AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ನಿಟ್ಟುಸಿರು ಬಿಟ್ಟ ಸಿಎಸ್​ಕೆ; ಚಿಂತಿಸಬೇಡಿ, ನಾನು ಐಪಿಎಲ್‌ನಲ್ಲಿ ಆಡಲಿದ್ದೇನೆ ಎಂದ ಸ್ಟಾರ್ ಆಲ್​ರೌಂಡರ್..!

IPL 2023: ತಂಡದ ಸ್ಟಾರ್ ವೇಗಿ ಕೈಲ್ ಜೇಮಿಸನ್ ಈಗಾಗಲೇ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಈ ನಡುವೆ ಇಂಗ್ಲೆಂಡ್ ಸ್ಫೋಟಕ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಕೂಡ ಐಪಿಎಲ್​ನಿಂದ ಹೊರಬಿಳಲಿದ್ದಾರೆ ಎಂಬ ಸುದ್ದಿ ಇತ್ತು.

ಪೃಥ್ವಿಶಂಕರ
|

Updated on: Mar 01, 2023 | 11:27 AM

Share
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂದಿನ ಸೀಸನ್​ಗಾಗಿ ಬರದ ಸಿದ್ದತೆ ಆರಂಭವಾಗಿದೆ. ಈಗಾಗಲೇ ಕೆಲವು ತಂಡಗಳು ಅಭ್ಯಾಸ ಆರಂಭಿಸಿವೆ. ಆದರೆ ಈ ನಡುವೆ ಕೆಲವು ತಂಡದಲ್ಲಿ ಆಟಗಾರರ ಇಂಜುರಿ ಫ್ರಾಂಚೈಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ ಮುಂದಿನ ಸೀಸನ್​ಗಾಗಿ ಬರದ ಸಿದ್ದತೆ ಆರಂಭವಾಗಿದೆ. ಈಗಾಗಲೇ ಕೆಲವು ತಂಡಗಳು ಅಭ್ಯಾಸ ಆರಂಭಿಸಿವೆ. ಆದರೆ ಈ ನಡುವೆ ಕೆಲವು ತಂಡದಲ್ಲಿ ಆಟಗಾರರ ಇಂಜುರಿ ಫ್ರಾಂಚೈಸಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

1 / 6
ಆಟಗಾರರ ಇಂಜುರಿಯಿಂದ ಬಳಲುತ್ತಿರುವ ತಂಡಗಳಲ್ಲಿ ಸಿಎಸ್​ಕೆ ಕೂಡ ಒಂದಾಗಿದ್ದು, ತಂಡದ ಸ್ಟಾರ್ ವೇಗಿ ಕೈಲ್ ಜೇಮಿಸನ್ ಈಗಾಗಲೇ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಈ ನಡುವೆ ಇಂಗ್ಲೆಂಡ್ ಸ್ಫೋಟಕ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಕೂಡ ಐಪಿಎಲ್​ನಿಂದ ಹೊರಬಿಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಇದಕ್ಕೆಲ್ಲ ಸ್ವತಃ ಸ್ಟೋಕ್ಸ್ ಅವರೇ ವಿವರಣೆ ನೀಡಿದ್ದಾರೆ.

ಆಟಗಾರರ ಇಂಜುರಿಯಿಂದ ಬಳಲುತ್ತಿರುವ ತಂಡಗಳಲ್ಲಿ ಸಿಎಸ್​ಕೆ ಕೂಡ ಒಂದಾಗಿದ್ದು, ತಂಡದ ಸ್ಟಾರ್ ವೇಗಿ ಕೈಲ್ ಜೇಮಿಸನ್ ಈಗಾಗಲೇ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಈ ನಡುವೆ ಇಂಗ್ಲೆಂಡ್ ಸ್ಫೋಟಕ ಆಲ್​ರೌಂಡರ್ ಬೆನ್​ ಸ್ಟೋಕ್ಸ್​ ಕೂಡ ಐಪಿಎಲ್​ನಿಂದ ಹೊರಬಿಳಲಿದ್ದಾರೆ ಎಂಬ ಸುದ್ದಿ ಇತ್ತು. ಆದರೆ ಇದಕ್ಕೆಲ್ಲ ಸ್ವತಃ ಸ್ಟೋಕ್ಸ್ ಅವರೇ ವಿವರಣೆ ನೀಡಿದ್ದಾರೆ.

2 / 6
ವಾಸ್ತವವಾಗಿ ಬೆನ್ ಸ್ಟೋಕ್ಸ್ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಈ ಕಾರಣಕ್ಕಾಗಿ ಅವರು ಕೇವಲ ಎರಡು ಓವರ್‌ಗಳನ್ನು ಮಾತ್ರ ಬೌಲ್ ಮಾಡಲು ಸಾಧ್ಯವಾಯಿತು. ಹೀಗಾಗಿ ಸ್ಟೋಕ್ಸ್ ಐಪಿಎಲ್ ಆಡುವ ಬಗ್ಗೆ ಅನುಮಾನವಿತ್ತು.

ವಾಸ್ತವವಾಗಿ ಬೆನ್ ಸ್ಟೋಕ್ಸ್ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊಣಕಾಲಿನ ಗಾಯಕ್ಕೆ ಒಳಗಾಗಿದ್ದರು. ಈ ಕಾರಣಕ್ಕಾಗಿ ಅವರು ಕೇವಲ ಎರಡು ಓವರ್‌ಗಳನ್ನು ಮಾತ್ರ ಬೌಲ್ ಮಾಡಲು ಸಾಧ್ಯವಾಯಿತು. ಹೀಗಾಗಿ ಸ್ಟೋಕ್ಸ್ ಐಪಿಎಲ್ ಆಡುವ ಬಗ್ಗೆ ಅನುಮಾನವಿತ್ತು.

3 / 6
ಇದಕ್ಕೆಲ್ಲ ಪಂದ್ಯದ ಬಳಿಕ ಮಾಹಿತಿ ನೀಡಿದ ಸ್ಟೋಕ್ಸ್, ನಾನು ಖಂಡಿತ ಐಪಿಎಲ್ ಆಡುತ್ತೇನೆ. ನಾನು ಇಂಜುರಿಯಿಂದ ಚೇತರಿಸಿಕೊಳ್ಳಲು ಶ್ರಮಿಸುತ್ತಿದ್ದೇನೆ. ನಾನು ಫಿಸಿಯೋ ಮತ್ತು ವೈದ್ಯಕೀಯ ತಂಡದೊಂದಿಗೆ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ. ಚಿಂತಿಸಬೇಡಿ, ನಾನು ಐಪಿಎಲ್‌ನಲ್ಲಿ ಆಡಲಿದ್ದೇನೆ. ನಾನು ತರಬೇತುದಾರ ಸ್ಟೀಫನ್ ಫ್ಲೆಮಿಂಗ್ ಅವರೊಂದಿಗೆ ಮಾತನಾಡಿದ್ದೇನೆ ಎಂದಿದ್ದಾರೆ.

ಇದಕ್ಕೆಲ್ಲ ಪಂದ್ಯದ ಬಳಿಕ ಮಾಹಿತಿ ನೀಡಿದ ಸ್ಟೋಕ್ಸ್, ನಾನು ಖಂಡಿತ ಐಪಿಎಲ್ ಆಡುತ್ತೇನೆ. ನಾನು ಇಂಜುರಿಯಿಂದ ಚೇತರಿಸಿಕೊಳ್ಳಲು ಶ್ರಮಿಸುತ್ತಿದ್ದೇನೆ. ನಾನು ಫಿಸಿಯೋ ಮತ್ತು ವೈದ್ಯಕೀಯ ತಂಡದೊಂದಿಗೆ ಕಷ್ಟಪಟ್ಟು ಕೆಲಸ ಮಾಡುತ್ತಿದ್ದೇನೆ. ಚಿಂತಿಸಬೇಡಿ, ನಾನು ಐಪಿಎಲ್‌ನಲ್ಲಿ ಆಡಲಿದ್ದೇನೆ. ನಾನು ತರಬೇತುದಾರ ಸ್ಟೀಫನ್ ಫ್ಲೆಮಿಂಗ್ ಅವರೊಂದಿಗೆ ಮಾತನಾಡಿದ್ದೇನೆ ಎಂದಿದ್ದಾರೆ.

4 / 6
ಕಳೆದ ವರ್ಷ ನಡೆದ ಐಪಿಎಲ್ ಹರಾಜಿನಲ್ಲಿ ಬೆನ್ ಸ್ಟೋಕ್ಸ್ ಅವರನ್ನು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 16.25 ಕೋಟಿ ರೂ.ಗೆ ಖರೀದಿಸಿತ್ತು. ಯಾವುದೇ ಹಂತದಲ್ಲೂ ಪಂದ್ಯವನ್ನು ತಿರುಗಿಸುವ ಸಾಮಥ್ಯ್ರವಿರುವ ಸ್ಟೋಕ್ಸ್, ಚೆನ್ನೈಗೆ ಐದನೇ ಪ್ರಶಸ್ತಿಯನ್ನು ಗೆಲ್ಲಿಸಿಕೊಡುತ್ತಾರೆ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಕಳೆದ ವರ್ಷ ನಡೆದ ಐಪಿಎಲ್ ಹರಾಜಿನಲ್ಲಿ ಬೆನ್ ಸ್ಟೋಕ್ಸ್ ಅವರನ್ನು ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 16.25 ಕೋಟಿ ರೂ.ಗೆ ಖರೀದಿಸಿತ್ತು. ಯಾವುದೇ ಹಂತದಲ್ಲೂ ಪಂದ್ಯವನ್ನು ತಿರುಗಿಸುವ ಸಾಮಥ್ಯ್ರವಿರುವ ಸ್ಟೋಕ್ಸ್, ಚೆನ್ನೈಗೆ ಐದನೇ ಪ್ರಶಸ್ತಿಯನ್ನು ಗೆಲ್ಲಿಸಿಕೊಡುತ್ತಾರೆ ಎಂಬುದು ಅಭಿಮಾನಿಗಳ ಆಶಯವಾಗಿದೆ.

5 / 6
ಚೆನ್ನೈ ತಂಡದಿಂದ ಸ್ಟೋಕ್ಸ್ ಮೊದಲ ಬಾರಿಗೆ ಐಪಿಎಲ್ ಆಡಲಿದ್ದಾರೆ. ಆದರೆ ಅವರು ಧೋನಿ ಜೊತೆ ಆಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಈ ಇಬ್ಬರು ಆಟಗಾರರು 2016-17ರಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್‌ ಪರ ಒಟ್ಟಿಗೆ ಆಡಿದ್ದರು. ಆಗ ಚೆನ್ನೈ ತಂಡಕ್ಕೆ ಎರಡು ವರ್ಷ ನಿಷೇಧ ಹೇರಲಾಗಿತ್ತು. ಪುಣೆ ನಂತರ ಸ್ಟೋಕ್ಸ್ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದು, ಇದೀಗ ಚೆನ್ನೈಗೆ ಬಂದಿದ್ದಾರೆ.

ಚೆನ್ನೈ ತಂಡದಿಂದ ಸ್ಟೋಕ್ಸ್ ಮೊದಲ ಬಾರಿಗೆ ಐಪಿಎಲ್ ಆಡಲಿದ್ದಾರೆ. ಆದರೆ ಅವರು ಧೋನಿ ಜೊತೆ ಆಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಈ ಇಬ್ಬರು ಆಟಗಾರರು 2016-17ರಲ್ಲಿ ರೈಸಿಂಗ್ ಪುಣೆ ಸೂಪರ್‌ಜೈಂಟ್‌ ಪರ ಒಟ್ಟಿಗೆ ಆಡಿದ್ದರು. ಆಗ ಚೆನ್ನೈ ತಂಡಕ್ಕೆ ಎರಡು ವರ್ಷ ನಿಷೇಧ ಹೇರಲಾಗಿತ್ತು. ಪುಣೆ ನಂತರ ಸ್ಟೋಕ್ಸ್ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದು, ಇದೀಗ ಚೆನ್ನೈಗೆ ಬಂದಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​