AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ಗೆ ದಸುನ್ ಶಾನಕ ಎಂಟ್ರಿ..!

IPL 2023 Kannada: ಗುಜರಾತ್ ಟೈಟಾನ್ಸ್​ ತಂಡ ಹೀಗಿದೆ: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶ್ವ ಲಿಟಲ್, ಯಶ್ ದಯಾಳ್, ಅಲ್ಝಾರಿ ಜೋಸೆಫ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಶ್ರೀಕರ್ ಭರತ್.

TV9 Web
| Edited By: |

Updated on: Apr 04, 2023 | 10:30 PM

Share
IPL 2023: ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕಗೆ ಕೊನೆಗೂ ಐಪಿಎಲ್​ನಲ್ಲಿ ಅವಕಾಶ ಲಭಿಸಿದೆ. ಈ ಬಾರಿಯ ಐಪಿಎಲ್​ ಹರಾಜಿನಲ್ಲಿ 50 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶಾನಕ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

IPL 2023: ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕಗೆ ಕೊನೆಗೂ ಐಪಿಎಲ್​ನಲ್ಲಿ ಅವಕಾಶ ಲಭಿಸಿದೆ. ಈ ಬಾರಿಯ ಐಪಿಎಲ್​ ಹರಾಜಿನಲ್ಲಿ 50 ಲಕ್ಷ ರೂ. ಮೂಲಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಶಾನಕ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ.

1 / 7
ಇದೀಗ ಗುಜರಾತ್ ಟೈಟಾನ್ಸ್ ತಂಡವು ಕೇನ್ ವಿಲಿಯಮ್ಸನ್ ಅವರ ಬದಲಿ ಆಟಗಾರನಾಗಿ ದಸುನ್ ಶಾನಕ ಅವರನ್ನು ಆಯ್ಕೆ ಮಾಡಿದೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ಹಿಡಿಯಲು ಯತ್ನಿಸಿದ್ದ ವಿಲಿಯಮ್ಸನ್ ಗಾಯಗೊಂಡಿದ್ದರು.

ಇದೀಗ ಗುಜರಾತ್ ಟೈಟಾನ್ಸ್ ತಂಡವು ಕೇನ್ ವಿಲಿಯಮ್ಸನ್ ಅವರ ಬದಲಿ ಆಟಗಾರನಾಗಿ ದಸುನ್ ಶಾನಕ ಅವರನ್ನು ಆಯ್ಕೆ ಮಾಡಿದೆ. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಬೌಂಡರಿ ಲೈನ್​ನಲ್ಲಿ ಕ್ಯಾಚ್ ಹಿಡಿಯಲು ಯತ್ನಿಸಿದ್ದ ವಿಲಿಯಮ್ಸನ್ ಗಾಯಗೊಂಡಿದ್ದರು.

2 / 7
ಗಾಯವು ಗಂಭೀರವಾಗಿದ್ದರಿಂದ ಕೇನ್ ವಿಲಿಯಮ್ಸನ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿ ಆಟಗಾರನಾಗಿ ದಸುನ್ ಶಾನಕ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಆಯ್ಕೆ ಮಾಡಿದೆ.

ಗಾಯವು ಗಂಭೀರವಾಗಿದ್ದರಿಂದ ಕೇನ್ ವಿಲಿಯಮ್ಸನ್ ಐಪಿಎಲ್​ನಿಂದ ಹೊರಗುಳಿದಿದ್ದಾರೆ. ಇದೀಗ ಅವರ ಬದಲಿ ಆಟಗಾರನಾಗಿ ದಸುನ್ ಶಾನಕ ಅವರನ್ನು ಗುಜರಾತ್ ಟೈಟಾನ್ಸ್ ತಂಡವು ಆಯ್ಕೆ ಮಾಡಿದೆ.

3 / 7
ಸದ್ಯ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿರುವ ದಸುನ್ ಶಾನಕ ಏಪ್ರಿಲ್ 9 ರ ಬಳಿಕ ಗುಜರಾತ್ ಟೈಟಾನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸದ್ಯ ನ್ಯೂಜಿಲೆಂಡ್ ವಿರುದ್ಧ ಸರಣಿ ಆಡುತ್ತಿರುವ ದಸುನ್ ಶಾನಕ ಏಪ್ರಿಲ್ 9 ರ ಬಳಿಕ ಗುಜರಾತ್ ಟೈಟಾನ್ಸ್ ತಂಡವನ್ನು ಕೂಡಿಕೊಳ್ಳಲಿದ್ದಾರೆ.

4 / 7
ಶಾನಕ ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ಆಗಿದ್ದು, ಮಧ್ಯಮ ವೇಗಿಯ ಪಾತ್ರವನ್ನೂ ಕೂಡ ನಿರ್ವಹಿಸುತ್ತಾರೆ. ಇತ್ತೀಚೆಗೆ ಭಾರತದಲ್ಲಿ ನಡೆದ T20I ಸರಣಿಯಲ್ಲಿ, ಶಾನಕ ಮೂರು ಇನ್ನಿಂಗ್ಸ್‌ಗಳಲ್ಲಿ 187 ಸ್ಟ್ರೈಕ್ ರೇಟ್‌ನಲ್ಲಿ 124 ರನ್ ಚಚ್ಚಿದ್ದರು. ಹಾಗೆಯೇ ಏಕದಿನ ಸರಣಿಯಲ್ಲಿ 121 ರನ್​ ಬಾರಿಸಿ ಅಬ್ಬರಿಸಿದ್ದರು.

ಶಾನಕ ಮಧ್ಯಮ ಕ್ರಮಾಂಕದ ಸ್ಫೋಟಕ ಬ್ಯಾಟರ್ ಆಗಿದ್ದು, ಮಧ್ಯಮ ವೇಗಿಯ ಪಾತ್ರವನ್ನೂ ಕೂಡ ನಿರ್ವಹಿಸುತ್ತಾರೆ. ಇತ್ತೀಚೆಗೆ ಭಾರತದಲ್ಲಿ ನಡೆದ T20I ಸರಣಿಯಲ್ಲಿ, ಶಾನಕ ಮೂರು ಇನ್ನಿಂಗ್ಸ್‌ಗಳಲ್ಲಿ 187 ಸ್ಟ್ರೈಕ್ ರೇಟ್‌ನಲ್ಲಿ 124 ರನ್ ಚಚ್ಚಿದ್ದರು. ಹಾಗೆಯೇ ಏಕದಿನ ಸರಣಿಯಲ್ಲಿ 121 ರನ್​ ಬಾರಿಸಿ ಅಬ್ಬರಿಸಿದ್ದರು.

5 / 7
ಈ ಭರ್ಜರಿ ಪ್ರದರ್ಶನದ ಫಲವಾಗಿ ಕೊನೆಗೂ ದಸುನ್ ಶಾನಕಗೆ ಐಪಿಎಲ್​ನಲ್ಲಿ ಅವಕಾಶ ಲಭಿಸಿದೆ. ಇದಕ್ಕೂ ಮುನ್ನ ಕಳೆದ ಸೀಸನ್​ನಲ್ಲೂ ಹರಾಜಿಗಾಗಿ ಹೆಸರು ನೀಡಿದ್ದ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಈ ಬಾರಿ ಹರಾಜಾಗಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿತ್ತು. ಆದರೆ ಇದೀಗ ಬದಲಿ ಆಟಗಾರನ ರೂಪದಲ್ಲಿ ದಸುನ್ ಶಾನಕ ಅವರ ಅದೃಷ್ಟ ಖುಲಾಯಿಸಿದೆ.

ಈ ಭರ್ಜರಿ ಪ್ರದರ್ಶನದ ಫಲವಾಗಿ ಕೊನೆಗೂ ದಸುನ್ ಶಾನಕಗೆ ಐಪಿಎಲ್​ನಲ್ಲಿ ಅವಕಾಶ ಲಭಿಸಿದೆ. ಇದಕ್ಕೂ ಮುನ್ನ ಕಳೆದ ಸೀಸನ್​ನಲ್ಲೂ ಹರಾಜಿಗಾಗಿ ಹೆಸರು ನೀಡಿದ್ದ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಈ ಬಾರಿ ಹರಾಜಾಗಲಿದ್ದಾರೆ ಎಂಬ ನಿರೀಕ್ಷೆ ಕೂಡ ಹುಸಿಯಾಗಿತ್ತು. ಆದರೆ ಇದೀಗ ಬದಲಿ ಆಟಗಾರನ ರೂಪದಲ್ಲಿ ದಸುನ್ ಶಾನಕ ಅವರ ಅದೃಷ್ಟ ಖುಲಾಯಿಸಿದೆ.

6 / 7
ಗುಜರಾತ್ ಟೈಟಾನ್ಸ್​ ತಂಡ ಹೀಗಿದೆ: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶ್ವ ಲಿಟಲ್, ಯಶ್ ದಯಾಳ್, ಅಲ್ಝಾರಿ ಜೋಸೆಫ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಶ್ರೀಕರ್ ಭರತ್, ಅಭಿನವ್ ಮನೋಹರ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಒಡಿಯನ್ ಸ್ಮಿತ್, ಡೇವಿಡ್ ಮಿಲ್ಲರ್, ಸಾಯಿ ಕಿಶೋರ್, ಶಿವಂ ಮಾವಿ, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ದಸುನ್ ಶಾನಕ.

ಗುಜರಾತ್ ಟೈಟಾನ್ಸ್​ ತಂಡ ಹೀಗಿದೆ: ವೃದ್ಧಿಮಾನ್ ಸಹಾ, ಶುಭ್​ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶ್ವ ಲಿಟಲ್, ಯಶ್ ದಯಾಳ್, ಅಲ್ಝಾರಿ ಜೋಸೆಫ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಶ್ರೀಕರ್ ಭರತ್, ಅಭಿನವ್ ಮನೋಹರ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಒಡಿಯನ್ ಸ್ಮಿತ್, ಡೇವಿಡ್ ಮಿಲ್ಲರ್, ಸಾಯಿ ಕಿಶೋರ್, ಶಿವಂ ಮಾವಿ, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್, ದಸುನ್ ಶಾನಕ.

7 / 7
Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್