AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಸೋತು ಸಂಕಷ್ಟಕ್ಕೆ ಸಿಲುಕಿದ CSK: ಮುಂದಿನ ಪಂದ್ಯ ಸೋತರೆ ಔಟ್..?

IPL 2023 Kannada: ಮುಂಬೈ ಇಂಡಿಯನ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಒಂದು ಮ್ಯಾಚ್​ನಲ್ಲಿ ಸೋತು, ಒಂದು ಪಂದ್ಯವನ್ನು ಗೆದ್ದರೆ ಒಟ್ಟು 16 ಅಂಕ ಪಡೆಯಲಿದೆ.

TV9 Web
| Edited By: |

Updated on:May 15, 2023 | 5:30 PM

Share
IPL 2023: ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋತು ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಆಡಿರುವ 13 ಪಂದ್ಯಗಳಲ್ಲಿ ಸಿಎಸ್​ಕೆ ಗೆದ್ದಿರುವುದು 7 ಪಂದ್ಯಗಳನ್ನು ಮಾತ್ರ. ಇನ್ನು ಒಂದು ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ 1 ಅಂಕ ಪಡೆದುಕೊಂಡಿದೆ.

IPL 2023: ಈ ಬಾರಿಯ ಐಪಿಎಲ್​ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋತು ಇದೀಗ ಸಂಕಷ್ಟಕ್ಕೆ ಸಿಲುಕಿದೆ. ಏಕೆಂದರೆ ಆಡಿರುವ 13 ಪಂದ್ಯಗಳಲ್ಲಿ ಸಿಎಸ್​ಕೆ ಗೆದ್ದಿರುವುದು 7 ಪಂದ್ಯಗಳನ್ನು ಮಾತ್ರ. ಇನ್ನು ಒಂದು ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ 1 ಅಂಕ ಪಡೆದುಕೊಂಡಿದೆ.

1 / 12
ಅದರಂತೆ ಒಟ್ಟು 15 ಅಂಕಗಳನ್ನು ಹೊಂದಿದ್ದ ಸಿಎಸ್​ಕೆ ತಂಡಕ್ಕೆ ಕೆಕೆಆರ್ ವಿರುದ್ಧದ ಪಂದ್ಯವು ನಿರ್ಣಾಯಕವಾಗಿತ್ತು. ಅಂದರೆ ಕೆಕೆಆರ್ ವಿರುದ್ಧ ಗೆದ್ದಿದ್ರೆ ಸಿಎಸ್​ಕೆ ತಂಡವು 17 ಅಂಕಗಳೊಂದಿಗೆ ಪ್ಲೇಆಫ್ ಆಡುವುದು ಖಚಿತಪಡಿಸಿಕೊಳ್ಳುತ್ತಿತ್ತು. ಆದರೀಗ ತನ್ನ 13ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದೆ.

ಅದರಂತೆ ಒಟ್ಟು 15 ಅಂಕಗಳನ್ನು ಹೊಂದಿದ್ದ ಸಿಎಸ್​ಕೆ ತಂಡಕ್ಕೆ ಕೆಕೆಆರ್ ವಿರುದ್ಧದ ಪಂದ್ಯವು ನಿರ್ಣಾಯಕವಾಗಿತ್ತು. ಅಂದರೆ ಕೆಕೆಆರ್ ವಿರುದ್ಧ ಗೆದ್ದಿದ್ರೆ ಸಿಎಸ್​ಕೆ ತಂಡವು 17 ಅಂಕಗಳೊಂದಿಗೆ ಪ್ಲೇಆಫ್ ಆಡುವುದು ಖಚಿತಪಡಿಸಿಕೊಳ್ಳುತ್ತಿತ್ತು. ಆದರೀಗ ತನ್ನ 13ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸೋಲನುಭವಿಸಿದೆ.

2 / 12
ಇನ್ನು ಸಿಎಸ್​ಕೆಗೆ ಉಳಿದಿರುವುದು ಕೇವಲ 1 ಪಂದ್ಯ ಮಾತ್ರ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಚೆನ್ನೈ ಗೆದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಸೋತರೆ ಪ್ಲೇಆಫ್ ರೇಸ್​ನಿಂದಲೇ ಹೊರಬೀಳಬಹುದು.

ಇನ್ನು ಸಿಎಸ್​ಕೆಗೆ ಉಳಿದಿರುವುದು ಕೇವಲ 1 ಪಂದ್ಯ ಮಾತ್ರ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿರುವ ಈ ಪಂದ್ಯದಲ್ಲಿ ಚೆನ್ನೈ ಗೆದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಸೋತರೆ ಪ್ಲೇಆಫ್ ರೇಸ್​ನಿಂದಲೇ ಹೊರಬೀಳಬಹುದು.

3 / 12
ಏಕೆಂದರೆ ಪ್ರಸ್ತುತ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು 16 ಅಂಕಗಳನ್ನು ಹೊಂದಿದೆ. ಮುಂದಿನ 2 ಪಂದ್ಯಗಳಲ್ಲಿ ಒಂದರಲ್ಲಿ ಜಯಿಸಿದರೆ ಪ್ಲೇಆಫ್ ಪ್ರವೇಶಿಸಲಿದೆ.

ಏಕೆಂದರೆ ಪ್ರಸ್ತುತ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ತಂಡವು 16 ಅಂಕಗಳನ್ನು ಹೊಂದಿದೆ. ಮುಂದಿನ 2 ಪಂದ್ಯಗಳಲ್ಲಿ ಒಂದರಲ್ಲಿ ಜಯಿಸಿದರೆ ಪ್ಲೇಆಫ್ ಪ್ರವೇಶಿಸಲಿದೆ.

4 / 12
ಹಾಗೆಯೇ ಮುಂಬೈ ಇಂಡಿಯನ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಒಂದು ಮ್ಯಾಚ್​ನಲ್ಲಿ ಸೋತು, ಒಂದು ಪಂದ್ಯವನ್ನು ಗೆದ್ದರೆ ಒಟ್ಟು 16 ಅಂಕ ಪಡೆಯಲಿದೆ.

ಹಾಗೆಯೇ ಮುಂಬೈ ಇಂಡಿಯನ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ 18 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಒಂದು ವೇಳೆ ಒಂದು ಮ್ಯಾಚ್​ನಲ್ಲಿ ಸೋತು, ಒಂದು ಪಂದ್ಯವನ್ನು ಗೆದ್ದರೆ ಒಟ್ಟು 16 ಅಂಕ ಪಡೆಯಲಿದೆ.

5 / 12
ಇನ್ನು ಲಕ್ನೋ ಸೂಪರ್ ಜೈಂಟ್ಸ್ ಈಗಾಗಲೇ 13 ಅಂಕಗಳಿಸಿದೆ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು. ಒಂದು ವೇಳೆ ಒಂದು ಪಂದ್ಯದಲ್ಲಿ ಸೋತರೂ 15 ಅಂಕ ಪಡೆಯಲಿದೆ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ಈಗಾಗಲೇ 13 ಅಂಕಗಳಿಸಿದೆ. ಇನ್ನುಳಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು. ಒಂದು ವೇಳೆ ಒಂದು ಪಂದ್ಯದಲ್ಲಿ ಸೋತರೂ 15 ಅಂಕ ಪಡೆಯಲಿದೆ.

6 / 12
ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳನ್ನು ಗೆದ್ದರೆ 16 ಅಂಕಗಳನ್ನು ಪಡೆಯುವ ಅವಕಾಶವಿದೆ. ಅಂದರೆ ಇಲ್ಲಿ ಸಿಎಸ್​ಕೆ ತಂಡವು ಮುಂದಿನ ಪಂದ್ಯದಲ್ಲಿ ಸೋತರೆ 16 ಅಂಕಗಳೊಂದಿಗೆ ಟಾಪ್-4 ಹಂತಕ್ಕೇರಲು ಆರ್​ಸಿಬಿಗೆ ಉತ್ತಮ ಅವಕಾಶವಿದೆ.

ಇತ್ತ ಆರ್​ಸಿಬಿ ತಂಡವು ಮುಂದಿನ 2 ಪಂದ್ಯಗಳನ್ನು ಗೆದ್ದರೆ 16 ಅಂಕಗಳನ್ನು ಪಡೆಯುವ ಅವಕಾಶವಿದೆ. ಅಂದರೆ ಇಲ್ಲಿ ಸಿಎಸ್​ಕೆ ತಂಡವು ಮುಂದಿನ ಪಂದ್ಯದಲ್ಲಿ ಸೋತರೆ 16 ಅಂಕಗಳೊಂದಿಗೆ ಟಾಪ್-4 ಹಂತಕ್ಕೇರಲು ಆರ್​ಸಿಬಿಗೆ ಉತ್ತಮ ಅವಕಾಶವಿದೆ.

7 / 12
ಹಾಗೆಯೇ ಪಂಜಾಬ್ ಕಿಂಗ್ಸ್ ತಂಡಕ್ಕೂ ಮುಂದಿನ 2 ಮ್ಯಾಚ್​ಗಳನ್ನು ಗೆದ್ದು 16 ಪಾಯಿಂಟ್ಸ್ ಪಡೆಯಬಹುದು. ಇತ್ತ ಎರಡು ತಂಡಗಳಿಗೆ 16 ಅಂಕಗಳನ್ನು ಪಡೆಯುವ ಅವಕಾಶವಿರುವ ಕಾರಣ ಸಿಎಸ್​ಕೆ ತಂಡವು ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

ಹಾಗೆಯೇ ಪಂಜಾಬ್ ಕಿಂಗ್ಸ್ ತಂಡಕ್ಕೂ ಮುಂದಿನ 2 ಮ್ಯಾಚ್​ಗಳನ್ನು ಗೆದ್ದು 16 ಪಾಯಿಂಟ್ಸ್ ಪಡೆಯಬಹುದು. ಇತ್ತ ಎರಡು ತಂಡಗಳಿಗೆ 16 ಅಂಕಗಳನ್ನು ಪಡೆಯುವ ಅವಕಾಶವಿರುವ ಕಾರಣ ಸಿಎಸ್​ಕೆ ತಂಡವು ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ.

8 / 12
ಏಕೆಂದರೆ ಮುಂದಿನ ಪಂದ್ಯದಲ್ಲಿ ಸಿಎಸ್​ಕೆ ಸೋತರೆ 15 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 2 ಪಂದ್ಯಗಳಲ್ಲಿ ಗೆದ್ದರೆ 2ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

ಏಕೆಂದರೆ ಮುಂದಿನ ಪಂದ್ಯದಲ್ಲಿ ಸಿಎಸ್​ಕೆ ಸೋತರೆ 15 ಅಂಕಗಳೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿಯಲಿದೆ. ಅತ್ತ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ 2 ಪಂದ್ಯಗಳಲ್ಲಿ ಗೆದ್ದರೆ 2ನೇ ಸ್ಥಾನದೊಂದಿಗೆ ಪ್ಲೇಆಫ್ ಪ್ರವೇಶಿಸಬಹುದು.

9 / 12
ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮುಂದಿನ ಎದುರಾಳಿಗಳು ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್​. ಒಂದು ವೇಳೆ ಲಕ್ನೋ ವಿರುದ್ಧ ಸೋತರೂ, ಮುಂಬೈ ಇಂಡಿಯನ್ಸ್​ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ದ ಜಯ ಸಾಧಿಸಿ 16 ಅಂಕಗಳೊಂದಿಗೆ ನೆಟ್ ರನ್​ ರೇಟ್​ ಸಹಾಯದಿಂದ ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನ ಪಡೆಯಬಹುದು.

ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮುಂದಿನ ಎದುರಾಳಿಗಳು ಮುಂಬೈ ಇಂಡಿಯನ್ಸ್ ಹಾಗೂ ಕೆಕೆಆರ್​. ಒಂದು ವೇಳೆ ಲಕ್ನೋ ವಿರುದ್ಧ ಸೋತರೂ, ಮುಂಬೈ ಇಂಡಿಯನ್ಸ್​ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಎಸ್​ಆರ್​ಹೆಚ್ ವಿರುದ್ದ ಜಯ ಸಾಧಿಸಿ 16 ಅಂಕಗಳೊಂದಿಗೆ ನೆಟ್ ರನ್​ ರೇಟ್​ ಸಹಾಯದಿಂದ ಪಾಯಿಂಟ್ಸ್ ಟೇಬಲ್​ನಲ್ಲಿ 3ನೇ ಸ್ಥಾನ ಪಡೆಯಬಹುದು.

10 / 12
ಇತ್ತ ಆರ್​ಸಿಬಿ ಅಥವಾ ಪಂಜಾಬ್ ಕಿಂಗ್ಸ್ ತಂಡ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ 16 ಅಂಕ ಪಡೆಯಲಿದೆ. ಅತ್ತ ಸಿಎಸ್​ಕೆ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ 15 ಪಾಯಿಂಟ್ಸ್​ನೊಂದಿಗೆ 6ನೇ ಅಥವಾ 7ನೇ ಸ್ಥಾನಕ್ಕೆ ಕುಸಿಯಲಿದೆ.

ಇತ್ತ ಆರ್​ಸಿಬಿ ಅಥವಾ ಪಂಜಾಬ್ ಕಿಂಗ್ಸ್ ತಂಡ ಉತ್ತಮ ನೆಟ್​ ರನ್​ ರೇಟ್​ನೊಂದಿಗೆ ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ 16 ಅಂಕ ಪಡೆಯಲಿದೆ. ಅತ್ತ ಸಿಎಸ್​ಕೆ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತರೆ 15 ಪಾಯಿಂಟ್ಸ್​ನೊಂದಿಗೆ 6ನೇ ಅಥವಾ 7ನೇ ಸ್ಥಾನಕ್ಕೆ ಕುಸಿಯಲಿದೆ.

11 / 12
ಅಂದರೆ ಇಲ್ಲಿ ಸಿಎಸ್​ಕೆ ತಂಡದ ಪಾಲಿಗೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಪ್ಲೇಆಫ್ ಪ್ರವೇಶಿಸುವ ಹಾದಿ ಮತ್ತಷ್ಟು ಸುಗಮವಾಗಲಿದೆ.

ಅಂದರೆ ಇಲ್ಲಿ ಸಿಎಸ್​ಕೆ ತಂಡದ ಪಾಲಿಗೆ ಮುಂದಿನ ಪಂದ್ಯವು ಮಾಡು ಇಲ್ಲವೇ ಮಡಿ ಪಂದ್ಯ. ಈ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ಪ್ಲೇಆಫ್ ಪ್ರವೇಶಿಸುವ ಹಾದಿ ಮತ್ತಷ್ಟು ಸುಗಮವಾಗಲಿದೆ.

12 / 12

Published On - 4:30 pm, Mon, 15 May 23

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ