AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಐಪಿಎಲ್​ನಿಂದ ಬುಮ್ರಾ ಔಟ್: ಮುಂಬೈ ಇಂಡಿಯನ್ಸ್​ ಮುಂದಿದೆ 3 ಆಯ್ಕೆಗಳು

IPL 2023 Kannada News: ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ ಸ್ಥಾನವನ್ನು ತುಂಬಬಲ್ಲ ಬದಲಿ ಬೌಲರ್ ಸಿಗುವುದು ಕಷ್ಟ. ಇದಾಗ್ಯೂ ಮುಂಬೈ ಇಂಡಿಯನ್ಸ್ ಮುಂದೆ ಮೂವರು ಅನುಭವಿ ಭಾರತೀಯ ಬೌಲರ್​ಗಳ ಆಯ್ಕೆಯಿದೆ. ಅವರೆಂದರೆ...

TV9 Web
| Updated By: ಝಾಹಿರ್ ಯೂಸುಫ್

Updated on: Feb 28, 2023 | 7:54 PM

ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಕಳೆದ ಕೆಲ ತಿಂಗಳಿಂದ ಮೈದಾನಕ್ಕಿಳಿದಿರಲಿಲ್ಲ. ಇದೀಗ ಸಂಪೂರ್ಣ ಗುಣಮುಖರಾಗದ ಕಾರಣ ಐಪಿಎಲ್​ನಿಂದಲೂ ಹೊರಗುಳಿಯಲು ನಿರ್ಧರಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್​ನಿಂದ ಮುಂಬೈ ಇಂಡಿಯನ್ಸ್ ವೇಗಿ ಜಸ್​ಪ್ರೀತ್ ಬುಮ್ರಾ ಹೊರಬಿದ್ದಿದ್ದಾರೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಬುಮ್ರಾ ಕಳೆದ ಕೆಲ ತಿಂಗಳಿಂದ ಮೈದಾನಕ್ಕಿಳಿದಿರಲಿಲ್ಲ. ಇದೀಗ ಸಂಪೂರ್ಣ ಗುಣಮುಖರಾಗದ ಕಾರಣ ಐಪಿಎಲ್​ನಿಂದಲೂ ಹೊರಗುಳಿಯಲು ನಿರ್ಧರಿಸಿದ್ದಾರೆ.

1 / 6
ಇತ್ತ ತಂಡದ ಪ್ರಮುಖ ವೇಗಿ ಹೊರಗುಳಿಯುತ್ತಿದ್ದಂತೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕೂಡ ಚಿಂತೆಗೀಡಾಗಿದೆ. ಏಕೆಂದರೆ ಪ್ಲೇಯಿಂಗ್ ಇಲೆವೆನ್​ನ ಸದಸ್ಯರಾಗಿದ್ದ ವೇಗಿಯ ಬದಲಿಗೆ ಮತ್ತೋರ್ವ ಅತ್ಯುತ್ತಮ ಭಾರತೀಯ ಆಟಗಾರನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಮುಂಬೈ ಫ್ರಾಂಚೈಸಿ ಮುಂದಿದೆ.

ಇತ್ತ ತಂಡದ ಪ್ರಮುಖ ವೇಗಿ ಹೊರಗುಳಿಯುತ್ತಿದ್ದಂತೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಕೂಡ ಚಿಂತೆಗೀಡಾಗಿದೆ. ಏಕೆಂದರೆ ಪ್ಲೇಯಿಂಗ್ ಇಲೆವೆನ್​ನ ಸದಸ್ಯರಾಗಿದ್ದ ವೇಗಿಯ ಬದಲಿಗೆ ಮತ್ತೋರ್ವ ಅತ್ಯುತ್ತಮ ಭಾರತೀಯ ಆಟಗಾರನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಮುಂಬೈ ಫ್ರಾಂಚೈಸಿ ಮುಂದಿದೆ.

2 / 6
ಆದರೆ ಯಾರ್ಕರ್ ಸ್ಪೆಷಲಿಸ್ಟ್ ಸ್ಥಾನವನ್ನು ತುಂಬಬಲ್ಲ ಬದಲಿ ಬೌಲರ್ ಸಿಗುವುದು ಕಷ್ಟ. ಇದಾಗ್ಯೂ ಮುಂಬೈ ಇಂಡಿಯನ್ಸ್ ಮುಂದೆ ಮೂವರು ಅನುಭವಿ ಭಾರತೀಯ ಬೌಲರ್​ಗಳ ಆಯ್ಕೆಯಿದೆ. ಅವರೆಂದರೆ...

ಆದರೆ ಯಾರ್ಕರ್ ಸ್ಪೆಷಲಿಸ್ಟ್ ಸ್ಥಾನವನ್ನು ತುಂಬಬಲ್ಲ ಬದಲಿ ಬೌಲರ್ ಸಿಗುವುದು ಕಷ್ಟ. ಇದಾಗ್ಯೂ ಮುಂಬೈ ಇಂಡಿಯನ್ಸ್ ಮುಂದೆ ಮೂವರು ಅನುಭವಿ ಭಾರತೀಯ ಬೌಲರ್​ಗಳ ಆಯ್ಕೆಯಿದೆ. ಅವರೆಂದರೆ...

3 / 6
ಸಂದೀಪ್ ಶರ್ಮಾ: ಐಪಿಎಲ್​ನಲ್ಲಿ 104 ಪಂದ್ಯಗಳನ್ನಾಡಿರುವ ಸಂದೀಪ್ ಶರ್ಮಾ ಅತ್ಯುತ್ತಮ ಬೌಲರ್ ಎಂಬುದರಲ್ಲಿ ಅನುಮಾನವೇ ಇಲ್ಲ. ಇದಕ್ಕೆ ಸಾಕ್ಷಿಯೇ ಅವರು 7.77 ಎಕಾನಮಿ ರೇಟ್​ನಲ್ಲಿ ರನ್ ನೀಡಿ ಒಟ್ಟು 114 ವಿಕೆಟ್​ಗಳನ್ನು ಕಬಳಿಸಿರುವುದು. ಆದರೆ ಈ ಬಾರಿಯ ಹರಾಜಿನಲ್ಲಿ ಸಂದೀಪ್ ಖರೀದಿಗೆ ಯಾವುದೇ ಫ್ರಾಂಚೈಸಿಗಳು ಮುಂದಾಗಿರಲಿಲ್ಲ. ಈ ಬಗ್ಗೆ ಖುದ್ದು ಸಂದೀಪ್ ಶರ್ಮಾ ಕೂಡ ಅಚ್ಚರಿ ವ್ಯಕ್ತಪಡಿಸಿದ್ದರು. ಇದೀಗ ಜಸ್​ಪ್ರೀತ್ ಬುಮ್ರಾ ಹೊರಗುಳಿದಿರುವ ಕಾರಣ ಮಾಜಿ ಪಂಜಾಬ್ ಕಿಂಗ್ಸ್ ವೇಗಿಗೆ ಮುಂಬೈ ಇಂಡಿಯನ್ಸ್ ಮಣೆ ಹಾಕಲಿದೆಯಾ ಕಾದು ನೋಡಬೇಕಿದೆ.

ಸಂದೀಪ್ ಶರ್ಮಾ: ಐಪಿಎಲ್​ನಲ್ಲಿ 104 ಪಂದ್ಯಗಳನ್ನಾಡಿರುವ ಸಂದೀಪ್ ಶರ್ಮಾ ಅತ್ಯುತ್ತಮ ಬೌಲರ್ ಎಂಬುದರಲ್ಲಿ ಅನುಮಾನವೇ ಇಲ್ಲ. ಇದಕ್ಕೆ ಸಾಕ್ಷಿಯೇ ಅವರು 7.77 ಎಕಾನಮಿ ರೇಟ್​ನಲ್ಲಿ ರನ್ ನೀಡಿ ಒಟ್ಟು 114 ವಿಕೆಟ್​ಗಳನ್ನು ಕಬಳಿಸಿರುವುದು. ಆದರೆ ಈ ಬಾರಿಯ ಹರಾಜಿನಲ್ಲಿ ಸಂದೀಪ್ ಖರೀದಿಗೆ ಯಾವುದೇ ಫ್ರಾಂಚೈಸಿಗಳು ಮುಂದಾಗಿರಲಿಲ್ಲ. ಈ ಬಗ್ಗೆ ಖುದ್ದು ಸಂದೀಪ್ ಶರ್ಮಾ ಕೂಡ ಅಚ್ಚರಿ ವ್ಯಕ್ತಪಡಿಸಿದ್ದರು. ಇದೀಗ ಜಸ್​ಪ್ರೀತ್ ಬುಮ್ರಾ ಹೊರಗುಳಿದಿರುವ ಕಾರಣ ಮಾಜಿ ಪಂಜಾಬ್ ಕಿಂಗ್ಸ್ ವೇಗಿಗೆ ಮುಂಬೈ ಇಂಡಿಯನ್ಸ್ ಮಣೆ ಹಾಕಲಿದೆಯಾ ಕಾದು ನೋಡಬೇಕಿದೆ.

4 / 6
ಧವಳ್ ಕುಲಕರ್ಣಿ: ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ವೇಗಿ ಧವಳ್ ಕುಲಕರ್ಣಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಐಪಿಎಲ್​ನಲ್ಲಿ 84 ಪಂದ್ಯಗಳನ್ನಾಡಿರುವ ಅನುಭವ ಹೊಂದಿರುವ ಕುಲಕರ್ಣಿ ಒಟ್ಟು 86 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಮುಂಬೈ ಫ್ರಾಂಚೈಸಿ ಮಾಜಿ ವೇಗಿಯನ್ನು ತಂಡಕ್ಕೆ ಸೇರಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಧವಳ್ ಕುಲಕರ್ಣಿ: ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮಾಜಿ ವೇಗಿ ಧವಳ್ ಕುಲಕರ್ಣಿ ಅವರನ್ನು ಯಾವುದೇ ಫ್ರಾಂಚೈಸಿ ಖರೀದಿಸಿರಲಿಲ್ಲ. ಇದಾಗ್ಯೂ ಐಪಿಎಲ್​ನಲ್ಲಿ 84 ಪಂದ್ಯಗಳನ್ನಾಡಿರುವ ಅನುಭವ ಹೊಂದಿರುವ ಕುಲಕರ್ಣಿ ಒಟ್ಟು 86 ವಿಕೆಟ್ ಪಡೆದಿದ್ದಾರೆ. ಹೀಗಾಗಿ ಮುಂಬೈ ಫ್ರಾಂಚೈಸಿ ಮಾಜಿ ವೇಗಿಯನ್ನು ತಂಡಕ್ಕೆ ಸೇರಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

5 / 6
ವರುಣ್ ಆರೋನ್: ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ವರೋನ್ ಆರೋನ್ ಅವರ ಖರೀದಿಗೆ ಈ ಬಾರಿ ಯಾವುದೇ ಫ್ರಾಂಚೈಸಿ ಮುಂದಾಗಿರಲಿಲ್ಲ. ಇದೀಗ ಬುಮ್ರಾ ಸ್ಥಾನದಲ್ಲಿ ಐಪಿಎಲ್ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಏಕೆಂದರೆ 52 ಐಪಿಎಲ್ ಪಂದ್ಯವಾಡಿರುವ ವರುಣ್ 44 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ಬುಮ್ರಾ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ವರುಣ್ ಆರೋನ್​ಗೆ ಮಣೆ ಹಾಕಬಹುದು.

ವರುಣ್ ಆರೋನ್: ಕಳೆದ ಸೀಸನ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದ ವರೋನ್ ಆರೋನ್ ಅವರ ಖರೀದಿಗೆ ಈ ಬಾರಿ ಯಾವುದೇ ಫ್ರಾಂಚೈಸಿ ಮುಂದಾಗಿರಲಿಲ್ಲ. ಇದೀಗ ಬುಮ್ರಾ ಸ್ಥಾನದಲ್ಲಿ ಐಪಿಎಲ್ ಅವಕಾಶವನ್ನು ಎದುರು ನೋಡುತ್ತಿದ್ದಾರೆ. ಏಕೆಂದರೆ 52 ಐಪಿಎಲ್ ಪಂದ್ಯವಾಡಿರುವ ವರುಣ್ 44 ವಿಕೆಟ್ ಕಬಳಿಸಿದ್ದಾರೆ. ಹೀಗಾಗಿ ಬುಮ್ರಾ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ವರುಣ್ ಆರೋನ್​ಗೆ ಮಣೆ ಹಾಕಬಹುದು.

6 / 6
Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ