AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ಯವರು ಚಾನ್ಸ್ ನೀಡಿಲ್ಲ, ಆ ಬಳಿಕ ನಾ ಮುಂಬೈ ಇಂಡಿಯನ್ಸ್ ಸೇರಿದೆ: ಆಕಾಶ್ ಮಧ್ವಾಲ್

IPL 2023 Kannada: ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು.

TV9 Web
| Updated By: ಝಾಹಿರ್ ಯೂಸುಫ್|

Updated on: May 25, 2023 | 10:08 PM

Share
IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ ಆಕಾಶ್ ಮಧ್ವಾಲ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಆಕಾಶ್ ನೀಡಿದ್ದು ಕೇವಲ 5 ರನ್​ ಮಾತ್ರ.

IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ ಆಕಾಶ್ ಮಧ್ವಾಲ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಆಕಾಶ್ ನೀಡಿದ್ದು ಕೇವಲ 5 ರನ್​ ಮಾತ್ರ.

1 / 7
ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು. ಈ ಅಮೋಘ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿ ಇದೀಗ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ.

ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು. ಈ ಅಮೋಘ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿ ಇದೀಗ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ.

2 / 7
ವಿಶೇಷ ಎಂದರೆ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮವಾಗಿ ಬೌಲಿಂಗ್ ಸಂಘಟಿಸುತ್ತಿರುವ ಇದೇ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿದ್ದರು.

ವಿಶೇಷ ಎಂದರೆ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮವಾಗಿ ಬೌಲಿಂಗ್ ಸಂಘಟಿಸುತ್ತಿರುವ ಇದೇ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿದ್ದರು.

3 / 7
ಆರ್​ಸಿಬಿ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್​ಮನ್​ಗಳಿಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಆಕಾಶ್ ಮಧ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

ಆರ್​ಸಿಬಿ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್​ಮನ್​ಗಳಿಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಆಕಾಶ್ ಮಧ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

4 / 7
ಇತ್ತ ಆರ್​ಸಿಬಿ ಪರ ನೆಟ್ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟರೂ ಅವಕಾಶ ಸಿಗದ ಕಾರಣ ಆಕಾಶ್ ಮಧ್ವಾಲ್ ಮುಂಬೈ ಇಂಡಿಯನ್ಸ್​ನತ್ತ ಮುಖ ಮಾಡಿದ್ದರು. ಅದರಂತೆ ಮುಂಬೈ ಬಳಗದಲ್ಲಿ ಕಾಣಿಸಿಕೊಂಡ ಯುವ ಬೌಲರ್​ನನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 20 ಲಕ್ಷ ರೂ. ನೀಡಿ ಖರೀದಿಸಿತು.

ಇತ್ತ ಆರ್​ಸಿಬಿ ಪರ ನೆಟ್ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟರೂ ಅವಕಾಶ ಸಿಗದ ಕಾರಣ ಆಕಾಶ್ ಮಧ್ವಾಲ್ ಮುಂಬೈ ಇಂಡಿಯನ್ಸ್​ನತ್ತ ಮುಖ ಮಾಡಿದ್ದರು. ಅದರಂತೆ ಮುಂಬೈ ಬಳಗದಲ್ಲಿ ಕಾಣಿಸಿಕೊಂಡ ಯುವ ಬೌಲರ್​ನನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 20 ಲಕ್ಷ ರೂ. ನೀಡಿ ಖರೀದಿಸಿತು.

5 / 7
ಅದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಮಧ್ವಾಲ್ ಒಟ್ಟು 129 ಎಸೆತಗಳನ್ನು ಎಸೆದು ಕೇವಲ 167 ರನ್ ನೀಡಿದ್ದಾರೆ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.

ಅದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಮಧ್ವಾಲ್ ಒಟ್ಟು 129 ಎಸೆತಗಳನ್ನು ಎಸೆದು ಕೇವಲ 167 ರನ್ ನೀಡಿದ್ದಾರೆ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.

6 / 7
ಈ ದಾಖಲೆಯ ಬೌಲಿಂಗ್ ಪ್ರದರ್ಶನದ ಬಳಿಕ ಮಾತನಾಡಿದ ಆಕಾಶ್ ಮಧ್ವಾಲ್, ತಾನು 2019 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ತನಗೆ ಚಾನ್ಸ್ ಸಿಗದ ಕಾರಣ ಆ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡೆ ಎಂದು ತಿಳಿಸಿದ್ದಾರೆ.

ಈ ದಾಖಲೆಯ ಬೌಲಿಂಗ್ ಪ್ರದರ್ಶನದ ಬಳಿಕ ಮಾತನಾಡಿದ ಆಕಾಶ್ ಮಧ್ವಾಲ್, ತಾನು 2019 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ತನಗೆ ಚಾನ್ಸ್ ಸಿಗದ ಕಾರಣ ಆ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡೆ ಎಂದು ತಿಳಿಸಿದ್ದಾರೆ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ