AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕರ್ಮ ನಿಮ್ಮನ್ನ ಬಿಡಲ್ಲ ಎಂದ RCB ಮಾಜಿ ಆಟಗಾರ

IPL 2023 Kannada: ಕೊನೆಯ ಎಸೆತದಲ್ಲಿ 1 ರನ್​ಗಳ ಅವಶ್ಯಕತೆ. ಅತ್ತ ಆರ್​ಸಿಬಿಗೆ 1 ವಿಕೆಟ್​ನ ಅನಿವಾರ್ಯತೆ. ಈ ಹಂತದಲ್ಲಿ ಬೌಲಿಂಗ್ ಮಾಡಲು ಓಡಿ ಬಂದ ಹರ್ಷಲ್ ಪಟೇಲ್ ನಾನ್​ ಸ್ಟ್ರೈಕ್​ನಲ್ಲಿದ್ದ ರವಿ ಬಿಷ್ಣೋಯ್ ಅವರನ್ನು ಮಂಕಡ್ ರನೌಟ್ ಮಾಡಲು ಯತ್ನಿಸಿದ್ದರು.

TV9 Web
| Edited By: |

Updated on: Apr 11, 2023 | 7:23 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ತಂಡವು ಕೊನೆಯ ಎಸೆತದಲ್ಲಿ ಸೋಲನುಭವಿಸಿತ್ತು. ಆದರೆ ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ಮಾಜಿ ಆಟಗಾರ ಮಾಡಿದ ಟ್ವೀಟ್​ವೊಂದು ಇದೀಗ ಚರ್ಚೆಗೆ ಕಾರಣವಾಗಿದೆ.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ತಂಡವು ಕೊನೆಯ ಎಸೆತದಲ್ಲಿ ಸೋಲನುಭವಿಸಿತ್ತು. ಆದರೆ ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ಮಾಜಿ ಆಟಗಾರ ಮಾಡಿದ ಟ್ವೀಟ್​ವೊಂದು ಇದೀಗ ಚರ್ಚೆಗೆ ಕಾರಣವಾಗಿದೆ.

1 / 7
ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 212 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೊನೆಯ ಓವರ್​ನಲ್ಲಿ 5 ರನ್​ಗಳ ಅವಶ್ಯಕತೆಯಿತ್ತು. ಹರ್ಷಲ್ ಪಟೇಲ್ ಎಸೆದ ಅಂತಿಮ ಓವರ್​ನ 5 ಎಸೆತಗಳಲ್ಲಿ ಲಕ್ನೋ ಆಟಗಾರರು 4 ರನ್​ ಕಲೆಹಾಕಿದ್ದರು.

ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 212 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೊನೆಯ ಓವರ್​ನಲ್ಲಿ 5 ರನ್​ಗಳ ಅವಶ್ಯಕತೆಯಿತ್ತು. ಹರ್ಷಲ್ ಪಟೇಲ್ ಎಸೆದ ಅಂತಿಮ ಓವರ್​ನ 5 ಎಸೆತಗಳಲ್ಲಿ ಲಕ್ನೋ ಆಟಗಾರರು 4 ರನ್​ ಕಲೆಹಾಕಿದ್ದರು.

2 / 7
ಕೊನೆಯ ಎಸೆತದಲ್ಲಿ 1 ರನ್​ಗಳ ಅವಶ್ಯಕತೆ. ಅತ್ತ ಆರ್​ಸಿಬಿಗೆ 1 ವಿಕೆಟ್​ನ ಅನಿವಾರ್ಯತೆ. ಈ ಹಂತದಲ್ಲಿ ಬೌಲಿಂಗ್ ಮಾಡಲು ಓಡಿ ಬಂದ ಹರ್ಷಲ್ ಪಟೇಲ್ ನಾನ್​ ಸ್ಟ್ರೈಕ್​ನಲ್ಲಿದ್ದ ರವಿ ಬಿಷ್ಣೋಯ್ ಅವರನ್ನು ಮಂಕಡ್ ರನೌಟ್ ಮಾಡಲು ಯತ್ನಿಸಿದ್ದರು. ಆದರೆ ಓಡಿ ಬಂದ ಹರ್ಷಲ್ ಪಟೇಲ್ ಚೆಂಡನ್ನು ವಿಕೆಟ್​ಗೆ ತಾಗಿಸುವಲ್ಲಿ ವಿಫಲರಾದರು. ಇದಾಗ್ಯೂ ರನೌಟ್ ಮಾಡಿದ್ರೂ ಅಂಪೈರ್ ಮೇಲ್ಮನವಿ ಸಲ್ಲಿಸಲು ನಿರಾಕರಿಸಿದರು.

ಕೊನೆಯ ಎಸೆತದಲ್ಲಿ 1 ರನ್​ಗಳ ಅವಶ್ಯಕತೆ. ಅತ್ತ ಆರ್​ಸಿಬಿಗೆ 1 ವಿಕೆಟ್​ನ ಅನಿವಾರ್ಯತೆ. ಈ ಹಂತದಲ್ಲಿ ಬೌಲಿಂಗ್ ಮಾಡಲು ಓಡಿ ಬಂದ ಹರ್ಷಲ್ ಪಟೇಲ್ ನಾನ್​ ಸ್ಟ್ರೈಕ್​ನಲ್ಲಿದ್ದ ರವಿ ಬಿಷ್ಣೋಯ್ ಅವರನ್ನು ಮಂಕಡ್ ರನೌಟ್ ಮಾಡಲು ಯತ್ನಿಸಿದ್ದರು. ಆದರೆ ಓಡಿ ಬಂದ ಹರ್ಷಲ್ ಪಟೇಲ್ ಚೆಂಡನ್ನು ವಿಕೆಟ್​ಗೆ ತಾಗಿಸುವಲ್ಲಿ ವಿಫಲರಾದರು. ಇದಾಗ್ಯೂ ರನೌಟ್ ಮಾಡಿದ್ರೂ ಅಂಪೈರ್ ಮೇಲ್ಮನವಿ ಸಲ್ಲಿಸಲು ನಿರಾಕರಿಸಿದರು.

3 / 7
ಆ ಬಳಿಕ ಹರ್ಷಲ್ ಪಟೇಲ್ ಎಸೆದ ಕೊನೆಯ ಎಸೆತವನ್ನು ಬ್ಯಾಟ್​ಗೆ ತಗುಲಿಸುವಲ್ಲಿ ಅವೇಶ್ ಖಾನ್ ವಿಫಲರಾದರು. ಇದಾಗ್ಯೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಚೆಂಡನ್ನು ಹಿಡಿಯುವಲ್ಲಿ ಎಡವಿದರು. ಕ್ಷಣಾರ್ಧದಲ್ಲಿ ಅವೇಶ್ ಖಾನ್ ಹಾಗೂ ರವಿ ಬಿಷ್ಣೋಯ್ 1 ರನ್​ ಓಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

ಆ ಬಳಿಕ ಹರ್ಷಲ್ ಪಟೇಲ್ ಎಸೆದ ಕೊನೆಯ ಎಸೆತವನ್ನು ಬ್ಯಾಟ್​ಗೆ ತಗುಲಿಸುವಲ್ಲಿ ಅವೇಶ್ ಖಾನ್ ವಿಫಲರಾದರು. ಇದಾಗ್ಯೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಚೆಂಡನ್ನು ಹಿಡಿಯುವಲ್ಲಿ ಎಡವಿದರು. ಕ್ಷಣಾರ್ಧದಲ್ಲಿ ಅವೇಶ್ ಖಾನ್ ಹಾಗೂ ರವಿ ಬಿಷ್ಣೋಯ್ 1 ರನ್​ ಓಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

4 / 7
ಇತ್ತ ಆರ್​ಸಿಬಿ ತಂಡವು ಸೋಲುತ್ತಿದ್ದಂತೆ ಎಸ್​ಆರ್​ಹೆಚ್ ತಂಡದ ಬೌಲಿಂಗ್ ಕೋಚ್ ಡೇಲ್ ಸ್ಟೇನ್ ಕರ್ಮ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದಂತೆ ಸ್ಟೇನ್ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

ಇತ್ತ ಆರ್​ಸಿಬಿ ತಂಡವು ಸೋಲುತ್ತಿದ್ದಂತೆ ಎಸ್​ಆರ್​ಹೆಚ್ ತಂಡದ ಬೌಲಿಂಗ್ ಕೋಚ್ ಡೇಲ್ ಸ್ಟೇನ್ ಕರ್ಮ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದಂತೆ ಸ್ಟೇನ್ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

5 / 7
ಆದರೆ ಇದೀಗ ಮಾಜಿ ಆರ್​ಸಿಬಿ ಆಟಗಾರನಾಗಿರುವ ಡೇಲ್ ಸ್ಟೇನ್ ಅವರು ಆರ್​ಸಿಬಿ ಸೋಲಿಗೆ ಕರ್ಮ ಬಿಡಲ್ಲ ಎಂದೇಳಲು ಕಾರಣವೇನು? ಎಂಬ ಚರ್ಚೆ ಶುರುವಾಗಿದೆ. ಕೆಲವರು ಸ್ಟೇನ್ ಮಂಕಡ್ ರನೌಟ್​ಗೆ ವಿರುದ್ಧ ಎಂದರೆ, ಇನ್ನು ಕೆಲವರು ಆರ್​ಸಿಬಿ ಫ್ರಾಂಚೈಸಿ ಈ ಹಿಂದೆ ಸ್ಟೇನ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಇದರ ಆಕ್ರೋಶ ಹೊರಹಾಕಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಆದರೆ ಇದೀಗ ಮಾಜಿ ಆರ್​ಸಿಬಿ ಆಟಗಾರನಾಗಿರುವ ಡೇಲ್ ಸ್ಟೇನ್ ಅವರು ಆರ್​ಸಿಬಿ ಸೋಲಿಗೆ ಕರ್ಮ ಬಿಡಲ್ಲ ಎಂದೇಳಲು ಕಾರಣವೇನು? ಎಂಬ ಚರ್ಚೆ ಶುರುವಾಗಿದೆ. ಕೆಲವರು ಸ್ಟೇನ್ ಮಂಕಡ್ ರನೌಟ್​ಗೆ ವಿರುದ್ಧ ಎಂದರೆ, ಇನ್ನು ಕೆಲವರು ಆರ್​ಸಿಬಿ ಫ್ರಾಂಚೈಸಿ ಈ ಹಿಂದೆ ಸ್ಟೇನ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಇದರ ಆಕ್ರೋಶ ಹೊರಹಾಕಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

6 / 7
ಒಟ್ಟಿನಲ್ಲಿ ಆರ್​ಸಿಬಿ ಸೋಲಿನ ಬೆನ್ನಲ್ಲೇ ಡೇಲ್ ಸ್ಟೇನ್ ಅವರ ಕರ್ಮ ಟ್ವೀಟ್ ಮಾತ್ರ ಸಖತ್ ವೈರಲ್ ಆಗಿದ್ದು ಮಾತ್ರ ಸುಳ್ಳಲ್ಲ.

ಒಟ್ಟಿನಲ್ಲಿ ಆರ್​ಸಿಬಿ ಸೋಲಿನ ಬೆನ್ನಲ್ಲೇ ಡೇಲ್ ಸ್ಟೇನ್ ಅವರ ಕರ್ಮ ಟ್ವೀಟ್ ಮಾತ್ರ ಸಖತ್ ವೈರಲ್ ಆಗಿದ್ದು ಮಾತ್ರ ಸುಳ್ಳಲ್ಲ.

7 / 7
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?