AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಫೈನಲ್ ಪಂದ್ಯಕ್ಕೂ ಮುನ್ನ ನಿವೃತ್ತಿ ಘೋಷಿಸಿದ CSK ಆಟಗಾರ

Ambati Rayudu Retirement: ಐಪಿಎಲ್​ನಲ್ಲಿ 204 ಪಂದ್ಯಗಳನ್ನಾಡಿರುವ ಅಂಬಾಟಿ ರಾಯುಡು ಒಟ್ಟು 4329 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್|

Updated on:May 29, 2023 | 2:52 AM

Share
IPL 2023 Final: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ನಿವೃತ್ತಿ ಘೋಷಿಸಿದ್ದಾರೆ.

IPL 2023 Final: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್​ನ ಫೈನಲ್​ ಪಂದ್ಯಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಆಟಗಾರ ಅಂಬಾಟಿ ರಾಯುಡು ನಿವೃತ್ತಿ ಘೋಷಿಸಿದ್ದಾರೆ.

1 / 7
2018 ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿರುವ ರಾಯುಡು ಕಳೆದ ಸೀಸನ್​ನಲ್ಲೇ ಐಪಿಎಲ್​ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದರು. ಆದರೆ ಸಿಎಸ್​ಕೆ ಫ್ರಾಂಚೈಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಅದರಂತೆ ಈ ಬಾರಿ ಕೂಡ ರಾಯುಡು ಸಿಎಸ್​ಕೆ ಪರ ಕಣಕ್ಕಿಳಿದಿದ್ದರು.

2018 ರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಭಾಗವಾಗಿರುವ ರಾಯುಡು ಕಳೆದ ಸೀಸನ್​ನಲ್ಲೇ ಐಪಿಎಲ್​ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದರು. ಆದರೆ ಸಿಎಸ್​ಕೆ ಫ್ರಾಂಚೈಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿತ್ತು. ಅದರಂತೆ ಈ ಬಾರಿ ಕೂಡ ರಾಯುಡು ಸಿಎಸ್​ಕೆ ಪರ ಕಣಕ್ಕಿಳಿದಿದ್ದರು.

2 / 7
ಇದೀಗ ಸಿಎಸ್​ಕೆ ತಂಡವು ಫೈನಲ್ ಪ್ರವೇಶಿಸಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ ಆಡುವ ಪಂದ್ಯವು ನನ್ನ ಪಾಲಿಗೆ ಕೊನೆಯ ಪಂದ್ಯವಾಗಿರಲಿದೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ಯಾವುದೇ ಯೂಟರ್ನ್ ತೆಗೆದುಕೊಳ್ಳುವುದಿಲ್ಲ ಎಂಬುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ.

ಇದೀಗ ಸಿಎಸ್​ಕೆ ತಂಡವು ಫೈನಲ್ ಪ್ರವೇಶಿಸಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ ಆಡುವ ಪಂದ್ಯವು ನನ್ನ ಪಾಲಿಗೆ ಕೊನೆಯ ಪಂದ್ಯವಾಗಿರಲಿದೆ ಎಂದು ಅಂಬಾಟಿ ರಾಯುಡು ತಿಳಿಸಿದ್ದಾರೆ. ಅಲ್ಲದೆ ಈ ವಿಷಯದಲ್ಲಿ ಯಾವುದೇ ಯೂಟರ್ನ್ ತೆಗೆದುಕೊಳ್ಳುವುದಿಲ್ಲ ಎಂಬುದನ್ನು ಕೂಡ ಸ್ಪಷ್ಟಪಡಿಸಿದ್ದಾರೆ.

3 / 7
2010 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ರಾಯುಡು 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು.

2010 ರಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ರಾಯುಡು 2018 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗಿದ್ದರು.

4 / 7
ಇದರ ನಡುವೆ 5 ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದರು.  ಮುಂಬೈ ಇಂಡಿಯನ್ಸ್ ಪರ 3 ಬಾರಿ ಕಪ್ ಗೆದ್ದ ತಂಡದ ಭಾಗವಾಗಿದ್ದ ರಾಯುಡು, ಸಿಎಸ್​ಕೆ ಪರ 2 ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರು. ಹಾಗೆಯೇ ಈ ಬಾರಿ ಫೈನಲ್ ಪ್ರವೇಶಿಸಿದ ಸಿಎಸ್​ಕೆ ತಂಡದ ಭಾಗವಾಗಿದ್ದಾರೆ.

ಇದರ ನಡುವೆ 5 ಬಾರಿ ಚಾಂಪಿಯನ್ ತಂಡದ ಭಾಗವಾಗಿದ್ದರು. ಮುಂಬೈ ಇಂಡಿಯನ್ಸ್ ಪರ 3 ಬಾರಿ ಕಪ್ ಗೆದ್ದ ತಂಡದ ಭಾಗವಾಗಿದ್ದ ರಾಯುಡು, ಸಿಎಸ್​ಕೆ ಪರ 2 ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರು. ಹಾಗೆಯೇ ಈ ಬಾರಿ ಫೈನಲ್ ಪ್ರವೇಶಿಸಿದ ಸಿಎಸ್​ಕೆ ತಂಡದ ಭಾಗವಾಗಿದ್ದಾರೆ.

5 / 7
ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ 2 ಶೇಷ್ಠ ತಂಡಗಳು...204 ಪಂದ್ಯಗಳು, 14 ಸೀಸನ್‌ಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಐಪಿಎಲ್​ನಲ್ಲಿ ಇಂದು ನನ್ನ ಕೊನೆಯ ಪಂದ್ಯವಾಡಲು ನಿರ್ಧರಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳು ಎಂದು ರಾಯುಡು ತಿಳಿಸಿದ್ದಾರೆ.

ಮುಂಬೈ ಇಂಡಿಯನ್ಸ್ ಹಾಗೂ ಸಿಎಸ್​ಕೆ 2 ಶೇಷ್ಠ ತಂಡಗಳು...204 ಪಂದ್ಯಗಳು, 14 ಸೀಸನ್‌ಗಳು, 11 ಪ್ಲೇಆಫ್‌ಗಳು, 8 ಫೈನಲ್‌ಗಳು, 5 ಟ್ರೋಫಿಗಳು. ಐಪಿಎಲ್​ನಲ್ಲಿ ಇಂದು ನನ್ನ ಕೊನೆಯ ಪಂದ್ಯವಾಡಲು ನಿರ್ಧರಿಸಿದ್ದೇನೆ. ಎಲ್ಲರಿಗೂ ಧನ್ಯವಾದಗಳು ಎಂದು ರಾಯುಡು ತಿಳಿಸಿದ್ದಾರೆ.

6 / 7
ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 15 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ 37 ವರ್ಷದ ರಾಯುಡು, ಒಟ್ಟು 139 ರನ್​ ಕಲೆಹಾಕಿದ್ದಾರೆ. ಹಾಗೆಯೇ ಒಟ್ಟಾರೆ ಐಪಿಎಲ್​ನಲ್ಲಿ 204 ಪಂದ್ಯಗಳನ್ನಾಡಿ 4329	 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.

ಅಂದಹಾಗೆ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 15 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ 37 ವರ್ಷದ ರಾಯುಡು, ಒಟ್ಟು 139 ರನ್​ ಕಲೆಹಾಕಿದ್ದಾರೆ. ಹಾಗೆಯೇ ಒಟ್ಟಾರೆ ಐಪಿಎಲ್​ನಲ್ಲಿ 204 ಪಂದ್ಯಗಳನ್ನಾಡಿ 4329 ರನ್ ಕಲೆಹಾಕಿದ್ದಾರೆ. ಈ ವೇಳೆ 1 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.

7 / 7

Published On - 6:36 pm, Sun, 28 May 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ