AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: 80 ಪ್ಲಸ್ ರನ್, 12 ಓವರ್: ಮುಂಬೈ ಇಂಡಿಯನ್ಸ್ ಹೀಗೆ ಗೆಲ್ಲಲೇಬೇಕು

IPL 2023 Kannada: ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯುತ್ತಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್​ 16 ಪಾಯಿಂಟ್ಸ್​ ಕಲೆಹಾಕಬಹುದು.

TV9 Web
| Edited By: |

Updated on: May 21, 2023 | 2:52 PM

Share
IPL 2023: ಐಪಿಎಲ್​ನ ಪ್ಲೇಆಫ್ ಹೋರಾಟವು ರೋಚಕಘಟ್ಟಕ್ಕೆ ಬಂದು ನಿಂತಿದೆ. ಈಗಾಗಲೇ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್​ ಪ್ರವೇಶಿಸಿದೆ. ಇನ್ನುಳಿದಿರುವುದು ಕೇವಲ 1 ಸ್ಥಾನ ಮಾತ್ರ.

IPL 2023: ಐಪಿಎಲ್​ನ ಪ್ಲೇಆಫ್ ಹೋರಾಟವು ರೋಚಕಘಟ್ಟಕ್ಕೆ ಬಂದು ನಿಂತಿದೆ. ಈಗಾಗಲೇ ಗುಜರಾತ್ ಟೈಟಾನ್ಸ್, ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಪ್ಲೇಆಫ್​ ಪ್ರವೇಶಿಸಿದೆ. ಇನ್ನುಳಿದಿರುವುದು ಕೇವಲ 1 ಸ್ಥಾನ ಮಾತ್ರ.

1 / 11
ಈ ಒಂದು ಸ್ಥಾನಕ್ಕಾಗಿ ಇದೀಗ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಅದರಂತೆ ಸೂಪರ್ ಸಂಡೆಯ 2 ಪಂದ್ಯಗಳು ಉಭಯ ತಂಡಗಳ ಪ್ಲೇಆಫ್ ಹಾದಿಯನ್ನು ನಿರ್ಧರಿಸಲಿದೆ.

ಈ ಒಂದು ಸ್ಥಾನಕ್ಕಾಗಿ ಇದೀಗ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಅದರಂತೆ ಸೂಪರ್ ಸಂಡೆಯ 2 ಪಂದ್ಯಗಳು ಉಭಯ ತಂಡಗಳ ಪ್ಲೇಆಫ್ ಹಾದಿಯನ್ನು ನಿರ್ಧರಿಸಲಿದೆ.

2 / 11
ಇಲ್ಲಿ ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯುತ್ತಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್​ 16 ಪಾಯಿಂಟ್ಸ್​ ಕಲೆಹಾಕಬಹುದು. ಇದಾಗ್ಯೂ ಪ್ಲೇಆಫ್ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಲಾಗುವುದಿಲ್ಲ.

ಇಲ್ಲಿ ಮಧ್ಯಾಹ್ನ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಕಣಕ್ಕಿಳಿಯುತ್ತಿದೆ. ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುಂಬೈ ಇಂಡಿಯನ್ಸ್​ 16 ಪಾಯಿಂಟ್ಸ್​ ಕಲೆಹಾಕಬಹುದು. ಇದಾಗ್ಯೂ ಪ್ಲೇಆಫ್ ಹಂತಕ್ಕೇರುವುದನ್ನು ಖಚಿತಪಡಿಸಿಕೊಳ್ಳಲಾಗುವುದಿಲ್ಲ.

3 / 11
ಏಕೆಂದರೆ ರಾತ್ರಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಸೆಣಸಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಪ್ಲೇಆಫ್ ಹಂತಕ್ಕೇರುವುದು ಬಹುತೇಕ ಖಚಿತ.

ಏಕೆಂದರೆ ರಾತ್ರಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಆರ್​ಸಿಬಿ ಹಾಗೂ ಗುಜರಾತ್ ಟೈಟಾನ್ಸ್ ಸೆಣಸಲಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ ಪ್ಲೇಆಫ್ ಹಂತಕ್ಕೇರುವುದು ಬಹುತೇಕ ಖಚಿತ.

4 / 11
ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಉಭಯ ತಂಡಗಳು 13 ಪಂದ್ಯಗಳಲ್ಲಿ 7 ಜಯ ಸಾಧಿಸಿ 14 ಅಂಕಗಳನ್ನು ಹೊಂದಿದೆ. ಆದರೆ ಇಲ್ಲಿ ಆರ್​ಸಿಬಿ ತಂಡದ ನೆಟ್ ರನ್ ರೇಟ್ +0.180 ಇರುವ ಕಾರಣ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

ಏಕೆಂದರೆ ಪ್ರಸ್ತುತ ಪಾಯಿಂಟ್ಸ್ ಟೇಬಲ್​ನಲ್ಲಿ ಉಭಯ ತಂಡಗಳು 13 ಪಂದ್ಯಗಳಲ್ಲಿ 7 ಜಯ ಸಾಧಿಸಿ 14 ಅಂಕಗಳನ್ನು ಹೊಂದಿದೆ. ಆದರೆ ಇಲ್ಲಿ ಆರ್​ಸಿಬಿ ತಂಡದ ನೆಟ್ ರನ್ ರೇಟ್ +0.180 ಇರುವ ಕಾರಣ ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

5 / 11
ಮತ್ತೊಂದೆಡೆ ಮೈನಸ್ 0.128 ನೆಟ್ ರನ್​ ರೇಟ್ ಹೊಂದಿರುವ ಮುಂಬೈ ಇಂಡಿಯನ್ಸ್ 6ನೇ ಸ್ಥಾನದಲ್ಲಿದೆ. ಹೀಗಾಗಿಯೇ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದರಷ್ಟೇ ಸಾಲದು. ಆರ್​ಸಿಬಿಗಿಂತ ಹೆಚ್ಚಿನ ನೆಟ್​ ರನ್ ರೇಟ್ ಹೊಂದಿದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು.

ಮತ್ತೊಂದೆಡೆ ಮೈನಸ್ 0.128 ನೆಟ್ ರನ್​ ರೇಟ್ ಹೊಂದಿರುವ ಮುಂಬೈ ಇಂಡಿಯನ್ಸ್ 6ನೇ ಸ್ಥಾನದಲ್ಲಿದೆ. ಹೀಗಾಗಿಯೇ ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದರಷ್ಟೇ ಸಾಲದು. ಆರ್​ಸಿಬಿಗಿಂತ ಹೆಚ್ಚಿನ ನೆಟ್​ ರನ್ ರೇಟ್ ಹೊಂದಿದ್ದರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು.

6 / 11
ಇದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕನಿಷ್ಠ 80 ರನ್​ಗಳಿಂದ ಸೋಲಿಸಬೇಕಾಗುತ್ತದೆ. ಒಂದು ವೇಳೆ ಚೇಸಿಂಗ್ ಮಾಡುವುದಾದರೆ ಕನಿಷ್ಠ 12 ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡುವ ಟಾರ್ಗೆಟ್ ಅನ್ನು ಚೇಸ್ ಮಾಡಬೇಕು.

ಇದಕ್ಕಾಗಿ ಮುಂಬೈ ಇಂಡಿಯನ್ಸ್ ತಂಡವು ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಕನಿಷ್ಠ 80 ರನ್​ಗಳಿಂದ ಸೋಲಿಸಬೇಕಾಗುತ್ತದೆ. ಒಂದು ವೇಳೆ ಚೇಸಿಂಗ್ ಮಾಡುವುದಾದರೆ ಕನಿಷ್ಠ 12 ಓವರ್​ಗಳಲ್ಲಿ ಎಸ್​ಆರ್​ಹೆಚ್ ನೀಡುವ ಟಾರ್ಗೆಟ್ ಅನ್ನು ಚೇಸ್ ಮಾಡಬೇಕು.

7 / 11
ಇಲ್ಲಿ ಮತ್ತೊಂದು ಅಂಶ ಎಂದರೆ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ಲೆಕ್ಕಾಚಾರ ಕೂಡ ಆರ್​ಸಿಬಿ ತಂಡದ ಜಯದ ಮೇಲೆ ಅವಲಂಭಿತವಾಗಿರಲಿದೆ. ಅಂದರೆ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 100 ರನ್​ಗಳಿಂದ ಜಯ ಸಾಧಿಸಿದರೆ, ಇತ್ತ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್ ವಿರುದ್ಧ 180 ರನ್​ಗಳಿಂದ ಗೆದ್ದಿರಬೇಕು. ಅಂದರೆ ಮಾತ್ರ ಆರ್​ಸಿಬಿಗಿಂತ ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆಯಬಹುದು.

ಇಲ್ಲಿ ಮತ್ತೊಂದು ಅಂಶ ಎಂದರೆ ಮುಂಬೈ ಇಂಡಿಯನ್ಸ್ ತಂಡದ ಗೆಲುವಿನ ಲೆಕ್ಕಾಚಾರ ಕೂಡ ಆರ್​ಸಿಬಿ ತಂಡದ ಜಯದ ಮೇಲೆ ಅವಲಂಭಿತವಾಗಿರಲಿದೆ. ಅಂದರೆ ಆರ್​ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ 100 ರನ್​ಗಳಿಂದ ಜಯ ಸಾಧಿಸಿದರೆ, ಇತ್ತ ಮುಂಬೈ ಇಂಡಿಯನ್ಸ್ ಎಸ್​ಆರ್​ಹೆಚ್ ವಿರುದ್ಧ 180 ರನ್​ಗಳಿಂದ ಗೆದ್ದಿರಬೇಕು. ಅಂದರೆ ಮಾತ್ರ ಆರ್​ಸಿಬಿಗಿಂತ ಮುಂಬೈ ಇಂಡಿಯನ್ಸ್ ಹೆಚ್ಚಿನ ನೆಟ್ ರನ್​ ರೇಟ್ ಪಡೆಯಬಹುದು.

8 / 11
ಆದರೆ ಇಲ್ಲಿ ಮುಂಬೈ ಇಂಡಿಯನ್ಸ್ ಮೊದಲು ಪಂದ್ಯವಾಡುವುದರಿಂದ ಆರ್​ಸಿಬಿಯ ಗೆಲುವಿನ ಬಳಿಕದ ನೆಟ್​ ರನ್​ ರೇಟ್ ಅನ್ನು ಅಂದಾಜಿಸಲಾಗುವುದಿಲ್ಲ. ಇದಾಗ್ಯೂ ಪ್ರಸ್ತುತ ನೆಟ್​ ರನ್​ ರೇಟ್ ಅನ್ನು ಗಣನೆಗೆ ತೆಗೆದುಕೊಂಡರೂ ಕನಿಷ್ಠ 80+ ರನ್​ಗಳಿಂದ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮುಂಬೈ ಇಂಡಿಯನ್ಸ್ ಸೋಲಿಸಬೇಕಾಗುತ್ತದೆ.

ಆದರೆ ಇಲ್ಲಿ ಮುಂಬೈ ಇಂಡಿಯನ್ಸ್ ಮೊದಲು ಪಂದ್ಯವಾಡುವುದರಿಂದ ಆರ್​ಸಿಬಿಯ ಗೆಲುವಿನ ಬಳಿಕದ ನೆಟ್​ ರನ್​ ರೇಟ್ ಅನ್ನು ಅಂದಾಜಿಸಲಾಗುವುದಿಲ್ಲ. ಇದಾಗ್ಯೂ ಪ್ರಸ್ತುತ ನೆಟ್​ ರನ್​ ರೇಟ್ ಅನ್ನು ಗಣನೆಗೆ ತೆಗೆದುಕೊಂಡರೂ ಕನಿಷ್ಠ 80+ ರನ್​ಗಳಿಂದ ಸನ್​ರೈಸರ್ಸ್ ಹೈದರಾಬಾದ್ ತಂಡವನ್ನು ಮುಂಬೈ ಇಂಡಿಯನ್ಸ್ ಸೋಲಿಸಬೇಕಾಗುತ್ತದೆ.

9 / 11
ಅತ್ತ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸಲು ಗುಜರಾತ್ ಟೈಟಾನ್ಸ್​ ವಿರುದ್ಧದ ಗೆಲುವೊಂದೇ ಸಾಕು. ಆದರೆ ಮುಂಬೈ ಇಂಡಿಯನ್ಸ್​ ಅಮೋಘ ಗೆಲುವು ಸಾಧಿಸಿ ನೆಟ್ ರನ್ ರೇಟ್ ಹೆಚ್ಚಿಸಿಕೊಂಡರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು.

ಅತ್ತ ಆರ್​ಸಿಬಿಗೆ ಪ್ಲೇಆಫ್ ಪ್ರವೇಶಿಸಲು ಗುಜರಾತ್ ಟೈಟಾನ್ಸ್​ ವಿರುದ್ಧದ ಗೆಲುವೊಂದೇ ಸಾಕು. ಆದರೆ ಮುಂಬೈ ಇಂಡಿಯನ್ಸ್​ ಅಮೋಘ ಗೆಲುವು ಸಾಧಿಸಿ ನೆಟ್ ರನ್ ರೇಟ್ ಹೆಚ್ಚಿಸಿಕೊಂಡರೆ ಮಾತ್ರ ಪ್ಲೇಆಫ್ ಪ್ರವೇಶಿಸಬಹುದು.

10 / 11
ಒಂದು ವೇಳೆ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​​ಹೆಚ್ ವಿರುದ್ಧ ಗೆದ್ದು, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಸೋತರೆ, ರೋಹಿತ್ ಶರ್ಮಾ ಪಡೆ 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಇಲ್ಲಿ ಯಾವುದೇ ನೆಟ್ ರನ್​ ರೇಟ್​ ಗಣನೆಗೆ ಬರುವುದಿಲ್ಲ.

ಒಂದು ವೇಳೆ ಮುಂಬೈ ಇಂಡಿಯನ್ಸ್ ತಂಡವು ಎಸ್​ಆರ್​​ಹೆಚ್ ವಿರುದ್ಧ ಗೆದ್ದು, ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ ಸೋತರೆ, ರೋಹಿತ್ ಶರ್ಮಾ ಪಡೆ 16 ಅಂಕಗಳೊಂದಿಗೆ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ. ಇಲ್ಲಿ ಯಾವುದೇ ನೆಟ್ ರನ್​ ರೇಟ್​ ಗಣನೆಗೆ ಬರುವುದಿಲ್ಲ.

11 / 11
Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!