AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡದ ಇಬ್ಬರು ಸ್ಟಾರ್ ಆಟಗಾರರಿಗೆ ಗಾಯ: ಹೊಸ ಚಿಂತೆ ಶುರು..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ವಿಲ್ ಜಾಕ್ಸ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ರೀಸ್ ಟೋಪ್ಲಿ.

ಝಾಹಿರ್ ಯೂಸುಫ್
|

Updated on:Feb 21, 2023 | 2:34 PM

Share
ಇಂಡಿಯನ್ ಪ್ರೀಮಿಯರ್​ ಲೀಗ್ ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಎಲ್ಲಾ ತಂಡಗಳು ಸೀಸನ್​ 16 ಗಾಗಿ ಭರದ ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರು ಗಾಯಗೊಂಡಿರುವುದು ಹೊಸ ಚಿಂತೆಗೆ ಕಾರಣವಾಗಿದೆ.

ಇಂಡಿಯನ್ ಪ್ರೀಮಿಯರ್​ ಲೀಗ್ ಆರಂಭಕ್ಕೆ ಇನ್ನು ತಿಂಗಳು ಮಾತ್ರ ಉಳಿದಿವೆ. ಎಲ್ಲಾ ತಂಡಗಳು ಸೀಸನ್​ 16 ಗಾಗಿ ಭರದ ಸಿದ್ಧತೆಗಳನ್ನು ಆರಂಭಿಸಿದೆ. ಆದರೆ ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರು ಆಟಗಾರರು ಗಾಯಗೊಂಡಿರುವುದು ಹೊಸ ಚಿಂತೆಗೆ ಕಾರಣವಾಗಿದೆ.

1 / 8
ಹೌದು, ಆರ್​ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಪಾದದ ಸ್ನಾಯು ನೋವಿನ ಕಾರಣ ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ ಚಿಕಿತ್ಸೆ ಪಡೆಯಲು ಆಸ್ಟ್ರೇಲಿಯಾಗೆ ಮರಳಿದ್ದಾರೆ. ಹೀಗಾಗಿ ಜೋಶ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

ಹೌದು, ಆರ್​ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯಾ ವೇಗಿ ಜೋಶ್ ಹ್ಯಾಝಲ್​ವುಡ್ ಪಾದದ ಸ್ನಾಯು ನೋವಿನ ಕಾರಣ ಭಾರತದ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅಷ್ಟೇ ಅಲ್ಲದೆ ಚಿಕಿತ್ಸೆ ಪಡೆಯಲು ಆಸ್ಟ್ರೇಲಿಯಾಗೆ ಮರಳಿದ್ದಾರೆ. ಹೀಗಾಗಿ ಜೋಶ್ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

2 / 8
ಈ ಪ್ರಶ್ನೆಯ ಬೆನ್ನಲ್ಲೇ ಇದೀಗ ಮತ್ತೋರ್ವ ಆರ್​ಸಿಬಿ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಗಾಯಗೊಂಡಿದ್ದಾರೆ. ಮೂರುವರೆ ತಿಂಗಳ ಹಿಂದೆ ಗಾಯಗೊಂಡಿದ್ದ ಮ್ಯಾಕ್ಸ್​ವೆಲ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡು ಮೈದಾನದಲ್ಲಿ ಕಾಣಿಸಿಕೊಂಡಿದ್ದರು.

ಈ ಪ್ರಶ್ನೆಯ ಬೆನ್ನಲ್ಲೇ ಇದೀಗ ಮತ್ತೋರ್ವ ಆರ್​ಸಿಬಿ ಆಟಗಾರ ಗ್ಲೆನ್ ಮ್ಯಾಕ್ಸ್​ವೆಲ್ ಕೂಡ ಗಾಯಗೊಂಡಿದ್ದಾರೆ. ಮೂರುವರೆ ತಿಂಗಳ ಹಿಂದೆ ಗಾಯಗೊಂಡಿದ್ದ ಮ್ಯಾಕ್ಸ್​ವೆಲ್ ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡು ಮೈದಾನದಲ್ಲಿ ಕಾಣಿಸಿಕೊಂಡಿದ್ದರು.

3 / 8
ಅಲ್ಲದೆ ಭಾರತದ ವಿರುದ್ಧ ಏಕದಿನ ಸರಣಿಗೂ ಅಭ್ಯಾಸ ನಡೆಸಲು ಶೆಫೀಲ್ಡ್ ಶೀಲ್ಡ್​ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಆದರೆ ಸೌತ್ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ವಿಕ್ಟೋರಿಯಾ ಪರ ಆಡಿದ್ದ ಮ್ಯಾಕ್ಸಿ ಫೀಲ್ಡಿಂಗ್​ ವೇಳೆ ಮತ್ತೆ ಗಾಯ ಮಾಡಿಕೊಂಡಿದ್ದಾರೆ.

ಅಲ್ಲದೆ ಭಾರತದ ವಿರುದ್ಧ ಏಕದಿನ ಸರಣಿಗೂ ಅಭ್ಯಾಸ ನಡೆಸಲು ಶೆಫೀಲ್ಡ್ ಶೀಲ್ಡ್​ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಆದರೆ ಸೌತ್ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ವಿಕ್ಟೋರಿಯಾ ಪರ ಆಡಿದ್ದ ಮ್ಯಾಕ್ಸಿ ಫೀಲ್ಡಿಂಗ್​ ವೇಳೆ ಮತ್ತೆ ಗಾಯ ಮಾಡಿಕೊಂಡಿದ್ದಾರೆ.

4 / 8
ಸ್ಲಿಪ್​ನಲ್ಲಿ ಫೀಲ್ಡಿಂಗ್ ಮಾಡಿದ್ದ ಮ್ಯಾಕ್ಸ್​ವೆಲ್ ಚೆಂಡು ಹಿಡಿಯಲು ಯತ್ನಿಸಿದ್ದರು. ಈ ವೇಳೆ ಬಾಲ್​ ಅವರ ಕೈಗೆ ಜೋರಾಗಿ ಬಡಿದಿದೆ. ಈ ಸಂದರ್ಭದಲ್ಲಿ ನೋವಿನಿಂದ ನರಳಿದ ಮ್ಯಾಕ್ಸ್​ವೆಲ್ ಮೈದಾನದಲ್ಲಿ ಕುಸಿದರು. ಅಲ್ಲದೆ ನೋವಿನ ಕಾರಣ ಅರ್ಧದಲ್ಲೇ ಮೈದಾನವನ್ನು ತೊರೆದರು.

ಸ್ಲಿಪ್​ನಲ್ಲಿ ಫೀಲ್ಡಿಂಗ್ ಮಾಡಿದ್ದ ಮ್ಯಾಕ್ಸ್​ವೆಲ್ ಚೆಂಡು ಹಿಡಿಯಲು ಯತ್ನಿಸಿದ್ದರು. ಈ ವೇಳೆ ಬಾಲ್​ ಅವರ ಕೈಗೆ ಜೋರಾಗಿ ಬಡಿದಿದೆ. ಈ ಸಂದರ್ಭದಲ್ಲಿ ನೋವಿನಿಂದ ನರಳಿದ ಮ್ಯಾಕ್ಸ್​ವೆಲ್ ಮೈದಾನದಲ್ಲಿ ಕುಸಿದರು. ಅಲ್ಲದೆ ನೋವಿನ ಕಾರಣ ಅರ್ಧದಲ್ಲೇ ಮೈದಾನವನ್ನು ತೊರೆದರು.

5 / 8
ಆ ಬಳಿಕ ಗ್ಲೆನ್ ಮ್ಯಾಕ್ಸ್​ವೆಲ್ ಮೈದಾನಕ್ಕಿಳಿದಿಲ್ಲ. ಸದ್ಯ ಕೈಯ ಸ್ಕ್ಯಾನಿಂಗ್ ಮಾಡಲಾಗಿದ್ದು, ಈ ರಿಪೋರ್ಟ್ ಬಂದ ಬಳಿಕವಷ್ಟೇ ಗಾಯದ ಗಂಭೀರತೆ ಅರಿಯಲಿದೆ. ಹೀಗಾಗಿ ಗಾಯವು ಗಂಭೀರವಾಗಿದ್ದರೆ ಗ್ಲೆನ್ ಮ್ಯಾಕ್ಸ್​ವೆಲ್​ ಭಾರತದ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ.

ಆ ಬಳಿಕ ಗ್ಲೆನ್ ಮ್ಯಾಕ್ಸ್​ವೆಲ್ ಮೈದಾನಕ್ಕಿಳಿದಿಲ್ಲ. ಸದ್ಯ ಕೈಯ ಸ್ಕ್ಯಾನಿಂಗ್ ಮಾಡಲಾಗಿದ್ದು, ಈ ರಿಪೋರ್ಟ್ ಬಂದ ಬಳಿಕವಷ್ಟೇ ಗಾಯದ ಗಂಭೀರತೆ ಅರಿಯಲಿದೆ. ಹೀಗಾಗಿ ಗಾಯವು ಗಂಭೀರವಾಗಿದ್ದರೆ ಗ್ಲೆನ್ ಮ್ಯಾಕ್ಸ್​ವೆಲ್​ ಭಾರತದ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ.

6 / 8
ಇನ್ನು ಮಾರ್ಚ್​ 31 ರೊಳಗೆ ಗಾಯದಿಂದ ಚೇತರಿಸಿಕೊಳ್ಳದಿದ್ದರೆ ಐಪಿಎಲ್​ ಸೀಸನ್ 16 ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಒಟ್ಟಿನಲ್ಲಿ ಟೂರ್ನಿ ಆರಂಭವಾಗಲು ತಿಂಗಳು ಮಾತ್ರ ಉಳಿದಿರುವಾಗ ಇಬ್ಬರು ಪ್ರಮುಖ ಆಟಗಾರರು ಗಾಯಗೊಂಡಿರುವ ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

ಇನ್ನು ಮಾರ್ಚ್​ 31 ರೊಳಗೆ ಗಾಯದಿಂದ ಚೇತರಿಸಿಕೊಳ್ಳದಿದ್ದರೆ ಐಪಿಎಲ್​ ಸೀಸನ್ 16 ನಿಂದ ಹೊರಗುಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಒಟ್ಟಿನಲ್ಲಿ ಟೂರ್ನಿ ಆರಂಭವಾಗಲು ತಿಂಗಳು ಮಾತ್ರ ಉಳಿದಿರುವಾಗ ಇಬ್ಬರು ಪ್ರಮುಖ ಆಟಗಾರರು ಗಾಯಗೊಂಡಿರುವ ಆರ್​ಸಿಬಿ ತಂಡದ ಚಿಂತೆಯನ್ನು ಹೆಚ್ಚಿಸಿದೆ.

7 / 8
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯ್‌ಕುಮಾರ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಮೈಕೆಲ್ ಬ್ರೇಸ್‌ವೆಲ್, ಫಿನ್ ಅಲೆನ್, ಸೋನು ಯಾದವ್, ಅನೂಜ್ ರಾವತ್, ಮನೋಜ್ ಭಾಂಡಗೆ, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ವನಿಂದು ಹಸರಂಗ, ಸುಯಶ್ ಪ್ರಭುದೇಸಾಯಿ, ಹರ್ಷಲ್ ಪಟೇಲ್, ವೇಯ್ನ್ ಪಾರ್ನೆಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯ್‌ಕುಮಾರ್, ಕರ್ಣ್ ಶರ್ಮಾ, ಡೇವಿಡ್ ವಿಲ್ಲಿ, ಮೈಕೆಲ್ ಬ್ರೇಸ್‌ವೆಲ್, ಫಿನ್ ಅಲೆನ್, ಸೋನು ಯಾದವ್, ಅನೂಜ್ ರಾವತ್, ಮನೋಜ್ ಭಾಂಡಗೆ, ಆಕಾಶ್ ದೀಪ್, ರಾಜನ್ ಕುಮಾರ್, ಅವಿನಾಶ್ ಸಿಂಗ್, ಹಿಮಾಂಶು ಶರ್ಮಾ

8 / 8

Published On - 2:32 pm, Tue, 21 February 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್