IPL 2023: RCB ಯವರು ಚಾನ್ಸ್ ನೀಡಿಲ್ಲ, ಆ ಬಳಿಕ ನಾ ಮುಂಬೈ ಇಂಡಿಯನ್ಸ್ ಸೇರಿದೆ: ಆಕಾಶ್ ಮಧ್ವಾಲ್

IPL 2023 Kannada: ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು.

| Updated By: ಝಾಹಿರ್ ಯೂಸುಫ್

Updated on: May 25, 2023 | 10:08 PM

IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ ಆಕಾಶ್ ಮಧ್ವಾಲ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಆಕಾಶ್ ನೀಡಿದ್ದು ಕೇವಲ 5 ರನ್​ ಮಾತ್ರ.

IPL 2023: ಐಪಿಎಲ್​ನ ಎಲಿಮಿನೇಟರ್ ಪಂದ್ಯದಲ್ಲಿ ಕರಾರುವಾಕ್ ದಾಳಿ ಸಂಘಟಿಸಿ ಆಕಾಶ್ ಮಧ್ವಾಲ್ ಹೊಸ ಸೆನ್ಸೇಷನ್ ಸೃಷ್ಟಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್​ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ 3.3 ಓವರ್​ಗಳನ್ನು ಎಸೆದ ಆಕಾಶ್ ನೀಡಿದ್ದು ಕೇವಲ 5 ರನ್​ ಮಾತ್ರ.

1 / 7
ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು. ಈ ಅಮೋಘ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿ ಇದೀಗ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ.

ಕೇವಲ 5 ರನ್​ಗಳನ್ನು ನೀಡಿದ ಆಕಾಶ್ ಮಧ್ವಾಲ್ 5 ವಿಕೆಟ್​ಗಳನ್ನು ಕಬಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದಿದ್ದರು. ಈ ಅಮೋಘ ಪ್ರದರ್ಶನದಿಂದಾಗಿ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ಸಾಧಿಸಿ ಇದೀಗ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಿದೆ.

2 / 7
ವಿಶೇಷ ಎಂದರೆ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮವಾಗಿ ಬೌಲಿಂಗ್ ಸಂಘಟಿಸುತ್ತಿರುವ ಇದೇ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿದ್ದರು.

ವಿಶೇಷ ಎಂದರೆ ಮುಂಬೈ ಇಂಡಿಯನ್ಸ್​ ಪರ ಅತ್ಯುತ್ತಮವಾಗಿ ಬೌಲಿಂಗ್ ಸಂಘಟಿಸುತ್ತಿರುವ ಇದೇ ಆಕಾಶ್ ಮಧ್ವಾಲ್ ಈ ಹಿಂದೆ ಆರ್​ಸಿಬಿ ಬಳಗದಲ್ಲಿ ಕಾಣಿಸಿಕೊಂಡಿದ್ದರು. ಅಂದರೆ 2019 ರಲ್ಲಿ ಆರ್​ಸಿಬಿ ತಂಡದ ನೆಟ್ ಬೌಲರ್​ ಆಗಿದ್ದರು.

3 / 7
ಆರ್​ಸಿಬಿ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್​ಮನ್​ಗಳಿಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಆಕಾಶ್ ಮಧ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

ಆರ್​ಸಿಬಿ ತಂಡದ ಅಭ್ಯಾಸದ ವೇಳೆ ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್ ಸೇರಿದಂತೆ ಪ್ರಮುಖ ಬ್ಯಾಟ್ಸ್​ಮನ್​ಗಳಿಗೆ ಬೌಲಿಂಗ್ ಮಾಡಿ ಗಮನ ಸೆಳೆದಿದ್ದರು. ಇದಾಗ್ಯೂ ಆರ್​ಸಿಬಿ ಫ್ರಾಂಚೈಸಿ ಆಕಾಶ್ ಮಧ್ವಾಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

4 / 7
ಇತ್ತ ಆರ್​ಸಿಬಿ ಪರ ನೆಟ್ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟರೂ ಅವಕಾಶ ಸಿಗದ ಕಾರಣ ಆಕಾಶ್ ಮಧ್ವಾಲ್ ಮುಂಬೈ ಇಂಡಿಯನ್ಸ್​ನತ್ತ ಮುಖ ಮಾಡಿದ್ದರು. ಅದರಂತೆ ಮುಂಬೈ ಬಳಗದಲ್ಲಿ ಕಾಣಿಸಿಕೊಂಡ ಯುವ ಬೌಲರ್​ನನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 20 ಲಕ್ಷ ರೂ. ನೀಡಿ ಖರೀದಿಸಿತು.

ಇತ್ತ ಆರ್​ಸಿಬಿ ಪರ ನೆಟ್ ಬೌಲರ್ ಆಗಿ ತಮ್ಮ ಸಾಮರ್ಥ್ಯವನ್ನು ತೆರೆದಿಟ್ಟರೂ ಅವಕಾಶ ಸಿಗದ ಕಾರಣ ಆಕಾಶ್ ಮಧ್ವಾಲ್ ಮುಂಬೈ ಇಂಡಿಯನ್ಸ್​ನತ್ತ ಮುಖ ಮಾಡಿದ್ದರು. ಅದರಂತೆ ಮುಂಬೈ ಬಳಗದಲ್ಲಿ ಕಾಣಿಸಿಕೊಂಡ ಯುವ ಬೌಲರ್​ನನ್ನು ಈ ಬಾರಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ 20 ಲಕ್ಷ ರೂ. ನೀಡಿ ಖರೀದಿಸಿತು.

5 / 7
ಅದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಮಧ್ವಾಲ್ ಒಟ್ಟು 129 ಎಸೆತಗಳನ್ನು ಎಸೆದು ಕೇವಲ 167 ರನ್ ನೀಡಿದ್ದಾರೆ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.

ಅದರಂತೆ ಈ ಬಾರಿ ಒಟ್ಟು 7 ಪಂದ್ಯಗಳಲ್ಲಿ ಬೌಲಿಂಗ್ ಮಾಡಿರುವ ಆಕಾಶ್ ಮಧ್ವಾಲ್ ಒಟ್ಟು 129 ಎಸೆತಗಳನ್ನು ಎಸೆದು ಕೇವಲ 167 ರನ್ ನೀಡಿದ್ದಾರೆ. ಅಲ್ಲದೆ ಒಟ್ಟು 13 ವಿಕೆಟ್​ಗಳನ್ನು ಕಬಳಿಸಿ ಮಿಂಚಿದ್ದಾರೆ. ಅದರಲ್ಲೂ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ.

6 / 7
ಈ ದಾಖಲೆಯ ಬೌಲಿಂಗ್ ಪ್ರದರ್ಶನದ ಬಳಿಕ ಮಾತನಾಡಿದ ಆಕಾಶ್ ಮಧ್ವಾಲ್, ತಾನು 2019 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ತನಗೆ ಚಾನ್ಸ್ ಸಿಗದ ಕಾರಣ ಆ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡೆ ಎಂದು ತಿಳಿಸಿದ್ದಾರೆ.

ಈ ದಾಖಲೆಯ ಬೌಲಿಂಗ್ ಪ್ರದರ್ಶನದ ಬಳಿಕ ಮಾತನಾಡಿದ ಆಕಾಶ್ ಮಧ್ವಾಲ್, ತಾನು 2019 ರಲ್ಲಿ ಆರ್​ಸಿಬಿ ತಂಡದಲ್ಲಿ ನೆಟ್ ಬೌಲರ್ ಆಗಿದ್ದ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅಲ್ಲದೆ ತನಗೆ ಚಾನ್ಸ್ ಸಿಗದ ಕಾರಣ ಆ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಂಡೆ ಎಂದು ತಿಳಿಸಿದ್ದಾರೆ.

7 / 7
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್