AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಯವರು ಚಾನ್ಸ್ ನೀಡಿಲ್ಲ, ಆ ಬಳಿಕ ನಾ ಮುಂಬೈ ಇಂಡಿಯನ್ಸ್ ಸೇರಿದೆ: ಆಕಾಶ್ ಮಧ್ವಾಲ್

IPL 2023 Kannada: ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು.

TV9 Web
| Edited By: |

Updated on: May 25, 2023 | 10:08 PM

Share
IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ ಆಕಾಶ್ ಮಧ್ವಾಲ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಆಕಾಶ್ ನೀಡಿದ್ದು ಕೇವಲ 5 ರನ್​ ಮಾತ್ರ.

IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ ಆಕಾಶ್ ಮಧ್ವಾಲ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಆಕಾಶ್ ನೀಡಿದ್ದು ಕೇವಲ 5 ರನ್​ ಮಾತ್ರ.

1 / 7
ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು. ಈ ಅಮೋಘ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿ ಇದೀಗ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ.

ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು. ಈ ಅಮೋಘ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿ ಇದೀಗ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ.

2 / 7
ವಿಶೇಷ ಎಂದರೆ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮವಾಗಿ ಬೌಲಿಂಗ್ ಸಂಘಟಿಸುತ್ತಿರುವ ಇದೇ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿದ್ದರು.

ವಿಶೇಷ ಎಂದರೆ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮವಾಗಿ ಬೌಲಿಂಗ್ ಸಂಘಟಿಸುತ್ತಿರುವ ಇದೇ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿದ್ದರು.

3 / 7
ಆರ್​ಸಿಬಿ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್​ಮನ್​ಗಳಿಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಆಕಾಶ್ ಮಧ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

ಆರ್​ಸಿಬಿ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್​ಮನ್​ಗಳಿಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಆಕಾಶ್ ಮಧ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

4 / 7
ಇತ್ತ ಆರ್​ಸಿಬಿ ಪರ ನೆಟ್ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟರೂ ಅವಕಾಶ ಸಿಗದ ಕಾರಣ ಆಕಾಶ್ ಮಧ್ವಾಲ್ ಮುಂಬೈ ಇಂಡಿಯನ್ಸ್​ನತ್ತ ಮುಖ ಮಾಡಿದ್ದರು. ಅದರಂತೆ ಮುಂಬೈ ಬಳಗದಲ್ಲಿ ಕಾಣಿಸಿಕೊಂಡ ಯುವ ಬೌಲರ್​ನನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 20 ಲಕ್ಷ ರೂ. ನೀಡಿ ಖರೀದಿಸಿತು.

ಇತ್ತ ಆರ್​ಸಿಬಿ ಪರ ನೆಟ್ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟರೂ ಅವಕಾಶ ಸಿಗದ ಕಾರಣ ಆಕಾಶ್ ಮಧ್ವಾಲ್ ಮುಂಬೈ ಇಂಡಿಯನ್ಸ್​ನತ್ತ ಮುಖ ಮಾಡಿದ್ದರು. ಅದರಂತೆ ಮುಂಬೈ ಬಳಗದಲ್ಲಿ ಕಾಣಿಸಿಕೊಂಡ ಯುವ ಬೌಲರ್​ನನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 20 ಲಕ್ಷ ರೂ. ನೀಡಿ ಖರೀದಿಸಿತು.

5 / 7
ಅದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಮಧ್ವಾಲ್ ಒಟ್ಟು 129 ಎಸೆತಗಳನ್ನು ಎಸೆದು ಕೇವಲ 167 ರನ್ ನೀಡಿದ್ದಾರೆ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.

ಅದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಮಧ್ವಾಲ್ ಒಟ್ಟು 129 ಎಸೆತಗಳನ್ನು ಎಸೆದು ಕೇವಲ 167 ರನ್ ನೀಡಿದ್ದಾರೆ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.

6 / 7
ಈ ದಾಖಲೆಯ ಬೌಲಿಂಗ್ ಪ್ರದರ್ಶನದ ಬಳಿಕ ಮಾತನಾಡಿದ ಆಕಾಶ್ ಮಧ್ವಾಲ್, ತಾನು 2019 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ತನಗೆ ಚಾನ್ಸ್ ಸಿಗದ ಕಾರಣ ಆ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡೆ ಎಂದು ತಿಳಿಸಿದ್ದಾರೆ.

ಈ ದಾಖಲೆಯ ಬೌಲಿಂಗ್ ಪ್ರದರ್ಶನದ ಬಳಿಕ ಮಾತನಾಡಿದ ಆಕಾಶ್ ಮಧ್ವಾಲ್, ತಾನು 2019 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ತನಗೆ ಚಾನ್ಸ್ ಸಿಗದ ಕಾರಣ ಆ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡೆ ಎಂದು ತಿಳಿಸಿದ್ದಾರೆ.

7 / 7
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ