AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಐಪಿಎಲ್ ಫೈನಲ್ ಫಿಕ್ಸ್? CSK ರನ್ನರ್ ಅಪ್..?

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ ಹಾಗೂ ಗುಜರಾತ್ ಟೈಟಾನ್ಸ್​ ನಡುವಣ ಐಪಿಎಲ್ ಫೈನಲ್ ಪಂದ್ಯವನ್ನು ಮಳೆಯ ಕಾರಣ ಸೋಮವಾರಕ್ಕೆ ಮುಂದೂಡಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on:May 29, 2023 | 2:36 AM

Share
IPL 2023 Final CSK vs GT: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಫೈನಲ್ ಪಂದ್ಯ ಫಿಕ್ಸ್​​ ಆಗಿದೆಯಾ? ಇಂತಹದೊಂದು ಅನುಮಾನಕ್ಕೆ ಕಾರಣವಾಗಿದ್ದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನ ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡ ಬರಹ​.

IPL 2023 Final CSK vs GT: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಫೈನಲ್ ಪಂದ್ಯ ಫಿಕ್ಸ್​​ ಆಗಿದೆಯಾ? ಇಂತಹದೊಂದು ಅನುಮಾನಕ್ಕೆ ಕಾರಣವಾಗಿದ್ದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನ ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡ ಬರಹ​.

1 / 7
ಹೌದು, ಭಾನುವಾರ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಆದರೆ ಇದರ ನಡುವೆ ಸ್ಟೇಡಿಯಂನಲ್ಲಿನ ಬಿಗ್ ಸ್ಕ್ರೀನ್​ನಲ್ಲಿ ನೀಡಲಾಗುತ್ತಿದ್ದ ಅಪ್​ಡೇಟ್​ಗಳ ನಡುವೆ ಸಿಎಸ್​ಕೆ ತಂಡವು ರನ್ನರ್ ಅಪ್ ಎಂಬ ಬರಹ ಕಾಣಿಸಿಕೊಂಡಿದೆ.

ಹೌದು, ಭಾನುವಾರ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ಆದರೆ ಇದರ ನಡುವೆ ಸ್ಟೇಡಿಯಂನಲ್ಲಿನ ಬಿಗ್ ಸ್ಕ್ರೀನ್​ನಲ್ಲಿ ನೀಡಲಾಗುತ್ತಿದ್ದ ಅಪ್​ಡೇಟ್​ಗಳ ನಡುವೆ ಸಿಎಸ್​ಕೆ ತಂಡವು ರನ್ನರ್ ಅಪ್ ಎಂಬ ಬರಹ ಕಾಣಿಸಿಕೊಂಡಿದೆ.

2 / 7
ಇತ್ತ ಟಾಸ್ ಪ್ರಕ್ರಿಯೆಯೇ ನಡೆದಿಲ್ಲ. ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ರನ್ನರ್ ಅಪ್ ಎಂಬ ಬರಹ ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದ್ದು, ಜೊತೆಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಇತ್ತ ಟಾಸ್ ಪ್ರಕ್ರಿಯೆಯೇ ನಡೆದಿಲ್ಲ. ಅದಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡ ರನ್ನರ್ ಅಪ್ ಎಂಬ ಬರಹ ಕಾಣಿಸಿಕೊಂಡಿರುವುದು ಅಚ್ಚರಿಗೆ ಕಾರಣವಾಗಿದ್ದು, ಜೊತೆಗೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

3 / 7
ಏಕೆಂದರೆ ಪಂದ್ಯ ಶುರುವಾಗುವ ಮುಂಚೆಯೇ ತಂಡವೊಂದನ್ನು ರನ್ನರ್ ಅಪ್ ಎಂದು ನಿರ್ಧರಿಸುವುದು ಹೇಗೆ? ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ ಐಪಿಎಲ್​ ಫೈನಲ್ ಪಂದ್ಯವು ಈಗಾಗಲೇ ಫಿಕ್ಸ್​ ಆಗಿದೆಯಾ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಏಕೆಂದರೆ ಪಂದ್ಯ ಶುರುವಾಗುವ ಮುಂಚೆಯೇ ತಂಡವೊಂದನ್ನು ರನ್ನರ್ ಅಪ್ ಎಂದು ನಿರ್ಧರಿಸುವುದು ಹೇಗೆ? ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೆ ಐಪಿಎಲ್​ ಫೈನಲ್ ಪಂದ್ಯವು ಈಗಾಗಲೇ ಫಿಕ್ಸ್​ ಆಗಿದೆಯಾ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

4 / 7
ಒಟ್ಟಿನಲ್ಲಿ ಫೈನಲ್ ಪಂದ್ಯಕ್ಕೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿನ ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡ ಫೋಟೋ ಇದೀಗ ವೈರಲ್ ಆಗಿದ್ದು, ಇದಾಗ್ಯೂ ಸೋಮವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಫೈನಲ್ ಪಂದ್ಯಕ್ಕೂ ಮುನ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿನ ಬಿಗ್ ಸ್ಕ್ರೀನ್​ನಲ್ಲಿ ಕಾಣಿಸಿಕೊಂಡ ಫೋಟೋ ಇದೀಗ ವೈರಲ್ ಆಗಿದ್ದು, ಇದಾಗ್ಯೂ ಸೋಮವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

5 / 7
ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀಗಿದೆ: ಎಂಎಸ್ ಧೋನಿ (ನಾಯಕ), ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಶಿವಂ ದುಬೆ, ಮೊಯಿನ್ ಅಲಿ, ರವೀಂದ್ರ ಜಡೇಜಾ, ದೀಪಕ್ ಚಾಹರ್, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಮತೀಶ ಪತಿರಾಣ, ಮಿಚೆಲ್ ಸ್ಯಾಂಟರ್, ಶೇಕ್ ರಶೀದ್, ಆಕಾಶ್ ಸಿಂಗ್, ಸಿಸಂದಾ ಮಗಲಾ, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆರ್ ಎಸ್ ಹಂಗರ್ಗೇಕರ್, ಭಗತ್ ವರ್ಮಾ, ನಿಶಾಂತ್ ಸಿಂಧು.

6 / 7
ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

ಗುಜರಾತ್ ಟೈಟಾನ್ಸ್ ತಂಡ ಹೀಗಿದೆ: ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್) , ಹಾರ್ದಿಕ್ ಪಾಂಡ್ಯ (ನಾಯಕ) , ಶುಭ್​ಮನ್ ಗಿಲ್ , ದಸುನ್ ಶಾನಕ , ಡೇವಿಡ್ ಮಿಲ್ಲರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಮೋಹಿತ್ ಶರ್ಮಾ , ನೂರ್ ಅಹ್ಮದ್ , ಮೊಹಮ್ಮದ್ ಶಮಿ , ಯಶ್ ದಯಾಳ್ , ವಿಜಯ್ ಶಂಕರ್ , ಶಿವಂ ಭರತ್ , ಶಿವಂ ಭರತ್ ಕಿಶೋರ್ , ಅಭಿನವ್ ಮನೋಹರ್ , ಓಡಿಯನ್ ಸ್ಮಿತ್ , ಅಲ್ಜಾರಿ ಜೋಸೆಫ್ , ಮ್ಯಾಥ್ಯೂ ವೇಡ್ , ಜೋಶುವಾ ಲಿಟಲ್ ,ದರ್ಶನ್ ನಲ್ಕಂಡೆ , ಉರ್ವಿಲ್ ಪಟೇಲ್ , ಸಾಯಿ ಸುದರ್ಶನ್ , ಜಯಂತ್ ಯಾದವ್ , ಪ್ರದೀಪ್ ಸಾಂಗ್ವಾನ್.

7 / 7

Published On - 11:56 pm, Sun, 28 May 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!