AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕರ್ಮ ನಿಮ್ಮನ್ನ ಬಿಡಲ್ಲ ಎಂದ RCB ಮಾಜಿ ಆಟಗಾರ

IPL 2023 Kannada: ಕೊನೆಯ ಎಸೆತದಲ್ಲಿ 1 ರನ್​ಗಳ ಅವಶ್ಯಕತೆ. ಅತ್ತ ಆರ್​ಸಿಬಿಗೆ 1 ವಿಕೆಟ್​ನ ಅನಿವಾರ್ಯತೆ. ಈ ಹಂತದಲ್ಲಿ ಬೌಲಿಂಗ್ ಮಾಡಲು ಓಡಿ ಬಂದ ಹರ್ಷಲ್ ಪಟೇಲ್ ನಾನ್​ ಸ್ಟ್ರೈಕ್​ನಲ್ಲಿದ್ದ ರವಿ ಬಿಷ್ಣೋಯ್ ಅವರನ್ನು ಮಂಕಡ್ ರನೌಟ್ ಮಾಡಲು ಯತ್ನಿಸಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: Apr 11, 2023 | 7:23 PM

Share
IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ತಂಡವು ಕೊನೆಯ ಎಸೆತದಲ್ಲಿ ಸೋಲನುಭವಿಸಿತ್ತು. ಆದರೆ ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ಮಾಜಿ ಆಟಗಾರ ಮಾಡಿದ ಟ್ವೀಟ್​ವೊಂದು ಇದೀಗ ಚರ್ಚೆಗೆ ಕಾರಣವಾಗಿದೆ.

IPL 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ರಣರೋಚಕ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್​ಸಿಬಿ ತಂಡವು ಕೊನೆಯ ಎಸೆತದಲ್ಲಿ ಸೋಲನುಭವಿಸಿತ್ತು. ಆದರೆ ಈ ಸೋಲಿನ ಬೆನ್ನಲ್ಲೇ ಆರ್​ಸಿಬಿ ತಂಡದ ಮಾಜಿ ಆಟಗಾರ ಮಾಡಿದ ಟ್ವೀಟ್​ವೊಂದು ಇದೀಗ ಚರ್ಚೆಗೆ ಕಾರಣವಾಗಿದೆ.

1 / 7
ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 212 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೊನೆಯ ಓವರ್​ನಲ್ಲಿ 5 ರನ್​ಗಳ ಅವಶ್ಯಕತೆಯಿತ್ತು. ಹರ್ಷಲ್ ಪಟೇಲ್ ಎಸೆದ ಅಂತಿಮ ಓವರ್​ನ 5 ಎಸೆತಗಳಲ್ಲಿ ಲಕ್ನೋ ಆಟಗಾರರು 4 ರನ್​ ಕಲೆಹಾಕಿದ್ದರು.

ಈ ಪಂದ್ಯದಲ್ಲಿ ಆರ್​ಸಿಬಿ ನೀಡಿದ 212 ರನ್​ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೊನೆಯ ಓವರ್​ನಲ್ಲಿ 5 ರನ್​ಗಳ ಅವಶ್ಯಕತೆಯಿತ್ತು. ಹರ್ಷಲ್ ಪಟೇಲ್ ಎಸೆದ ಅಂತಿಮ ಓವರ್​ನ 5 ಎಸೆತಗಳಲ್ಲಿ ಲಕ್ನೋ ಆಟಗಾರರು 4 ರನ್​ ಕಲೆಹಾಕಿದ್ದರು.

2 / 7
ಕೊನೆಯ ಎಸೆತದಲ್ಲಿ 1 ರನ್​ಗಳ ಅವಶ್ಯಕತೆ. ಅತ್ತ ಆರ್​ಸಿಬಿಗೆ 1 ವಿಕೆಟ್​ನ ಅನಿವಾರ್ಯತೆ. ಈ ಹಂತದಲ್ಲಿ ಬೌಲಿಂಗ್ ಮಾಡಲು ಓಡಿ ಬಂದ ಹರ್ಷಲ್ ಪಟೇಲ್ ನಾನ್​ ಸ್ಟ್ರೈಕ್​ನಲ್ಲಿದ್ದ ರವಿ ಬಿಷ್ಣೋಯ್ ಅವರನ್ನು ಮಂಕಡ್ ರನೌಟ್ ಮಾಡಲು ಯತ್ನಿಸಿದ್ದರು. ಆದರೆ ಓಡಿ ಬಂದ ಹರ್ಷಲ್ ಪಟೇಲ್ ಚೆಂಡನ್ನು ವಿಕೆಟ್​ಗೆ ತಾಗಿಸುವಲ್ಲಿ ವಿಫಲರಾದರು. ಇದಾಗ್ಯೂ ರನೌಟ್ ಮಾಡಿದ್ರೂ ಅಂಪೈರ್ ಮೇಲ್ಮನವಿ ಸಲ್ಲಿಸಲು ನಿರಾಕರಿಸಿದರು.

ಕೊನೆಯ ಎಸೆತದಲ್ಲಿ 1 ರನ್​ಗಳ ಅವಶ್ಯಕತೆ. ಅತ್ತ ಆರ್​ಸಿಬಿಗೆ 1 ವಿಕೆಟ್​ನ ಅನಿವಾರ್ಯತೆ. ಈ ಹಂತದಲ್ಲಿ ಬೌಲಿಂಗ್ ಮಾಡಲು ಓಡಿ ಬಂದ ಹರ್ಷಲ್ ಪಟೇಲ್ ನಾನ್​ ಸ್ಟ್ರೈಕ್​ನಲ್ಲಿದ್ದ ರವಿ ಬಿಷ್ಣೋಯ್ ಅವರನ್ನು ಮಂಕಡ್ ರನೌಟ್ ಮಾಡಲು ಯತ್ನಿಸಿದ್ದರು. ಆದರೆ ಓಡಿ ಬಂದ ಹರ್ಷಲ್ ಪಟೇಲ್ ಚೆಂಡನ್ನು ವಿಕೆಟ್​ಗೆ ತಾಗಿಸುವಲ್ಲಿ ವಿಫಲರಾದರು. ಇದಾಗ್ಯೂ ರನೌಟ್ ಮಾಡಿದ್ರೂ ಅಂಪೈರ್ ಮೇಲ್ಮನವಿ ಸಲ್ಲಿಸಲು ನಿರಾಕರಿಸಿದರು.

3 / 7
ಆ ಬಳಿಕ ಹರ್ಷಲ್ ಪಟೇಲ್ ಎಸೆದ ಕೊನೆಯ ಎಸೆತವನ್ನು ಬ್ಯಾಟ್​ಗೆ ತಗುಲಿಸುವಲ್ಲಿ ಅವೇಶ್ ಖಾನ್ ವಿಫಲರಾದರು. ಇದಾಗ್ಯೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಚೆಂಡನ್ನು ಹಿಡಿಯುವಲ್ಲಿ ಎಡವಿದರು. ಕ್ಷಣಾರ್ಧದಲ್ಲಿ ಅವೇಶ್ ಖಾನ್ ಹಾಗೂ ರವಿ ಬಿಷ್ಣೋಯ್ 1 ರನ್​ ಓಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

ಆ ಬಳಿಕ ಹರ್ಷಲ್ ಪಟೇಲ್ ಎಸೆದ ಕೊನೆಯ ಎಸೆತವನ್ನು ಬ್ಯಾಟ್​ಗೆ ತಗುಲಿಸುವಲ್ಲಿ ಅವೇಶ್ ಖಾನ್ ವಿಫಲರಾದರು. ಇದಾಗ್ಯೂ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಚೆಂಡನ್ನು ಹಿಡಿಯುವಲ್ಲಿ ಎಡವಿದರು. ಕ್ಷಣಾರ್ಧದಲ್ಲಿ ಅವೇಶ್ ಖಾನ್ ಹಾಗೂ ರವಿ ಬಿಷ್ಣೋಯ್ 1 ರನ್​ ಓಡುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 1 ವಿಕೆಟ್​ನ ರೋಚಕ ಜಯ ತಂದುಕೊಟ್ಟರು.

4 / 7
ಇತ್ತ ಆರ್​ಸಿಬಿ ತಂಡವು ಸೋಲುತ್ತಿದ್ದಂತೆ ಎಸ್​ಆರ್​ಹೆಚ್ ತಂಡದ ಬೌಲಿಂಗ್ ಕೋಚ್ ಡೇಲ್ ಸ್ಟೇನ್ ಕರ್ಮ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದಂತೆ ಸ್ಟೇನ್ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

ಇತ್ತ ಆರ್​ಸಿಬಿ ತಂಡವು ಸೋಲುತ್ತಿದ್ದಂತೆ ಎಸ್​ಆರ್​ಹೆಚ್ ತಂಡದ ಬೌಲಿಂಗ್ ಕೋಚ್ ಡೇಲ್ ಸ್ಟೇನ್ ಕರ್ಮ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್​ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದಂತೆ ಸ್ಟೇನ್ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.

5 / 7
ಆದರೆ ಇದೀಗ ಮಾಜಿ ಆರ್​ಸಿಬಿ ಆಟಗಾರನಾಗಿರುವ ಡೇಲ್ ಸ್ಟೇನ್ ಅವರು ಆರ್​ಸಿಬಿ ಸೋಲಿಗೆ ಕರ್ಮ ಬಿಡಲ್ಲ ಎಂದೇಳಲು ಕಾರಣವೇನು? ಎಂಬ ಚರ್ಚೆ ಶುರುವಾಗಿದೆ. ಕೆಲವರು ಸ್ಟೇನ್ ಮಂಕಡ್ ರನೌಟ್​ಗೆ ವಿರುದ್ಧ ಎಂದರೆ, ಇನ್ನು ಕೆಲವರು ಆರ್​ಸಿಬಿ ಫ್ರಾಂಚೈಸಿ ಈ ಹಿಂದೆ ಸ್ಟೇನ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಇದರ ಆಕ್ರೋಶ ಹೊರಹಾಕಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಆದರೆ ಇದೀಗ ಮಾಜಿ ಆರ್​ಸಿಬಿ ಆಟಗಾರನಾಗಿರುವ ಡೇಲ್ ಸ್ಟೇನ್ ಅವರು ಆರ್​ಸಿಬಿ ಸೋಲಿಗೆ ಕರ್ಮ ಬಿಡಲ್ಲ ಎಂದೇಳಲು ಕಾರಣವೇನು? ಎಂಬ ಚರ್ಚೆ ಶುರುವಾಗಿದೆ. ಕೆಲವರು ಸ್ಟೇನ್ ಮಂಕಡ್ ರನೌಟ್​ಗೆ ವಿರುದ್ಧ ಎಂದರೆ, ಇನ್ನು ಕೆಲವರು ಆರ್​ಸಿಬಿ ಫ್ರಾಂಚೈಸಿ ಈ ಹಿಂದೆ ಸ್ಟೇನ್ ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಇದರ ಆಕ್ರೋಶ ಹೊರಹಾಕಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

6 / 7
ಒಟ್ಟಿನಲ್ಲಿ ಆರ್​ಸಿಬಿ ಸೋಲಿನ ಬೆನ್ನಲ್ಲೇ ಡೇಲ್ ಸ್ಟೇನ್ ಅವರ ಕರ್ಮ ಟ್ವೀಟ್ ಮಾತ್ರ ಸಖತ್ ವೈರಲ್ ಆಗಿದ್ದು ಮಾತ್ರ ಸುಳ್ಳಲ್ಲ.

ಒಟ್ಟಿನಲ್ಲಿ ಆರ್​ಸಿಬಿ ಸೋಲಿನ ಬೆನ್ನಲ್ಲೇ ಡೇಲ್ ಸ್ಟೇನ್ ಅವರ ಕರ್ಮ ಟ್ವೀಟ್ ಮಾತ್ರ ಸಖತ್ ವೈರಲ್ ಆಗಿದ್ದು ಮಾತ್ರ ಸುಳ್ಳಲ್ಲ.

7 / 7
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ