AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಕೇವಲ 2 ಬಾರಿ: ಕಿಂಗ್ಸ್ ಇಲೆವೆನ್ ‘ಪಂಜಾಬ್’ ಕಿಂಗ್ಸ್ ಆದ್ರೂ ಬದಲಾಗಿಲ್ಲ ಅದೃಷ್ಟ..!

IPL 2023 Kannada: ಚೊಚ್ಚಲ ಸೀಸನ್​ನಲ್ಲಿ ಯುವರಾಜ್ ಸಿಂಗ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ 14 ಪಂದ್ಯಗಳಲ್ಲಿ 10 ಜಯ ಸಾಧಿಸಿ 20 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನ ಅಲಂಕರಿಸಿತ್ತು.

TV9 Web
| Updated By: ಝಾಹಿರ್ ಯೂಸುಫ್

Updated on: May 20, 2023 | 5:29 PM

IPL 2023: 16 ಸೀಸನ್​ ಐಪಿಎಲ್​ನಲ್ಲಿ 2 ಬಾರಿ ಮಾತ್ರ ಪ್ಲೇಆಫ್ ಆಡಿದ ತಂಡ ಒಂದೆಡೆಯಾದರೆ, ಮತ್ತೊಂದೆಡೆ ಒಂದು ತಂಡವು 2​ ಐಪಿಎಲ್​ ಆವೃತ್ತಿಯಲ್ಲಿ 2 ಬಾರಿ ಪ್ಲೇಆಫ್ ಪ್ರವೇಶಿಸಿದೆ.

IPL 2023: 16 ಸೀಸನ್​ ಐಪಿಎಲ್​ನಲ್ಲಿ 2 ಬಾರಿ ಮಾತ್ರ ಪ್ಲೇಆಫ್ ಆಡಿದ ತಂಡ ಒಂದೆಡೆಯಾದರೆ, ಮತ್ತೊಂದೆಡೆ ಒಂದು ತಂಡವು 2​ ಐಪಿಎಲ್​ ಆವೃತ್ತಿಯಲ್ಲಿ 2 ಬಾರಿ ಪ್ಲೇಆಫ್ ಪ್ರವೇಶಿಸಿದೆ.

1 / 9
ಹೌದು, ಗುಜರಾತ್ ಟೈಟಾನ್ಸ್ ತಂಡವು ಎರಡೂ ಸೀಸನ್​ಗಳಲ್ಲಿ ಪ್ಲೇಆಫ್ ಪ್ರವೇಶಿಸಿದರೆ, ಕಳೆದ 16 ಸೀಸನ್​ಗಳಿಂದ ಐಪಿಎಲ್ ಆಡುತ್ತಿರುವ ಪಂಜಾಬ್ ಕಿಂಗ್ಸ್ ಇದುವರೆಗೆ ಪ್ಲೇಆಫ್ ಪ್ರವೇಶಿಸಿದ್ದು ಕೇವಲ 2 ಬಾರಿ ಮಾತ್ರ.

ಹೌದು, ಗುಜರಾತ್ ಟೈಟಾನ್ಸ್ ತಂಡವು ಎರಡೂ ಸೀಸನ್​ಗಳಲ್ಲಿ ಪ್ಲೇಆಫ್ ಪ್ರವೇಶಿಸಿದರೆ, ಕಳೆದ 16 ಸೀಸನ್​ಗಳಿಂದ ಐಪಿಎಲ್ ಆಡುತ್ತಿರುವ ಪಂಜಾಬ್ ಕಿಂಗ್ಸ್ ಇದುವರೆಗೆ ಪ್ಲೇಆಫ್ ಪ್ರವೇಶಿಸಿದ್ದು ಕೇವಲ 2 ಬಾರಿ ಮಾತ್ರ.

2 / 9
2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹೆಸರಿನೊಂದಿಗೆ ಐಪಿಎಲ್ ಅಭಿಮಾನ ಆರಂಭಿಸಿದ್ದ ಬಾಲಿವುಡ್ ನಟಿ ಪ್ರೀತಿ ಝಿಂಟಾ ಮಾಲೀಕತ್ವದ ಪಂಜಾಬ್ ತಂಡವು ಮೊದಲ ಸೀಸನ್​ನಲ್ಲೇ ಪ್ಲೇಆಫ್​ಗೆ ಪ್ರವೇಶಿಸಿತ್ತು.

2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹೆಸರಿನೊಂದಿಗೆ ಐಪಿಎಲ್ ಅಭಿಮಾನ ಆರಂಭಿಸಿದ್ದ ಬಾಲಿವುಡ್ ನಟಿ ಪ್ರೀತಿ ಝಿಂಟಾ ಮಾಲೀಕತ್ವದ ಪಂಜಾಬ್ ತಂಡವು ಮೊದಲ ಸೀಸನ್​ನಲ್ಲೇ ಪ್ಲೇಆಫ್​ಗೆ ಪ್ರವೇಶಿಸಿತ್ತು.

3 / 9
ಚೊಚ್ಚಲ ಸೀಸನ್​ನಲ್ಲಿ ಯುವರಾಜ್ ಸಿಂಗ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ 14 ಪಂದ್ಯಗಳಲ್ಲಿ 10 ಜಯ ಸಾಧಿಸಿ 20 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನ ಅಲಂಕರಿಸಿತ್ತು.

ಚೊಚ್ಚಲ ಸೀಸನ್​ನಲ್ಲಿ ಯುವರಾಜ್ ಸಿಂಗ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ 14 ಪಂದ್ಯಗಳಲ್ಲಿ 10 ಜಯ ಸಾಧಿಸಿ 20 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ 2ನೇ ಸ್ಥಾನ ಅಲಂಕರಿಸಿತ್ತು.

4 / 9
ನಾಕೌಟ್ ಮಾದರಿಯಲ್ಲಿ ನಡೆದಿದ್ದ ಅಂದಿನ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಸಿಎಸ್​ಕೆ 2ನೇ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿತ್ತು. ಆದರೆ ಸೆಮೀಸ್​ನಲ್ಲಿ ಸಿಎಸ್​ಕೆ ವಿರುದ್ಧ ಸೋತು ಕಿಂಗ್ಸ್ ಇಲೆವೆನ್ ಪಂಜಾಬ್ ಫೈನಲ್ ಪ್ರವೇಶಿಸುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

ನಾಕೌಟ್ ಮಾದರಿಯಲ್ಲಿ ನಡೆದಿದ್ದ ಅಂದಿನ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ಸಿಎಸ್​ಕೆ 2ನೇ ಸೆಮಿಫೈನಲ್​ನಲ್ಲಿ ಮುಖಾಮುಖಿಯಾಗಿತ್ತು. ಆದರೆ ಸೆಮೀಸ್​ನಲ್ಲಿ ಸಿಎಸ್​ಕೆ ವಿರುದ್ಧ ಸೋತು ಕಿಂಗ್ಸ್ ಇಲೆವೆನ್ ಪಂಜಾಬ್ ಫೈನಲ್ ಪ್ರವೇಶಿಸುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

5 / 9
ಇದಾದ ಬಳಿಕ ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇಆಫ್ ಪ್ರವೇಶಿಸಿದ್ದು 2014 ರಲ್ಲಿ. ಜಾರ್ಜ್ ಬೈಲಿ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ಲೀಗ್ ಹಂತದಲ್ಲಿ 14 ಪಂದ್ಯಗಳಲ್ಲಿ 11 ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್ ಪ್ರವೇಶಿಸಿತ್ತು.

ಇದಾದ ಬಳಿಕ ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇಆಫ್ ಪ್ರವೇಶಿಸಿದ್ದು 2014 ರಲ್ಲಿ. ಜಾರ್ಜ್ ಬೈಲಿ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ಲೀಗ್ ಹಂತದಲ್ಲಿ 14 ಪಂದ್ಯಗಳಲ್ಲಿ 11 ಜಯ ಸಾಧಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಪ್ಲೇಆಫ್ ಪ್ರವೇಶಿಸಿತ್ತು.

6 / 9
ಅಂದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋತ ಕಿಂಗ್ಸ್ ಇಲೆವೆನ್ ಪಂಜಾಬ್, ಆ ಬಳಿಕ 2ನೇ ಕ್ವಾಲಿಫೈಯರ್​ನಲ್ಲಿ ಸಿಎಸ್​​ಕೆಗೆ ಸೋಲುಣಿಸಿ ಫೈನಲ್ ಪ್ರವೇಶಿಸಿತ್ತು. ಆದರೆ ಚೊಚ್ಚಲ ಫೈನಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ದ 3 ವಿಕೆಟ್​ಗಳಿಂದ ಸೋಲುವ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ ಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

ಅಂದು ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಸೋತ ಕಿಂಗ್ಸ್ ಇಲೆವೆನ್ ಪಂಜಾಬ್, ಆ ಬಳಿಕ 2ನೇ ಕ್ವಾಲಿಫೈಯರ್​ನಲ್ಲಿ ಸಿಎಸ್​​ಕೆಗೆ ಸೋಲುಣಿಸಿ ಫೈನಲ್ ಪ್ರವೇಶಿಸಿತ್ತು. ಆದರೆ ಚೊಚ್ಚಲ ಫೈನಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ದ 3 ವಿಕೆಟ್​ಗಳಿಂದ ಸೋಲುವ ಮೂಲಕ ಕಿಂಗ್ಸ್ ಇಲೆವೆನ್ ಪಂಜಾಬ್ ಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿಕೊಂಡಿತು.

7 / 9
ಇದಾದ ಬಳಿಕ ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇಆಫ್​ಗೆ ಪ್ರವೇಶಿಸಿಲ್ಲ. ಇದರ ನಡುವೆ ಘಟಾನುಘಟಿ ಆಟಗಾರರನ್ನೇ ಕರೆ ತಂದಿರುವ ಕಿಂಗ್ಸ್ ಇಲೆವೆನ್​ ಪಂಜಾಬ್​ಗೆ ಅಗ್ರ-4 ರಲ್ಲಿ ಸ್ಥಾನಗಿಟ್ಟಿಸಿಕೊಳ್ಳಲು ಸಾಧ್ಯವಾಗಿಲ್ಲ.

ಇದಾದ ಬಳಿಕ ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇಆಫ್​ಗೆ ಪ್ರವೇಶಿಸಿಲ್ಲ. ಇದರ ನಡುವೆ ಘಟಾನುಘಟಿ ಆಟಗಾರರನ್ನೇ ಕರೆ ತಂದಿರುವ ಕಿಂಗ್ಸ್ ಇಲೆವೆನ್​ ಪಂಜಾಬ್​ಗೆ ಅಗ್ರ-4 ರಲ್ಲಿ ಸ್ಥಾನಗಿಟ್ಟಿಸಿಕೊಳ್ಳಲು ಸಾಧ್ಯವಾಗಿಲ್ಲ.

8 / 9
ಈ ಬಾರಿ ಕೂಡ ಕೇವಲ 6 ಪಂದ್ಯಗಳಲ್ಲಿ ಜಯ ಸಾಧಿಸಿ 12 ಅಂಕಗಳೊಂದಿಗೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದೆ. ಅಂದರೆ 2021 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹೆಸರನ್ನು ಪಂಜಾಬ್ ಕಿಂಗ್ಸ್ ಆಗಿ ಬದಲಿಸಿದರೂ ಅದೃಷ್ಟ ಮಾತ್ರ ಕೈ ಹಿಡಿಯುತ್ತಿಲ್ಲ ಎಂಬುದೇ ಸತ್ಯ.

ಈ ಬಾರಿ ಕೂಡ ಕೇವಲ 6 ಪಂದ್ಯಗಳಲ್ಲಿ ಜಯ ಸಾಧಿಸಿ 12 ಅಂಕಗಳೊಂದಿಗೆ ಐಪಿಎಲ್​ ಅಭಿಯಾನ ಅಂತ್ಯಗೊಳಿಸಿದೆ. ಅಂದರೆ 2021 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಹೆಸರನ್ನು ಪಂಜಾಬ್ ಕಿಂಗ್ಸ್ ಆಗಿ ಬದಲಿಸಿದರೂ ಅದೃಷ್ಟ ಮಾತ್ರ ಕೈ ಹಿಡಿಯುತ್ತಿಲ್ಲ ಎಂಬುದೇ ಸತ್ಯ.

9 / 9
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ