Rinku Singh: ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ರೋಚಕ ಜಯ ತಂದುಕೊಟ್ಟ ರಿಂಕು ಸಿಂಗ್

IPL 2023 GT vs KKR: ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು.

| Updated By: ಝಾಹಿರ್ ಯೂಸುಫ್

Updated on: Apr 09, 2023 | 7:51 PM

IPL 2023 GT vs KKR: ಒಂದೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್...ಅದೇ ಪಂದ್ಯದಲ್ಲಿ 5 ಬ್ಯಾಕ್ ಟು ಬ್ಯಾಕ್ ಸಿಕ್ಸ್. ಹೌದು, ಇಂತಹದೊಂದು ರೋಚಕ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಿದೆ. ಈ ಪಂದ್ಯದ ಹೀರೋ ಕೆಕೆಆರ್ ತಂಡದ ಯುವ ಬ್ಯಾಟರ್ ರಿಂಕು ಸಿಂಗ್.

IPL 2023 GT vs KKR: ಒಂದೇ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್...ಅದೇ ಪಂದ್ಯದಲ್ಲಿ 5 ಬ್ಯಾಕ್ ಟು ಬ್ಯಾಕ್ ಸಿಕ್ಸ್. ಹೌದು, ಇಂತಹದೊಂದು ರೋಚಕ ಪಂದ್ಯಕ್ಕೆ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಸಾಕ್ಷಿಯಾಗಿದೆ. ಈ ಪಂದ್ಯದ ಹೀರೋ ಕೆಕೆಆರ್ ತಂಡದ ಯುವ ಬ್ಯಾಟರ್ ರಿಂಕು ಸಿಂಗ್.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್​ ತಂಡದ ಪರ ವೆಂಕಟೇಶ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್​ ಕಲೆಹಾಕಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್​ ತಂಡದ ಪರ ವೆಂಕಟೇಶ್ ಅಯ್ಯರ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

2 / 7
ಕೇವಲ 40 ಎಸೆತಗಳನ್ನು ಎದುರಿಸಿದ ವೆಂಕಟೇಶ್ ಅಯ್ಯರ್ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ 83 ರನ್​ಗಳಿಸಿ ಔಟಾದರು. ಈ ಹಂತದಲ್ಲಿ ಕೆಕೆಆರ್ ತಂಡಕ್ಕೆ ಗೆಲ್ಲಲು 4 ಓವರ್​ಗಳಲ್ಲಿ 50 ರನ್​ಗಳ ಗುರಿಯಿತ್ತು. ಆದರೆ 17ನೇ ಓವರ್ ಎಸೆದ ರಶೀದ್ ಖಾನ್ ಮೊದಲ ಎಸೆತದಲ್ಲೇ ಆ್ಯಂಡ್ರೆ ರಸೆಲ್ (1) ಅವರ ವಿಕೆಟ್ ಪಡೆದರು. ಇನ್ನು ಮರು ಎಸೆತದಲ್ಲೇ ಸುನಿಲ್ ನರೈಲ್ (0) ಕ್ಯಾಚ್ ನೀಡಿ ನಿರ್ಗಮಿಸಿದರು.

ಕೇವಲ 40 ಎಸೆತಗಳನ್ನು ಎದುರಿಸಿದ ವೆಂಕಟೇಶ್ ಅಯ್ಯರ್ 5 ಸಿಕ್ಸ್ ಹಾಗು 8 ಫೋರ್​ನೊಂದಿಗೆ 83 ರನ್​ಗಳಿಸಿ ಔಟಾದರು. ಈ ಹಂತದಲ್ಲಿ ಕೆಕೆಆರ್ ತಂಡಕ್ಕೆ ಗೆಲ್ಲಲು 4 ಓವರ್​ಗಳಲ್ಲಿ 50 ರನ್​ಗಳ ಗುರಿಯಿತ್ತು. ಆದರೆ 17ನೇ ಓವರ್ ಎಸೆದ ರಶೀದ್ ಖಾನ್ ಮೊದಲ ಎಸೆತದಲ್ಲೇ ಆ್ಯಂಡ್ರೆ ರಸೆಲ್ (1) ಅವರ ವಿಕೆಟ್ ಪಡೆದರು. ಇನ್ನು ಮರು ಎಸೆತದಲ್ಲೇ ಸುನಿಲ್ ನರೈಲ್ (0) ಕ್ಯಾಚ್ ನೀಡಿ ನಿರ್ಗಮಿಸಿದರು.

3 / 7
ಆ ಬಳಿಕ ಬಂದ ಶಾರ್ದೂಲ್ ಠಾಕೂರ್ (0) ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ರಶೀದ್ ಖಾನ್ ಹ್ಯಾಟ್ರಿಕ್ ಸಾಧನೆ ಮಾಡಿದರು. ಇದರೊಂದಿಗೆ ಇಡೀ ಪಂದ್ಯದ ಚಿತ್ರಣ ಬದಲಾಯ್ತು. ಗೆಲ್ಲಬೇಕಿದ್ದ ಪಂದ್ಯದಲ್ಲಿ ಕೆಕೆಆರ್ ತಂಡವು ಸೋಲಿನತ್ತ ಮುಖಮಾಡಿತು.

ಆ ಬಳಿಕ ಬಂದ ಶಾರ್ದೂಲ್ ಠಾಕೂರ್ (0) ಅವರನ್ನು ಎಲ್​ಬಿ ಬಲೆಗೆ ಬೀಳಿಸುವ ಮೂಲಕ ರಶೀದ್ ಖಾನ್ ಹ್ಯಾಟ್ರಿಕ್ ಸಾಧನೆ ಮಾಡಿದರು. ಇದರೊಂದಿಗೆ ಇಡೀ ಪಂದ್ಯದ ಚಿತ್ರಣ ಬದಲಾಯ್ತು. ಗೆಲ್ಲಬೇಕಿದ್ದ ಪಂದ್ಯದಲ್ಲಿ ಕೆಕೆಆರ್ ತಂಡವು ಸೋಲಿನತ್ತ ಮುಖಮಾಡಿತು.

4 / 7
ಕೊನೆಯ ಓವರ್​ನಲ್ಲಿ ಕೆಕೆಆರ್ ತಂಡದ ಮುಂದೆ 29 ರನ್​ಗಳ ಕಠಿಣ ಗುರಿಯಿತ್ತು. ಹಂಗಾಮಿ ನಾಯಕ ರಶೀದ್ ಖಾನ್ ಯಶ್ ದಯಾಳ್​ ಕೈಗೆ ಚೆಂಡು ನೀಡಿದರು. ಅತ್ತ ಸ್ಟ್ರೈಕ್​ನಲ್ಲಿದ್ದ ಉಮೇಶ್ ಯಾದವ್ ಸಿಂಗಲ್ ತೆಗೆದರು. ಆ ಬಳಿಕ ನಡೆದಿದೆಲ್ಲವೂ ಇತಿಹಾಸ.

ಕೊನೆಯ ಓವರ್​ನಲ್ಲಿ ಕೆಕೆಆರ್ ತಂಡದ ಮುಂದೆ 29 ರನ್​ಗಳ ಕಠಿಣ ಗುರಿಯಿತ್ತು. ಹಂಗಾಮಿ ನಾಯಕ ರಶೀದ್ ಖಾನ್ ಯಶ್ ದಯಾಳ್​ ಕೈಗೆ ಚೆಂಡು ನೀಡಿದರು. ಅತ್ತ ಸ್ಟ್ರೈಕ್​ನಲ್ಲಿದ್ದ ಉಮೇಶ್ ಯಾದವ್ ಸಿಂಗಲ್ ತೆಗೆದರು. ಆ ಬಳಿಕ ನಡೆದಿದೆಲ್ಲವೂ ಇತಿಹಾಸ.

5 / 7
ಸ್ಟ್ರೈಕ್​ಗೆ ಬಂದ ರಿಂಕು ಸಿಂಗ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸ್ ಸಿಡಿಸಿದರು. ಪರಿಣಾಮ ಕೊನೆಯ ಎಸೆತದಲ್ಲಿ 4 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಸ್ಟ್ರೈಟ್ ಹಿಟ್​ ಸಿಕ್ಸ್​ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

ಸ್ಟ್ರೈಕ್​ಗೆ ಬಂದ ರಿಂಕು ಸಿಂಗ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸ್ ಸಿಡಿಸಿದರು. ಪರಿಣಾಮ ಕೊನೆಯ ಎಸೆತದಲ್ಲಿ 4 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಸ್ಟ್ರೈಟ್ ಹಿಟ್​ ಸಿಕ್ಸ್​ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

6 / 7
ರಣರೋಚಕ ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 1 ಫೋರ್​​ನೊಂದಿಗೆ 48 ರನ್ ಬಾರಿಸಿದ ರಿಂಕು ಸಿಂಗ್ ಗೆಲುವಿನ ರುವಾರಿ ಎನಿಸಿಕೊಂಡರು. ಅಲ್ಲದೆ ಐಪಿಎಲ್​ನ ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟ ವಿಶೇಷ ದಾಖಲೆಯನ್ನು ಕೂಡ ಬರೆದರು.

ರಣರೋಚಕ ಪಂದ್ಯದಲ್ಲಿ ಕೇವಲ 21 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 1 ಫೋರ್​​ನೊಂದಿಗೆ 48 ರನ್ ಬಾರಿಸಿದ ರಿಂಕು ಸಿಂಗ್ ಗೆಲುವಿನ ರುವಾರಿ ಎನಿಸಿಕೊಂಡರು. ಅಲ್ಲದೆ ಐಪಿಎಲ್​ನ ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟ ವಿಶೇಷ ದಾಖಲೆಯನ್ನು ಕೂಡ ಬರೆದರು.

7 / 7
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ