AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Winner: ಚೆನ್ನೈ ಸೂಪರ್ ಕಿಂಗ್ಸ್ ಚಾಂಪಿಯನ್ಸ್

IPL 2023 Final CSK vs GT: 8ನೇ ಓವರ್​ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

TV9 Web
| Updated By: ಝಾಹಿರ್ ಯೂಸುಫ್|

Updated on:May 30, 2023 | 3:47 AM

Share
IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ​ 16ನೇ ಸೀಸನ್ ಫೈನಲ್​ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಐಪಿಎಲ್​ನಲ್ಲಿ 5 ಬಾರಿ ಟ್ರೋಫಿ ಗೆದ್ದ 2ನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿದ್ದರು.

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ​ 16ನೇ ಸೀಸನ್ ಫೈನಲ್​ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಇದರೊಂದಿಗೆ ಐಪಿಎಲ್​ನಲ್ಲಿ 5 ಬಾರಿ ಟ್ರೋಫಿ ಗೆದ್ದ 2ನೇ ತಂಡ ಎನಿಸಿಕೊಂಡಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ಧೋನಿ ಫೀಲ್ಡಿಂಗ್ ಆಯ್ಕೆ ಮಾಡಿದ್ದರು.

1 / 8
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್ (39) ಹಾಗೂ ವೃದ್ಧಿಮಾನ್ ಸಾಹ (54) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಗಿಲ್ ಔಟಾದ ಬಳಿಕ ಕ್ರೀಸ್​ಗೆ ಆಗಮಿಸಿದ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ್​ಮನ್ ಗಿಲ್ (39) ಹಾಗೂ ವೃದ್ಧಿಮಾನ್ ಸಾಹ (54) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಗಿಲ್ ಔಟಾದ ಬಳಿಕ ಕ್ರೀಸ್​ಗೆ ಆಗಮಿಸಿದ ಸಾಯಿ ಸುದರ್ಶನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು.

2 / 8
8ನೇ ಓವರ್​ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಕೂಡ ಬ್ಯಾಟಿಂಗ್ ಗೇರ್ ಬದಲಿಸಿದರು. ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್​ಕೆ ಬೌಲರ್​ಗಳು ಲಯ ತಪ್ಪಿದರು.

8ನೇ ಓವರ್​ ವೇಳೆ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ ಆರಂಭದ 12 ಎಸೆತಗಳಲ್ಲಿ ಕಲೆಹಾಕಿದ್ದು ಕೇವಲ 10 ರನ್ ಮಾತ್ರ. ಆದರೆ ತಂಡದ ಮೊತ್ತ 100ರ ಗಡಿದಾಟುತ್ತಿದ್ದಂತೆ ಸಾಯಿ ಕೂಡ ಬ್ಯಾಟಿಂಗ್ ಗೇರ್ ಬದಲಿಸಿದರು. ಸಾಯಿಯ ಅಬ್ಬರ ಶುರುವಾಗುತ್ತಿದ್ದಂತೆ ಅತ್ತ ಸಿಎಸ್​ಕೆ ಬೌಲರ್​ಗಳು ಲಯ ತಪ್ಪಿದರು.

3 / 8
ಪರಿಣಾಮ 33 ಎಸೆತಗಳಲ್ಲಿ ಸಾಯಿ ಸುದರ್ಶನ್ ಅರ್ಧಶತಕ ಪೂರೈಸಿದರು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಯುವ ಆಟಗಾರನಿಗೆ ಮನಸೊ ಇಚ್ಛೆ ಬ್ಯಾಟ್ ಬೀಸುವಂತೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು. ಅಲ್ಲಿಂದ ಶುರುವಾದ ಸಾಯಿ ಸುದರ್ಶನ್ ಸಿಡಿಲಬ್ಬರಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್​ಗಳು ಪರದಾಡಿದರು.

ಪರಿಣಾಮ 33 ಎಸೆತಗಳಲ್ಲಿ ಸಾಯಿ ಸುದರ್ಶನ್ ಅರ್ಧಶತಕ ಪೂರೈಸಿದರು. ಈ ವೇಳೆ ಕ್ರೀಸ್​ಗೆ ಆಗಮಿಸಿದ ಹಾರ್ದಿಕ್ ಪಾಂಡ್ಯ ಯುವ ಆಟಗಾರನಿಗೆ ಮನಸೊ ಇಚ್ಛೆ ಬ್ಯಾಟ್ ಬೀಸುವಂತೆ ಸಂಪೂರ್ಣ ಸ್ವಾತಂತ್ರ್ಯ ನೀಡಿದರು. ಅಲ್ಲಿಂದ ಶುರುವಾದ ಸಾಯಿ ಸುದರ್ಶನ್ ಸಿಡಿಲಬ್ಬರಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಬೌಲರ್​ಗಳು ಪರದಾಡಿದರು.

4 / 8
19ನೇ ಓವರ್​ವರೆಗೂ ಸಿಡಿಲಬ್ಬರ ಮುಂದುವರೆಸಿದ ಸಾಯಿ ಇನ್ನೇನು ಶತಕ ಪೂರೈಸಲಿದ್ದಾರೆ ಅನ್ನುವಷ್ಟರಲ್ಲಿ ಮತೀಶ ಪತಿರಾಣ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು. ಆದರೆ ಅದಾಗಲೇ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಾಯಿ ಸುದರ್ಶನ್ 96 ರನ್ ಚಚ್ಚಿದ್ದರು. ಪರಿಣಾಮ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 214 ರನ್​ಗಳಿಸಲು ಸಾಧ್ಯವಾಯಿತು.

19ನೇ ಓವರ್​ವರೆಗೂ ಸಿಡಿಲಬ್ಬರ ಮುಂದುವರೆಸಿದ ಸಾಯಿ ಇನ್ನೇನು ಶತಕ ಪೂರೈಸಲಿದ್ದಾರೆ ಅನ್ನುವಷ್ಟರಲ್ಲಿ ಮತೀಶ ಪತಿರಾಣ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು. ಆದರೆ ಅದಾಗಲೇ ಕೇವಲ 47 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ನೊಂದಿಗೆ ಸಾಯಿ ಸುದರ್ಶನ್ 96 ರನ್ ಚಚ್ಚಿದ್ದರು. ಪರಿಣಾಮ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 214 ರನ್​ಗಳಿಸಲು ಸಾಧ್ಯವಾಯಿತು.

5 / 8
215 ರನ್​ಗಳ ಗುರಿಯೊಂದಿಗೆ ಇನಿಂಗ್ಸ್​ ಆರಂಭಿಸಿದ ಸಿಎಸ್​ಕೆಗೆ ವರುಣ ಅಡ್ಡಿಯಾದನು. ಹೀಗಾಗಿ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ಗಳ ಕಡಿತದೊಂದಿಗೆ ಪಂದ್ಯ ಮುಂದುವರೆಸಲಾಯಿತು. ಅದರಂತೆ ಸಿಎಸ್​ಕೆ ತಂಡಕ್ಕೆ 15 ಓವರ್​ಗಳಲ್ಲಿ 171 ರನ್​ಗಳ ಗುರಿ ನೀಡಲಾಯಿತು.

215 ರನ್​ಗಳ ಗುರಿಯೊಂದಿಗೆ ಇನಿಂಗ್ಸ್​ ಆರಂಭಿಸಿದ ಸಿಎಸ್​ಕೆಗೆ ವರುಣ ಅಡ್ಡಿಯಾದನು. ಹೀಗಾಗಿ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್​ಗಳ ಕಡಿತದೊಂದಿಗೆ ಪಂದ್ಯ ಮುಂದುವರೆಸಲಾಯಿತು. ಅದರಂತೆ ಸಿಎಸ್​ಕೆ ತಂಡಕ್ಕೆ 15 ಓವರ್​ಗಳಲ್ಲಿ 171 ರನ್​ಗಳ ಗುರಿ ನೀಡಲಾಯಿತು.

6 / 8
ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ಕೊನೆಯ ಓವರ್​ನಲ್ಲಿ 13 ರನ್​ ಗಳಿಸಬೇಕಿತ್ತು. ಅದರಲ್ಲೂ ಕೊನೆಯ 2 ಎಸೆತಗಳಲ್ಲಿ 10 ರನ್​ ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸುವ ಮೂಲಕ ಸಿಎಸ್​ಕೆ ತಂಡಕ್ಕೆ 5 ವಿಕೆಟ್​​ಗಳ ಜಯ ತಂದುಕೊಟ್ಟರು.

ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು ಕೊನೆಯ ಓವರ್​ನಲ್ಲಿ 13 ರನ್​ ಗಳಿಸಬೇಕಿತ್ತು. ಅದರಲ್ಲೂ ಕೊನೆಯ 2 ಎಸೆತಗಳಲ್ಲಿ 10 ರನ್​ ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸುವ ಮೂಲಕ ಸಿಎಸ್​ಕೆ ತಂಡಕ್ಕೆ 5 ವಿಕೆಟ್​​ಗಳ ಜಯ ತಂದುಕೊಟ್ಟರು.

7 / 8
ಈ ಜಯದೊಂದಿಗೆ ಸಿಎಸ್​ಕೆ ತಂಡವು 5ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಮಾತ್ರ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಆಗಿತ್ತು. ಇದೀಗ 5ನೇ ಸಲ ಕಿರೀಟ ಮುಡಿಗೇರಿಸಿಕೊಳ್ಳುವ ಮೂಲಕ ಧೋನಿ ಪಡೆ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಸರಿಗಟ್ಟಿದೆ.

ಈ ಜಯದೊಂದಿಗೆ ಸಿಎಸ್​ಕೆ ತಂಡವು 5ನೇ ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡ ಮಾತ್ರ ಐಪಿಎಲ್​ನಲ್ಲಿ 5 ಬಾರಿ ಚಾಂಪಿಯನ್ ಆಗಿತ್ತು. ಇದೀಗ 5ನೇ ಸಲ ಕಿರೀಟ ಮುಡಿಗೇರಿಸಿಕೊಳ್ಳುವ ಮೂಲಕ ಧೋನಿ ಪಡೆ ಮುಂಬೈ ಇಂಡಿಯನ್ಸ್ ತಂಡದ ದಾಖಲೆಯನ್ನು ಸರಿಗಟ್ಟಿದೆ.

8 / 8

Published On - 1:34 am, Tue, 30 May 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ