AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಅಂಡರ್-16 ಆಟಗಾರರೊಂದಿಗೆ ಸಂವಾದ ನಡೆಸಿದ ದಿನೇಶ್ ಕಾರ್ತಿಕ್

IPL 2023 Kannada: ಈ ಬಾರಿಯ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ 8 ಪಂದ್ಯಗಳಿಂದ DK ಕೇವಲ 83 ರನ್​ಗಳಿಸಿದ್ದಾರೆ.

TV9 Web
| Edited By: |

Updated on: Apr 29, 2023 | 6:22 PM

Share
IPL 2023: ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಅಂಡರ್-16 ಆಟಗಾರರ ವಿಶೇಷ ಶಿಬಿರದಲ್ಲಿ RCB ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ ಕಾಣಿಸಿಕೊಂಡಿದ್ದಾರೆ.

IPL 2023: ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಅಂಡರ್-16 ಆಟಗಾರರ ವಿಶೇಷ ಶಿಬಿರದಲ್ಲಿ RCB ತಂಡದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ ಕಾಣಿಸಿಕೊಂಡಿದ್ದಾರೆ.

1 / 7
16 ವರ್ಷದೊಳಗಿನ ಈ ಶಿಬಿರದಲ್ಲಿ ಭಾಗವಹಿಸಿದ ದಿನೇಶ್ ಕಾರ್ತಿಕ್, ಯುವ ಪ್ರತಿಭೆಯೊಂದಿಗೆ ಸಂವಾದ ನಡೆಸಿದರು. ಅಲ್ಲದೆ ತಮ್ಮ ಕನಸುಗಳನ್ನು ಬೆನ್ನತ್ತಲು ಅಮೂಲ್ಯವಾದ ಸಲಹೆಗಳನ್ನು ಹಾಗೂ ಜೀವನ ಪಾಠಗಳನ್ನು ಹೇಳಿಕೊಟ್ಟಿದ್ದಾರೆ.

16 ವರ್ಷದೊಳಗಿನ ಈ ಶಿಬಿರದಲ್ಲಿ ಭಾಗವಹಿಸಿದ ದಿನೇಶ್ ಕಾರ್ತಿಕ್, ಯುವ ಪ್ರತಿಭೆಯೊಂದಿಗೆ ಸಂವಾದ ನಡೆಸಿದರು. ಅಲ್ಲದೆ ತಮ್ಮ ಕನಸುಗಳನ್ನು ಬೆನ್ನತ್ತಲು ಅಮೂಲ್ಯವಾದ ಸಲಹೆಗಳನ್ನು ಹಾಗೂ ಜೀವನ ಪಾಠಗಳನ್ನು ಹೇಳಿಕೊಟ್ಟಿದ್ದಾರೆ.

2 / 7
 ಈ ವಿಶೇಷ ಸಂವಾದದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೈರಲ್ ಬೆನ್ನಲ್ಲೇ ಡಿಕೆ ಟ್ರೋಲ್​ಗೂ ಒಳಗಾಗಿರುವುದು ವಿಶೇಷ.

ಈ ವಿಶೇಷ ಸಂವಾದದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೈರಲ್ ಬೆನ್ನಲ್ಲೇ ಡಿಕೆ ಟ್ರೋಲ್​ಗೂ ಒಳಗಾಗಿರುವುದು ವಿಶೇಷ.

3 / 7
ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ 8 ಪಂದ್ಯಗಳಿಂದ DK ಕೇವಲ 83 ರನ್​ಗಳಿಸಿದ್ದಾರೆ. ಅಂದರೆ ತಂಡದ ಫಿನಿಶರ್ ಎನಿಸಿಕೊಂಡಿರುವ ಕಾರ್ತಿಕ್ ಅವರ ಬ್ಯಾಟ್​ನಿಂದ ಕೇವಲ 11.86 ಸರಾಸರಿಯಲ್ಲಿ ರನ್ ಮೂಡಿಬಂದಿದೆ.

ಏಕೆಂದರೆ ಈ ಬಾರಿಯ ಐಪಿಎಲ್​ನಲ್ಲಿ ದಿನೇಶ್ ಕಾರ್ತಿಕ್ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಆಡಿರುವ 8 ಪಂದ್ಯಗಳಿಂದ DK ಕೇವಲ 83 ರನ್​ಗಳಿಸಿದ್ದಾರೆ. ಅಂದರೆ ತಂಡದ ಫಿನಿಶರ್ ಎನಿಸಿಕೊಂಡಿರುವ ಕಾರ್ತಿಕ್ ಅವರ ಬ್ಯಾಟ್​ನಿಂದ ಕೇವಲ 11.86 ಸರಾಸರಿಯಲ್ಲಿ ರನ್ ಮೂಡಿಬಂದಿದೆ.

4 / 7
ಇತ್ತ ದಿನೇಶ್ ಕಾರ್ತಿಕ್ ಅವರಂತಹ ಅನುಭವಿ ಆಟಗಾರ ಮಧ್ಯಮ ಕ್ರಮಾಂಕದಲ್ಲಿ ವಿಫಲರಾಗುತ್ತಿರುವುದು ಆರ್​ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣವಾಗುತ್ತಿದೆ. ಇಂತಹ ಕಳಪೆ ಫಾರ್ಮ್​ನಲ್ಲಿರುವ ಡಿಕೆ ಯುವ ಕ್ರಿಕೆಟಿಗರಿಗೆ ಸಲಹೆ ನೀಡಲು ಹೋಗಿರುವುದನ್ನು ನೆಟ್ಟಿಗರು ಕಿಚಾಯಿಸುತ್ತಿದ್ದಾರೆ.

ಇತ್ತ ದಿನೇಶ್ ಕಾರ್ತಿಕ್ ಅವರಂತಹ ಅನುಭವಿ ಆಟಗಾರ ಮಧ್ಯಮ ಕ್ರಮಾಂಕದಲ್ಲಿ ವಿಫಲರಾಗುತ್ತಿರುವುದು ಆರ್​ಸಿಬಿ ತಂಡದ ಸೋಲಿಗೆ ಪ್ರಮುಖ ಕಾರಣವಾಗುತ್ತಿದೆ. ಇಂತಹ ಕಳಪೆ ಫಾರ್ಮ್​ನಲ್ಲಿರುವ ಡಿಕೆ ಯುವ ಕ್ರಿಕೆಟಿಗರಿಗೆ ಸಲಹೆ ನೀಡಲು ಹೋಗಿರುವುದನ್ನು ನೆಟ್ಟಿಗರು ಕಿಚಾಯಿಸುತ್ತಿದ್ದಾರೆ.

5 / 7
ಕೆಲವರು ಯುವ ಆಟಗಾರರಿಗೆ ನೀಡುವ ಸಲಹೆಯನ್ನು ನಿಮ್ಮದೇ ಕೆರಿಯರ್​ನಲ್ಲಿ ಉಪಯೋಗಿಸಿ ಎಂದು ಕಿಚಾಯಿಸಿದರೆ, ಮತ್ತೆ ಕೆಲವರು ಕಳಪೆ ಫಾರ್ಮ್​ನಲ್ಲಿದ್ದರೂ ಸತತ ಹೇಗೆ ಅವಕಾಶ ಪಡೆಯಬಹುದೆಂದು ಬಿಟ್ಟಿ ಸಲಹೆ ನೀಡಿರಬಹುದೇ? ವ್ಯಂಗ್ಯವಾಡಿದ್ದಾರೆ. ಮತ್ತೊಬ್ಬರು, ಸೀಮಿತ ಓವರ್​ ಕ್ರಿಕೆಟ್​ನಲ್ಲಿ 391 ಪಂದ್ಯಗಳನ್ನಾಡಿ ಒಂದೇ ಒಂದು ಶತಕ ಬಾರಿಸಲು ಸಾಧ್ಯವಾಗದ ಆಟಗಾರನಿಂದ ಯುವ ಪ್ರತಿಭೆಗಳಿಗೆ ಕ್ರಿಕೆಟ್ ಪಾಠ...ಎಂದು ಕಾಲೆಳೆದಿದ್ದಾರೆ.

ಕೆಲವರು ಯುವ ಆಟಗಾರರಿಗೆ ನೀಡುವ ಸಲಹೆಯನ್ನು ನಿಮ್ಮದೇ ಕೆರಿಯರ್​ನಲ್ಲಿ ಉಪಯೋಗಿಸಿ ಎಂದು ಕಿಚಾಯಿಸಿದರೆ, ಮತ್ತೆ ಕೆಲವರು ಕಳಪೆ ಫಾರ್ಮ್​ನಲ್ಲಿದ್ದರೂ ಸತತ ಹೇಗೆ ಅವಕಾಶ ಪಡೆಯಬಹುದೆಂದು ಬಿಟ್ಟಿ ಸಲಹೆ ನೀಡಿರಬಹುದೇ? ವ್ಯಂಗ್ಯವಾಡಿದ್ದಾರೆ. ಮತ್ತೊಬ್ಬರು, ಸೀಮಿತ ಓವರ್​ ಕ್ರಿಕೆಟ್​ನಲ್ಲಿ 391 ಪಂದ್ಯಗಳನ್ನಾಡಿ ಒಂದೇ ಒಂದು ಶತಕ ಬಾರಿಸಲು ಸಾಧ್ಯವಾಗದ ಆಟಗಾರನಿಂದ ಯುವ ಪ್ರತಿಭೆಗಳಿಗೆ ಕ್ರಿಕೆಟ್ ಪಾಠ...ಎಂದು ಕಾಲೆಳೆದಿದ್ದಾರೆ.

6 / 7
ಒಟ್ಟಿನಲ್ಲಿ ಅಂಡರ್-16 ಆಟಗಾರರೊಂದಿಗೆ ಸಂವಾದ ನಡೆಸಿರುವ ದಿನೇಶ್ ಕಾರ್ತಿಕ್ ಇದೀಗ ಟ್ರೋಲಿಗರಿಗೆ ಆಹಾರವಾಗಿದ್ದಾರೆ. ಇದಾಗ್ಯೂ ಅವರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಹಳೆಯ ಖದರ್ ತೋರಿಸುವ ಮೂಲಕ ಟ್ರೋಲರ್ಸ್​ಗೆ ಬ್ಯಾಟ್ ಮೂಲಕ ಉತ್ತರ ನೀಡಲಿದ್ದಾರಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಅಂಡರ್-16 ಆಟಗಾರರೊಂದಿಗೆ ಸಂವಾದ ನಡೆಸಿರುವ ದಿನೇಶ್ ಕಾರ್ತಿಕ್ ಇದೀಗ ಟ್ರೋಲಿಗರಿಗೆ ಆಹಾರವಾಗಿದ್ದಾರೆ. ಇದಾಗ್ಯೂ ಅವರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ತಮ್ಮ ಹಳೆಯ ಖದರ್ ತೋರಿಸುವ ಮೂಲಕ ಟ್ರೋಲರ್ಸ್​ಗೆ ಬ್ಯಾಟ್ ಮೂಲಕ ಉತ್ತರ ನೀಡಲಿದ್ದಾರಾ ಕಾದು ನೋಡಬೇಕಿದೆ.

7 / 7
Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು