AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: RCB ತಂಡಕ್ಕೆ ಸ್ಟಾರ್ ಆಟಗಾರ ಎಂಟ್ರಿ: ಹೊಸ ಚಿಂತೆ ಶುರು..!

IPL 2023 Kannada: RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್.

TV9 Web
| Edited By: |

Updated on: Apr 16, 2023 | 7:22 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರಲ್ಲಿ ಆರ್​ಸಿಬಿ ಗೆಲುವು-ಸೋಲು-ಗೆಲುವಿನೊಂದಿಗೆ ನಾಗಾಲೋಟ ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಆರ್​ಸಿಬಿ, ಆ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿತ್ತು.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 16 ರಲ್ಲಿ ಆರ್​ಸಿಬಿ ಗೆಲುವು-ಸೋಲು-ಗೆಲುವಿನೊಂದಿಗೆ ನಾಗಾಲೋಟ ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದ ಆರ್​ಸಿಬಿ, ಆ ಬಳಿಕ ಕೆಕೆಆರ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋಲನುಭವಿಸಿತ್ತು.

1 / 9
ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಿದೆ. ಈ ಗೆಲುವಿನ ಬೆನ್ನಲ್ಲೇ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್​ ಆರ್​ಸಿಬಿ ಬಳಗವನ್ನು ಸೇರಿಕೊಂಡಿದ್ದಾರೆ.

ಇದೀಗ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ಗೆಲುವಿನ ಲಯಕ್ಕೆ ಮರಳಿದೆ. ಈ ಗೆಲುವಿನ ಬೆನ್ನಲ್ಲೇ ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್​ವುಡ್​ ಆರ್​ಸಿಬಿ ಬಳಗವನ್ನು ಸೇರಿಕೊಂಡಿದ್ದಾರೆ.

2 / 9
ಈ ಬಾರಿಯ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದರು. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್​ವುಡ್ ಮೊದಲ ನಾಲ್ಕು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ 5ನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಂಡಿದ್ದಾರೆ.

ಈ ಬಾರಿಯ ಐಪಿಎಲ್​ನ ಆರಂಭಿಕ ಪಂದ್ಯಗಳಿಂದ ಜೋಶ್ ಹ್ಯಾಝಲ್​ವುಡ್ ಹೊರಗುಳಿದಿದ್ದರು. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹ್ಯಾಝಲ್​ವುಡ್ ಮೊದಲ ನಾಲ್ಕು ಪಂದ್ಯಗಳಿಗೆ ಅಲಭ್ಯರಾಗಿದ್ದರು. ಇದೀಗ 5ನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಂಡಿದ್ದಾರೆ.

3 / 9
ಆರ್​ಸಿಬಿ ಮುಂದಿನ ಪಂದ್ಯವನ್ನು ಸಿಎಸ್​ಕೆ ವಿರುದ್ಧ ಆಡಲಿದ್ದು, ಇದಕ್ಕೂ ಮುನ್ನ ಜೋಶ್ ಹ್ಯಾಝಲ್​ವುಡ್ ತಂಡವನ್ನು ಸೇರಿಕೊಂಡಿರುವುದು ಆರ್​ಸಿಬಿ ಬಳಗದ ಬಲಿಷ್ಠತೆಯನ್ನು ಹೆಚ್ಚಿಸಿದೆ. ಆದರೆ ಆಸೀಸ್​ ವೇಗಿಯ ಆಗಮನದ ಬೆನ್ನಲ್ಲೇ ಪ್ಲೇಯಿಂಗ್ ಇಲೆವೆನ್ ಆಯ್ಕೆಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಆರ್​ಸಿಬಿ ಮುಂದಿನ ಪಂದ್ಯವನ್ನು ಸಿಎಸ್​ಕೆ ವಿರುದ್ಧ ಆಡಲಿದ್ದು, ಇದಕ್ಕೂ ಮುನ್ನ ಜೋಶ್ ಹ್ಯಾಝಲ್​ವುಡ್ ತಂಡವನ್ನು ಸೇರಿಕೊಂಡಿರುವುದು ಆರ್​ಸಿಬಿ ಬಳಗದ ಬಲಿಷ್ಠತೆಯನ್ನು ಹೆಚ್ಚಿಸಿದೆ. ಆದರೆ ಆಸೀಸ್​ ವೇಗಿಯ ಆಗಮನದ ಬೆನ್ನಲ್ಲೇ ಪ್ಲೇಯಿಂಗ್ ಇಲೆವೆನ್ ಆಯ್ಕೆಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

4 / 9
ಏಕೆಂದರೆ ಆರ್​ಸಿಬಿ ಪ್ಲೇಯಿಂಗ್​ ಇಲೆವೆನ್​ನಲ್ಲಿ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ವನಿಂದು ಹಸರಂಗ ಇರುವುದು ಖಚಿತ. ಇನ್ನು ಬದಲಾವಣೆ ಮಾಡಬೇಕಿರುವುದು ವೇಯ್ನ್ ಪಾರ್ನೆಲ್​ ಸ್ಥಾನದಲ್ಲಿ ಮಾತ್ರ. ಆದರೆ 2 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಪಾರ್ನೆಲ್ 4 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ.

ಏಕೆಂದರೆ ಆರ್​ಸಿಬಿ ಪ್ಲೇಯಿಂಗ್​ ಇಲೆವೆನ್​ನಲ್ಲಿ ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ವನಿಂದು ಹಸರಂಗ ಇರುವುದು ಖಚಿತ. ಇನ್ನು ಬದಲಾವಣೆ ಮಾಡಬೇಕಿರುವುದು ವೇಯ್ನ್ ಪಾರ್ನೆಲ್​ ಸ್ಥಾನದಲ್ಲಿ ಮಾತ್ರ. ಆದರೆ 2 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಪಾರ್ನೆಲ್ 4 ವಿಕೆಟ್ ಕಬಳಿಸುವ ಮೂಲಕ ಮಿಂಚಿದ್ದಾರೆ.

5 / 9
ಅದರಲ್ಲೂ ಪವರ್​ಪ್ಲೇನಲ್ಲಿ ಉತ್ತಮ ದಾಳಿ ಸಂಘಟಿಸುವಲ್ಲಿ ಎಡಗೈ ವೇಗಿ ಪಾರ್ನೆಲ್ ಯಶಸ್ವಿಯಾಗಿದ್ದಾರೆ. ಇದೀಗ ಜೋಶ್ ಹ್ಯಾಝಲ್​ವುಡ್ ಅವರಿಗೆ ಅವಕಾಶ ಕಲ್ಪಿಸಬೇಕಿದ್ದರೆ ಪಾರ್ನೆಲ್​ ಅವರನ್ನು ಕೈ ಬಿಡಲೇಬೇಕು. ಇದುವೇ ಈಗ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್​ನ ಚಿಂತೆಯನ್ನು ಹೆಚ್ಚಿಸಿದೆ.

ಅದರಲ್ಲೂ ಪವರ್​ಪ್ಲೇನಲ್ಲಿ ಉತ್ತಮ ದಾಳಿ ಸಂಘಟಿಸುವಲ್ಲಿ ಎಡಗೈ ವೇಗಿ ಪಾರ್ನೆಲ್ ಯಶಸ್ವಿಯಾಗಿದ್ದಾರೆ. ಇದೀಗ ಜೋಶ್ ಹ್ಯಾಝಲ್​ವುಡ್ ಅವರಿಗೆ ಅವಕಾಶ ಕಲ್ಪಿಸಬೇಕಿದ್ದರೆ ಪಾರ್ನೆಲ್​ ಅವರನ್ನು ಕೈ ಬಿಡಲೇಬೇಕು. ಇದುವೇ ಈಗ ಆರ್​ಸಿಬಿ ಟೀಮ್ ಮ್ಯಾನೇಜ್ಮೆಂಟ್​ನ ಚಿಂತೆಯನ್ನು ಹೆಚ್ಚಿಸಿದೆ.

6 / 9
ಅಂದರೆ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಜೋಶ್ ಹ್ಯಾಝಲ್​ವುಡ್​ ಅವರನ್ನು ಕಣಕ್ಕಿಳಿಸಬೇಕಿದ್ದರೆ, ವೇಯ್ನ್ ಪಾರ್ನೆಲ್​ ಅವರನ್ನು ಕೈ ಬಿಡಬೇಕು. ಹೀಗಾದ್ರೆ ಆರ್​ಸಿಬಿ ಆಡುವ ಬಳಗದಲ್ಲಿ ಎಡಗೈ ವೇಗಿ ಇರುವುದಿಲ್ಲ. ತಂಡದಲ್ಲಿರುವ ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್...ಎಲ್ಲರೂ ಬಲಗೈ ವೇಗಿಗಳು.

ಅಂದರೆ ಚೆನ್ನೈ ಸೂಪರ್ ಕಿಂಗ್ಸ್​ ವಿರುದ್ಧ ಜೋಶ್ ಹ್ಯಾಝಲ್​ವುಡ್​ ಅವರನ್ನು ಕಣಕ್ಕಿಳಿಸಬೇಕಿದ್ದರೆ, ವೇಯ್ನ್ ಪಾರ್ನೆಲ್​ ಅವರನ್ನು ಕೈ ಬಿಡಬೇಕು. ಹೀಗಾದ್ರೆ ಆರ್​ಸಿಬಿ ಆಡುವ ಬಳಗದಲ್ಲಿ ಎಡಗೈ ವೇಗಿ ಇರುವುದಿಲ್ಲ. ತಂಡದಲ್ಲಿರುವ ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ವೈಶಾಕ್ ವಿಜಯಕುಮಾರ್...ಎಲ್ಲರೂ ಬಲಗೈ ವೇಗಿಗಳು.

7 / 9
ಇದೀಗ ಬಲಗೈ ವೇಗಿಯಾಗಿರುವ ಜೋಶ್ ಹ್ಯಾಝಲ್​ವುಡ್ ಆಡುವ ಬಳಗ ಸೇರಿಕೊಂಡರೆ ಎಡಗೈ ವೇಗಿಯ ಸೇವೆಯನ್ನು ಕಳೆದುಕೊಳ್ಳಲಿದೆ. ಇದುವೇ ಈಗ ತಂಡದ ಚಿಂತೆಯನ್ನು ಹೆಚ್ಚಿಸಿದ್ದು, ಅಂತಿಮವಾಗಿ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಇವರಿಬ್ಬರಲ್ಲಿ (ಪಾರ್ನೆಲ್-ಹ್ಯಾಝಲ್​ವುಡ್) ಯಾರಿಗೆ ಚಾನ್ಸ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದೀಗ ಬಲಗೈ ವೇಗಿಯಾಗಿರುವ ಜೋಶ್ ಹ್ಯಾಝಲ್​ವುಡ್ ಆಡುವ ಬಳಗ ಸೇರಿಕೊಂಡರೆ ಎಡಗೈ ವೇಗಿಯ ಸೇವೆಯನ್ನು ಕಳೆದುಕೊಳ್ಳಲಿದೆ. ಇದುವೇ ಈಗ ತಂಡದ ಚಿಂತೆಯನ್ನು ಹೆಚ್ಚಿಸಿದ್ದು, ಅಂತಿಮವಾಗಿ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಇವರಿಬ್ಬರಲ್ಲಿ (ಪಾರ್ನೆಲ್-ಹ್ಯಾಝಲ್​ವುಡ್) ಯಾರಿಗೆ ಚಾನ್ಸ್ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

8 / 9
RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

RCB ತಂಡ ಹೀಗಿದೆ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಮೈಕೆಲ್ ಬ್ರೇಸ್​ವೆಲ್​, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್​ವುಡ್​, ಮೊಹಮ್ಮದ್ ಸಿರಾಜ್, ಕರ್ಣ್​ ಶರ್ಮಾ, ಸಿದ್ಧಾರ್ಥ್​ ಕೌಲ್, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್​ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಝ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ವೇಯ್ನ್ ಪಾರ್ನೆಲ್, ವೈಶಾಕ್ ವಿಜಯಕುಮಾರ್.

9 / 9
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ