AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final CSK vs GT: ಮಳೆ ಬಂದರೆ ಸೂಪರ್ ಓವರ್​ ಮೂಲಕ ಫಲಿತಾಂಶ ನಿರ್ಧಾರ

IPL 2023 Final CSK vs GT: ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು ಎಂಬ ನಿಯಮ ರೂಪಿಸಲಾಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:May 29, 2023 | 3:41 PM

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್​​ನ ಫೈನಲ್ ಪಂದ್ಯವು ಇಂದು (ಮೆ 29) ಜರುಗಲಿದೆ. ಮಳೆಯ ಕಾರಣ ಮೀಸಲು ದಿನಕ್ಕೆ ಮುಂದೂಡಲ್ಪಟ್ಟ ಪಂದ್ಯಕ್ಕೆ ಮತ್ತೆ ವರುಣನ ಭೀತಿ ಎದುರಾಗಿದೆ.

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಬೇಕಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವಣ ಐಪಿಎಲ್​​ನ ಫೈನಲ್ ಪಂದ್ಯವು ಇಂದು (ಮೆ 29) ಜರುಗಲಿದೆ. ಮಳೆಯ ಕಾರಣ ಮೀಸಲು ದಿನಕ್ಕೆ ಮುಂದೂಡಲ್ಪಟ್ಟ ಪಂದ್ಯಕ್ಕೆ ಮತ್ತೆ ವರುಣನ ಭೀತಿ ಎದುರಾಗಿದೆ.

1 / 10
ಏಕೆಂದರೆ ಹವಮಾನ ವರದಿ ಪ್ರಕಾರ ಸೋಮವಾರ ಕೂಡ ಅಹಮದಾಬಾದ್​ನ ಸುತ್ತ ಮುತ್ತ ಮೋಡ ಕವಿದ ವಾತವರಣವಿದ್ದು, ಹೀಗಾಗಿ ಮಳೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಇಂದು ಕೂಡ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕಾಗಿ ಬಿಸಿಸಿಐ ಕೆಲ ನಿಯಮಗಳನ್ನು ರೂಪಿಸಿದೆ.

ಏಕೆಂದರೆ ಹವಮಾನ ವರದಿ ಪ್ರಕಾರ ಸೋಮವಾರ ಕೂಡ ಅಹಮದಾಬಾದ್​ನ ಸುತ್ತ ಮುತ್ತ ಮೋಡ ಕವಿದ ವಾತವರಣವಿದ್ದು, ಹೀಗಾಗಿ ಮಳೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಒಂದು ವೇಳೆ ಇಂದು ಕೂಡ ಮಳೆ ಬಂದರೆ ಫಲಿತಾಂಶ ನಿರ್ಧರಿಸುವುದು ಹೇಗೆ ಎಂಬ ಪ್ರಶ್ನೆ ಮೂಡುವುದು ಸಹಜ. ಇದಕ್ಕಾಗಿ ಬಿಸಿಸಿಐ ಕೆಲ ನಿಯಮಗಳನ್ನು ರೂಪಿಸಿದೆ.

2 / 10
ಈ ನಿಯಮಗಳಲ್ಲಿ ಸೂಪರ್ ಓವರ್ ಕೂಡ ಇರುವುದು ವಿಶೇಷ. ಅಂದರೆ ನಿಗದಿತ ಸಮಯದೊಳಗೆ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ಪಂದ್ಯ ನಡೆಯುವುದು ಖಚಿತ. ಆದರೆ ಅದಕ್ಕೂ ಮುನ್ನ ಇತರೆ ಆಯ್ಕೆಗಳನ್ನು ಪರಿಶೀಲಿಸಲಿದೆ. ಈ ಆಯ್ಕೆಗಳೆಂದರೆ...

ಈ ನಿಯಮಗಳಲ್ಲಿ ಸೂಪರ್ ಓವರ್ ಕೂಡ ಇರುವುದು ವಿಶೇಷ. ಅಂದರೆ ನಿಗದಿತ ಸಮಯದೊಳಗೆ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಸೂಪರ್ ಓವರ್ ಪಂದ್ಯ ನಡೆಯುವುದು ಖಚಿತ. ಆದರೆ ಅದಕ್ಕೂ ಮುನ್ನ ಇತರೆ ಆಯ್ಕೆಗಳನ್ನು ಪರಿಶೀಲಿಸಲಿದೆ. ಈ ಆಯ್ಕೆಗಳೆಂದರೆ...

3 / 10
ಪಂದ್ಯ ಆರಂಭಕ್ಕೂ ಮುನ್ನ ಮಳೆ ಬಂದರೆ ಅಥವಾ ಆರಂಭದ ಬಳಿಕ ಮಳೆ ಬಂದು ವಿಳಂಬವಾದರೆ ಸಂಪೂರ್ಣ ಓವರ್​ಗಳ ಪಂದ್ಯಗಳನ್ನು ನಡೆಸಲಾಗುತ್ತದೆ. ಇಲ್ಲಿ ಓವರ್​ಗಳ ಕಡಿತಕ್ಕೆ ಕಟ್​ ಆಫ್ ಟೈಮ್ ರಾತ್ರಿ 9.40. ಅಂದರೆ ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ.

ಪಂದ್ಯ ಆರಂಭಕ್ಕೂ ಮುನ್ನ ಮಳೆ ಬಂದರೆ ಅಥವಾ ಆರಂಭದ ಬಳಿಕ ಮಳೆ ಬಂದು ವಿಳಂಬವಾದರೆ ಸಂಪೂರ್ಣ ಓವರ್​ಗಳ ಪಂದ್ಯಗಳನ್ನು ನಡೆಸಲಾಗುತ್ತದೆ. ಇಲ್ಲಿ ಓವರ್​ಗಳ ಕಡಿತಕ್ಕೆ ಕಟ್​ ಆಫ್ ಟೈಮ್ ರಾತ್ರಿ 9.40. ಅಂದರೆ ರಾತ್ರಿ 9.40 ರೊಳಗೆ ಶುರುವಾದರೆ ಯಾವುದೇ ಓವರ್​ ಕಡಿತ ಇರುವುದಿಲ್ಲ. 2 ತಂಡಗಳು 20 ಓವರ್​ಗಳನ್ನು ಆಡಲಿದೆ.

4 / 10
ಇನ್ನು ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳನ್ನು ಕಡಿತ ಮಾಡಲಾಗುತ್ತದೆ. ಇನ್ನು ಉಭಯ ತಂಡಗಳ ಇನಿಂಗ್ಸ್​​ ನಡುವೆ ಮಳೆ ಬಂದು ನಿಂತರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಇಲ್ಲಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು ಎಂಬ ನಿಯಮ ರೂಪಿಸಲಾಗಿದೆ.

ಇನ್ನು ರಾತ್ರಿ 9.40 ರ ಬಳಿಕ ಪಂದ್ಯ ಆರಂಭವಾಗುವುದಾರೆ, ಓವರ್​ಗಳನ್ನು ಕಡಿತ ಮಾಡಲಾಗುತ್ತದೆ. ಇನ್ನು ಉಭಯ ತಂಡಗಳ ಇನಿಂಗ್ಸ್​​ ನಡುವೆ ಮಳೆ ಬಂದು ನಿಂತರೆ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಇಲ್ಲಿ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ ಫಲಿತಾಂಶ ನಿರ್ಧರಿಸಬೇಕಿದ್ದರೆ ಉಭಯ ತಂಡಗಳು ಕನಿಷ್ಠ 5 ಓವರ್​ಗಳನ್ನು ಆಡಿರಬೇಕು ಎಂಬ ನಿಯಮ ರೂಪಿಸಲಾಗಿದೆ.

5 / 10
ಇನ್ನು 7.30 ರಿಂದ 11.56 ರೊಳಗೆ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲು ಮುಂದಾಗಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 12.06 ರಿಂದ ಶುರುವಾಗಲಿದೆ.

ಇನ್ನು 7.30 ರಿಂದ 11.56 ರೊಳಗೆ ಪಂದ್ಯವನ್ನು ನಡೆಸಲು ಸಾಧ್ಯವಾಗದಿದ್ದರೆ ಹೆಚ್ಚುವರಿ ಸಮಯ ತೆಗೆದುಕೊಳ್ಳಲಾಗುತ್ತದೆ. ಈ ಮೂಲಕ 5 ಓವರ್​ಗಳ ಪಂದ್ಯವನ್ನು ಆಯೋಜಿಸಲು ಮುಂದಾಗಲಿದೆ. ಈ 5 ಓವರ್​ಗಳ ಪಂದ್ಯವು ರಾತ್ರಿ 12.06 ರಿಂದ ಶುರುವಾಗಲಿದೆ.

6 / 10
ಒಂದು ವೇಳೆ ರಾತ್ರಿ 12.06 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಕೂಡ ಸಾಧ್ಯವಾಗದಿದ್ದರೆ ಸೂಪರ್ ಓವರ್ ಮೊರೆ ಹೋಗಲಾಗುತ್ತದೆ. ಇಲ್ಲಿ ಸೂಪರ್ ಓವರ್ ನಡೆಸಲು ಪಿಚ್ ಸಿದ್ಧವಿದೆಯಾ ಎಂಬುದನ್ನು ಮುಖ್ಯವಾಗಿ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ.

ಒಂದು ವೇಳೆ ರಾತ್ರಿ 12.06 ರಿಂದ 12.50 ರೊಳಗೆ 5 ಓವರ್​ಗಳ ಪಂದ್ಯ ಆಯೋಜಿಸಲು ಕೂಡ ಸಾಧ್ಯವಾಗದಿದ್ದರೆ ಸೂಪರ್ ಓವರ್ ಮೊರೆ ಹೋಗಲಾಗುತ್ತದೆ. ಇಲ್ಲಿ ಸೂಪರ್ ಓವರ್ ನಡೆಸಲು ಪಿಚ್ ಸಿದ್ಧವಿದೆಯಾ ಎಂಬುದನ್ನು ಮುಖ್ಯವಾಗಿ ಪರಿಗಣನೆ ತೆಗೆದುಕೊಳ್ಳಲಾಗುತ್ತದೆ.

7 / 10
ಈ ಬಗ್ಗೆ ಉಭಯ ತಂಡಗಳ ನಾಯಕರುಗಳೊಂದಿಗೆ ಚರ್ಚಿಸಿದ ಬಳಿಕ ಅಂಪೈರ್ ಸೂಪರ್ ಓವರ್​ ನಡೆಸಲು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಒಂದು ವೇಳೆ ಸೂಪರ್ ಓವರ್ ನಡೆಸಲು ಕೂಡ ಸಾಧ್ಯವಾಗದಿದ್ದರೆ ಗುಜರಾತ್ ಟೈಟಾನ್ಸ್ ತಂಡ ಚಾಂಪಿಯನ್ ಆಗಲಿದೆ.

ಈ ಬಗ್ಗೆ ಉಭಯ ತಂಡಗಳ ನಾಯಕರುಗಳೊಂದಿಗೆ ಚರ್ಚಿಸಿದ ಬಳಿಕ ಅಂಪೈರ್ ಸೂಪರ್ ಓವರ್​ ನಡೆಸಲು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಒಂದು ವೇಳೆ ಸೂಪರ್ ಓವರ್ ನಡೆಸಲು ಕೂಡ ಸಾಧ್ಯವಾಗದಿದ್ದರೆ ಗುಜರಾತ್ ಟೈಟಾನ್ಸ್ ತಂಡ ಚಾಂಪಿಯನ್ ಆಗಲಿದೆ.

8 / 10
ಏಕೆಂದರೆ ಮೀಸಲು ದಿನದಂದು ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ, ಲೀಗ್ ಹಂತದ 70 ಪಂದ್ಯಗಳ ಬಳಿಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.

ಏಕೆಂದರೆ ಮೀಸಲು ದಿನದಂದು ಕನಿಷ್ಠ ಸೂಪರ್ ಓವರ್ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ, ಲೀಗ್ ಹಂತದ 70 ಪಂದ್ಯಗಳ ಬಳಿಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿದ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ.

9 / 10
ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಅಗ್ರಸ್ಥಾನ ಅಲಂಕರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ದ್ವಿತೀಯ ಸ್ಥಾನ ಅಲಂಕರಿಸಿತ್ತು. ಹೀಗಾಗಿ ಇಂದು ಕೂಡ ಪಂದ್ಯ ನಡೆದಿದ್ದರೆ ಹಾರ್ದಿಕ್ ಪಾಂಡ್ಯ ಪಡೆಯನ್ನು ಚಾಂಪಿಯನ್ಸ್ ಎಂದು ಪರಿಗಣಿಸಲಾಗುತ್ತದೆ.

ಲೀಗ್ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ ಅಗ್ರಸ್ಥಾನ ಅಲಂಕರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ ದ್ವಿತೀಯ ಸ್ಥಾನ ಅಲಂಕರಿಸಿತ್ತು. ಹೀಗಾಗಿ ಇಂದು ಕೂಡ ಪಂದ್ಯ ನಡೆದಿದ್ದರೆ ಹಾರ್ದಿಕ್ ಪಾಂಡ್ಯ ಪಡೆಯನ್ನು ಚಾಂಪಿಯನ್ಸ್ ಎಂದು ಪರಿಗಣಿಸಲಾಗುತ್ತದೆ.

10 / 10

Published On - 3:30 pm, Mon, 29 May 23

Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ