Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಹುದ್ದೆಯ ಘನತೆಯನ್ನೇ ಮರೆತ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ

IPL 2023 Final Csk vs Gt: ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್​ ಕಲೆಹಾಕಿತು.

TV9 Web
| Updated By: ಝಾಹಿರ್ ಯೂಸುಫ್

Updated on: May 30, 2023 | 2:57 PM

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೆಗಾ ಫೈನಲ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೆಗಾ ಫೈನಲ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

1 / 8
ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್​ ಕಲೆಹಾಕಿತ್ತು. ಇದಕ್ಕುತ್ತರವಾಗಿ ಸಿಎಸ್​ಕೆ ಇನಿಂಗ್ಸ್ ಆರಂಭಿಸಿದಾಗ ಮಳೆ ಬರಲಾರಂಭಿಸಿತು. ಇದರಿಂದ ಕೆಲ ಪಂದ್ಯ ಸ್ಥಗಿತವಾಯಿತು. ಅಲ್ಲದೆ ಆ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಸಿಎಸ್​ಕೆ ತಂಡಕ್ಕೆ 15 ಓವರ್​ಗಳಲ್ಲಿ 171 ರನ್​ಗಳ ಟಾರ್ಗೆಟ್ ನೀಡಲಾಯಿತು.

ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್​ ಕಲೆಹಾಕಿತ್ತು. ಇದಕ್ಕುತ್ತರವಾಗಿ ಸಿಎಸ್​ಕೆ ಇನಿಂಗ್ಸ್ ಆರಂಭಿಸಿದಾಗ ಮಳೆ ಬರಲಾರಂಭಿಸಿತು. ಇದರಿಂದ ಕೆಲ ಪಂದ್ಯ ಸ್ಥಗಿತವಾಯಿತು. ಅಲ್ಲದೆ ಆ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಸಿಎಸ್​ಕೆ ತಂಡಕ್ಕೆ 15 ಓವರ್​ಗಳಲ್ಲಿ 171 ರನ್​ಗಳ ಟಾರ್ಗೆಟ್ ನೀಡಲಾಯಿತು.

2 / 8
171 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಸಿಎಸ್​ಕೆ ತಂಡಕ್ಕೆ ಕೊನೆಯ ಓವರ್​ನಲ್ಲಿ 13 ರನ್​ಗಳ ಅವಶ್ಯಕತೆಯಿತ್ತು. ಅದರಲ್ಲೂ ಕೊನೆಯ 2 ಎಸೆತಗಳಲ್ಲಿ 10 ರನ್​ ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸುವ ಮೂಲಕ ಸಿಎಸ್​ಕೆ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

171 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಸಿಎಸ್​ಕೆ ತಂಡಕ್ಕೆ ಕೊನೆಯ ಓವರ್​ನಲ್ಲಿ 13 ರನ್​ಗಳ ಅವಶ್ಯಕತೆಯಿತ್ತು. ಅದರಲ್ಲೂ ಕೊನೆಯ 2 ಎಸೆತಗಳಲ್ಲಿ 10 ರನ್​ ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸುವ ಮೂಲಕ ಸಿಎಸ್​ಕೆ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

3 / 8
ಆದರೆ ಅತ್ತ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗುಜರಾತ್ ಟೈಟಾನ್ಸ್ ತಂಡದ ಗೆಲುವಿನ ನಿರೀಕ್ಷೆಯಲ್ಲಿದ್ದರು. ಪಂದ್ಯದ ಆರಂಭದಿಂದಲೂ ಗುಜರಾತ್ ಟೈಟಾನ್ಸ್ ತಂಡವನ್ನು ಬೆಂಬಲಿಸುತ್ತಿದ್ದ ಅವರು ಅಂತಿಮ ಓವರ್​ನಲ್ಲಿ ತಮ್ಮ ಹುದ್ದೆಯ ಘನತೆಯನ್ನು ಮರೆತಿದ್ದು ವಿಪರ್ಯಾಸ.

ಆದರೆ ಅತ್ತ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗುಜರಾತ್ ಟೈಟಾನ್ಸ್ ತಂಡದ ಗೆಲುವಿನ ನಿರೀಕ್ಷೆಯಲ್ಲಿದ್ದರು. ಪಂದ್ಯದ ಆರಂಭದಿಂದಲೂ ಗುಜರಾತ್ ಟೈಟಾನ್ಸ್ ತಂಡವನ್ನು ಬೆಂಬಲಿಸುತ್ತಿದ್ದ ಅವರು ಅಂತಿಮ ಓವರ್​ನಲ್ಲಿ ತಮ್ಮ ಹುದ್ದೆಯ ಘನತೆಯನ್ನು ಮರೆತಿದ್ದು ವಿಪರ್ಯಾಸ.

4 / 8
ಸಿಎಸ್​ಕೆ ತಂಡಕ್ಕೆ ಗೆಲ್ಲಲು ಕೊನೆಯ 4 ಎಸೆತಗಳಲ್ಲಿ 12 ರನ್ ಬೇಕಿತ್ತು. ಇದೇ ವೇಳೆ ವಿಐಪಿ ಗ್ಯಾಲರಿಯಲ್ಲಿ ಕೂತಿದ್ದ ಜಯ್ ಶಾ ಹೊಡೀತೀವಿ ಎಂಬಾರ್ಥದಲ್ಲಿ ಅನುಚಿತ ಕೈ ಸನ್ನೆ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಿಸಿಸಿಐ ಕಾರ್ಯದರ್ಶಿ ಅವರ ಈ ನಡೆಗೆ ಇದೀಗ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ.

ಸಿಎಸ್​ಕೆ ತಂಡಕ್ಕೆ ಗೆಲ್ಲಲು ಕೊನೆಯ 4 ಎಸೆತಗಳಲ್ಲಿ 12 ರನ್ ಬೇಕಿತ್ತು. ಇದೇ ವೇಳೆ ವಿಐಪಿ ಗ್ಯಾಲರಿಯಲ್ಲಿ ಕೂತಿದ್ದ ಜಯ್ ಶಾ ಹೊಡೀತೀವಿ ಎಂಬಾರ್ಥದಲ್ಲಿ ಅನುಚಿತ ಕೈ ಸನ್ನೆ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಿಸಿಸಿಐ ಕಾರ್ಯದರ್ಶಿ ಅವರ ಈ ನಡೆಗೆ ಇದೀಗ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ.

5 / 8
ಏಕೆಂದರೆ ಜಯ್ ಶಾ ಅವರು ಬಿಸಿಸಿಐ ಕಾರ್ಯದರ್ಶಿ. ಯಾವ ತಂಡ ಗೆದ್ದರೂ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ತಮ್ಮ ಹುದ್ದೆಯ ಘನತೆಯನ್ನೇ ಮರೆತು ಒಂದು ತಂಡಕ್ಕೆ ಬೆಂಬಲ ಸೂಚಿಸುವುದು ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಪ್ರಶ್ನಿಸಿದ್ದಾರೆ.

ಏಕೆಂದರೆ ಜಯ್ ಶಾ ಅವರು ಬಿಸಿಸಿಐ ಕಾರ್ಯದರ್ಶಿ. ಯಾವ ತಂಡ ಗೆದ್ದರೂ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ತಮ್ಮ ಹುದ್ದೆಯ ಘನತೆಯನ್ನೇ ಮರೆತು ಒಂದು ತಂಡಕ್ಕೆ ಬೆಂಬಲ ಸೂಚಿಸುವುದು ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಪ್ರಶ್ನಿಸಿದ್ದಾರೆ.

6 / 8
ಅದರಲ್ಲೂ ಅನುಚಿತ ಸನ್ನೆಯ ಮೂಲಕ ಎದುರಾಳಿ ತಂಡವನ್ನು ಸೋಲಿಸಲಿದ್ದೇವೆ ಎನ್ನುವುದು ಅವರ ಹುದ್ದೆಗೆ ಅಗೌರವ. ಒಂದು ಗೌರವಾನ್ವಿತ ಹುದ್ದೆಯಲ್ಲಿದ್ದು ತಟಸ್ಥ ನಿಲುವನ್ನು ಹೊಂದದೇ ಒಂದು ತಂಡದ ಗೆಲುವಿಗೆ ಹಾತೊರೆಯುವುದು ಐಪಿಎಲ್​ ಮೇಲೆ ಅಪನಂಬಿಕೆ ಮೂಡಿಸುತ್ತದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದರಲ್ಲೂ ಅನುಚಿತ ಸನ್ನೆಯ ಮೂಲಕ ಎದುರಾಳಿ ತಂಡವನ್ನು ಸೋಲಿಸಲಿದ್ದೇವೆ ಎನ್ನುವುದು ಅವರ ಹುದ್ದೆಗೆ ಅಗೌರವ. ಒಂದು ಗೌರವಾನ್ವಿತ ಹುದ್ದೆಯಲ್ಲಿದ್ದು ತಟಸ್ಥ ನಿಲುವನ್ನು ಹೊಂದದೇ ಒಂದು ತಂಡದ ಗೆಲುವಿಗೆ ಹಾತೊರೆಯುವುದು ಐಪಿಎಲ್​ ಮೇಲೆ ಅಪನಂಬಿಕೆ ಮೂಡಿಸುತ್ತದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

7 / 8
ಒಟ್ಟಿನಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಜಯ್ ಶಾ ಅವರ ಅನುಚಿತ ಸನ್ನೆಯ ಸಂಭ್ರಮದ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಅತ್ತ ಬಿಸಿಸಿಐ ಕಾರ್ಯದರ್ಶಿ ಅವರ ಸಂಭ್ರಮದ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದ್ದು, ಹೀಗಾಗಿ ಸಿಎಸ್​ಕೆ ಫ್ಯಾನ್ಸ್​ ಜಯ್ ಶಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

ಒಟ್ಟಿನಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಜಯ್ ಶಾ ಅವರ ಅನುಚಿತ ಸನ್ನೆಯ ಸಂಭ್ರಮದ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಅತ್ತ ಬಿಸಿಸಿಐ ಕಾರ್ಯದರ್ಶಿ ಅವರ ಸಂಭ್ರಮದ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದ್ದು, ಹೀಗಾಗಿ ಸಿಎಸ್​ಕೆ ಫ್ಯಾನ್ಸ್​ ಜಯ್ ಶಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

8 / 8
Follow us
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ