IPL 2023: ಹುದ್ದೆಯ ಘನತೆಯನ್ನೇ ಮರೆತ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ

Edited By:

Updated on: May 30, 2023 | 2:57 PM

IPL 2023 Final Csk vs Gt: ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್​ ಕಲೆಹಾಕಿತು.

1 / 8
IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೆಗಾ ಫೈನಲ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

IPL 2023 Final CSK vs GT: ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ ಮೆಗಾ ಫೈನಲ್​ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

2 / 8

ರಣರೋಚಕ ಕಾದಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್​ ಕಲೆಹಾಕಿತ್ತು. ಇದಕ್ಕುತ್ತರವಾಗಿ ಸಿಎಸ್​ಕೆ ಇನಿಂಗ್ಸ್ ಆರಂಭಿಸಿದಾಗ ಮಳೆ ಬರಲಾರಂಭಿಸಿತು. ಇದರಿಂದ ಕೆಲ ಪಂದ್ಯ ಸ್ಥಗಿತವಾಯಿತು. ಅಲ್ಲದೆ ಆ ಬಳಿಕ ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ ಸಿಎಸ್​ಕೆ ತಂಡಕ್ಕೆ 15 ಓವರ್​ಗಳಲ್ಲಿ 171 ರನ್​ಗಳ ಟಾರ್ಗೆಟ್ ನೀಡಲಾಯಿತು.

3 / 8

171 ರನ್​ಗಳ ಟಾರ್ಗೆಟ್ ಬೆನ್ನತ್ತಿದ ಸಿಎಸ್​ಕೆ ತಂಡಕ್ಕೆ ಕೊನೆಯ ಓವರ್​ನಲ್ಲಿ 13 ರನ್​ಗಳ ಅವಶ್ಯಕತೆಯಿತ್ತು. ಅದರಲ್ಲೂ ಕೊನೆಯ 2 ಎಸೆತಗಳಲ್ಲಿ 10 ರನ್​ ಬೇಕಿದ್ದ ವೇಳೆ ರವೀಂದ್ರ ಜಡೇಜಾ ಸಿಕ್ಸ್ ಹಾಗೂ ಫೋರ್ ಬಾರಿಸುವ ಮೂಲಕ ಸಿಎಸ್​ಕೆ ತಂಡಕ್ಕೆ ರೋಚಕ ಜಯ ತಂದುಕೊಟ್ಟರು.

4 / 8

ಆದರೆ ಅತ್ತ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಷಿಸುತ್ತಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಗುಜರಾತ್ ಟೈಟಾನ್ಸ್ ತಂಡದ ಗೆಲುವಿನ ನಿರೀಕ್ಷೆಯಲ್ಲಿದ್ದರು. ಪಂದ್ಯದ ಆರಂಭದಿಂದಲೂ ಗುಜರಾತ್ ಟೈಟಾನ್ಸ್ ತಂಡವನ್ನು ಬೆಂಬಲಿಸುತ್ತಿದ್ದ ಅವರು ಅಂತಿಮ ಓವರ್​ನಲ್ಲಿ ತಮ್ಮ ಹುದ್ದೆಯ ಘನತೆಯನ್ನು ಮರೆತಿದ್ದು ವಿಪರ್ಯಾಸ.

5 / 8

ಸಿಎಸ್​ಕೆ ತಂಡಕ್ಕೆ ಗೆಲ್ಲಲು ಕೊನೆಯ 4 ಎಸೆತಗಳಲ್ಲಿ 12 ರನ್ ಬೇಕಿತ್ತು. ಇದೇ ವೇಳೆ ವಿಐಪಿ ಗ್ಯಾಲರಿಯಲ್ಲಿ ಕೂತಿದ್ದ ಜಯ್ ಶಾ ಹೊಡೀತೀವಿ ಎಂಬಾರ್ಥದಲ್ಲಿ ಅನುಚಿತ ಕೈ ಸನ್ನೆ ಮಾಡುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬಿಸಿಸಿಐ ಕಾರ್ಯದರ್ಶಿ ಅವರ ಈ ನಡೆಗೆ ಇದೀಗ ವ್ಯಾಪಕ ಆಕ್ರೋಶಗಳು ವ್ಯಕ್ತವಾಗುತ್ತಿದೆ.

6 / 8

ಏಕೆಂದರೆ ಜಯ್ ಶಾ ಅವರು ಬಿಸಿಸಿಐ ಕಾರ್ಯದರ್ಶಿ. ಯಾವ ತಂಡ ಗೆದ್ದರೂ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ಆದರೆ ತಮ್ಮ ಹುದ್ದೆಯ ಘನತೆಯನ್ನೇ ಮರೆತು ಒಂದು ತಂಡಕ್ಕೆ ಬೆಂಬಲ ಸೂಚಿಸುವುದು ಎಷ್ಟು ಸರಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಪ್ರಶ್ನಿಸಿದ್ದಾರೆ.

7 / 8

ಅದರಲ್ಲೂ ಅನುಚಿತ ಸನ್ನೆಯ ಮೂಲಕ ಎದುರಾಳಿ ತಂಡವನ್ನು ಸೋಲಿಸಲಿದ್ದೇವೆ ಎನ್ನುವುದು ಅವರ ಹುದ್ದೆಗೆ ಅಗೌರವ. ಒಂದು ಗೌರವಾನ್ವಿತ ಹುದ್ದೆಯಲ್ಲಿದ್ದು ತಟಸ್ಥ ನಿಲುವನ್ನು ಹೊಂದದೇ ಒಂದು ತಂಡದ ಗೆಲುವಿಗೆ ಹಾತೊರೆಯುವುದು ಐಪಿಎಲ್​ ಮೇಲೆ ಅಪನಂಬಿಕೆ ಮೂಡಿಸುತ್ತದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

8 / 8

ಒಟ್ಟಿನಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಜಯ್ ಶಾ ಅವರ ಅನುಚಿತ ಸನ್ನೆಯ ಸಂಭ್ರಮದ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಅತ್ತ ಬಿಸಿಸಿಐ ಕಾರ್ಯದರ್ಶಿ ಅವರ ಸಂಭ್ರಮದ ನಡುವೆ ಚೆನ್ನೈ ಸೂಪರ್ ಕಿಂಗ್ಸ್ ಜಯ ಸಾಧಿಸಿದ್ದು, ಹೀಗಾಗಿ ಸಿಎಸ್​ಕೆ ಫ್ಯಾನ್ಸ್​ ಜಯ್ ಶಾ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

Loading...
Unable to load recommendations.
Follow Us