವಕಾಶದಲ್ಲಿ ಆರ್​ಸಿಬಿ ವೇಗಿ ಸಂಪೂರ್ಣವಾಗಿ ವಿಫಲರಾಗಿದ್ದರು. ಇದಾಗ್ಯೂ ನಿರ್ಣಾಯಕ ಹಂತದಲ್ಲಿ ಹರ್ಷಲ್ ಪಟೇಲ್ ಅವರು ಮಂಕಡ್ ರನೌಟ್​ಗೆ ಮುಂದಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

ಒಂದು ವೇಳೆ ರವಿ ಬಿಷ್ಣೋಯ್ ಕೊನೆಯ ಎಸೆತದ ವೇಳೆ ರನೌಟ್ ಆಗಿದ್ದರೆ ಪಂದ್ಯವು ಸೂಪರ್​ ಓವರ್​ನತ್ತ ಸಾಗುತ್ತಿತ್ತು. ಆದರೆ ಹೀಗೆ ಸಿಕ್ಕ ಅವಕಾಶದಲ್ಲಿ ಆರ್​ಸಿಬಿ ವೇಗಿ ಸಂಪೂರ್ಣವಾಗಿ ವಿಫಲರಾಗಿದ್ದರು. ಇದಾಗ್ಯೂ ನಿರ್ಣಾಯಕ ಹಂತದಲ್ಲಿ ಹರ್ಷಲ್ ಪಟೇಲ್ ಅವರು ಮಂಕಡ್ ರನೌಟ್​ಗೆ ಮುಂದಾಗಿರುವುದು ಹೊಸ ಚರ್ಚೆಗೆ ಕಾರಣವಾಗಿದೆ.

2 / 6
ಈ ಚರ್ಚೆಗಳ ನಡುವೆ ಖ್ಯಾತ ಕಮೆಂಟೇಟರ್ ಹರ್ಷ ಬೋಗ್ಲೆ ಮಾಡಿರುವ ಟ್ವೀಟ್ ಕೂಡ ವೈರಲ್ ಆಗಿದೆ. ರವಿ ಬಿಷ್ಣೋಯ್ ಕ್ರೀಸ್​ ಅನ್ನು ಬೇಗನೆ ಬಿಡುತ್ತಿದ್ದಾರೆ. ಇದಾಗ್ಯೂ ನಾನ್ ಸ್ಟ್ರೈಕ್​ನಲ್ಲಿ ರನೌಟ್ ಮಾಡಬಾರದು ಎಂದು ಹೇಳುವವರು ಇನ್ನೂ ಸಹ ಇದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ. ಈ ಟ್ವೀಟ್​ ಸಿಎಸ್​ಕೆ ತಂಡದ ಸ್ಟಾರ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಪ್ರತಿಕ್ರಿಯಿಸಿದ್ದಾರೆ.

ಈ ಚರ್ಚೆಗಳ ನಡುವೆ ಖ್ಯಾತ ಕಮೆಂಟೇಟರ್ ಹರ್ಷ ಬೋಗ್ಲೆ ಮಾಡಿರುವ ಟ್ವೀಟ್ ಕೂಡ ವೈರಲ್ ಆಗಿದೆ. ರವಿ ಬಿಷ್ಣೋಯ್ ಕ್ರೀಸ್​ ಅನ್ನು ಬೇಗನೆ ಬಿಡುತ್ತಿದ್ದಾರೆ. ಇದಾಗ್ಯೂ ನಾನ್ ಸ್ಟ್ರೈಕ್​ನಲ್ಲಿ ರನೌಟ್ ಮಾಡಬಾರದು ಎಂದು ಹೇಳುವವರು ಇನ್ನೂ ಸಹ ಇದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ. ಈ ಟ್ವೀಟ್​ ಸಿಎಸ್​ಕೆ ತಂಡದ ಸ್ಟಾರ್ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಪ್ರತಿಕ್ರಿಯಿಸಿದ್ದಾರೆ.

3 / 6
ಹರ್ಷ ಬೋಗ್ಲೆ ಅವರ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಬೆನ್ ಸ್ಟೋಕ್ಸ್, ಇದು ಅಂಪೈರ್​ಗಳ ನಿರ್ಧಾರಕ್ಕೆ ಬಿಟ್ಟಂತಹ ವಿಷಯ. ಆದರೆ ನಾನ್​ ಸ್ಟ್ರೈಕರ್​ ಬೇಗನೆ ಕ್ರೀಸ್ ಬಿಟ್ಟು ಸಂಪೂರ್ಣ ಲಾಭ ಪಡೆಯಲು ಪ್ರಯತ್ನಿಸಿದಾಗ 6 ರನ್​ಗಳ ಪೆನಾಲ್ಟಿ ನೀಡಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಈ ಸಮಸ್ಯೆಗೆ ಪರಿಹಾರ ಕಾಣಬಹುದು ಎಂಬುದು ಬೆನ್​ ಸ್ಟೋಕ್ಸ್ ಇಂಗಿತ.

ಹರ್ಷ ಬೋಗ್ಲೆ ಅವರ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿರುವ ಬೆನ್ ಸ್ಟೋಕ್ಸ್, ಇದು ಅಂಪೈರ್​ಗಳ ನಿರ್ಧಾರಕ್ಕೆ ಬಿಟ್ಟಂತಹ ವಿಷಯ. ಆದರೆ ನಾನ್​ ಸ್ಟ್ರೈಕರ್​ ಬೇಗನೆ ಕ್ರೀಸ್ ಬಿಟ್ಟು ಸಂಪೂರ್ಣ ಲಾಭ ಪಡೆಯಲು ಪ್ರಯತ್ನಿಸಿದಾಗ 6 ರನ್​ಗಳ ಪೆನಾಲ್ಟಿ ನೀಡಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಈ ಮೂಲಕ ಈ ಸಮಸ್ಯೆಗೆ ಪರಿಹಾರ ಕಾಣಬಹುದು ಎಂಬುದು ಬೆನ್​ ಸ್ಟೋಕ್ಸ್ ಇಂಗಿತ.

4 / 6
ಅಂದರೆ ಬೌಲರ್​ ಚೆಂಡೆಸೆಯುವ ಮುನ್ನವೇ ನಾನ್ ಸ್ಟ್ರೈಕರ್ ಕ್ರೀಸ್ ಬಿಟ್ಟರೆ, ಎದುರಾಳಿ ತಂಡಕ್ಕೆ 5 ರನ್ ನೀಡಬೇಕು. ಅಥವಾ ಬ್ಯಾಟಿಂಗ್ ತಂಡದ 5 ರನ್​ ಕಡಿತಗೊಳಿಸಬೇಕು. ಇದರಿಂದ ಮಂಕಡ್ ರನೌಟ್​ಗೆ ಅವಕಾಶವೇ ನಿರ್ಮಾಣವಾಗುವುದಿಲ್ಲ. ಅಷ್ಟೇ ಅಲ್ಲದೆ ಇದರಿಂದ ನಾನ್ ಸ್ಟ್ರೈಕರ್ ಬೇಗನೆ ಓಡುವುದು ಕೂಡ ತಪ್ಪುತ್ತದೆ. ಹಾಗೆಯೇ ವಿವಾದ ಕೂಡ ಇರುವುದಿಲ್ಲ ಎಂದು ಬೆನ್ ಸ್ಟೋಕ್ಸ್ ಅಭಿಪ್ರಾಯಪಟ್ಟಿದ್ದಾರೆ.

ಅಂದರೆ ಬೌಲರ್​ ಚೆಂಡೆಸೆಯುವ ಮುನ್ನವೇ ನಾನ್ ಸ್ಟ್ರೈಕರ್ ಕ್ರೀಸ್ ಬಿಟ್ಟರೆ, ಎದುರಾಳಿ ತಂಡಕ್ಕೆ 5 ರನ್ ನೀಡಬೇಕು. ಅಥವಾ ಬ್ಯಾಟಿಂಗ್ ತಂಡದ 5 ರನ್​ ಕಡಿತಗೊಳಿಸಬೇಕು. ಇದರಿಂದ ಮಂಕಡ್ ರನೌಟ್​ಗೆ ಅವಕಾಶವೇ ನಿರ್ಮಾಣವಾಗುವುದಿಲ್ಲ. ಅಷ್ಟೇ ಅಲ್ಲದೆ ಇದರಿಂದ ನಾನ್ ಸ್ಟ್ರೈಕರ್ ಬೇಗನೆ ಓಡುವುದು ಕೂಡ ತಪ್ಪುತ್ತದೆ. ಹಾಗೆಯೇ ವಿವಾದ ಕೂಡ ಇರುವುದಿಲ್ಲ ಎಂದು ಬೆನ್ ಸ್ಟೋಕ್ಸ್ ಅಭಿಪ್ರಾಯಪಟ್ಟಿದ್ದಾರೆ.

5 / 6
ಸದ್ಯ ಬೆನ್ ಸ್ಟೋಕ್ಸ್ ನೀಡಿರುವ ಈ ಅತ್ಯುತ್ತಮ ಸಲಹೆ ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಸಲಹೆಯನ್ನು ಮುಂದೆ ಕ್ರಿಕೆಟ್​ ನಿಯಮಗಳಲ್ಲಿ ಅಳವಡಿಸಿದರೆ ಮಂಕಡ್ ರನೌಟ್ ವಿವಾದವೇ ದೂರವಾಗಲಿದೆ ಎಂದು ಅನೇಕರು ಅಭಿಮತ ವ್ಯಕ್ತಪಡಿಸಿದ್ದಾರೆ.

ಸದ್ಯ ಬೆನ್ ಸ್ಟೋಕ್ಸ್ ನೀಡಿರುವ ಈ ಅತ್ಯುತ್ತಮ ಸಲಹೆ ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದೇ ಸಲಹೆಯನ್ನು ಮುಂದೆ ಕ್ರಿಕೆಟ್​ ನಿಯಮಗಳಲ್ಲಿ ಅಳವಡಿಸಿದರೆ ಮಂಕಡ್ ರನೌಟ್ ವಿವಾದವೇ ದೂರವಾಗಲಿದೆ ಎಂದು ಅನೇಕರು ಅಭಿಮತ ವ್ಯಕ್ತಪಡಿಸಿದ್ದಾರೆ.

6 / 6
Web contact
Web contact

TV9 Kannada

Read More
Follow Us
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್