AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಿಂದ ಹಿಂದೆ ಸರಿದ ಟೀಮ್ ಇಂಡಿಯಾದ ಇಬ್ಬರು ಆಟಗಾರರು

IPL 2023 Mini Auction: ಈ ಬಾರಿಯ ಮಿನಿ ಹರಾಜಿಗಾಗಿ ಟೀಮ್ ಇಂಡಿಯಾ ಪರ ಆಡಿದ ಒಟ್ಟು 19 ಆಟಗಾರರು ಹೆಸರು ನೀಡಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಇಬ್ಬರು ಭಾರತೀಯ ಆಟಗಾರರು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡಿಲ್ಲ. ಆ ಆಟಗಾರರು ಯಾರೆಂದರೆ...

TV9 Web
| Edited By: |

Updated on: Dec 06, 2022 | 9:23 PM

Share
ಐಪಿಎಲ್ ಸೀಸನ್ 16 ಮಿನಿ ಹರಾಜಿಗಾಗಿ ಸಿದ್ದತೆಗಳು ಶುರುವಾಗಿದೆ. ಈ ಬಾರಿಯ ಹರಾಜಿಗಾಗಿ ಒಟ್ಟು 991 ಆಟಗಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ. ಆದರೆ ಈ ಆಟಗಾರರ ಪಟ್ಟಿಯಲ್ಲಿ ಭಾರತದ ಇಬ್ಬರು ಕ್ರಿಕೆಟಿಗರ ಹೆಸರಿಲ್ಲ ಎಂಬುದು ವಿಶೇಷ.

ಐಪಿಎಲ್ ಸೀಸನ್ 16 ಮಿನಿ ಹರಾಜಿಗಾಗಿ ಸಿದ್ದತೆಗಳು ಶುರುವಾಗಿದೆ. ಈ ಬಾರಿಯ ಹರಾಜಿಗಾಗಿ ಒಟ್ಟು 991 ಆಟಗಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ. ಆದರೆ ಈ ಆಟಗಾರರ ಪಟ್ಟಿಯಲ್ಲಿ ಭಾರತದ ಇಬ್ಬರು ಕ್ರಿಕೆಟಿಗರ ಹೆಸರಿಲ್ಲ ಎಂಬುದು ವಿಶೇಷ.

1 / 7
ಅಂದರೆ ಈ ಬಾರಿಯ ಮಿನಿ ಹರಾಜಿಗಾಗಿ ಟೀಮ್ ಇಂಡಿಯಾ ಪರ ಆಡಿದ ಒಟ್ಟು 19 ಆಟಗಾರರು ಹೆಸರು ನೀಡಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಇಬ್ಬರು ಭಾರತೀಯ ಆಟಗಾರರು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡಿಲ್ಲ. ಆ ಆಟಗಾರರು ಯಾರೆಂದರೆ...

ಅಂದರೆ ಈ ಬಾರಿಯ ಮಿನಿ ಹರಾಜಿಗಾಗಿ ಟೀಮ್ ಇಂಡಿಯಾ ಪರ ಆಡಿದ ಒಟ್ಟು 19 ಆಟಗಾರರು ಹೆಸರು ನೀಡಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಇಬ್ಬರು ಭಾರತೀಯ ಆಟಗಾರರು ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡಿಲ್ಲ. ಆ ಆಟಗಾರರು ಯಾರೆಂದರೆ...

2 / 7
ಚೇತೇಶ್ವರ ಪೂಜಾರ: ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಐಪಿಎಲ್ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿಯಲು ಅವಕಾಶ ಸಿಕ್ಕರಲಿಲ್ಲ. ಅಷ್ಟೇ ಅಲ್ಲದೆ ಕಳೆದ ಸೀಸನ್​ನಲ್ಲಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.

ಚೇತೇಶ್ವರ ಪೂಜಾರ: ಟೆಸ್ಟ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿರುವ ಚೇತೇಶ್ವರ ಪೂಜಾರ ಐಪಿಎಲ್ 2021 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಒಂದೇ ಒಂದು ಪಂದ್ಯದಲ್ಲಿ ಕಣಕ್ಕಿಳಿಯಲು ಅವಕಾಶ ಸಿಕ್ಕರಲಿಲ್ಲ. ಅಷ್ಟೇ ಅಲ್ಲದೆ ಕಳೆದ ಸೀಸನ್​ನಲ್ಲಿ ಅವರನ್ನು ತಂಡದಿಂದ ಕೈ ಬಿಡಲಾಗಿತ್ತು.

3 / 7
ಅಂದರೆ 2021 ರಲ್ಲಿ ಸಿಎಸ್​ಕೆ ತಂಡದಲ್ಲಿದ್ದರೂ ಚೇತೇಶ್ವರ ಪೂಜಾರ ಕೊನೆಯ ಬಾರಿಗೆ ಐಪಿಎಲ್ ಪಂದ್ಯ ಆಡಿದ್ದು 2014 ರಲ್ಲಿ. ಅಲ್ಲದೆ ಇದುವರೆಗೆ 30 ಐಪಿಎಲ್​ ಪಂದ್ಯಗಳನ್ನಾಡಿರುವ ಪೂಜಾರ 20.52 ಸರಾಸರಿಯಲ್ಲಿ 390 ರನ್ ಗಳಿಸಿದ್ದಾರೆ.

ಅಂದರೆ 2021 ರಲ್ಲಿ ಸಿಎಸ್​ಕೆ ತಂಡದಲ್ಲಿದ್ದರೂ ಚೇತೇಶ್ವರ ಪೂಜಾರ ಕೊನೆಯ ಬಾರಿಗೆ ಐಪಿಎಲ್ ಪಂದ್ಯ ಆಡಿದ್ದು 2014 ರಲ್ಲಿ. ಅಲ್ಲದೆ ಇದುವರೆಗೆ 30 ಐಪಿಎಲ್​ ಪಂದ್ಯಗಳನ್ನಾಡಿರುವ ಪೂಜಾರ 20.52 ಸರಾಸರಿಯಲ್ಲಿ 390 ರನ್ ಗಳಿಸಿದ್ದಾರೆ.

4 / 7
ಇದಾಗ್ಯೂ ಈ ವರ್ಷ ಇಂಗ್ಲೆಂಡ್​ನಲ್ಲಿ ನಡೆದ ರಾಯಲ್ ಲಂಡನ್​ ಕಪ್​ನಲ್ಲಿ 8 ಪಂದ್ಯಗಳಿಂದ  614 ರನ್ ಬಾರಿಸಿ ಅಬ್ಬರಿಸಿದ್ದರು. ಹೀಗಾಗಿಯೇ ಪೂಜಾರ ಈ ಬಾರಿ ಐಪಿಎಲ್​ಗೆ ಹೆಸರು ನೀಡುವ ನಿರೀಕ್ಷೆಯಿತ್ತು. ಆದರೆ ಐಪಿಎಲ್ ಸೀಸನ್​ 16 ಬಿಡ್ಡಿಂಗ್​ಗಾಗಿ ಪೂಜಾರ ಹೆಸರು ನೀಡದೇ ಅಚ್ಚರಿ ಮೂಡಿಸಿದ್ದಾರೆ.

ಇದಾಗ್ಯೂ ಈ ವರ್ಷ ಇಂಗ್ಲೆಂಡ್​ನಲ್ಲಿ ನಡೆದ ರಾಯಲ್ ಲಂಡನ್​ ಕಪ್​ನಲ್ಲಿ 8 ಪಂದ್ಯಗಳಿಂದ 614 ರನ್ ಬಾರಿಸಿ ಅಬ್ಬರಿಸಿದ್ದರು. ಹೀಗಾಗಿಯೇ ಪೂಜಾರ ಈ ಬಾರಿ ಐಪಿಎಲ್​ಗೆ ಹೆಸರು ನೀಡುವ ನಿರೀಕ್ಷೆಯಿತ್ತು. ಆದರೆ ಐಪಿಎಲ್ ಸೀಸನ್​ 16 ಬಿಡ್ಡಿಂಗ್​ಗಾಗಿ ಪೂಜಾರ ಹೆಸರು ನೀಡದೇ ಅಚ್ಚರಿ ಮೂಡಿಸಿದ್ದಾರೆ.

5 / 7
ಹನುಮ ವಿಹಾರಿ: 2019 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಹನುಮ ವಿಹಾರಿ ಆ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ಈ ಬಾರಿ ಕೂಡ ಶ್ರೀಮಂತ ಕ್ರಿಕೆಟ್ ಲೀಗ್​ನ ಹರಾಜಿಗಾಗಿ ವಿಹಾರಿ ಹೆಸರು ನೀಡಿಲ್ಲ.

ಹನುಮ ವಿಹಾರಿ: 2019 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ್ದ ಹನುಮ ವಿಹಾರಿ ಆ ಬಳಿಕ ಐಪಿಎಲ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ಈ ಬಾರಿ ಕೂಡ ಶ್ರೀಮಂತ ಕ್ರಿಕೆಟ್ ಲೀಗ್​ನ ಹರಾಜಿಗಾಗಿ ವಿಹಾರಿ ಹೆಸರು ನೀಡಿಲ್ಲ.

6 / 7
ಐಪಿಎಲ್​ನಲ್ಲಿ ಇದುವರೆಗೆ 24 ಪಂದ್ಯಗಳನ್ನು ಆಡಿರುವ ಹನುಮ ವಿಹಾರಿ ಕೇವಲ 284 ರನ್​ಗಳಿಸಿದ್ದಾರೆ. ಇತ್ತ ಟೆಸ್ಟ್ ಕ್ರಿಕೆಟ್​ನತ್ತ ಗಮನ ಕೇಂದ್ರೀಕರಿಸಿರುವ ವಿಹಾರಿ, ಮಿನಿ ಹರಾಜಿನಿಂದ ಹೊರಗುಳಿಯಲು ಇದು ಕೂಡ ಒಂದು ಕಾರಣವಾಗಿರಬಹುದು.

ಐಪಿಎಲ್​ನಲ್ಲಿ ಇದುವರೆಗೆ 24 ಪಂದ್ಯಗಳನ್ನು ಆಡಿರುವ ಹನುಮ ವಿಹಾರಿ ಕೇವಲ 284 ರನ್​ಗಳಿಸಿದ್ದಾರೆ. ಇತ್ತ ಟೆಸ್ಟ್ ಕ್ರಿಕೆಟ್​ನತ್ತ ಗಮನ ಕೇಂದ್ರೀಕರಿಸಿರುವ ವಿಹಾರಿ, ಮಿನಿ ಹರಾಜಿನಿಂದ ಹೊರಗುಳಿಯಲು ಇದು ಕೂಡ ಒಂದು ಕಾರಣವಾಗಿರಬಹುದು.

7 / 7
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು