AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Winner: ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ಸ್

IPL 2023 Final CSK vs GT: 8ನೇ ಓವರ್​ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

TV9 Web
| Edited By: |

Updated on:May 30, 2023 | 3:47 AM

Share
IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ​ 16ನೇ ಸೀಸನ್ ಫೈನಲ್​ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಐಪಿಎಲ್​ನಲ್ಲಿ 5 ಬಾರಿ ಟ್ರೋಫಿ ಗೆದ್ದ 2ನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿದ್ದರು.

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ​ 16ನೇ ಸೀಸನ್ ಫೈನಲ್​ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಐಪಿಎಲ್​ನಲ್ಲಿ 5 ಬಾರಿ ಟ್ರೋಫಿ ಗೆದ್ದ 2ನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿದ್ದರು.

1 / 8
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್ (39) ಹಾಗೂ ವೃದ್ಧಿಮಾನ್ ಸಾಹ (54) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಗಿಲ್ ಔಟಾದ ಬಳಿಕ ಕ್ರೀಸ್​ಗೆ ಆಗಮಿಸಿದ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್ (39) ಹಾಗೂ ವೃದ್ಧಿಮಾನ್ ಸಾಹ (54) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಗಿಲ್ ಔಟಾದ ಬಳಿಕ ಕ್ರೀಸ್​ಗೆ ಆಗಮಿಸಿದ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 8
8ನೇ ಓವರ್​ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಕೂಡ ಬ್ಯಾಟಿಂಗ್ ಗೇರ್ ಬದಲಿಸಿದರು. ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್​ಕೆ ಬೌಲರ್​ಗಳು ಲಯ ತಪ್ಪಿದರು.

8ನೇ ಓವರ್​ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಕೂಡ ಬ್ಯಾಟಿಂಗ್ ಗೇರ್ ಬದಲಿಸಿದರು. ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್​ಕೆ ಬೌಲರ್​ಗಳು ಲಯ ತಪ್ಪಿದರು.

3 / 8
ಪರಿಣಾಮ 33 ಎಸೆತಗಳಲ್ಲಿ ಸಾಯಿ ಸುದರ್ಶನ್ ಅರ್ಧಶತಕ ಪೂರೈಸಿದರು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಯುವ ಆಟಗಾರನಿಗೆ ಮನಸೊ ಇಚ್ಛೆ ಬ್ಯಾಟ್ ಬೀಸುವಂತೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು. ಅಲ್ಲಿಂದ ಶುರುವಾದ ಸಾಯಿ ಸುದರ್ಶನ್ ಸಿಡಿಲಬ್ಬರಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್​ಗಳು ಪರದಾಡಿದರು.

ಪರಿಣಾಮ 33 ಎಸೆತಗಳಲ್ಲಿ ಸಾಯಿ ಸುದರ್ಶನ್ ಅರ್ಧಶತಕ ಪೂರೈಸಿದರು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಯುವ ಆಟಗಾರನಿಗೆ ಮನಸೊ ಇಚ್ಛೆ ಬ್ಯಾಟ್ ಬೀಸುವಂತೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು. ಅಲ್ಲಿಂದ ಶುರುವಾದ ಸಾಯಿ ಸುದರ್ಶನ್ ಸಿಡಿಲಬ್ಬರಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್​ಗಳು ಪರದಾಡಿದರು.

4 / 8
19ನೇ ಓವರ್​ವರೆಗೂ ಸಿಡಿಲಬ್ಬರ ಮುಂದುವರೆಸಿದ ಸಾಯಿ ಇನ್ನೇನು ಶತಕ ಪೂರೈಸಲಿದ್ದಾರೆ ಅನ್ನುವಷ್ಟರಲ್ಲಿ ಮತೀಶ ಪತಿರಾಣ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು. ಆದರೆ ಅದಾಗಲೇ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಾಯಿ ಸುದರ್ಶನ್ 96 ರನ್ ಚಚ್ಚಿದ್ದರು. ಪರಿಣಾಮ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 214 ರನ್​ಗಳಿಸಲು ಸಾಧ್ಯವಾಯಿತು.

19ನೇ ಓವರ್​ವರೆಗೂ ಸಿಡಿಲಬ್ಬರ ಮುಂದುವರೆಸಿದ ಸಾಯಿ ಇನ್ನೇನು ಶತಕ ಪೂರೈಸಲಿದ್ದಾರೆ ಅನ್ನುವಷ್ಟರಲ್ಲಿ ಮತೀಶ ಪತಿರಾಣ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು. ಆದರೆ ಅದಾಗಲೇ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಾಯಿ ಸುದರ್ಶನ್ 96 ರನ್ ಚಚ್ಚಿದ್ದರು. ಪರಿಣಾಮ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 214 ರನ್​ಗಳಿಸಲು ಸಾಧ್ಯವಾಯಿತು.

5 / 8
215 ರನ್​ಗಳ ಗುರಿಯೊಂದಿಗೆ ಇನಿಂಗ್ಸ್​ ಆರಂಭಿಸಿದ ಸಿಎಸ್​ಕೆಗೆ ವರುಣ ಅಡ್ಡಿಯಾದನು. ಹೀಗಾಗಿ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ಗಳ ಕಡಿತದೊಂದಿಗೆ ಪಂದ್ಯ ಮುಂದುವರೆಸಲಾಯಿತು. ಅದರಂತೆ ಸಿಎಸ್​ಕೆ ತಂಡಕ್ಕೆ 15 ಓವರ್​ಗಳಲ್ಲಿ 171 ರನ್​ಗಳ ಗುರಿ ನೀಡಲಾಯಿತು.

215 ರನ್​ಗಳ ಗುರಿಯೊಂದಿಗೆ ಇನಿಂಗ್ಸ್​ ಆರಂಭಿಸಿದ ಸಿಎಸ್​ಕೆಗೆ ವರುಣ ಅಡ್ಡಿಯಾದನು. ಹೀಗಾಗಿ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ಗಳ ಕಡಿತದೊಂದಿಗೆ ಪಂದ್ಯ ಮುಂದುವರೆಸಲಾಯಿತು. ಅದರಂತೆ ಸಿಎಸ್​ಕೆ ತಂಡಕ್ಕೆ 15 ಓವರ್​ಗಳಲ್ಲಿ 171 ರನ್​ಗಳ ಗುರಿ ನೀಡಲಾಯಿತು.

6 / 8
ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ಕೊನೆಯ ಓವರ್​ನಲ್ಲಿ 13 ರನ್​ ಗಳಿಸಬೇಕಿತ್ತು. ಅದರಲ್ಲೂ ಕೊನೆಯ 2 ಎಸೆತಗಳಲ್ಲಿ 10 ರನ್​ ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸುವ ಮೂಲಕ ಸಿಎಸ್​ಕೆ ತಂಡಕ್ಕೆ 5 ವಿಕೆಟ್​​ಗಳ ಜಯ ತಂದುಕೊಟ್ಟರು.

ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ಕೊನೆಯ ಓವರ್​ನಲ್ಲಿ 13 ರನ್​ ಗಳಿಸಬೇಕಿತ್ತು. ಅದರಲ್ಲೂ ಕೊನೆಯ 2 ಎಸೆತಗಳಲ್ಲಿ 10 ರನ್​ ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸುವ ಮೂಲಕ ಸಿಎಸ್​ಕೆ ತಂಡಕ್ಕೆ 5 ವಿಕೆಟ್​​ಗಳ ಜಯ ತಂದುಕೊಟ್ಟರು.

7 / 8
ಈ ಜಯದೊಂದಿಗೆ ಸಿಎಸ್​ಕೆ ತಂಡವು 5ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಮಾತ್ರ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಆಗಿತ್ತು. ಇದೀಗ 5ನೇ ಸಲ ಕಿರೀಟ ಮುಡಿಗೇರಿಸಿಕೊಳ್ಳುವ ಮೂಲಕ ಧೋನಿ ಪಡೆ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಸರಿಗಟ್ಟಿದೆ.

ಈ ಜಯದೊಂದಿಗೆ ಸಿಎಸ್​ಕೆ ತಂಡವು 5ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಮಾತ್ರ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಆಗಿತ್ತು. ಇದೀಗ 5ನೇ ಸಲ ಕಿರೀಟ ಮುಡಿಗೇರಿಸಿಕೊಳ್ಳುವ ಮೂಲಕ ಧೋನಿ ಪಡೆ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಸರಿಗಟ್ಟಿದೆ.

8 / 8

Published On - 1:34 am, Tue, 30 May 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ