AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮುಂಬೈ ಇಂಡಿಯನ್ಸ್​ಗೆ ಡಬಲ್ ಶಾಕ್: ತಂಡದಿಂದ ಇಬ್ಬರು ಆಟಗಾರರು ಔಟ್

IPL 2023 Kannada: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಮಾರ್ಚ್ 31 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸೆಣಸಲಿದೆ.

TV9 Web
| Edited By: |

Updated on: Mar 11, 2023 | 3:44 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಈ ಬಾರಿ ಬಲಿಷ್ಠ ಪಡೆಯೊಂದಿಗೆ ಕಪ್ ಗೆಲ್ಲುವ ನಿರೀಕ್ಷೆಯಲ್ಲಿದ್ದ ರೋಹಿತ್ ಶರ್ಮಾ ಪಡೆಯ ಇಬ್ಬರು ಆಟಗಾರರು ಟೂರ್ನಿ ಆರಂಭಕ್ಕೂ ಮೊದಲೇ ತಂಡದಿಂದ ಹೊರಗುಳಿದಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 16 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡಕ್ಕೆ ಆಘಾತ ಎದುರಾಗಿದೆ. ಈ ಬಾರಿ ಬಲಿಷ್ಠ ಪಡೆಯೊಂದಿಗೆ ಕಪ್ ಗೆಲ್ಲುವ ನಿರೀಕ್ಷೆಯಲ್ಲಿದ್ದ ರೋಹಿತ್ ಶರ್ಮಾ ಪಡೆಯ ಇಬ್ಬರು ಆಟಗಾರರು ಟೂರ್ನಿ ಆರಂಭಕ್ಕೂ ಮೊದಲೇ ತಂಡದಿಂದ ಹೊರಗುಳಿದಿದ್ದಾರೆ.

1 / 6
ಕೆಲ ದಿನಗಳ ಹಿಂದೆಯಷ್ಟೇ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಐಪಿಎಲ್​ನಿಂದ ಹೊರಗುಳಿಯುವುದು ಖಚಿತವಾಗಿತ್ತು. ಬೆನ್ನು ನೋವಿನ ಸಮಸ್ಯೆಯ ಕಾರಣ ಇದೀಗ ಬುಮ್ರಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಮುಂದಿನ 6 ತಿಂಗಳುಗಳ ಕಾಲ ಮೈದಾನಕ್ಕಿಳಿಯುವುದಿಲ್ಲ.

ಕೆಲ ದಿನಗಳ ಹಿಂದೆಯಷ್ಟೇ ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ವೇಗಿ ಜಸ್​ಪ್ರೀತ್ ಬುಮ್ರಾ ಐಪಿಎಲ್​ನಿಂದ ಹೊರಗುಳಿಯುವುದು ಖಚಿತವಾಗಿತ್ತು. ಬೆನ್ನು ನೋವಿನ ಸಮಸ್ಯೆಯ ಕಾರಣ ಇದೀಗ ಬುಮ್ರಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಮುಂದಿನ 6 ತಿಂಗಳುಗಳ ಕಾಲ ಮೈದಾನಕ್ಕಿಳಿಯುವುದಿಲ್ಲ.

2 / 6
ಇತ್ತ ಜಸ್​ಪ್ರೀತ್ ಬುಮ್ರಾ ಅವರ ಅಲಭ್ಯತೆಯ ಬೆನ್ನಲ್ಲೇ ಇದೀಗ ಮುಂಬೈ ಇಂಡಿಯನ್ಸ್ ತಂಡದ ಮತ್ತೋರ್ವ ವೇಗಿ ಜ್ಯೆ ರಿಚರ್ಡ್​ಸನ್ ಕೂಡ ಐಪಿಎಲ್​ನಿಂದ ಹೊರಗುಳಿಯುವುದನ್ನು ಖಚಿತಪಡಿಸಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸೀಸ್ ವೇಗಿ ಸರ್ಜರಿಗೆ ಒಳಗಾಗಿದ್ದಾರೆ.

ಇತ್ತ ಜಸ್​ಪ್ರೀತ್ ಬುಮ್ರಾ ಅವರ ಅಲಭ್ಯತೆಯ ಬೆನ್ನಲ್ಲೇ ಇದೀಗ ಮುಂಬೈ ಇಂಡಿಯನ್ಸ್ ತಂಡದ ಮತ್ತೋರ್ವ ವೇಗಿ ಜ್ಯೆ ರಿಚರ್ಡ್​ಸನ್ ಕೂಡ ಐಪಿಎಲ್​ನಿಂದ ಹೊರಗುಳಿಯುವುದನ್ನು ಖಚಿತಪಡಿಸಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಆಸೀಸ್ ವೇಗಿ ಸರ್ಜರಿಗೆ ಒಳಗಾಗಿದ್ದಾರೆ.

3 / 6
ಹೀಗಾಗಿ ಐಪಿಎಲ್ ಸೀಸನ್ 16 ನಲ್ಲಿ ಜ್ಯೆ ರಿಚರ್ಡ್​ಸನ್ ಕಾಣಿಸಿಕೊಳ್ಳುವುದಿಲ್ಲ. ಅಷ್ಟೇ ಅಲ್ಲದೆ ಭಾರತದ ವಿರುದ್ಧದ ಏಕದಿನ ಸರಣಿಯಲ್ಲೂ ಭಾಗವಹಿಸುವುದಿಲ್ಲ. ಅಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಇಬ್ಬರು ಪ್ರಮುಖ ಬೌಲರ್​ಗಳು ಐಪಿಎಲ್​ನಿಂದ ಹೊರಗುಳಿದಿದ್ದು, ಇದು ರೋಹಿತ್ ಶರ್ಮಾ ಪಡೆಯ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು.

ಹೀಗಾಗಿ ಐಪಿಎಲ್ ಸೀಸನ್ 16 ನಲ್ಲಿ ಜ್ಯೆ ರಿಚರ್ಡ್​ಸನ್ ಕಾಣಿಸಿಕೊಳ್ಳುವುದಿಲ್ಲ. ಅಷ್ಟೇ ಅಲ್ಲದೆ ಭಾರತದ ವಿರುದ್ಧದ ಏಕದಿನ ಸರಣಿಯಲ್ಲೂ ಭಾಗವಹಿಸುವುದಿಲ್ಲ. ಅಂದರೆ ಮುಂಬೈ ಇಂಡಿಯನ್ಸ್ ತಂಡದಲ್ಲಿದ್ದ ಇಬ್ಬರು ಪ್ರಮುಖ ಬೌಲರ್​ಗಳು ಐಪಿಎಲ್​ನಿಂದ ಹೊರಗುಳಿದಿದ್ದು, ಇದು ರೋಹಿತ್ ಶರ್ಮಾ ಪಡೆಯ ಪಾಲಿಗೆ ಹಿನ್ನಡೆಯನ್ನುಂಟು ಮಾಡಬಹುದು.

4 / 6
ಏಕೆಂದರೆ ಜಸ್​ಪ್ರೀತ್ ಬುಮ್ರಾ ಹಾಗೂ ಜ್ಯೆ ರಿಚರ್ಡ್​ಸನ್ ಅವರ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಮುಂಬೈ ಇಂಡಿಯನ್ಸ್ ಮುಂದಿದೆ. ಇತ್ತ ಐಪಿಎಲ್ ಆರಂಭವಾಗಲು ಕೇವಲ 20 ದಿನಗಳು ಮಾತ್ರ ಉಳಿದಿದ್ದು. ಇದರ ನಡುವೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಾರಿಗೆ ಮಣೆಹಾಕಲಿದೆ ಎಂಬುದೇ ಕುತೂಹಲ.

ಏಕೆಂದರೆ ಜಸ್​ಪ್ರೀತ್ ಬುಮ್ರಾ ಹಾಗೂ ಜ್ಯೆ ರಿಚರ್ಡ್​ಸನ್ ಅವರ ಬದಲಿ ಆಟಗಾರರನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಮುಂಬೈ ಇಂಡಿಯನ್ಸ್ ಮುಂದಿದೆ. ಇತ್ತ ಐಪಿಎಲ್ ಆರಂಭವಾಗಲು ಕೇವಲ 20 ದಿನಗಳು ಮಾತ್ರ ಉಳಿದಿದ್ದು. ಇದರ ನಡುವೆ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಯಾರಿಗೆ ಮಣೆಹಾಕಲಿದೆ ಎಂಬುದೇ ಕುತೂಹಲ.

5 / 6
ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಲ್, ರಾಘವ್ ಗೋಯಲ್, ನೆಹಾಲ್ ವಾಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಪಿಯೂಷ್ ಚಾವ್ಲಾ, ಕ್ಯಾಮರೋನ್ ಗ್ರೀನ್..

ಮುಂಬೈ ಇಂಡಿಯನ್ಸ್ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೆವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಜೇಸನ್ ಬೆಹ್ರೆಂಡಾರ್ಫ್, ಆಕಾಶ್ ಮಧ್ವಲ್, ರಾಘವ್ ಗೋಯಲ್, ನೆಹಾಲ್ ವಾಧೇರಾ, ಶಮ್ಸ್ ಮುಲಾನಿ, ವಿಷ್ಣು ವಿನೋದ್, ದುವಾನ್ ಜಾನ್ಸೆನ್, ಪಿಯೂಷ್ ಚಾವ್ಲಾ, ಕ್ಯಾಮರೋನ್ ಗ್ರೀನ್..

6 / 6
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?